ಚುನಾವಣೆಲ್ಲಿ ಪಕ್ಷವಿರೋಧಿ ಚಟುವಟಿಕೆ- ಬಿಜೆಪಿ ಸತ್ಯಶೋಧನೆ ಸಮಿತಿ ರಚಿಸಬೇಕು- ಶಾಸಕ ಯತ್ನಾಳ

ವಿಜಯಪುರ: ಲೋಕಸಭೆ ಚುನಾವಣೆಯಲ್ಲಿ ದೊಡ್ಡ ಜವಾಬ್ದಾರಿ ಹೊತ್ತವರು ಪಕ್ಷವಿರೋಧಿ ಚಟುವಟಿಕೆ ನಡೆಸಿರುವ ಕುರಿತು ತನಿಖೆ ನಡೆಸಲು ಸತ್ಯಶೋಧನೆ ಸಮಿತಿ ರಚಿಸಬೇಕು ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಆಗ್ರಹಿಸಿದ್ದಾರೆ. ವಿಜಯಪುರದಲ್ಲಿ ತಮ್ಮನ್ನು ಭೇಟಿಯಾದ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಇತ್ತೀಚೆಗೆ ನಡೆದ ಲೋಕಸಭೆ ಚುನಾವಣೆಯಲ್ಲಿ ಕೆಲವು ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಸೋತಿದ್ದಾರೆ.  ದಾವಣಗೆರೆ ಲೋಕಸಭೆ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಸೋಲಿಗೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರೇ ಕಾರಣ ಎಂದು ಹರಿಹರ ಶಾಸಕ ಹರೀಶ ಮಾಡಿರುವ […]