ಬೆಳೆ ಅಂದಾಜು ಸಮೀಕ್ಷೆ ತರಬೇತಿ ಕಾರ್ಯಕ್ರಮ- ಜಿ. ಪಂ. ಸಿಇಓ ರಿಶಿ ಆನಂದ ಉದ್ಘಾಟನೆ

ವಿಜಯಪುರ: ಗ್ರಾಮ ಆಡಳಿತ ಅಧಿಕಾರಿಗಳು ತೋಟಗಾರಿಕೆ ಅಧಿಕಾರಿಗಳು, ಪಿಡಿಓಗಳು, ಸಹಾಯಕ ಕೃಷಿ ಅಧಿಕಾರಿಗಳು ಹಾಗೂ ಉಪತಹಸೀಲ್ದಾರರು, ಕಂದಾಯ ನಿರೀಕ್ಷಕರು ಮತ್ತು ತಾ. ಪಂ. ಕಾರ್ಯ ನಿರ್ವಾಹಕ ಅಧಿಕಾರಿಗಳಿಗೆ ಗುರುವಾರ ನಗರದ ಜಿ. ಪಂ. ಸಭಾಂಗಣದಲ್ಲಿ ಬೆಳೆ ಅಂದಾಜು ಸಮೀಕ್ಷೆ ತರಬೇತಿ ಕಾರ್ಯಕ್ರಮ ನಡೆಯಿತು.   ಈ ಕಾರ್ಯಕ್ರಮವನ್ನು ಜಿ. ಪಂ. ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಿಷಿ ಆನಂದ ಉದ್ಘಾಟಿಸಿದರು. ಜಿಲ್ಲಾಧಿಕಾರಿ ಟಿ. ಭೂಬಾಲನ್ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಕಚೇರಿಯ ಸಹಾಯಕ ನಿರ್ದೇಶಕಕ ಅಲ್ತಾಫ […]

ರಸ್ತೆ ಕಾಮಗಾರಿ: ನಾನಾ ಪ್ರದೇಶ, ಕಚೇರಿಗಳಿಗೆ ಜಿಲ್ಲಾಧಿಕಾರಿ ಟಿ. ಭೂಬಾಲನ್ ಭೇಟಿ, ಪರಿಶೀಲನೆ

ವಿಜಯಪುರ: ನಗರದ ಜಿಲ್ಲಾ ಪಂಚಾಯಿತಿ ಪ್ರವೇಶ ದ್ವಾರದಿಂದ ಜಿಲ್ಲಾ ಪಂಚಾಯಿತಿ ಕಚೇರಿಯವರೆಗೆ ಲೋಕೋಪಯೋಗಿ ಇಲಾಖೆಯಿಂದ ಕೈಗೊಂಡಿರುವ ರಸ್ತೆ ಕಾಮಗಾರಿ ಸ್ಥಳಕ್ಕೆ ಜಿಲ್ಲಾಧಿಕಾರಿ ಟಿ. ಭೂಬಾಲನ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಗುರುವಾರ ರಸ್ತೆ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ಗುಣಮಟ್ಟದ ರಸ್ತೆ ನಿರ್ಮಾಣಕ್ಕೆ ಸಂಬಂಧಿಸಿದವರಿಗೆ ಸೂಚನೆ ನೀಡಿದರು.  ನಂತರ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಬಾಲಮಂದಿರ, ಗಾಂಧಿಭವನದ ಪಕ್ಕದಲ್ಲಿ ಜಿಲ್ಲಾಡಳಿತ ಕಚೇರಿಗಳ […]

ಕಂದಾಯ ಗ್ರಾಮಗಳ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ, ಸರ್ವೇ ಕಾರ್ಯ ಸರಳೀಕರಣಕ್ಕೆ ಆದ್ಯತೆ ನೀಡಿ- ಡಿಸಿ ಟಿ. ಭೂಬಾಲನ್ ಸೂಚನೆ

ವಿಜಯಪುರ: ಕಂದಾಯ ಗ್ರಾಮಗಳ ರಚನೆಗೆ ಸರ್ಕಾರ ವಿಶೇಷ ಆಸಕ್ತಿ ವಹಿಸಿದ್ದು, ಈ ನಿಟ್ಟಿನಲ್ಲಿ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಕಂದಾಯ ಗ್ರಾಮಗಳ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆಗೆ ಕ್ರಮ ವಹಿಸುವಂತೆ ಕಂದಾಯ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಸೂಚನೆ ನೀಡಿದ್ದಾರೆ. ಮುಖ್ಯಮಂತ್ರಿಗಳ ನಿರ್ದೇಶನ ಹಿನ್ನಲೆಯಲ್ಲಿ ಕಂದಾಯ ಇಲಾಖೆಯ ನಾನಾ ವಿಷಯಗಳ ಕುರಿತು ಪರಿಶೀಲನೆ ನಡೆಸಲು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಕಂದಾಯ ಇಲಾಖೆಯ ಅಧಿಕಾರಿಗಳೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಕಂದಾಯ ಗ್ರಾಮಗಳಲ್ಲಿರುವ ಫಲಾನುಭವಿಗಳಿಗೆ […]