ಚಡಚಣದಲ್ಲಿ ಜನಸ್ಪಂದನ ಕಾರ್ಯಕ್ರಮ: ಜನರ ಮನೆ ಬಾಗಿಲಿಗೆ ಸರಕಾರ: ಶಾಸಕ ವಿಠ್ಠಲ ಧೋ. ಕಟಕದೊಂಡ

ವಿಜಯಪುರ: ಜನರ ಸಮಸ್ಯೆಗಳನ್ನು ನಿವಾರಣೆ ಮಾಡಲು ಸರ್ಕಾರ ಬದ್ಧವಾಗಿದ್ದು, ಅದಕ್ಕಾಗಿ ಮನೆ ಬಾಗಿಲಿಗೆ ಸರಕಾರ ಎಂಬಂತೆ ಜನಸ್ಪಂದನ ಕಾರ್ಯಕ್ರಮ ನಡೆಯುತ್ತಿದೆ. ಸಾರ್ವಜನಿಕರು ಇದg ಸದುಪಯೋಗ ಪಡಿಸಿಕೊಳ್ಳಬೇಕು ಎಂದು ನಾಗಠಾಣ ಶಾಸಕ ವಿಠ್ಠಲ ಧೋಂಡಿಬಾ ಕಟಕದೊಂಡ ಹೇಳಿದ್ದಾರೆ.  ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಪೊಲೀಸ್ ಇಲಾಖೆ ಸಂಯುಕ್ತಾಶ್ರಯದಲ್ಲಿ ಚಡಚಣ ನಗರದ ಗುರುಕೃಪ ಮಾಂಗಲ್ಯ ಕಾರ್ಯಾಲಯದಲ್ಲಿ ನಡೆದ ಜನಸ್ಪಂದನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸಾರ್ವಜನಿಕರು ತಮ್ಮ ಸಮಸ್ಯೆ, ದೂರು, ಅಹ್ವಾಲುಗಳನ್ನು ದೂರದ ಜಿಲ್ಲಾ ಕಚೇರಿಗೆ ಹೋಗಿ ದಾಖಲಿಸುವುದು ಆರ್ಥಿಕ ಹಾಗೂ […]

ಚುನಾವಣೆಲ್ಲಿ ಪಕ್ಷವಿರೋಧಿ ಚಟುವಟಿಕೆ- ಬಿಜೆಪಿ ಸತ್ಯಶೋಧನೆ ಸಮಿತಿ ರಚಿಸಬೇಕು- ಶಾಸಕ ಯತ್ನಾಳ

ವಿಜಯಪುರ: ಲೋಕಸಭೆ ಚುನಾವಣೆಯಲ್ಲಿ ದೊಡ್ಡ ಜವಾಬ್ದಾರಿ ಹೊತ್ತವರು ಪಕ್ಷವಿರೋಧಿ ಚಟುವಟಿಕೆ ನಡೆಸಿರುವ ಕುರಿತು ತನಿಖೆ ನಡೆಸಲು ಸತ್ಯಶೋಧನೆ ಸಮಿತಿ ರಚಿಸಬೇಕು ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಆಗ್ರಹಿಸಿದ್ದಾರೆ. ವಿಜಯಪುರದಲ್ಲಿ ತಮ್ಮನ್ನು ಭೇಟಿಯಾದ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಇತ್ತೀಚೆಗೆ ನಡೆದ ಲೋಕಸಭೆ ಚುನಾವಣೆಯಲ್ಲಿ ಕೆಲವು ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಸೋತಿದ್ದಾರೆ.  ದಾವಣಗೆರೆ ಲೋಕಸಭೆ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಸೋಲಿಗೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರೇ ಕಾರಣ ಎಂದು ಹರಿಹರ ಶಾಸಕ ಹರೀಶ ಮಾಡಿರುವ […]

ವಕ್ಫ್ ಆಸ್ತಿ ಯಾರಪ್ಪಂದೂ ಅಲ್ಲ- ಮುಸ್ಲಿಂ ಸಮುದಾಯದ ಅಭಿವೃದ್ಧಿಗೆ ದಾನಿಗಳು ನೀಡಿದ ಆಸ್ತಿಯದು- ಸಚಿವ ಜಮೀರ್ ಅಹ್ಮದ್ ಖಾನ್

ವಿಜಯಪುರ: ವಕ್ಫ್ ಆಸ್ತಿ ಯಾರಪ್ಪಂದೂ ಆಸ್ತಿ ಅಲ್ಲ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ.  ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, 12 ಲಕ್ಷ ಎಕರೆ ವಕ್ಫ್ ಆಸ್ತಿಯನ್ನು ದೇಶದ ಬಡವರಿಗೆ ಹಂಚಿಕೆ ಮಾಡಬೇಕು ಎಂದು ಶಾಸಕ ಯತ್ನಾಳ ನೀಡಿರುವ ಹೇಳಿಕೆಯ ಕುರಿತು ಕೇಳಲಾದ ಪ್ರಶ್ನೆಗೆ ಉತ್ತರಿಸಿದರು. ದೇಶದಲ್ಲಿ ಸುಮಾರು 12 ಲಕ್ಷ ಎಕರೆ ಜಮೀನು ವಕ್ಪ್ ಆಸ್ತಿಯಿದೆ.  ಅದನ್ನು ಬಡವರ ಕೆಲಸಕ್ಕೆ ಉಪಯೋಗಿಸಬೇಕು ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ನೀಡಿರುವ […]

ದೇಶದ ವಕ್ಫ್ ಆಸ್ತಿ ಬಡವರಿಗೆ ಹೋಗಬೇಕು- ಪ್ರಧಾನಿಗೆ ಪತ್ರ ಬರೆಯುತ್ತೇನೆ- ಶಾಸಕ ಯತ್ನಾಳ

ವಿಜಯಪುರ: ದೇಶದ ವಕ್ಫ ಆಸ್ತಿ ಬಡವರಿಗೆ ಹೋಗಬೇಕು.  ವಿಜಯಪುರದಲ್ಲಿರು ವಕ್ಪ ಅಪ್ ಆಸ್ತಿ ಕುರಿತು ಹೈಕೋರ್ಟಿಗೆ ಹೋಗುತ್ತೇನೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದ್ದಾರೆ. ವಿಜಯಪುರದಲ್ಲಿ ಬಿಜೆಪಿ ಆಯೋಜಿಸಲಾಗಿದ್ದ ತೈಲ ಬೆಲೆ ಹೆಚ್ಚಳ ವಿರೋಧಿ ಪ್ರತಿಭಟನೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ದೇಶದಲ್ಲಿ 12 ಲಕ್ಷ ಎಕರೆ ಜಮೀನು ವಕ್ಪ್ ಆಸ್ತಿ ಇದೆ.  ಇದನ್ನು‌ ಮಾಜಿ ಪ್ರಧಾನಿ ದಿ. ಜವಾಹರಲಾಲ ನೆಹರು ಮಾಡಿದ್ದಾರೆ.  ವಕ್ಪನವರು ಇದು ನಮ್ಮ ಆಸ್ತಿ ಎಂದರೆ ನ್ಯಾಯಾಲಯಕ್ಕೆ ಹೋಗಲಾಗಲ್ಲ.  ವಿಶೇಷ ನ್ಯಾಯಾಲಯಕ್ಕೆ ಹೋಗಬೇಕು.  […]

ನಿವಾಳಖೇಡ, ಕಡ್ಲೇವಾಡ ಗ್ರಾಮಗಳಿಗೆ ಜಿ. ಪಂ. ಸಿಇಓ ರಿಶಿ ಆನಂದ ಭೇಟಿ- ಶಾಲೆಯಲ್ಲಿ ಬಿಸಿಯೂಟ ಪರಿಶೀಲನೆ

ವಿಜಯಪುರ: ಶಾಲಾ ಆವರಣವೂ ಸೇರಿದಂತೆ ಶಾಲಾ ಪರಿಸರವನ್ನು ಶುಚಿತ್ವವಾಗಿಟ್ಟುಕೊಳ್ಳಬೇಕು ಎಂದು ಸಂಬAಧಿಸಿದ ಶಾಲಾ ಮುಖ್ಯೋಪಾಧ್ಯಾಯರಿಗೆ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಿಷಿ ಆನಂದ ಅವರು ಸೂಚನೆ ನೀಡಿದರು.  ಶನಿವಾರ ದೇವರ ಹಿಪ್ಪರಗಿ ತಾಲೂಕಿನ ನಿವಾಳಖೇಡ ಹಾಗೂ ಕಡ್ಲೆವಾಡ ಗ್ರಾಮದ ಸರಕಾರಿ ಪ್ರಾಥಮಿಕ ಶಾಲೆಗಳಿಗೆ ಭೇಟಿ ನೀಡಿ,ಪರಿಶೀಲನೆ ನಡೆಸಿ ಈ ಸೂಚನೆ ನೀಡಿದ್ದಾರೆ. ದೇವರ ಹಿಪ್ಪರಗಿ ತಾಲೂಕಿನ ಮುಳಸಾವಳಗಿ ಗ್ರಾಮ ಪಂಚಾಯತಿ ವ್ಯಾಪ್ತಿಯ ನಿವಾಳಖೇಡ ಗ್ರಾಮದ ಸರಕಾರಿ ಕನ್ನಡ ಪ್ರಾಥಮಿಕ ಶಾಲೆಯಲ್ಲಿನ ಅಡುಗೆÀ ಕೊಠಡಿ ಪರಿಶೀಲನೆ ನಡೆಸಿ, […]

ಬಿಎಸ್‌ವೈ, ವಿಜಯೇಂದ್ರ ಜೊತೆ ಹೊಂದಾಣಕೆ ವಿಚಾರ- ನಾನು ಬಿಜೆಪಿ ರಾಜ್ಯಾಧ್ಯಕ್ಷ ನಾಗುವುದಾಗಿ ಹೇಳಿದ್ದೇನೆ- ಯತ್ನಾಳ

ವಿಜಯಪುರ: ಬಿ. ವೈ. ವಿಜಯೇಂದ್ರ ಮತ್ತು ತಮ್ಮ ಮಧ್ಯೆ ಹೊಂದಾಣಿಕೆ ಮಾಡಿಸಲು ಪ್ರಯತ್ನಗಳು ನಡೆಯುತ್ತಿವೆ.  ನಾನು ಬಿಜೆಪಿ ರಾಜ್ಯಾಧ್ಯಕ್ಷನಾಗುವುದಾಗಿ ಹೇಳಿದ್ದೇನೆ ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದ್ದಾರೆ. ನಗರದಲ್ಲಿ ವಿಶ್ವ ಯೋಗದ ದಿನದ ಅಂಗವಾಗಿ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಿದ್ದಾ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಬಳಿಕ ತಮ್ಮನ್ನು ಭೇಟಿಯಾದ ಮಾಧ್ಯಮ ಪ್ರತನಿಧಿಗಳೊಂದಿಗೆ ಅವರು ಮಾತನಾಡಿದರು. ಇತ್ತೀಚೆಗೆ ಬಿಜೆಪಿ ಶಾಸಕ ಎನ್. ರವಿಕುಮಾರ ಮತ್ತೀತರು ವಿಜಯಪುರದಲ್ಲಿ ಶಾಸಕ ಯತ್ನಾಳ ಭೇಟಿಯಾಗಿದ್ದರು.  ಈ ಸಂದರ್ಭದಲ್ಲಿ ಬಿ. ವೈ. ವಿಜಯೇಂದ್ರ […]

ವರುಣನ ಕೃಪೆ: ನರೇಗಾ ಜಲಮೂಲಗಳಿಗೆ ಜೀವಕಳೆ- ಅನ್ನದಾತರ ಮೊಗದಲ್ಲಿ ಸಂತಸ

ವಿಜಯಪುರ: ಜಿಲ್ಲೆಯ ಗ್ರಾಮೀಣ ಭಾಗಕ್ಕೆ ನೀರು ಹಾಗೂ ಉದ್ಯೋಗಕ್ಕೆ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಗ್ರಾಮೀಣ ಭಾಗದ ಅಕುಶಲ ಕಾರ್ಮಿಕರಿಗೆ ನಿರಂತರ ಉದ್ಯೋಗ ನೀಡುವ ಉದ್ದೇಶದಿಂದ ಕೂಲಿ ಆಧಾರಿತ ಹಾಗೂ ಜಲಮೂಲ ಆಧಾರಿತ ಕಾಮಗಾರಿಗಳನ್ನು ಅನುಷ್ಠಾನಗೊಳಿಸುವ ಮೂಲಕ ಸಮಸ್ಯೆ ಪರಿಹಾರಕ್ಕೆ ಪ್ರಾಮಾಣಿಕವಾಗಿ ಪ್ರಯತ್ನಿಸಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಿಷಿ ಆನಂದ ಅವರು ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಬೇಸಿಗೆಯಲ್ಲಿನ ಬಿಸಿಲಿನ ತಾಪಮಾನಕ್ಕೆ ಜಿಲ್ಲೆಯಲ್ಲಿ ಕೆರೆಗಳು ಸಂಪೂರ್ಣ ಬತ್ತಿಹೋಗಿ, ಬೆಟ್ಟ-ಗುಡ್ಡಗಳಲ್ಲಿ ವಾಸ ಮಾಡುವ ವನ್ಯಜೀವಿಗಳು ಹಾಗೂ ಮೇಯಲು ಹೋಗುವ […]

ದ್ರಾಕ್ಷಿ ನಾಡಿನಲ್ಲಿ ಪ್ರಕೃತಿ ವಿಸ್ಮಯ- ಸೂರ್ಯನ ಸುತ್ತ ವರ್ತುಲ- ಕಣ್ತುಂಬಿಕೊಂಡ ಸಂತಸಪಟ್ಟ ವಿದ್ಯಾರ್ಥಿಗಳು

ವಿಜಯಪುರ: ಬಸವನಾಡು ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನಲ್ಲಿ ಇಂದು ಮಧ್ಯಾಹ್ನ ಆಗಸದಲ್ಲಿ ಕಾಣಿಸಿದ ಪ್ರಕೃತಿಯ ವಿಸ್ಮಯ ಎಲ್ಲರನ್ನು ಕೌತುಕಗೊಳಿಸಿದೆ. ನಭೋ ಮಂಡಲದಲ್ಲಿ ಕಂಡು ಬಂದ ಈ ಖಗೋಳ ವಿಸ್ಮಯ ಜನರ ಅಚ್ಚರಿಗೆ ಕಾರಣವಾಗಿದೆ.  ಸೂರ್ಯನ ಸುತ್ತ ಕಂಡು ಬಂದ ಕಾಮನಬಿಲ್ಲು ಆಕಾರದ ಉಂಗುರ ಸೂರ್ಯನಿಗೆ ವರ್ತುಲ ಹಾಕಿದಂತಿತ್ತು. ಪ್ರಕಾಶಮಾನವಾದ ಈ ವಿಸ್ಮಯ ಕಂಡು ಜನ ಬೆರಗಾಗಿದ್ದಾರೆ. ಘೊಣಸಗಿ ಲಂಬಾಣಿ ತಾಂಡಾ ಸರಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕ ಪರಮೇಶ್ವರ ಗದ್ಯಾಳ ಮಕ್ಕಳಿಗೆ ಈ ಕೌತುಕ ತೋರಿಸಿ ಅದರ ಬಗ್ಗೆ […]

ಚಡಚಣ ಶೂಟೌಟ್ ಪ್ರಕರಣ ಭೇದಿಸಿದ ಪೊಲೀಸರು- ಇಬ್ಬರು ಅರೆಸ್ಟ್- ಎಸ್ಪಿ ಸೋನಾವಣೆ

ವಿಜಯಪುರ: ಜಿಲ್ಲೆಯ ಚಡಚಣ ಪಟ್ಟಣದಲ್ಲಿ ಶನಿವಾರ ನಡೆದ ಶೂಟೌಟ್ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಈ ಸಂಬಂಧ ಇಬ್ಬರನ್ನು ಬಂಧಿಸಿದ್ದಾರೆ. ವಿಜಯಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಎಸ್ಪಿ ಋಷಿಕೇಶ ಸೋನಾವಣೆ, ಈ ಪ್ರಕರಣ ಸಂಬಂಧ ಚಡಚಣ ಪಟ್ಟಣದವರೇ ಆದ ಆರೋಪಿ ಇಸ್ಮಾಯಿಲ್ ಗುಲಾಬಸಾಬ ಶೇಖ(29) ಮತ್ತು ಜಾಫರ್ ಲಾಲಸಾಬ ಮಸಳಿ(36) ಎಂಬುವರನ್ನು ಇಂದು ಮಧ್ಯಾಹ್ನ 12.10ರಕ್ಕೆ ಮಹಾರಾಷ್ಟ್ರದ ಸೋಲಾಪೂರದಲ್ಲಿ ಬಂಧಿಸಲಾಗಿದೆ.  ಅಲ್ಲದೇ ಅವರ ಬಳಿಯಿದ್ದ ಒಂದು ಕಂಟ್ರಿ ಪಿಸ್ತೂಲು ಮತ್ತು ಮೂರು ಜೀವಂತ ಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು […]

ಕಾಂಗ್ರೆಸ್ ಶಾಸಕರು ಇನ್ನೊಂದು ತಿಂಗಳಲ್ಲಿ ಬಂಡಾಯವೇಳಲಿದ್ದಾರೆ- ಕೇಂದ್ರದಲ್ಲಿ ಬಿಜೆಪಿ ಸಂಸದರ ಸಂಖ್ಯೆ 272ಕ್ಕೇರಲಿದೆ- ಶಾಸಕ ಯತ್ನಾಳ

ವಿಜಯಪುರ: ಇನ್ನೊಂದು ತಿಂಗಳಲ್ಲಿ ಅನುದಾನ ವಿಚಾರದಲ್ಲಿ ಕಾಂಗ್ರೆಸ್ ಶಾಸಕರೇ ಬಂಡಾಯವೇಳಲಿದ್ದಾರೆ.  ಕೇಂದ್ರದಲ್ಲಿ ಬಿಜೆಪಿ ಸಂಸದರ ಸಂಖ್ಯೆ 272 ಆಗಲಿದೆ ಎಂದು ವಿಜಯಪುjರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಭವಿಷ್ಯ ನುಡಿದಿದ್ದಾರೆ. ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳು ವಿಫಲವಾಗಿವೆ.  ಗ್ಯಾರಂಟಿ‌ ಯೋಜನೆಗಳ ಮಧ್ಯೆಯೂ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಹೆಚ್ಚು ಸ್ಥಾನ ಗಳಿಸಿದೆ.  ಜನರು‌ ಗ್ಯಾರಂಟಿ ಬಗ್ಗೆ ಬೇಸತ್ತಿದ್ದಾರೆ ಎಂದು ಹೇಳಿದರು. ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳು ವಿಫಲವಾಗಿವೆ.  ಎಲ್ಲದರ ಬೆಲೆ ಏರಿಕೆ ಮಾಡುತ್ತಿದ್ದಾರೆ.  […]