ಮನಗೂಳಿ ಅಗಸಿ ಬಳಿ ದಲಿತರಿಗಾಗಿ ಮನೆ ನಿರ್ಮಿಸಿ ಕೊಡುವೆ- ಶಾಸಕ ಯತ್ನಾಳ

ವಿಜಯಪುರ: ನಗರದ ಮನಗೂಳಿ ಅಗಸಿ ಬಳಿ ದಲಿತರಿಗೆ ಮನೆಗಳನ್ನು ನಿರ್ಮಿಸಿ ಕೊಡುತ್ತೇನೆ.  ಯಾವುದೇ ಶಕ್ತಿ ಅಡ್ಡ ಬಂದರೂ ಲೆಕ್ಕಿಸದೇ ಸಮುದಾಯದ ಹಿತ ಕಾಪಾಡುತ್ತೇನೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದ್ದಾರೆ. ನಗರದ ವಾರ್ಡ ಸಂಖ್ಯೆ 35ರಲ್ಲಿ ನೇತಾಜಿ ಸುಭಾಷ್ ಚಂದ್ರ ಬೋಸ್ ಮಾರ್ಗದಲ್ಲಿ ನೂತನವಾಗಿ ನಿರ್ಮಿಸಲಾದ ನೇತಾಜಿ ಸುಭಾಷ್ ಚಂದ್ರ ಬೋಸ್ ವೃತ್ತದಲ್ಲಿ ನೇತಾಜಿ ಪುತ್ಥಳಿ ಅನಾವರಣ ಮತ್ತು ವೃತ್ತ ಲೋಕಾರ್ಪಣೆ ಮಾಡಿ ಅವರು ಮಾತನಾಡಿದರು. ನಗರದ ಮನಗೂಳಿ ಅಗಸಿ ಬಳಿ ದಲಿತ ಕುಟುಂಬಗಳು ನೂರಾರು […]