ಡಾ. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣಕ್ಕೆ ಡಿಸಿ, ಜಿ. ಪಂ ಸಿಇಓ, ಎಸ್ಪಿ ದಿಢೀರ್ ಭೇಟಿ, ಪರಿಶೀಲನೆ, ಅಹವಾಲು ಆಲಿಕೆ

ವಿಜಯಪುರ: ಜಿಲ್ಲಾಧಿಕಾರಿ ಟಿ. ಭೂಬಾಲನ್, ಜಿ. ಪಂ. ಸಿಇಓ ರಿಷಿ ಆನಂದ, ಎಸ್ಪಿ ಋಷಿಕೇಶ ಸೋನಾಚಣೆ ಅವರು ಬೆಳಿಗ್ಗೆ ನಗರದ ಡಾ. ಬಿ. ಆರ್. ಅಂಬೇಡ್ಕರ್ ಕ್ರೀಡಾಂಗಣಕ್ಕೆ ದಿಢೀರ್ ಭೇಟಿ ನೀಡಿ, ಪರಿಶೀಲನೆ ನಡೆಸಿದರು.

ಕ್ರೀಡಾಂಗಣದ ಆವರಣ ಪರಿವೀಕ್ಷಣೆ ನಡೆಸಿದ ಅವರು, ಕ್ರೀಡಾಂಗಣದಲ್ಲಿ ಒದಗಿಸಿರುವ ಮೂಲಭೂತ ಸೌಲಭ್ಯಗಳ ಕುರಿತು ಪರಿಶೀಲನೆ‌ ನಡೆಸಿದರು. ಕ್ರೀಡಾಂಗಣ ಸ್ವಚ್ಛತೆಯೂ ಸೇರಿದಂತೆ ಅಗತ್ಯ ಮೂಲಭೂತ ಸೌಲಭ್ಯ ಕಲ್ಪಿಸಿರುವ ಮಾಹಿತಿ ಪಡೆದುಕೊಂಡ ಅವರು, ಈ ಬಗ್ಗೆ ನಿಯಮಿತವಾಗಿ ಪರಿಶೀಲನೆ ನಡೆಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ವಿಜಯಪುರ ಡಾ‌. ಬಿ. ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣಕ್ಕೆ ಡಿಸಿ ಟಿ. ಭೂಬಾಲನ್ ಅವರು ಜಿ. ಪಂ‌ ಸಿಇಓ ರಿಷಿ ಆನಂದ, ಎಸ್ಪಿ ಋಷಿಕೇಶ ಸೋನಾವಣೆ ಜೊತೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ವ್ಹಾಲಿಬಾಲ್, ಪುಟ್ಬಾಲ್, ಬಾಸ್ಕೆಟಬಾಲ್, ಅಥ್ಲೆಟಿಕ್ಸ್, ಹಾಕಿ ಅಸೋಷಿಯೇಶನ್ ಸಂಸ್ಥೆಯ ಪದಾಧಿಕಾರಿಗಳೊಂದಿಗೆ ಕ್ರೀಡಾ ಮೂಲಭೂತ ಸೌಕರ್ಯಗಳ ಅಭಿವೃದ್ಧಿ ಕುರಿತು ಕುಂದುಕೊರತೆ ಸಭೆ ನಡೆಸಿದರು. ಕ್ರೀಡಾ ಇಲಾಖೆಯ ತರಬೇತಿದಾರರೊಂದಿಗೆ ಕ್ರೀಡಾ ತರಬೇತಿ ಹಾಗೂ ಸಾಧನೆಯ ಪ್ರಗತಿ‌ ಕುರಿತು ವಿವರ ಪಡೆದುಕೊಂಡ ಅವರು,,ಅಗತ್ಯ ಸಲಹೆ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಮಹಾನಗರ‌ ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ, ಯುವಜನ ಸೇವೆ ಮತ್ತು ಕ್ರೀಡಾಧಿಕಾರಿ ಎಸ್. ಜಿ. ಲೋಣಿ ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌