ವಕ್ಫ್ ಆಸ್ತಿ ಯಾರಪ್ಪಂದೂ ಅಲ್ಲ- ಮುಸ್ಲಿಂ ಸಮುದಾಯದ ಅಭಿವೃದ್ಧಿಗೆ ದಾನಿಗಳು ನೀಡಿದ ಆಸ್ತಿಯದು- ಸಚಿವ ಜಮೀರ್ ಅಹ್ಮದ್ ಖಾನ್

ವಿಜಯಪುರ: ವಕ್ಫ್ ಆಸ್ತಿ ಯಾರಪ್ಪಂದೂ ಆಸ್ತಿ ಅಲ್ಲ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ.  ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, 12 ಲಕ್ಷ ಎಕರೆ ವಕ್ಫ್ ಆಸ್ತಿಯನ್ನು ದೇಶದ ಬಡವರಿಗೆ ಹಂಚಿಕೆ ಮಾಡಬೇಕು ಎಂದು ಶಾಸಕ ಯತ್ನಾಳ ನೀಡಿರುವ ಹೇಳಿಕೆಯ ಕುರಿತು ಕೇಳಲಾದ ಪ್ರಶ್ನೆಗೆ ಉತ್ತರಿಸಿದರು. ದೇಶದಲ್ಲಿ ಸುಮಾರು 12 ಲಕ್ಷ ಎಕರೆ ಜಮೀನು ವಕ್ಪ್ ಆಸ್ತಿಯಿದೆ.  ಅದನ್ನು ಬಡವರ ಕೆಲಸಕ್ಕೆ ಉಪಯೋಗಿಸಬೇಕು ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ನೀಡಿರುವ […]

ದೇಶದ ವಕ್ಫ್ ಆಸ್ತಿ ಬಡವರಿಗೆ ಹೋಗಬೇಕು- ಪ್ರಧಾನಿಗೆ ಪತ್ರ ಬರೆಯುತ್ತೇನೆ- ಶಾಸಕ ಯತ್ನಾಳ

ವಿಜಯಪುರ: ದೇಶದ ವಕ್ಫ ಆಸ್ತಿ ಬಡವರಿಗೆ ಹೋಗಬೇಕು.  ವಿಜಯಪುರದಲ್ಲಿರು ವಕ್ಪ ಅಪ್ ಆಸ್ತಿ ಕುರಿತು ಹೈಕೋರ್ಟಿಗೆ ಹೋಗುತ್ತೇನೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದ್ದಾರೆ. ವಿಜಯಪುರದಲ್ಲಿ ಬಿಜೆಪಿ ಆಯೋಜಿಸಲಾಗಿದ್ದ ತೈಲ ಬೆಲೆ ಹೆಚ್ಚಳ ವಿರೋಧಿ ಪ್ರತಿಭಟನೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ದೇಶದಲ್ಲಿ 12 ಲಕ್ಷ ಎಕರೆ ಜಮೀನು ವಕ್ಪ್ ಆಸ್ತಿ ಇದೆ.  ಇದನ್ನು‌ ಮಾಜಿ ಪ್ರಧಾನಿ ದಿ. ಜವಾಹರಲಾಲ ನೆಹರು ಮಾಡಿದ್ದಾರೆ.  ವಕ್ಪನವರು ಇದು ನಮ್ಮ ಆಸ್ತಿ ಎಂದರೆ ನ್ಯಾಯಾಲಯಕ್ಕೆ ಹೋಗಲಾಗಲ್ಲ.  ವಿಶೇಷ ನ್ಯಾಯಾಲಯಕ್ಕೆ ಹೋಗಬೇಕು.  […]