ಕ್ಯಾನ್ಸರ್ ಬಗ್ಗೆ ಎಚ್ಚರಿಕೆ ಇರಲಿ, ಭಯ ಬೇಡ- ಡಾ. ಮಂಜುನಾಥ ಕೋಟೆಣ್ಣವರ

ವಿಜಯಪುರ: ಕ್ಯಾನ್ಸರ್ ಬಗ್ಗೆ ಎಚ್ಚರವಿರಲಿ. ಆದರೆ ಭಯ ಬೇಡ ಎಂದು ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯದ ಶಸ್ತ್ರಚಿಕಿತ್ಸಾ ವಿಭಾಗದ ಮುಖ್ಯಸ್ಥ ಡಾ. ಮಂಜುನಾಥ ಕೋಟೆಣ್ಣವರ ಹೇಳಿದ್ದಾರೆ.

ಶನಿವಾರ ಬಿ.ಎಲ್.ಡಿ.ಇ. ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯದ ಶಸ್ತ್ರ ಚಿಕಿತ್ಸಾ ವಿಭಾಗದ ವತಿಯಿಂದ ವಿಜಯಪುರ ಜಿಲ್ಲಾ ಶಸ್ತ್ರ ಚಿಕಿತ್ಸಕರ ಸಂಘದ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಉಚಿತ ಕ್ಯಾನ್ಸರ್ ರೋಗ ತಪಾಸಣೆ ಮತ್ತು ಜಾಗೃತಿ ಅಭಿಯಾನ ಸಪ್ತಾಹ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.

ಜನಸಾಮಾನ್ಯರಲ್ಲಿ ಕ್ಯಾನ್ಸರ್ ರೋಗದ ಬಗ್ಗೆ ತಿಳಉವಳಿಕೆ ಮೂಡಿಸಲು ಪ್ರತಿ ರ‍್ಷ ವಿಶ್ವದಾದ್ಯಂತ ಫೆಬ್ರವರಿ 4 ರಂದು ವಿಶ್ವ ಕ್ಯಾನ್ಸರ್ ದಿನ ಆಚರಿಸಲಾಗುತ್ತದೆ. ಕ್ಯಾನ್ಸರ್ ರೋಗಕ್ಕೆ ಸಂಬಂಧಿಸಿದಂತೆ ಈಗಲೂ ಸಾಕಷ್ಟು ಮೂಢನಂಬಿಕೆಗಳು ಪ್ರಚಲಿತದಲ್ಲಿವೆ. ಅದರ ಬಗ್ಗೆ ಎಚ್ಚರವಿರಬೇಕು. ಆದರೆ, ಭಯ ಬೇಡ ಎಂದು ಅವರು ಹೇಳಿದರು.

ಬಿ. ಎಲ್. ಡಿ. ಇ. ಆಸ್ಪತ್ರೆಯಲ್ಲಿ ಎಲ್ಲಾ ಬಗೆಯ ಕ್ಯಾನ್ಸರ್ ರೋಗಗಗಳನ್ನು ಕಂಡು ಹಿಡಿಯುವ ಸಾಧನಗಳಿವೆ. ಸಂಪರ‍್ಣ ಚಿಕಿತ್ಸೆಗಳು ಉಚಿತವಾಗಿ ಅಥವಾ ಅತಿ ಕಡಿಮೆ ದರದಲ್ಲಿ ಲಭ್ಯವಿವೆ. ನಾನಾ ಪರಿಣಿತ ತಜ್ಞ ವೈದ್ಯರು ಸೇವೆಯೂ ಇದೆ. ಮುಂಚಿನಂತೆ ಕ್ಯಾನ್ಸರ್ ರೋಗ ಚಿಕಿತ್ಸೆಗಾಗಿ ಮುಂಬೈ, ಬೆಂಗಳೂರಿನಂಥ ದೊಡ್ಡ ಊರುಗಳಿಗೆ ಅಲೆದಾಡುವ ಅಗತ್ಯವಿಲ್ಲ ಎಂದು ಅವರು ಹೇಳಿದರು.

ಕ್ಯಾನ್ಸರ್ ಶಸ್ತ್ರ ಚಿಕಿತ್ಸಕ ಡಾ. ಸಂಜೀವ ರಾಠೋಡ ಮಾತನಾಡಿ, ಕ್ಯಾನ್ಸರ್ ರೋಗವು ಸಾಮಾನ್ಯವಾಗಿ ದುಶ್ಚಟಗಳಾದ ತಂಬಾಕು, ಧೂಮಪಾನ, ಸಾರಾಯಿ ಸೇವನೆಗಳಿಂದ ಮತ್ತು ಅಸಾಮಾನ್ಯವಾಗಿ ಅನುವಂಶಿಕವಾಗಿ ಬರುತ್ತವೆ. ಆದ್ದರಿಂದ ಇಂಥ ದುಶ್ಚಟಗಳಿಂದ ದೂರವಿದ್ದು, ಆರೋಗ್ಯವಂತ ಜೀವನಶೈಲಿ ಪಾಲಿಸಲು ಸಲಹೆ ನೀಡಿದರು.

ಕ್ಯಾನ್ಸರ್ ಶಸ್ತ್ರ ಚಿಕಿತ್ಸಕ ಡಾ. ಶೈಲೇಶ ಕನ್ನೂರ ಮಾತನಾಡಿ, ನಾನಾ ಸಾಮಾನ್ಯ ಕ್ಯಾನ್ಸರ್ ರೋಗಗಳ ಗುಣಲಕ್ಷಣಗಳು, ಅವುಗಳನ್ನು ಕಂಡು ಹಿಡಿಯುವ ವಿಧಾನ ಹಾಗೂ ಚಿಕಿತ್ಸೆ ಪದ್ಧತಿಗಳನ್ನು ವಿವರಿಸಿದರು. ಅಲ್ಲದೇ, ಕ್ಯಾನ್ಸರ್ ರೋಗದ ಯಾವುದೇ ಲಕ್ಷಣಗಳು ಕಂಡು ಬಂದಲ್ಲಿ, ನರ‍್ಲಕ್ಷ್ಯಿಸದೆ, ತಜ್ಞ ವೈದ್ಯರನ್ನು ಕಾಣಲು ಕಿವಿ ಮಾತು ಹೇಳಿದರು.

ಈ ಸಂರ‍್ಭದಲ್ಲಿ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ರಾಜೇಶ ಹೊನ್ನುಟಗಿ, ವಿಜಯಪುರ ಜಿಲ್ಲಾ ಶಸ್ತ್ರ ಚಿಕಿತ್ಸಕರ ಸಂಘದ ಕರ‍್ಯರ‍್ಶಿ ಡಾ. ರಮಾಕಾಂತ ಬಳೂರಕರ, ಉಪಪ್ರಾಚರ‍್ಯ ಡಾ. ಎಂ. ಬಿ. ಪಾಟೀಲ, ಡೀನ್ ಫ್ಯಾಕಲ್ಟಿ ಆಫ್ ಮೆಡಿಸಿನ್ ಡಾ. ತೇಜಸ್ವಿನಿ ವಲ್ಲಭ, ಡಾ. ವಿಜಯಾ ಪಾಟೀಲ, ಡಾ. ಗಿರೀಶ ಕುಲ್ಲೊಳ್ಳಿ, ಡಾ. ಎಸ್. ಎಸ್. ಪಾಟೀಲ, ಡಾ. ಮಂಜುನಾಥ ಸಾವಂತ, ಡಾ. ವಿಜಯ ಈಶ್ವರಪ್ಪಗೋಳ, ಡಾ. ನಾಗರಾಜ ಬಿರಾದಾರ, ಡಾ. ವೀಣಾ ಘಂಟೆಪ್ಪಗೋಳ ಮುಂತಾದವರು ಉಪಸ್ಥಿತರಿದ್ದರು.

ಕಳೆದ ಸೋಮವಾರದಿಂದ ಶನಿವಾರದ ವರೆಗೆ ನಡೆದ ಸಪ್ತಾಹದಲ್ಲಿ ಸುಮಾರು 200 ಕ್ಕೂ ಹೆಚ್ಚು ಕ್ಯಾನ್ಸರ್ ಲಕ್ಷಣವಿರುವ ರೋಗಿಗಳನ್ನು ಉಚಿತವಾಗಿ ತಪಾಸಣೆ ಮಾಡಿ, ಅವಶ್ಯ ಸಲಹೆ ಮತ್ತು ಚಿಕಿತ್ಸೆ ನೀಡಲಾಯಿತು. 25 ರೋಗಿಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಯಲ್ಲಿ ದಾಖಲಿಸಲಾಯಿತು.

ಕಾಲೇಜಿನ ವೈಜ್ಞಾನಿಕ, ಶೈಕ್ಷಣಿಕ ಮತ್ತು ಸಂಶೋಧನಾ ಸೊಸೈಟಿ (SಂಖS) ಸಹಯೋಗದೊಂದಿಗೆ ವಿಜಯಪುರದ ವೈದ್ಯಕೀಯ ಮಹಾವಿದ್ಯಾಲಯಗಳ ಸ್ನಾತಕ ಮತ್ತು ಸ್ನಾತಕೋತ್ತರ ವಿದ್ಯರ‍್ಥಿಗಳಿಗಾಗಿ, ಈ ರ‍್ಷದ ಕ್ಯಾನ್ಸರ್ ರೋಗ ದಿನಾಚರಣೆಯ ಅನನ್ಯತೆಯಿಂದ ಒಂದುಗೂಡಿದೆ ಎಂಬ ಧ್ಯೇಯ ವಾಕ್ಯದ ಮೇಲೆ ಆಯೋಜಿಸಿದ್ದ ನಿಬಂಧ ಮತ್ತು ಚಿತ್ರಕಲಾ ಸ್ರ‍್ಧೆಗಳಲ್ಲಿ ಸುಮಾರು 35 ವಿದ್ಯರ‍್ಥಿಗಳು ಭಾಗವಹಿಸಿದ್ದರು.

ವಿಜೇತರಿಗೆ ಬಹುಮಾನಗಳನ್ನು ಮುಂದಿನ ವೈಜ್ಞಾನಿಕ ಮತ್ತು ಶೈಕ್ಷಣಿಕ ಸಂಶೋಧನೆ ಸೊಸೈಟಿ ಕರ‍್ಯಕ್ರಮದಲ್ಲಿ ವಿತರಿಸಲಾಗುವುದು ಎಂದು ಸೊಸೈಟಿಯ ಅಧ್ಯಕ್ಷೆ ಡಾ. ಎಚ್. ಟಿ. ಲತಾದೇವಿ ಮಾಹಿತಿ ನೀಡಿದ್ದಾರೆ.

Leave a Reply

ಹೊಸ ಪೋಸ್ಟ್‌