ದಕ್ಷಿಣ ಭಾರತದಲ್ಲಿ ಸತತವಾಗಿ 7ನೇ ಬಾರಿ ಸಂಸದನಾಗಿ ಆಯ್ಕೆಯಾದರೂ ಸಚಿವ ಸ್ಥಾನ ನೀಡಿಲ್ಲ- ದಲಿತರು ಬಿಜೆಪಿಗೆ ಮತ ಹಾಕಿಲ್ವಾ? ರಮೇಶ ಜಿಗಜಿಣಗಿ ಬೇಸರದ ನುಡಿ

ವಿಜಯಪುರ: ದಕ್ಷಿಣ ಭಾರತದಲ್ಲಿ ಸತತ ಏಳನೇ ಬಾರಿ ದಲಿತ ಸಮುದಾಯದಿಂದ ಸಂಸದನಾಗಿ ಆಯ್ಕೆಯಾಗಿದ್ದರೂ ಕೇಂದ್ರದಲ್ಲಿ ನನಗೆ ಸಚಿವ ಸ್ಥಾನ ನೀಡದಿರುವುದು ನೋವು ತಂದಿದೆ ಎಂದು ಸಂಸದ ರಮೇಶ ಜಿಗಜಿಣಗಿ ಹೇಳಿದ್ದಾರೆ. ವಿಜಯಪುರದಲ್ಲಿ ಸಂಸದರ ಕಚೇರಿಯಲ್ಲಿ ಪೂಜೆ ಸಲ್ಲಿಸಿ ಮಾತನಾಡಿದ ಅವರು, ದಕ್ಷಿಣ ಭಾರತದಲ್ಲಿ ದಲಿತ ಸಮುದಾಯದಿಂದ ಸತತವಾಗಿ ಏಳು ಬಾರಿ ಸಂಸದನಾಗಿ ನಾನೊಬ್ಬನೇ ಆಯ್ಕೆಯಾಗಿದ್ದೇನೆ.  ಹೀಗಿದ್ದರೂ ಸಚಿವ ಸ್ಥಾನಗಳನ್ನು ಮೇಲ್ವರ್ಗದವರಿಗೆ ನೀಡಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ನನಗೆ ಮಂತ್ರಿಗಿರಿ ಅವಶ್ಯಕತೆ ಇಲ್ಲ.  ನನಗೆ ಜನ ಅವಶ್ಯವಾಗಿದ್ದಾರೆ.  ಸಚಿವನಾಗಬೇಕು […]