ಸರಕಾರದ ಯೋಜನೆಗಳ ಲಾಭ ದೊರಕಿಸಿ ತಾಂಡಾಗಳ ಅಭಿವೃದ್ದಿಗಾಗಿ ಒತ್ತು ನೀಡಿ- ನಿಗಮದ ಅಧ್ಯಕ್ಷ ಜಯದೇವ ನಾಯಕ ಸೂಚನೆ

ವಿಜಯಪುರ: ಅತಿ ಹೆಚ್ಚು ತಾಂಡಾಗಳನ್ನು ಹೊಂದಿರುವ ವಿಜಯಪುರ ಜಿಲ್ಲೆಯಲ್ಲಿನ ತಾಂಡಾಗಳಲ್ಲಿ ವಾಸಿಸುತ್ತಿರುವ ಜನರ ಜೀವನಮಟ್ಟ, ಶೈಕ್ಷಣಿಕ ಸುಧಾರಣೆಗೆ ಸರಕಾರ ಜಾರಿಗೊಳಿಸಿರುವ ಯೋಜನೆಗಳ ಲಾಭ ದೊರಕಿಸಲು ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಸಮರ್ಪಕವಾಗಿ ಕಾರ್ಯನಿರ್ವಹಿಸಿ ಜನರಿಗೆ ಸವಲತ್ತುಗಳನ್ನು ದೊರಕಿಸುವಂತೆ ತಾಂಡಾ ಅಭಿವೃದ್ದಿ ನಿಗಮದ ಅಧ್ಯಕ್ಷ ಎನ್. ಜಯದೇವ ನಾಯಕ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ತಾಂಡಾಗಳನ್ನು ಕಂದಾಯ ಗ್ರಾಮಗಳನ್ನಾಗಿ ಪರಿವರ್ತಿಸುವ ಕುರಿತು ಆಯೋಜಿಸಲಾದ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ತಾಂಡಾಗಳಲ್ಲಿನ ಜನರ ಆರೋಗ್ಯ ಹಿತದೃಷ್ಟಿಯಿಂದ ಕಾಲಕಾಲಕ್ಕೆ ಆರೋಗ್ಯ- […]