ಭೀಮಾ ನದಿ ಪ್ರವಾಹ: ಸೊನ್ನ ಬ್ಯಾರೇಜ್‍ಗೆ ಡಿಸಿ ಟಿ. ಭೂಬಾಲನ್ ಭೇಟಿ, ಪರಿಶೀಲನೆ- ಮುನ್ನೆಚ್ಚರಿಕೆ ವಹಿಸಲು ಖಡಕ್ ಸೂಚನೆ

ವಿಜಯಪುರ: ಮಹಾರಾಷ್ಟ್ರ ಭೀಮಾ ನದಿಗೆ 1.60 ಲಕ್ಷಕ್ಕೂ ಹೆಚ್ಚು ಕ್ಯೂಸೆಕ್ ನೀರು ಬಿಡುಗಡೆ ಮಾಡಿರುವ ಹಿನ್ನೆಲೆಯಲ್ಲಿ ಮತ್ತು ಸೊನ್ನ ಬ್ಯಾರೇಜ್ ಹಿನ್ನೀರಿನಿಂದ ವಿಜಯಪುರ ಜಿಲ್ಲೆಯ ಗ್ರಾಮಗಳಿಗೆ ಉಂಟಾಗುವ ಸಮಸ್ಯೆಗಳನ್ನು ತಡೆಯುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿ ಟಿ. ಭೂಬಾಲನ್ ಅವರು ಕಲಬುರಗಿ ಜಿಲ್ಲೆಯ ಅಫಝಲಪುರ ತಾಲೂಕಿನಲ್ಲಿ ಭೀಮಾನದಿಗೆ ನಿರ್ಮಿಸಲಾಗಿರುವ ಸೊನ್ನ ಬ್ಯಾರೇಜಿಗೆ ಭೇಟಿ ನೀಡಿ ಪರೀಶಿಲನೆ ನಡೆಸಿದರು.

ವಿಜಯಪುರ ಡಿಸಿ ಟಿ. ಭೂಬಾಲನ್, ಕಲಬುರಗಿ ಜಿಲ್ಲಾಧಿಕಾರಿ  ಫೌಜಿಯಾ ತರನ್ನುಮ, ಜಿ. ಪಂ. ಸಿಇಓ ಬನ್ವರ್ ಸಿಂಗ್ ಮೀನಾ ಜೊತೆ ಸೊನ್ನ ಬ್ಯಾರೇಜಿಗೆ ತೆರಳಿ ಭೀಮಾ ಪ್ರವಾಹ ನಿಯಂತ್ರಣ ಕುರಿತು ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಕಲಬುರಗಿ ಜಿಲ್ಲಾಧಿಕಾರಿ  ಫೌಜಿಯಾ ತರನ್ನುಮ ಅವರೊ ಕೂಡ ಉಪಸ್ಥಿತರಿದ್ದರು.  ಮಹಾರಾಷ್ಟ್ರದ ಉಜನಿ ಹಾಗೂ ವೀರ ಜಲಾಶಯದಿಂದ ನೀರು ಹರಿಬಿಟ್ಟಿರುವ ಹಿನ್ನಲೆಯಲ್ಲಿ ಭೀಮಾ ನದಿ ಪಾತ್ರದ ಪ್ರವಾಹ ಪರಿಸ್ಥಿತಿ ಬಗ್ಗೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಭೇಟಿ ನೀಡಿದ ಅವರು, ಈಗಾಗಲೇ ಮಹಾರಾಷ್ಟ್ರದಲ್ಲಿ ಅಲ್ಪ ಪ್ರಮಾಣದಲ್ಲಿ ಮಳೆ ನಿಂತಿದ್ದು ಉಜನಿ ಹಾಗೂ ವೀರ ಜಲಾಶಯದಿಂದ ನೀರು ಹರಿಸಲಾಗುತ್ತಿದೆ.  ಇದರಿಂದ ಭೀಮಾ ನದಿ ಪಾತ್ರದ ಜನರು ಮುನ್ನೆಚ್ಚರಿಕೆ ವಹಿಸಬೇಕು ಮತ್ತು ಸಂಬಂಧಿಸಿದ ಅಧಿಕಾರಿಗಳು ನೀಡುವ ಮುನ್ನೆಚ್ಚರಿಕೆ, ಸೂಚನೆಗಳನ್ನು ಪಾಲಿಸಬೇಕು.  ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮಗಳ ಕುರಿತು ಜನರಲ್ಲಿ ಜಾಗೃತಿ ಮೂಡಿಸಬೇಕು. ನದಿ ಪಾತ್ರಕ್ಕೆ ಬಟ್ಟೆ ತೊಳೆಯಲು, ದನ, ಕರುಗಳಿಗೆ ನದಿ ಹತ್ತಿರಕ್ಕೆ ಹೋಗದಂತೆ ಕ್ರಮ ಕೈಗೊಳ್ಳುವಂತೆ ಅವರು ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಬ್ಯಾರೇಜನ ಎಲ್ಲ ಕ್ರಸ್ಟ್ ಗೆಟ್ ಗಳನ್ನು ಪರಿಶೀಲನೆ ನಡೆಸಿದ ಅವರು, ಭೀಮಾ ನದಿ ತೀರದಲ್ಲಿ ಪ್ರವಾಹಕ್ಕೊಳಗಾಗುವ ಗ್ರಾಮಗಳ ಮಾಹಿತಿಯನ್ನು ಪಡೆದು ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಕಲಬುರಗಿ ಜಿಲ್ಲಾ ಪಂಚಾಯತ ಸಿಇಓ ಬನ್ವರ್ ಸಿಂಗ್ ಮೀನಾ, ಆಲಮೇಲ ತಹಸೀಲ್ದಾರ ಸುರೇಶ್ ಚಾವಲರ, ಅಫಜಲಪುರ ತಹಸೀಲ್ದಾರ ಸಂಜೀವಕುಮಾರ ದಾಸರ, ಸಂತೋಷ ಸಜ್ಜನ, ಸೇರಿದಂತೆ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌