ಬೆಳೆ ಅಂದಾಜು ಸಮೀಕ್ಷೆ ತರಬೇತಿ ಕಾರ್ಯಕ್ರಮ- ಜಿ. ಪಂ. ಸಿಇಓ ರಿಶಿ ಆನಂದ ಉದ್ಘಾಟನೆ

ವಿಜಯಪುರ: ಗ್ರಾಮ ಆಡಳಿತ ಅಧಿಕಾರಿಗಳು ತೋಟಗಾರಿಕೆ ಅಧಿಕಾರಿಗಳು, ಪಿಡಿಓಗಳು, ಸಹಾಯಕ ಕೃಷಿ ಅಧಿಕಾರಿಗಳು ಹಾಗೂ ಉಪತಹಸೀಲ್ದಾರರು, ಕಂದಾಯ ನಿರೀಕ್ಷಕರು ಮತ್ತು ತಾ. ಪಂ. ಕಾರ್ಯ ನಿರ್ವಾಹಕ ಅಧಿಕಾರಿಗಳಿಗೆ ಗುರುವಾರ ನಗರದ ಜಿ. ಪಂ. ಸಭಾಂಗಣದಲ್ಲಿ ಬೆಳೆ ಅಂದಾಜು ಸಮೀಕ್ಷೆ ತರಬೇತಿ ಕಾರ್ಯಕ್ರಮ ನಡೆಯಿತು.  

ಈ ಕಾರ್ಯಕ್ರಮವನ್ನು ಜಿ. ಪಂ. ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಿಷಿ ಆನಂದ ಉದ್ಘಾಟಿಸಿದರು. ಜಿಲ್ಲಾಧಿಕಾರಿ ಟಿ. ಭೂಬಾಲನ್ ಅಧ್ಯಕ್ಷತೆ ವಹಿಸಿದ್ದರು.

ಈ ಸಂದರ್ಭದಲ್ಲಿ ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಕಚೇರಿಯ ಸಹಾಯಕ ನಿರ್ದೇಶಕಕ ಅಲ್ತಾಫ ಅಹ್ಮದ. ಮಣಿಯಾರ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಹಾಯಕ ಸಾಂಖ್ಯಿಕ ಅಧಿಕಾರಿ ಶಿದ್ದನಗೌಡ ಬಿರಾದಾರ ತರಬೇತಿ ನೀಡಿದರು.

ಈ ವೇಳೆ ಜಿ. ಪಂ. ಮುಖ್ಯ ಯೋಜನಾಧಿಕಾರಿ ನಿಂಗಪ್ಪ ಗೋಠೆ, ಕೃಷಿ ಇಲಾಖೆ ಜಂಟಿ ನಿರ್ದೇಶಕ ರಾಜಶೇಖರ ವಿಲಿಯಮ್ಸ್, ಎನ್.ಎಸ್.ಎಸ್.ಓ ಬೆಳಗಾವಿ ಕಚೇರಿಯ ಎನ್.ಎನ್.ಕಾಂಬಳೆ, ಇಂಡಿ ಉಪ ವಿಭಾಗಾಧಿಕಾರಿ ಆಬಿದ್ ಗದ್ಯಾಳ ಸೇರಿದಂತೆ ಇತರರು ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌