ಪೆಟ್ರೋಲ್, ಡಿಸೇಲ್ ಬೆಲೆ ಹೆಚ್ಚಳಕ್ಕೆ ವಿರೋಧ- ಬೈಕ್ಗೆ ಹಗ್ಗಕಟ್ಟಿ ಎಳೆದು ಬಿಜೆಪಿ ಕಾರ್ಯಕರ್ತರ ಬೃಹತ್ ಪ್ರತಿಭಟನೆ

ವಿಜಯಪುರ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಹೆಚ್ಚಳ ವಿರೋಧಿಸಿ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ನಗರದಲ್ಲಿ ಬೈಕಿಗೆ ಹಗ್ಗ ಕಟ್ಟಿ ಎಳೆಯುವ ಮೂಲಕ ಪ್ರತಿಭಟನೆ ನಡೆಸಿದರು. 

ನಗರದ ಗಾಂಧಿಚೌಕಿನಿಂದ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದ ಕಾರ್ಯಕರ್ತರು, ಡಾ. ಬಿ. ಆರ್. ಅಂಬೇಡ್ಕರ್ ವೃತ್ತದವರೆಗೂ ಬೈಕ್‌ಗೆ ಹಗ್ಗಕಟ್ಟಿ ಎಳೆದುಕೊಂಡು ಬಂದರು.

ಈ ಸಂದರ್ಭದಲ್ಲಿ ಮಾತನಾಡಿದ ದೇವರ ಹಿಪ್ಪರಗಿ ಮಾಜಿ ಶಾಸಕ ಸೋಮನಗೌಡ ಪಾಟೀಲ ಸಾಸನೂರ, ರಾಜ್ಯದ ಜನತೆಗೆ ನೆಮ್ಮದಿಯ ಬದುಕು ನೀಡಲು ಸಾಧ್ಯವಿಲ್ಲದಿದ್ದರೆ, ಈ ಸರಕಾರ ಅಧಿಕಾರ ಬಿಟ್ಟು ತೊಲಗಬೇಕು.  ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಹೆಚ್ಚಿಸಿ ನಾವು ಅಧಿಕಾರ ನಡೆಸುತ್ತೇವೆ ಎಂದು ಹೊರಟಿರುವ ಕಾಂಗ್ರೆಸ್ ಜನರ ಬದುಕಿನೊಂದಿಗೆ ಚೆಲ್ಲಾಟವಾಡುತ್ತಿದೆ.  ಇದನ್ನು ಬಿಜೆಪಿ ಸಹಿಸಿಕೊಂಡು ಕೈಕಟ್ಟಿ ಕೂಡಲು ಸಾಧ್ಯವಿಲ್ಲ.  ಕಾಂಗ್ರೆಸ್ ರೈತ ವಿರೋಧಿ, ಜನ ವಿರೋಧಿ, ಬಡವರ ವಿರೋಧಿ ಹಾಗೂ ಮಧ್ಯಮ ವರ್ಗಗಳ ವಿರೋಧಿ ಆಡಳಿತ ಕೊನೆಯಾಗುವವರೆಗೂ ಬಿಜೆಪಿ ಹೋರಾಟ ನಡೆಸಲಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಬೆಳಗಾವಿ ವಿಭಾಗದ ಪ್ರಭಾರಿ ಚಂದ್ರಶೇಖರ ಕವಟಗಿ, ಬಿಜೆಪಿ ಮುಖಂಡ ವಿಜಯಕುಮಾರ ಪಾಟೀಲ, ಬಿಜೆಪಿ ನಗರ ಮಂಡಲ ಅಧ್ಯಕ್ಷ ಶಂಕರ ಹೂಗಾರ, ಮಂಜುನಾಥ ಮೀಸೆ, ಇಂಡಿಯ ಕಾಸುಗೌಡ ಬಿರಾದಾರ, ಗುರಲಿಂಗಪ್ಪ ಅಂಗಡಿ, ಸ್ವಪ್ನಾ ಕಣಮುಚನಾಳ ಮಾತನಾಡಿದರು.

ತೈಲ ಬೆಲೆ ಹೆಚ್ಚಳ ವಿರೋಧಿಸಿ ಬಿಜೆಪಿ ಕಾರ್ಯಕರ್ತರು ವಿಜಯಪುರದಲ್ಲಿ ಪ್ರತಿಭಟನೆ ನಡೆಸಿದ ವೇಳೆ ಮಾಜಿ ಶಾಸಕ ಸೋಮನಗೌಡ ಬಿ. ಪಾಟೀಲ ಸಾಸನೂರ ಮಾತನಾಡಿದರು.

ಈ ಪ್ರತಿಭಟನೆಯಲ್ಲಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮತ್ತು ವಿಜಯ.ಪುರ ಮಹಾನಗರ ಪಾಲಿಕೆ ಸದಸ್ಯ ಮಳುಗೌಡ ಪಾಟೀಲ, ಮುಖಂಡರಾದ ಗೂಳಪ್ಪ ಶಟಗಾರ ಸಾಬು ಮಾಶ್ಯಾಳ, ಈರಣ್ಣ ರಾವುರ, ಪ್ರಭುಗೌಡ ಅಸ್ಕಿ, ಸಿದ್ದು ಬುಳ್ಳಾ, ಸುರೇಶ ಬಿರಾದಾರ, ಚಿದಾನಂದ ಚಲವಾದಿ, ಶ್ರೀನಿವಾಸ ಕಂದಗಲ, ಅನೀಲ ಉಪ್ಪಾರ, ಮಹೇಂದ್ರ ನಾಯಕ, ರಾಜಕುಮಾರ ಸಗಾಯಿ, , ಶರಣು ಕಾಖಂಡಕಿ, ಸಂತೋಷ ಪಾಟೀಲ ಡಂಬಳ, ರಾಕೇಶ ಕುಲಕರ್ಣಿ, ಮಲ್ಲಿಕಾರ್ಜುನ ಕಿವಡೆ, ವಿಜಯ ಜೋಶಿ, ಶಂಕರಗೌಡ ಪಾಟೀಲ, ಕಾಂತು ಶಿಂಧೆ, ಜಗದೀಶ ಮುಚ್ಚಂಡಿ, ಪಾಪುಸಿಂಗ ರಜಪೂತ, ವಿಕಾಸ ಪದಕಿ, ಶರಣಬಸು ಕುಂಬಾರ, ರಾಜೇಶ ತವಸೆ,ಆನಂದ ಮುಚ್ಚಂಡಿ, ಶಿವಾನಂದ ಮಕಣಾಪೂರ, ಗುರು ತಳವಾರ, ರಾಘು ಕಾಪ್ಸೆ, ಶೀತಲಕುಮಾರ ಓಗಿ, ಶೀಲವಂತ ಉಮರಾಣಿ, ಮಹಾನಗರ ಪಾಲಿಕೆ ಸದಸ್ಯರಾದ ಶಿವರುದ್ರ ಬಾಗಲಕೋಟ, ಕಿರಣ ಪಾಟೀಲ, ಪ್ರೇಮಾನಂದ ಬಿರಾದಾರ, ರಾಹುಲ ಜಾಧವ, ವಿಠ್ಠಲ ಹೊಸಪೇಟೆ, ಮಲ್ಲಿಕಾರ್ಜು ಗಡಗಿ, ಮಹೇಶ ಒಡೆಯರ ಮತ್ತು ಪ್ರವೀನ ಕೂಡಗಿ, ವಿಠ್ಠಲ ನಡುವಿನಕೇರಿ, ಪ್ರಕಾಶ ಚವ್ಹಾಣ, ದತ್ತಾ ಗೋಲಾಂಡೆ, ರಾಹುಲ ಆಪ್ಟೆ, ಪ್ರವೀಣ ವಂದಾಲಮಠ, ಸಂತೋಷ ಭೋವಿ, ಸಂತೋಷ ಕುರದಡ್ಡಿ, ವಿನೋದ ಪತ್ತಾರ, ಸಂಗಮೇಶ ಉಕ್ಕಲಿ, ಅನೀಲ ಉಪ್ಪಾರ, ಸಂತೋಷ ನಿಂಬರಗಿ, ಸುಚೀತಾ ಜಾಧವ, ಮಧು ಪಾಟೀಲ, ಸುವರ್ಣ ಕುರ್ಲೆ, ಈರಣ್ಣ ಶಿರಮಗೊಂಡ, ಆನಂದ, ರಾಚು ಬಿರಾದಾರ, ಈರಣ್ಣಾ ಬಿರಾದಾರ ಮುಂತಾದವರು ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌