ಡೆಂಗ್ಯೂ ನಿಯಂತ್ರಣ: ಕಾರ್ಪೋರೇಟರ್ ಶಿವರುದ್ರ ಬಾಗಲಕೋಟ ಸಮ್ಮುಖದಲ್ಲಿ ಪಾಲಿಕೆಯಿಂದ ಕ್ರಿಮಿನಾಶಕ ಸಿಂಪಡಣೆ

ವಿಜಯಪುರ: ಮಳೆಗಾಲ ಆರಂಭವಾಗುತ್ತಿದ್ದಂತೆ ಡೆಂಗ್ಯೂ ಜ್ವರದ ಪೀಡಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ನಗರದ ವಾರ್ಡ್ ಸಂಖ್ಯೆ 32 ರಲ್ಲಿ ಬರುವ ನಾನಾ ಬಡಾವಣೆಗಳಲ್ಲಿ ಡೆಂಗ್ಯೂ ಹಾಗೂ ಇತರೆ ಸಾಂಕ್ರಾಮಿಕ ಕಾಯಿಲೆಗಳ ನಿಯಂತ್ರಣಕ್ಕಾಗಿ ಲಾರ್ವಾ ಸಂತತಿ ಉತ್ಪತ್ತಿ ತಾಣಗಳಲ್ಲಿ ಕ್ರಿಮಿನಾಶಕ ಸಿಂಪಡಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಶಿವರುದ್ರ ಬಾಗಲಕೋಟ, ರಾಜ್ಯಾದ್ಯಂತ ಡೆಂಗ್ಯೂ ಹಾವಳಿ ಹೆಚ್ಚಾಗಿದ್ದು ಕೆಲವೇ ದಿನಗಳಲ್ಲಿ 700 ಕ್ಕಿಂತ ಹೆಚ್ಚು ಪ್ರಕರಣಗಳು ಪತ್ತೆಯಾಗಿವೆ.  ಶುದ್ಧ ನೀರು ಇರುವ ಸಣ್ಣಪುಟ್ಟ ಸ್ಥಳದಲ್ಲಿಯೇ ಡೆಂಗ್ಯೂ ಜ್ವರ ಹರಡುವ ಇಡಿಸ್ […]