ಪೆಟ್ರೋಲ್ ಡೀಸೆಲ್ ದರ ಏರಿಕೆಗೂ ಚುನಾವಣೆ ಫಲಿತಾಂಶಕ್ಕೂ ಸಂಬಂಧವಿಲ್ಲ- ಮುಖ್ಯಮಂತ್ರಿ ಎಸ್. ಸಿದ್ದರಾಮಯ್ಯ

ವಿಜಯಪುರ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಗೂ ಚುನಾವಣೆ ಫಲಿತಾಂಶಕ್ಕೂ ಯಾವುದೇ ಸಂಬಂಧವಿಲ್ಲ.   ಪ್ರಜಾಪ್ರಭುತ್ವದಲ್ಲಿ ಸೋಲು ಗೆಲುವು ಇದ್ದದ್ದೇ ಎಂದು ಮುಖ್ಯಮಂತ್ರಿ  ಸಿದ್ದರಾಮಯ್ಯ ಹೇಳಿದ್ದಾರೆ.  ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಇಂಚಗೇರಿ ಗ್ರಾಮದಲ್ಲಿ ಹೆಲಿಪ್ಯಾಡ್ ನಲ್ಲಿ ಮಾಧ್ಮಯ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪ್ರತಿಪಕ್ಷದ ನಾಯಕ ಆರ್. ಅಶೋಕ ಅವರು ಸೇಡಿಗಾಗಿ ತೈಲಬೆಲೆ ಏರಿಕೆ ಮಾಡಲಾಗಿದೆ ಎಂಬ  ಹೇಳಿಕೆಗೆ ಸಿಎಂ ಪ್ರತಿಕ್ರಿಯ ನೀಡಿದರು. ವಿಜಯಪುರದಲ್ಲಿ ನಾವು ಸೋತಿದ್ದೇವೆ.  ಕರ್ನಾಟಕದಲ್ಲಿ […]