ಯಕ್ಕುಂಡಿಯಲ್ಲಿ ಶ್ರೀ ಹನುಮಾನ ದೇವಸ್ಥಾನದ ಕಳಸಾರೋಹಣ ಕಾರ್ಯಕ್ರಮ- ಕಾಶಿ ಜಗದ್ಗುರುಗಳು ಭಾಗಿ

ವಿಜಯಪುರ: ಬಬಲೇಶ್ವರ ತಾಲೂಕಿನ ಯಕ್ಕುಂಡಿ ಗ್ರಾಮದಲ್ಲಿ ಶ್ರೀ ಹನುಮಾನ ದೇವಸ್ಥಾನದ ಬದರಿನಾಥ ಶೈಲಿಯ ಶಿಖರದ ಕಳಸಾರೋಣದ ನಾನಾ ಧಾರ್ಮಿಕ ಕಾರ್ಯಕ್ರಮಗಳು ನಡೆದವು.

ಈ ಕಾರ್ಯಕ್ರಮದ ಅಂಗವಾಗಿ ಗ್ರಾಮದ ಪ್ರಮುಖ ರಸ್ತೆಗಳಲ್ಲಿ ಆರತಿ ಮತ್ತು ಕುಂಭಮೇಳದೊಂದಿಗೆ ಕಾಶಿ ಜಗದ್ಗುರುಗಳ ಅಡ್ಡ ಪಲ್ಲಕ್ಕಿ ಉತ್ಸವ, ಶಿಖರದ ಪಂಚ ಕಳಸ ಮೆರವಣಿಗೆ ಹಾಗೂ ಧರ್ಮಸಭೆ ನಡೆಯಿತು.  ಈ ಧರ್ಮಸಭೆಯನ್ನು ಕಾಶಿ ಜಗದ್ಗುರು ಡಾ. ಚಂದ್ರಶೇಖರ ಶಿವಾಚಾರ್ಯರ ಅಡ್ಡಪಲ್ಲಕ್ಕಿ ಉತ್ಸವ ನಡೆಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಜಗದ್ಗುರುಗಳು, ಕಾರ್ಯಕ್ರಮ ಯಶಸ್ವಿಯಾಗಿ ನಡೆದಿರುವುದು ಗ್ರಾಮಸ್ಥರ ಶ್ರದ್ಧೆ ಮತ್ತು ಭಕ್ತಿಗೆ ಸಾಕ್ಷಿಯಾಗಿದೆ ಎಂದು ಹೇಳಿದರು.

ಜಂಬಗಿ- ಕೆಂಗಲಗುತ್ತಿ ಹಿರೇಮಠದ ಸ್ವಾಮೀಜಿ, ಮಮದಾಪೂರ ವಿರಕ್ತಮಠದ ಸ್ವಾಮೀಜಿ, ಗುಳೇದಗುಡ್ಡದ ಅಮರೇಶ್ವರ ಮಠದ ಶ್ರೀಗಳು, ಬೀಳಗಿ- ಕಲ್ಮಠ ಶ್ರೀಗಳು, ಅರ್ಚಕ ರಂಗಪ್ಪ ಪೂಜಾರಿ ಹಾಗೂ ಸುತ್ತಲಿನ ಗ್ರಾಮಸ್ಥರು ಉಪಸ್ಥಿತರಿದ್ದರು.

ಬಸಯ್ಯ ಹಿರೇಮಠ ಸ್ವಾಗತಿಸಿದರು, ಗುಣದಾಳ ಕಲ್ಯಾಣ ಹಿರೇಮಠದ ಡಾ.ವಿವೇಕಾನಂದ ದೇವರು ನಿರೂಪಿಸಿದರು.

Leave a Reply

ಹೊಸ ಪೋಸ್ಟ್‌