ಸಂಪಾದಕರು ಸಂಘಟಿತರಾಗಿ ಸರಕಾರಿ ಸೌಲಭ್ಯಗಳನ್ನು ಪಡೆಯಬೇಕಾಗಿದೆ: ರಾಜ್ಯಾಧ್ಯಕ್ಷ ಎ. ಸಿ. ತಿಪ್ಪೇಸ್ವಾಮಿ

ತುಮಕೂರು: ಸಂಪಾದಕರು ಸಂಘಟಿತರಾಗಿ ಸರಕಾರಿ ಸವಲತ್ತನ್ನು ಪಡೆಯಬೇಕಾಗಿದೆ ಎಂದು ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘದ ರಾಜ್ಯಾಧ್ಯಕ್ಷ ಎ. ಸಿ. ತಿಪ್ಪೇಸ್ವಾಮಿ ಹೇಳಿದ್ದಾರೆ. ನಗರದ ಶಿರಾಗೇಟ್ ರಸ್ತೆಯ ಹೊನ್ನೇನಹಳ್ಳಿ ಬಳಿಯಿರುವ ಪರಂ ರೀಟ್ರೀಟ್ ಸಭಾಂಗಣದಲ್ಲಿ ಏರ್ಪಡಿಸಿದ್ದ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸಭೆ ಹಾಗೂ ಗದಗದಲ್ಲಿ ನಡೆಯುವ ರಾಜ್ಯ ಸಮ್ಮೇಳನದ ಪೂರ್ವಭಾವಿ ಚರ್ಚೆ ಹಾಗೂ ತುಮಕೂರು ಜಿಲ್ಲಾ ಘಟಕದ ನೂತನ ಅಧ್ಯಕ್ಷ, ಪ್ರಧಾನ ಕಾರ್ಯದರ್ಶಿ ಹಾಗೂ ಪದಾಧಿಕಾರಿಗಳ ಆಯ್ಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಂಪಾದಕರು ಸಣ್ಣಪುಟ್ಟ ಭಿನ್ನಾಭಿಪ್ರಾಯಗಳನ್ನು […]

ಸಂಸ್ಥೆಗಳ ಕಷ್ಟದ ದಿನಗಳಲ್ಲಿ ಗಟ್ಟಿಯಾಗಿ ನಿಂತು ಹೋರಾಡಿದವರ ಕಾರ್ಯ ಸದಾ ಶ್ಲಾಘನೀಯ- ಜಿ. ಕೆ. ಪಾಟೀಲ

ವಿಜಯಪುರ: ಸಂಸ್ಥೆಗಳ ಕಷ್ಟದ ದಿನಗಳಲ್ಲಿ ಗಟ್ಟಿಯಾಗಿ ನಿಂತು ಹೋರಾಟ ಮಾಡಿದವರ ಸೇವೆ ಸದಾ ಸ್ಮರಣೀಯವಾಗಿರುತ್ತದೆ ಎಂದು ಬಿ. ಎಲ್. ಡಿ. ಇ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನ ಪರಿಷತ ಮಾಜಿ ಶಾಸಕ ಜಿ. ಕೆ. ಪಾಟೀಲ ಹೇಳಿದ್ದಾರೆ. ಬಿ.ಎಲ್.ಡಿ.ಇ ಸಂಸ್ಥೆಯ ಆಡಳಿತ ಕಚೇರಿಯ ಅಧೀಕ್ಷಕ ಎಸ್. ಎ. ಬಿರಾದಾರ(ಕನ್ನಾಳ) ಮತ್ತುವಾಹನ ಚಾಲಕ ಎಸ್. ಎಸ್. ಬಡಿಗೇರ ಅವರ ಸೇವಾ ನಿವೃತ್ತಿ ಅಂಗವಾಗಿ ನಗರದಲ್ಲಿ ಬುಧವಾರ ಮುಸ್ಸಂಜೆ ಆಯೋಜಿಸಲಾದ ಗೌರವ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಎಲ್ಲರೂ […]