ನಂದಿ ಸಕ್ಕರೆ ಕಾರ್ಖಾನೆ ಉಳಿಸಿ, ಈ ಬಾರಿ ಕಬ್ಬು ನುರಿಸಲು ಶಕ್ತಿ ಮೀರಿ ಪ್ರಯತ್ನಿಸುವೆ- ಸಚಿವ ಎಂ. ಬಿ. ಪಾಟೀಲ

ವಿಜಯಪುರ: ನಂದಿ ಸಹಕಾರಿ ಸಕ್ಕರೆ ಕಾರ್ಖಾನೆ ಉಳಿಸಿ ಈ ವರ್ಷದ ಹಂಗಾಮಿನಲ್ಲಿ ಕಬ್ಬು ನುರಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಶಕ್ತಿಮೀರಿ ಪ್ರಯತ್ನಿಸುವುದಾಗಿ ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಕರ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಭರವಸೆ ನೀಡಿದ್ದಾರೆ. ಬಬಲೇಶ್ವರ ತಾಲೂಕಿನ ಕೃಷ್ಣಾ ನಗರದಲ್ಲಿರುವ ನಂದಿ ಕಾರ್ಖಾನೆಗೆ ಶನಿವಾರ ಭೇಟಿ ನೀಡಿದ ಸಂದರ್ಭದಲ್ಲಿ ಉಪಸ್ಥಿತರಿದ್ದ ಇಲ್ಲಿನ ಕಾರ್ಮಿಕರು ಕಾರ್ಖಾನೆ ಉಳಿಸಿ ಎಂದು ಕೈಮುಗಿದು ಬೇಡಿಕೊಂಡ ಘಟನೆ ನಡೆಯಿತು. ಈ ಸಂದರ್ಭದಲ್ಲಿ ಅಲ್ಲಿದ್ದವರ ಕರುಳು […]