ನಿವಾಳಖೇಡ, ಕಡ್ಲೇವಾಡ ಗ್ರಾಮಗಳಿಗೆ ಜಿ. ಪಂ. ಸಿಇಓ ರಿಶಿ ಆನಂದ ಭೇಟಿ- ಶಾಲೆಯಲ್ಲಿ ಬಿಸಿಯೂಟ ಪರಿಶೀಲನೆ

ವಿಜಯಪುರ: ಶಾಲಾ ಆವರಣವೂ ಸೇರಿದಂತೆ ಶಾಲಾ ಪರಿಸರವನ್ನು ಶುಚಿತ್ವವಾಗಿಟ್ಟುಕೊಳ್ಳಬೇಕು ಎಂದು ಸಂಬAಧಿಸಿದ ಶಾಲಾ ಮುಖ್ಯೋಪಾಧ್ಯಾಯರಿಗೆ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಿಷಿ ಆನಂದ ಅವರು ಸೂಚನೆ ನೀಡಿದರು.  ಶನಿವಾರ ದೇವರ ಹಿಪ್ಪರಗಿ ತಾಲೂಕಿನ ನಿವಾಳಖೇಡ ಹಾಗೂ ಕಡ್ಲೆವಾಡ ಗ್ರಾಮದ ಸರಕಾರಿ ಪ್ರಾಥಮಿಕ ಶಾಲೆಗಳಿಗೆ ಭೇಟಿ ನೀಡಿ,ಪರಿಶೀಲನೆ ನಡೆಸಿ ಈ ಸೂಚನೆ ನೀಡಿದ್ದಾರೆ. ದೇವರ ಹಿಪ್ಪರಗಿ ತಾಲೂಕಿನ ಮುಳಸಾವಳಗಿ ಗ್ರಾಮ ಪಂಚಾಯತಿ ವ್ಯಾಪ್ತಿಯ ನಿವಾಳಖೇಡ ಗ್ರಾಮದ ಸರಕಾರಿ ಕನ್ನಡ ಪ್ರಾಥಮಿಕ ಶಾಲೆಯಲ್ಲಿನ ಅಡುಗೆÀ ಕೊಠಡಿ ಪರಿಶೀಲನೆ ನಡೆಸಿ, […]