ಅಹಿಂದ ಹೆಸರಿನಲ್ಲಿ ಆಡಳಿತ ನಡೆಸುತ್ತಿರುವ ಸರಕಾರ ದಲಿತ ವಿರೋಧಿಯಾಗಿದೆ- ಗೋಪಾಲ ಘಟಕಾಂಬಳೆ

ವಿಜಯಪುರ: ಅಹಿಂದ ಹೆಸರು ಹೇಳಿಕೊಂಡು ಆಡಳಿತ ನಡೆಸುತ್ತಿರುವ ರಾಜ್ಯ ಸರಕಾರ ದಲಿತರ ವಿರೋಧಿಯಾಗಿದೆ ಎಂದು ಬಿಜೆಪಿ ಎಸ್ಸಿ ಮೋರ್ಚಾ ರಾಜ್ಯ ಉಪಾಧ್ಯಕ್ಷ ಗೋಪಾಲ ಘಟಕಾಂಬಳೆ ಆರೋಪಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಾಲ್ಮೀಕಿ ನಿಗಮದಲ್ಲಿ ರೂ. 187 ಕೋ. ಹಗರಣ ಮಾಡಿದ್ದಾರೆ.  ಈ ಹಗರಣದಲ್ಲಿ ಸಚಿವರ ತಲೆದಂಡವಾಗಿದ್ದು, ಅನೇಕರನ್ನು ಬಂಧಿಸಲಾಗಿದೆ.  ಅಹಿಂದ ನಾಯಕರು ಎಂದು ಬಿಂಬಿಸಿ ದಲಿತರಿಗೆ ಕಾಂಗ್ರೆಸ್ ವಂಚಿಸುತ್ತಿದ್ದು, ಕೈ ಪಕ್ಷ ದಲಿತರ ವಿರೋಧಿಯಾಗಿದೆ ಎಂದು ಆರೋಪಿಸಿದರು. ರಾಜ್ಯ ಸರಕಾರ ಆಡಳಿತಕ್ಕೆ ಬಂದಮೇಲೆ ಭ್ರಷ್ಟಾಚಾರ ತಾಂಡವಾಡುತ್ತಿದೆ.  […]

ಇಂಡಿಯಲ್ಲಿ ಡೆಂಗ್ಯು ಜನಜಾಗೃತಿ ಜಾಥಾಕ್ಕೆ ಡಿಸಿ ಟಿ. ಭೂಬಾಲನ್ ಚಾಲನೆ

ವಿಜಯಪುರ: ಮನೆಯ ಸುತ್ತಮುತ್ತಲಿನ ಸಂಗ್ರಹಗೊಳ್ಳುವ ನೀರಿನಲ್ಲಿ ಉತ್ಪತ್ತಿಯಾಗುವ ಈಡೀಸ್ ಸೊಳ್ಳೆಗಳು ಕಚ್ಚುವ ಮೂಲಕ ಡೆಂಗ್ಯೂ ಹರಡಲಿರುವುದರಿಂದ ಸಾರ್ವಜನಿಕ ತಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವ ಮೂಲಕ ಡೆಂಗ್ಯೂ ಹರಡದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಜಿಲ್ಲಾಧಿಕಾರಿ ಟಿ. ಭೂಬಾಲನ್ ಅವರು ಕರೆ ನೀಡಿದ್ದಾರೆ. ಇಂಡಿ ಮಿನಿ ವಿಧಾನಸೌಧದ ಆವರಣದಲ್ಲಿ ನಡೆದ ಡೆಂಗ್ಯು ಜನಜಾಗೃತಿಯ ಜಾಥಾಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಮಳೆಗಾಲ ಆರಂಭವಾಗಿರುವುದರಿಂದ ಮನೆ ಸುತ್ತಮುತ್ತ ನೀರು ಸಂಗ್ರಹವಾಗದಂತೆ ಸಾರ್ವಜನಿಕರು ಜಾಗೃತೆ ವಹಿಸಬೇಕು.  ಘನತ್ಯಾಜ್ಯ ವಸ್ತುಗಳನ್ನು ವಿಂಗಡಿಸಿ ವಿಲೇವಾರಿ ಮಾಡಬೇಕು, […]