ಬಸವ ನಾಡಿನ ನಾನಾ ನರೇಗಾ ಕಾಮಗಾರಿ ಸ್ಥಳದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

ವಿಜಯಪುರ:  ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿ ವತಿಯಿಂದ ಕೆ. ಎಚ್. ಪಿ. ಟಿ ಸಹಯೋಗದಲ್ಲಿ ಗ್ರಾಮ ಆರೋಗ್ಯ ಅಭಿಯಾನದ ಅಂಗವಾಗಿ ಜಿಲ್ಲೆಯ ನಾನಾ ನರೇಗಾ ಕಾಮಗಾರಿ ನಡೆಯುತ್ತಿರುವ ಸ್ಥಳಗಳಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ ನಡೆಯಿತು. ದೇವರ ಹಿಪ್ಪರಗಿ ತಾಲೂಕಿನ ಸಾತಿಹಾಳ, ನಿಡಗುಂದಿ ತಾಲೂಕಿನ ಯಲಗೂರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಹಾಗೂ  ವಿಜಯಪುರ ತಾಲೂಕಿನ ನಾಗಠಾಣ ಗ್ರಾಮದಲ್ಲಿ ಕೂಲಿಕಾರರ ಆರೋಗ್ಯ ತಪಾಸಣೆ ನಡೆಸಲಾಯಿತು. ದೇವರ ಹಿಪ್ಪರಗಿ ತಾಲೂಕಿನ ಸಾತಿಹಾಳ ಗ್ರಾಮದಲ್ಲಿ ಶಿಬಿರಕ್ಕೆ ದೇವರ […]

ಶ್ರೀ ಮೌನೇಶ್ವರ ಪತ್ತಿನ ಸಹಕಾರ ಸಂಘದ ಶಾಖಾ ಉದ್ಘಾಟನೆ- ವಿಶ್ವಕರ್ಮ ಸಮುದಾಯ ಭವನದ ಲೋಕಾರ್ಪಣೆ

ವಿಜಯಪುರ: ನಗರದ ಶ್ರೀ ಮೌನೇಶ್ವರ ಪತ್ತಿನ ಸಹಕಾರ ಸಂಘದ ಬೆಳ್ಳಿ ಹಬ್ಬದ ಅಂಗವಾಗಿ ನೂತನ ಶಾಖೆಯನ್ನು ಶ್ರೀ ಸೋಪಾನಂದ ಮಹಾಸ್ವಾಮಿಗಳು ಗಂವಾರ ಹಾಗೂ ಸಹಕಾರ ಸಂಘಗಳ ಇಲಾಖೆ ಉಪನಿಬಂಧಕ ಸಿ. ಎಸ್. ನಿಂಬಾಳ, ಎಸ್. ಜಿ. ಕುಂಬಾರ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಿ. ಎಸ್. ನಿಂಬಾಳ ಮೌನೇಶ್ವರ ಪತ್ತಿನ ಸಹಕಾರ ಸಂಘವು ಇಲ್ಲಿಯವರೆಗೆ ಉತ್ತಮ ಕೆಲಸ ಮಾಡುತ್ತಿದ್ದು ಗ್ರಾಹಕರಿಗೆ ಅನುಕೂಲವಾಗಲು ಮತ್ತಷ್ಟು ಅಭಿವೃದ್ಧಿ ಹೊಂದಲಿ ಎಂದು ಶುಭ ಕೋರಿದರು. ಪ್ರಕಾಶ ಮಹಾರಾಜ ಕನ್ನೂರ ಮಾತನಾಡಿ, ನೂತನ […]

ಸಚಿವರಿಗೆ ಖಾತೆ ಹಂಚಿಕೆ- ವೈರಲ್ ಆಗಿದ್ದ ಪಟ್ಟಿಯಲ್ಲಿ ಕೆಲವರ ಖಾತೆ ಬದಲಾವಣೆ

ಬೆಂಗಳೂರು: ಅಂತೂ ಇಂತೂ ಮುಖ್ಯಮಂತ್ರಿ ಎಸ್. ಸಿದ್ಧರಾಮಯ್ಯ ಅವರ ನೇತೃತ್ವದ ಸರಕಾರದಲ್ಲಿ ಸಚಿರವಾದ 34 ಜನರಿಗೆ ಅಳೆದು ತೂಗಿ ಖಾತೆ ಹಂಚಿಕೆ ಮಾಡಲಾಗಿದೆ. ರವಿವಾರ ರಾತ್ರಿ ಖಾತೆಗಳಿಗೆ ರಾಜ್ಯಪಾಲರು ಅಂಕಿತ ಹಾಕಿದ್ದು, ಯಾರಾರಿಗೆ ಯಾವ ಖಾತೆಗಳನ್ನು ಹಂಚಿಕೆ ಮಾಡಲಾಗಿದೆ ಎಂಬುದರ ಮಾಹಿತಿ ಇಲ್ಲಿದೆ. 1. ಎಸ್. ಸಿದ್ಧರಾಮಯ್ಯ- ಹಣಕಾಸು, ಸಂಪುಟ ವ್ಯವಹಾರ, ಆಡಳಿತ ಸುಧಾರಣೆ, ಗುಪ್ತದಳ, ವಾರ್ತಾ ಇಲಾಖೆ, ಐಟಿ-ಬಿಟಿ, ಮೂಲಭೂತ ಸೌಕರ್ಯ ಅಭಿವೃದ್ಧಿ ಮತ್ತು ಹಂಚಿಕೆಯಾಗದ ಎಲ್ಲಖಾತೆಗಳು 2. ಡಿ. ಕೆ. ಶಿವಕುಮಾರ- ಭಾರಿ ಮತ್ತು […]

ಡಾ. ಬಿ. ಆರ್. ಅಂಬೇಡ್ಕರ ಚಿಂತನೆಯ ಪಕ್ಷ ಬೇಕು- ಪ್ರಕಾಶ ಅಂಬೇಡ್ಕರ

ವಿಜಯಪುರ: ಇಂದಿನ ಜಾತಿ ಆಧಾರಿತ ಪ್ರಜಾಪ್ರಭುತ್ವ ನಿರ್ಮೂಲನೆ ಮಾಡಬೇಕು.  ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ ಅವರ ಚಿಂತನೆಯ ಪಕ್ಷ ಈಗ ಬೇಕಾಗಿದೆ ಎಂದು ಭಾರತ ರತ್ನ ಡಾ. ಬಿ. ಆರ್. ಅಂಬೇಡ್ಕರ ಅವರ ಮೊಮ್ಮಗ, ಮಾಜಿ ಸಂಸದ ಹಾಗೂ ಹಿರಿಯ ಚಿಂತಕ ಪ್ರಕಾಶ ಅಂಬೇಡ್ಕರ ಹೇಳಿದ್ದಾರೆ. ನಗರದ ಕಂದಗಲ್ಲ ಹನುಮಂತರಾಯ ರಂಗಮಂದಿರದಲ್ಲಿ ಗದಗಿನ ಲಡಾಯಿ ಪ್ರಕಾಶನ, ಧಾರವಾಡದ ಕವಿ ಪ್ರಕಾಶನ ಕವಲಕ್ಕಿ ಚಿತ್ತಾರ ಕಲಾ ಬಳಗ ಹಾಗೂ ವಿಜಯಪುರ ಮೇ ಸಾಹಿತ್ಯ ಬಳಗ ಸಂಯುಕ್ತಾಶ್ರಯದಲ್ಲಿ […]

ಕ್ರೀಡೆಗಳು ಮಾನಸಿಕ ಒತ್ತಡದಿಂದ ಮುಕ್ತರಾಗಿ ಆತ್ಮಸ್ಥೈಯ೯ ಹೆಚ್ಚಿಸಲು ಸಹಕಾರಿಯಾಗಿವೆ- ಡಾ. ಮಹಾಂತೇಶ ಸಾಲಿಮಠ

ಬಾಗಲಕೋಟೆ: ಕ್ರೀಡೆಗಳು ಮಾನಸಿಕ ಒತ್ತಡದಿಂದ ಹೊರಬಂದು ಆತ್ಮಸ್ಥೈರ್ಯ ಹೆಚ್ಚಿಸಿಕೊಳ್ಳಲು ಸಹಕಾರಿಯಾಗಿವೆ ಎಂದು ಬಿ.ವಿ.ವಿಎಸ್. ಆಯುರ್ವೇದಿಕ್ ಕಾಲೇಜಿನ ಕಾಲೇಜಿನ ಪ್ರಾಂಶುಪಾಲ ಡಾ. ಮಹಾಂತೇಶ ಸಾಲಿಮಠ ಹೇಳಿದರು. ಬಿ. ವಿ. ವಿ. ಎಸ್. ಹೋಮಿಯೋಪಥಿಕ್ ವೈದ್ಯಕೀಯ ಕಾಲೇಜಿನಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದ ಜಿಮಖಾನಾ ಕಮಿಟಿ ಉದ್ಘಾಟಿಸಿ ಅವರು ಮಾತನಾಡಿದರು. ಕಾಯ೯ಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಹೋಮಿಯೋಪಥಿಕ ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲ ಡಾ. ಅರುಣ ವಿ. ಹೂಲಿ, ಕ್ರೀಡೆಗಳಲ್ಲಿ ಸೋಲು ಗೆಲುವುಗಳನ್ನು ಸಮಾನವಾಗಿ ಸ್ವೀಕರಿಸಿ ತಮ್ಮಲ್ಲಿರುವ ಸೂಕ್ತ ಪ್ರತಿಭೆಯನ್ನು ಹೊರಹಾಕಬೇಕು.  ಇದಕ್ಕೆ […]

ಸಿದ್ದು ಸಂಪುಟ ಸೇರಿದ 24 ನೂತನ ಸಚಿವರು- ಆದರೆ, ಇನ್ನೂ ಖಾತೆ ಹಂಚಿಕೆಯಾಗಿಲ್ಲ ಎಂದು ಕೆಪಿಸಿಸಿ ಸ್ಪಷ್ಟನೆ

ಬೆಂಗಳೂರು: ಕಳೆದ ಶನಿವಾರ ಎಂಟು ಜನ ಸಚಿವರ ಜೊತೆ ಅಧಿಕಾರ ಸ್ವೀಕರಿಸಿದ್ದ ಮುಖ್ಯಮಂತ್ರಿ ಎಸ್. ಸಿದ್ಧರಾಮಯ್ಯ ಮತ್ತು ಡಿ. ಕೆ. ಶಿವಕುಮಾರ ಸಂಪುಟಕ್ಕೆ ಈಗ ಹೊಸದಾಗಿ 24 ಜನ ಶಾಸಕರು ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರಚಂದ ಗೆಹ್ಲೋಟ್ ಪ್ರಮಾಣ ವಚನ ಸ್ವೀಕರಿಸಿದರು. ಅಧಿಕಾರ ಸ್ವೀಕರಿಸಿದ ನೂತನ ಸಚಿವರ ಪಟ್ಟಿ ಇಲ್ಲಿದೆ. ಎಚ್. ಕೆ. ಪಾಟೀಲ ಕೃಷ್ಣ ಭೈರೇಗೌಡ ಎನ್. ಚಲುವರಾಯಸ್ವಾಮಿ ಕೆ. ವೆಂಕಟೇಶ ಎಚ್. ಸಿ. ಮಹದೇವಪ್ಪ ಈಶ್ವರ […]

ಜನರೊಂದಿಗೆ ಸೌಜನ್ಯದಿಂದ ವರ್ತಿಸಿ, ಜವಾಬ್ದಾರಿಯುತವಾಗಿ ಕಾರ್ಯ ನಿರ್ವಹಿಸಿ- ಎಸ್ಪಿ ಡಾ. ಆನಂದಕುಮಾರ

ವಿಜಯಪುರ: ಪೋಲಿಸ್ ಇಲಾಖೆ ಜವಾಬ್ದಾರಿಯುತಗಿ ಕಾರ್ಯ ನಿರ್ವಹಿಸಬೇಕಾಗಿರುವುದರಿಂದ ಸಾರ್ವಜನಿಕರೊಂದಿಗೆ ಸೌಜನ್ಯ ಮತ್ತು ಜನಸ್ನೇಹಿಯಾಗಿ ವರ್ತಿಸಬೇಕು ಎಸ್ಪಿ ಎಚ್. ಡಿ. ಆನಂದಕುಮಾರ ಸಿಬ್ಬಂದಿಗೆ ಕರೆ ನೀಡಿದ್ದಾರೆ.  ನಗರದ ಪೊಲೀಸ್ ಪರೇಡ್ ಗ್ರೌಂಡ್‍ನಲ್ಲಿ ನಡೆದ ಪೊಲೀಸ್ ಪರೇಡ್‍ನಲ್ಲಿ ಭಾಗವಹಿಸಿ ಮಾತನಾಡಿದ ಅವರು, ಪೊಲೀಸ್ ಇಲಾಖೆ ಮೇಲೆ ಪ್ರತಿಯೊಬ್ಬರೂ ಭರವಸೆ ಇಟ್ಟಿರುತ್ತಾರೆ.  ಅವರ ಭರವಸೆ ಪೂರಕವಾಗಿ ಜನಸ್ನೇಹಿಯಾಗಿ ಕಾರ್ಯ ನಿರ್ವಹಿಸುವ ಮೂಲಕ ಜಿಲ್ಲೆಯಲ್ಲಿ ಜನಸ್ನೇಹಿ ಪೋಲಿಸ್ ವಾತಾವರಣ ಕಲ್ಪಿಸಬೇಕು ಎಂದು ಹೇಳಿದರು. ಪೋಲಿಸರು ಕರ್ತವ್ಯದ ಒತ್ತಡ ನಡುವೆಯೂ ಆರೋಗ್ಯವನ್ನು ಸದೃಢವಾಗಿ ಇಟ್ಟುಕೊಳ್ಳಲು […]

ಡಿಜಿಟಲ್ ಪರಿಸರದಲ್ಲಿ ಗ್ರಂಥಾಲಯ, ಗ್ರಂಥಪಾಲಕರ ಪಾತ್ರ ಬಹಳ ಮುಖ್ಯ- ಪ್ರೊ. ವೈ. ಎಂ. ಜಯರಾಜ

ವಿಜಯಪುರ: ಡಿಜಿಟಲ್ ಪರಿಸರದಲ್ಲಿ ಗ್ರಂಥಾಲಯ ಮತ್ತು ಗ್ರಂಥಪಾಲಕರ ಪಾತ್ರ ಬಹಳ ಮುಖ್ಯವಾಗಿದೆ ಎಂದು ಬಿ. ಎಲ್. ಡಿ. ಇ ಡೀಮ್ಡ್ ವಿಶ್ವವಿದ್ಯಾಲಯದ ಸಮಕುಲಾಧಿಪತಿ ಪ್ರೊ. ವೈ. ಎಂ. ಜಯರಾಜ ಹೇಳಿದ್ದಾರೆ. ನಗರದ ಪ್ರತಿಷ್ಠಿತ ಬಿ. ಎಲ್. ಡಿ. ಇ ಸಂಸ್ಥೆಯ ವಚನಪಿತಾಮಹ ಡಾ. ಫ. ಗು. ಹಳಕಟ್ಟಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ಎನ್ಇಪಿ- 2020 ಪರಿಣಾಮಕಾರಿ ಅನುಷ್ಠಾನದಲ್ಲಿ ಗ್ರಂಥಾಲಯ ವೃತ್ತಿಪರರಿಗೆ ಸಾಮರ್ಥ್ಯ ವರ್ಧನೆ ಕುರಿತ ವಿಚಾರ ಸಂಕಿರಣದಲ್ಲಿ ಅವರು ಮಾತನಾಡಿದರು. ಸಾಂಪ್ರಾದಾಯಿಕ ಗ್ರಂಥಾಲಯದಲ್ಲಿ ಪುಸ್ತಕಗಳು, ಓದುಗರು, ಸಿಬ್ಬಂದಿ […]

ಗಾಳಿ ಸಹಿತ ಮಳೆಯಿಂದ ಬೆಳೆಹಾನಿ: ಜಂಬಗಿ(ಆ), ಹೊನ್ನಳ್ಳಿ ಗ್ರಾಮಗಳಿಗೆ ಡಿಸಿ ಡಾ. ದಾನಮ್ಮನವರ ಭೇಟಿ, ಪರಿಶೀಲನೆ

ವಿಜಯಪುರ: ವಿಜಯಪುರ ತಾಲೂಕಿನ ಜಂಬಗಿ(ಆ) ಮತ್ತು ಆಹೇರಿ ಹೊನ್ನಳ್ಳಿ ಗ್ರಾಮಗಳಲ್ಲಿ ಗಾಳಿ ಸಹಿತ ಮಳೆಯಿಂದಾಗಿ ಹಾನಿಗೀಡಾದ ಆಸ್ತಿಪಾಸ್ತಿಯನ್ನು ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ಮನೆಗಳಿಗೆ ಹಾನಿಗೊಳಗಾಗಿರುವ ಕುರಿತು ಪ್ರಾಥಮಿಕ ವರದಿ ಬಂದ ಹಿನ್ನಲೆಯಲ್ಲಿ ಶುಕ್ರವಾರ ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ಸಮೀಕ್ಷೆ ನಡೆಸಿ ವರದಿಯನ್ವಯ ನಿಯಮಾನುಸಾರ ಪರಿಹಾರ ಒದಗಿಸುವಂತೆ ಸೂಚನೆ ನೀಡಿದರು.   ತಾಲೂಕಿನ ಆಹೇರಿ, ಜಂಬಗಿ, ಹೊನ್ನಳ್ಳಿ ಗ್ರಾಮಗಳಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು ರೈತರಾದ ಮಾದೇವ […]

ದೇವು ಸತ್ಯಶೋಧಕ ಡಾಕ್ಯುಮೆಂಟರಿ ಚಿತ್ರಕ್ಕೆ ಬೆಸ್ಟ್ ಡೈರೆಕ್ಟರ್ ಅವಾರ್ಡ್

ವಿಜಯಪುರ: ಗೋವಾ ಇಂಟರನ್ಯಾಷನಲ್ ಫಿಲ್ಮ್ ಫೆಸ್ಟಿವಲ್ ಎಂಟರ್‍ಟೇನಮೆಂಟ್ ಸೊಸೈಟಿ ಆಫ್ ಗೋವಾದಲ್ಲಿ ನಡೆದ ಫೆಸ್ಟಿವಲ್ ಸತ್ಯಶೋಧಕ ಡಾಕ್ಯುಮೆಂಟರಿ ಚಿತ್ರಕ್ಕೆ ಬಸವ ನಾಡಿನ ಯುವಕ ದೇವು ಅಂಬಿಗ ಅವರಿಗೆ ಬೆಸ್ಟ್ ಡೈರೆಕ್ಟರ್ ಅವಾರ್ಡನ್ನು ಲಭಿಸಿದೆ.  ಯೂನಿವರ್ಸಲ್ ಪಿಲ್ಮ್ ಮೇಕರ್ ಕೌನ್ಸಿಲ್ ಮತ್ತು ನವ ಕರ್ನಾಟಕ ಪಿಲ್ಮ್ ಅಕಾಡೆಮಿ ವತಿಯಿಂದ ಈ ಅವಾರ್ಡ್‍ನ್ನು ವಿತರಿಸಲಾಯಿತು. ಜಿಲ್ಲೆಯ ಯುವ ಪ್ರತಿಭೆ ದೇವು ಕೆ ಅಂಬಿಗ ಈ ಹಿಂದೆ ಸತ್ಯಶೋಧಕ ಎಂಬ ಡಾಕ್ಯುಮೆಂಟರಿ ಮಾಡಿ ರಾಜ್ಯಾದ್ಯಂತ ಎಲ್ಲಾ ಶಾಲಾ ಮಕ್ಕಳಿಗೆ ಈ ಚಿತ್ರವನ್ನು […]