ಆಲಮಟ್ಟಿ ಜಲಾಷಯಕ್ಕೆ ಸಿಎಂ, ಡಿಸಿಎಂ, ಸಚಿವರಿಂದ ಗಂಗಾ ಪೂಜೆ, ಬಾಗೀನ ಅರ್ಪಣೆ

ವಿಜಯಪುರ: ಮುಖ್ಯಮಂತ್ರಿ ಎಸ್. ಸಿದ್ಧರಾಮಯ್ಯ ಆಲಮಟ್ಟಿ ಲಾಲಬಹಾದ್ದೂರ ಶಾಸ್ತ್ರಿ ಸಾಗರದ ಜಲಧಿಗೆ ಗಂಗಾಪೂಜೆ ಸಲ್ಲಿಸಿ ಬಾಗೀನ ಅರ್ಪಿಸಿದ್ದಾರೆ.

ಸಿಎಂ, ಡಿಸಿಎಂ, ಸಚಿವರು ಆಲಮಟ್ಟಿ ಜಲಾಷಯಕ್ಕೆ ಗಂಗಾಪೂಜೆ ಸಲ್ಲಿಸಿದರು.

ನಿಡಗುಂದಿ ತಾಲೂಕಿನ ಆಲಮಟ್ಟಿಗೆ ಆಗಮಿಸಿದ ಸಿಎಂ ಎಸ್. ಸಿದ್ಧರಾಮಯ್ಯ, ಡಿಸಿಎಂ‌ ಡಿ. ಕೆ. ಶಿವಕುಮಾರ, ಸಚಿವರಾದ ಎಂ. ಬಿ. ಪಾಟೀಲ, ಆರ್. ಬಿ. ತಿಮ್ಮಾಪುರ, ಶಿವಾನಂದ ಎಸ್. ಪಾಟೀಲ, ಶಾಸಕರಾದ ಯಶವಂತರಾಯಗೌಡ ವಿ. ಪಾಟೀಲ, ಸಿ. ಎಸ್. ನಾಡಗೌಡ, ಅಶೋಕ ಮನಗೂಳಿ, ಎಚ್. ವೈ. ಮೇಟಿ, ಜೆ. ಟಿ. ಪಾಟೀಲ, ವಿಜಯಾನಂದ ಕಾಶಪ್ಪನವರ,, ಭೀಮಸೇನ ಚಿಮ್ಮನಕಟ್ಡಿ, ವಿಧಾನ ಪರಿಷತ ಶಾಸಕ‌ ಪ್ರಕಾಶ ರಾಠೋಡ, ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಂ. ಎಸ್. ಲೋಣಿ, ಮಾಜಿ‌ ಶಾಸಕ‌‌ ಡಾ. ಮಕ್ಬೂಲ್ ಬಾಗವಾನ ಮುಖಂಡರಾದ ಅಬ್ದುಲ್ ಹಮೀದ್ ಮುಶ್ರೀಫ್ ಸೇರಿದಂತೆ ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳ‌ ಜನಪ್ರತಿನಿಧಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

 

 

Leave a Reply

ಹೊಸ ಪೋಸ್ಟ್‌