ಈ ಚುನಾವಣೆ ಹಿಂದುತ್ವ, ಅಭಿವೃದ್ಧಿ, ಸ್ವಾಭಿಮಾನದ ಮೇಲೆ ನಡೆಯುತ್ತಿದೆ- ಕನಿಷ್ಠ ಶೇ. 90ರಷ್ಟು ಮತದಾನ ಮಾಡಬೇಕು- ಯತ್ನಾಳ

ವಿಜಯಪುರ: ಈ ಚುನಾವಣೆ ಹಿಂದುತ್ವ, ಅಭಿವೃದ್ಧಿ, ಸ್ವಾಭಿಮಾನದ ಮೇಲೆ ನಡೆಯುತ್ತಿದೆ.  ಕನಿಷ್ಠ ಶೇ. 90 ರಷ್ಟು ಮತದಾನ ಮಾಡುವ ಮೂಲಕ ಬಿಜೆಪಿ ಗೆಲ್ಲಿಸಬೇಕು ಎಂದು ಬಿಜೆಪಿ ಅಭ್ಯರ್ಥಿ ಬಸನಗೌಡ ಪಾಟೀಲ ಯತ್ನಾಳ ಹೇಳಿದರು. ನಗರದಲ್ಲಿ ರೋಡ್ ಶೋ ದಲ್ಲಿ ಪಾಲ್ಗೋಂಡು ಮಾತನಾಡಿದ ಅವರು, ಹಿಂದುತ್ವ ಸೋಲಿಸಲು ಎಲ್ಲರೂ ಒಂದಾಗಿದ್ದಾರೆ.  ಆದರೆ, ಯಾವ ಕಾರಣಕ್ಕೂ ಅವರ ಉದ್ದೇಶ ಈಡೇರಲು ಸಾಧ್ಯವಿಲ್ಲ.  ನಮ್ಮವರು ಕೂಡ ಒಂದಾಗಿದ್ದಾರೆ ಎಂದು ಅವರು ತಿಳಿಸಿದರು. ಐದು ವರ್ಷ ಅಧಿಕಾರ ಕೊಟ್ಟಿದ್ದೀರಿ.  ಮಹಾಮಾರಿ ಕೊರೊನಾದಿಂದ ಎರಡು ವರ್ಷ […]

ಎಸ್. ಯು. ಸಿ. ಐ ಅಭ್ಯರ್ಥಿಯಿಂದ ಗುಮ್ಮಟ ನಗರಿಯಲ್ಲಿ ರೋಡ್ ಶೋ ಮೂಲಕ ಮತಯಾಚನೆ

ವಿಜಯಪುರ: ಎಸ್. ಯು. ಸಿ. ಐ ಕಮ್ಯೂನಿಷ್ಟ್ ಪಕ್ಷದ ಅಭ್ಯರ್ಥಿ ಮಲ್ಲಿಕಾರ್ಜುನ ಎಚ್. ಟಿ. ಅವರು ಚುನಾವಣೆ ಬಹಿರಂಗ ಸಭೆಯ ಕೊನೆಯ ದಿನ ನಗರದ ಪ್ರಮುಖ ರಸ್ತೆಗಳು ಮತ್ತು ಪ್ರಮುಖ ಬಡಾವಣೆಗಳಲ್ಲಿ ರೋಡ್ ಶೋ ಮೂಲಕ ಮತಯಾಚನೆ ನಡೆಸಿದರು.  ವಿಜಯಪುರ ನಗರದ ಜಲನಗರ, ಕಿರ್ತಿನಗರ, ಶ್ರೀ ಸಿದ್ದೇಶ್ವರ ರಸ್ತೆ, ತೊರವಿ ರಸ್ತೆ, ಸ್ಟೇಷನ್ ರಸ್ತೆ, ಬಾಗಲಕೋಟ ರಸ್ತೆ, ಜುಮ್ಮಾ ಮಸೀದಿ ರಸ್ತೆಗಳಲ್ಲಿ ತಮ್ಮ ಕಾರ್ಯಕರ್ತರು ಮತ್ತು ಬೆಂಬಲಿಗರೊಂದಿಗೆ ರೋಡ್ ಶೋ ಮಾಡಿದ ಅವರು ಮತಯಾಚನೆ ನಡೆಸಿದರು. ಈ […]

ಮತದಾರರ ಆಶೀರ್ವಾದದಿಂದ ಬಬಲೇಶ್ವರ ಮತಕ್ಷೇತ್ರದಲ್ಲಿ ಹುಲ್ಲು ಬೆಳೆಯದ ಜಾಗದಲ್ಲಿ ಕಬ್ಬು ಬೆಳೆಯಲಾಗುತ್ತಿದೆ- ಆಶಾ ಎಂ. ಪಾಟೀಲ

ವಿಜಯಪುರ: ಜನರ  ಆಶೀರ್ವಾದದಿಂದ ಬಬಲೇಶ್ವರ ಮತಕ್ಷೇತ್ರದ ಹುಲ್ಲು ಬೆಳೆಯದ ಜಾಗದಲ್ಲಿಯೂ ಈಗ ಕಬ್ಬು ಕಾಣಿಸುತ್ತಿದೆ ಎಂದು ಆಶಾ ಎಂ. ಪಾಟೀಲ ಹೇಳಿದರು. ಬಬಲೇಶ್ವರ ತಾಲೂಕಿನ ನಾಗರಾಳ ಗ್ರಾಮದಲ್ಲಿ ಪಾದಯಾತ್ರೆ ಮೂಲಕ ಮನೆ ಮನೆಗೆ ತೆರಳಿ ಅವರು ಕೆ.ಪಿ.ಸಿ.ಸಿ. ಪ್ರಚಾರ ಸಮಿತಿ ಅಧ್ಯಕ್ಷ ಎಂ. ಬಿ. ಪಾಟೀಲ ಪರ ಪ್ರಚಾರ ಕೈಗೊಂಡು ಮಾತನಾಡಿದರು. ಕ್ಷೇತ್ರದ ಮತದಾರರು ಎಂ. ಬಿ. ಪಾಟೀಲರನ್ನು ಆಯ್ಕೆ ಮಾಡಿ ಕಳುಹಿಸಿದ್ದರಿಂದ ಅವರು ಶಾಸಕರಷ್ಟೇ ಅಲ್ಲ, ನೀರಾವರಿ ಮಂತ್ರಿಯೂ ಆಗಿದ್ದಾರೆ. ಅವರು ಕೈಗೊಂಡ ಯೋಜನೆಗಳಿಂದ ನಿಮ್ಮ […]

ಮುಕ್ತ, ನ್ಯಾಯಸಮ್ಮತ ಚುನಾವಣೆಗೆ ಜಿಲ್ಲಾಡಳಿತ ಸನ್ನದ್ದ: ಮೇ 10ರಂದು ಮತದಾನ- ಜಿಲ್ಲೆಯ 8 ಕ್ಷೇತ್ರದಲ್ಲಿ 95 ಅಭ್ಯರ್ಥಿಗಳು ಕಣದಲ್ಲಿ

ವಿಜಯಪುರ: ಮುಕ್ತ ನ್ಯಾಯಸಮ್ಮತ ಹಾಗೂ ಸುಗಮ ಚುನಾವಣೆಗೆ ಜಿಲ್ಲಾಡಳಿತದ ವತಿಯಿಂದ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದ್ದು, ಮೇ.10ರಂದು ನಡೆಯಲಿರುವ ಮತದಾನಕ್ಕೆ ಎಲ್ಲಾ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ. ಪ್ರಜಾಸತ್ತಾತ್ಮಕ ವಿಧಾನದ ಮೂಲಕ ಸುಭದ್ರವಾದ ಸರ್ಕಾರವನ್ನು ರಚಿಸುವ ಪ್ರಕ್ರಿಯೆಯಲ್ಲಿ ಪ್ರತಿಯೊಂದು ಮತವು ಅಮೂಲ್ಯವಾಗಿರುವುದರಿಂದ  ಜಿಲ್ಲೆಯ ಅರ್ಹ ಎಲ್ಲ ಮತದಾರರು ಮತದಾನದ ಹಬ್ಬದಲ್ಲಿ ಭಾಗವಹಿಸಿ ತಪ್ಪದೇ ಮತ ಚಲಾಯಿಸುಂತೆ ಜಿಲ್ಲಾ ಚುನಾವಣಾಧಿಕಾರಿಗಳಾದ ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಹೇಳಿದ್ದಾರೆ.  ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಲ್ಲಿಂದು ವಿಧಾನಸಭೆ ಸಾರ್ವತ್ರಿಕ ಚುನಾವಣೆ ಸಿದ್ಧತಾ ಕಾರ್ಯಗಳ ಬಗ್ಗೆ ವಿವರ […]

ನಾಗಠಾಣ ಜೆಡಿಎಸ್ ಅಭ್ಯರ್ಥಿ ಡಾ. ದೇವಾನಂದ ಚವ್ಹಾಣ, ವಿರಾಜ ರವಿಕಾಂತ ಪಾಟೀಲರಿಂದ ಮತಕ್ಷೇತ್ರದ ನಾನಾ ಕಡೆ ಪ್ರಚಾರ

ವಿಜಯಪುರ: ನಾಗಠಾಣ(ಮೀ) ಮತಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಡಾ. ದೇವಾನಂದ ಚವ್ಹಾಣ ಮತ್ತು ಇಂಡಿ ಮಾಜಿ ಶಾಸಕ ರವಿಕಾಂತ ಪಾಟೀಲ ಪುತ್ರ ವಿರಾಜ ರವಿಕಾಂತ ಪಾಟೀಲ ಮತಕ್ಷೇತ್ರದ ನಾನಾ ಕಡೆಗಳಲ್ಲಿ ಪ್ರಚಾರ ಕೈಗೊಂಡರು.  ಇಂಚಗೇರಿ, ಇಂಚಗೇರಿ ಮಹಾವೀರ ನಗರ, ಕನ್ನೂರ, ಶಿಕಾರಖಾನೆ, ಹಲಸಂಗಿ ಗ್ರಾಮಗಳಲ್ಲಿ ಬೈಕ್ ನಲ್ಲಿ ಸಂಚರಿಸುತ್ತ ಪ್ರಚಾರ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಇಂದಿನ ಮಕ್ಕಳು ನಾಳಿನ ಪ್ರಜೆಗಳು.  ಅವರ ಉನ್ನತ ಶಿಕ್ಷಣಕ್ಕಾಗಿ ಮರಗೂರ, ನಾಗಠಾಣ ಗ್ರಾಮಗಳಲ್ಲಿ ಮುರಾರ್ಜಿ ದೇಸಾಯಿ ಶಾಲೆ ನಿರ್ಮಿಸಲಾಗಿದೆ.  ಕ್ಷೇತ್ರದಲ್ಲಿ […]

ಹಮೀದ್ ಮುಶ್ರಿಫ್ ಪರ ವಿಜಯಪುರ ನಗರದ ಮತಕ್ಷೇತ್ರದಲ್ಲಿ ಎಂ. ಬಿ. ಪಾಟೀಲ ಪ್ರಚಾರ

ವಿಜಯಪುರ: ಕಾಂಗ್ರೆಸ್ ಕಾರ್ಯಕರ್ತರು ಮನೆ ಮನೆಗೆ ತೆರಳಿ ಮತದಾರರ ಮನವೊಲಿಸಿ ಅಭ್ಯರ್ಥಿಗಳ ಗೆಲುವಿಗೆ ಹಗಲು ರಾತ್ರಿ ಶ್ರಮಿಸಬೇಕು ಎಂದು ಕೆ.ಪಿ.ಸಿ.ಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ. ಬಿ. ಪಾಟೀಲ ಕರೆ ನೀಡಿದ್ದಾರೆ. ವಿಜಯಪುರ ನಗರ ಮತಕ್ಷೇತ್ರದ ಆದರ್ಶ ನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಹಮೀದ್ ಮುಶ್ರಿಫ್ ಪರ ಪಾದಯಾತ್ರೆ ಮೂಲಕ ಪ್ರಚಾರಕ್ಕೆ ಅವರು ಚಾಲನೆ ನೀಡಿ ಮಾತನಾಡಿದರು. ಮತದಾನಕ್ಕೆ ಕೆಲವೇ ಗಂಟೆಗಳು ಬಾಕಿ ಉಳಿದಿವೆ. ಹೀಗಾಗಿ ಕಾಂಗ್ರೆಸ್ ಕಾರ್ಯಕರ್ತರು ಸಾಧ್ಯವಾದಷ್ಟು ಮತದಾರರನ್ನು ಭೇಟಿ ಮಾಡಬೇಕು. ಮತದಾನ ಪ್ರಮಾಣ ಹೆಚ್ಚಾಗುವಂತೆ […]

ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ 120 ಮೀಟರ್ ಧ್ವಜ್ ಪ್ರದರ್ಶನ- ಮಾನವ ಸರಪಳಿ ನಿರ್ಮಿಸಿ ಮತದಾನ ಜಾಗೃತಿ- ಕಡ್ಡಾಯವಾಗಿ ಮತದಾನ ಮಾಡಲು ಕರೆ

ವಿಜಯಪುರ: ಪ್ರಜಾಪ್ರಭುತ್ವ ಹಬ್ಬಕ್ಕೆ ಇನ್ನೂ ಕೇವಲ ಮೂರು ದಿನ ಮಾತ್ರ ಬಾಕಿಯಿದ್ದು, ಎಲ್ಲ ಅರ್ಹ ಮತದಾರರು ತಮ್ಮ ಪರಿವಾರದ ಅರ್ಹ ಮತದಾರರೊಂದಿಗೆ ಕಡ್ಡಾಯವಾಗಿ ಮತದಾನ ಕೇಂದ್ರಕ್ಕೆ ತೆರಳಿ ಮತದಾನ ಮಾಡುವಂತೆ ಜಿಲ್ಲಾ ಚುನಾವಣಾಧಿಕಾರಿಗಳಾದ   ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ಅವರು ಮನವಿ ಮಾಡಿದ್ದಾರೆ.  ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಾನಗರ ಪಾಲಿಕೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಇಲಾಖೆ ಹಾಗೂ ಜಿಲ್ಲಾ ಸ್ವೀಪ್ ಸಮಿತಿ, ಸಹಯೊಗದಲ್ಲಿ ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನದ ಆವರಣದಲ್ಲಿ ಮತದಾನ […]

ಕಾಂಗ್ರೆಸ್ ಬಹುಮತದಿಂದ ಅಧಿಕಾರಕ್ಕೆ ಬರದಿದ್ದರೆ ರಾಜಕೀಯ ಭ್ರಷ್ಚಾಚಾರಕ್ಕೆ ನಾಂದಿಯಾಗಲಿದೆ- ಬಿಜೆಪಿ ಇಬ್ಬರ ಕೈಯಲ್ಲಿ ಸಿಲುಕಿದೆ- ವಾಜಪೇಯಿ ಆಪ್ತ ಸುಧೀಂದ್ರ ಕುಲಕರ್ಣಿ

ವಿಜಯಪುರ: ರಾಜ್ಯದಲ್ಲಿ ಕಾಂಗ್ರೆಸ್ ಬಹುಮತದಿಂದ ಅಧಿಕಾರಿಕ್ಕೆ ಬರಬೇಕು. ಅತಂತ್ರ ಫಲಿತಾಂಶ ಬಂದರೆ ರಾಜಕೀಯ ಭ್ರಷ್ಟಾಚಾರಕ್ಕೆ ಮತ್ತೊಮ್ಮೆ ನಾಂದಿ ಹಾಡಿದಂತಾಗುತ್ತದೆ ಎಂದು ಮಾಜಿ ಪ್ರಧಾನಿ ದಿ. ಅಟಲ ಬಿಹಾರಿ ವಾಜಪೇಯಿ ಅವರ ಸಲಹೆಗಾರ ಮತ್ತು ಖ್ಯಾತ ಅಂಕಣಕಾರ ಸುಧೀಂದ್ರ ಕುಲಕರ್ಣಿ ಹೇಳಿದ್ದಾರೆ. ವಿಜಯಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಈಗ ವಾಜಪೇಯಿ ಮತ್ತು ಅಡ್ವಾಣಿ ಪಕ್ಷವಾಗಿ ಉಳಿದಿಲ್ಲ.  ಸಂಘ ಪರಿವಾರದ ಹಿನ್ನೆಲೆಯಿಂದ ಬಂದಿರುವ ನಾನು 2012ರಲ್ಲಿ ನರೇಂದ್ರ ಮೋದಿ ಪ್ರಧಾನಿಯಾಗುವುದಕ್ಕೂ ಮುಂಚೆ ಬಿಜೆಪಿ ಬಿಟ್ಟು ಬಂದಿದ್ದೇನೆ.  ಈಗ ಯಾವ […]

ವಿಧಾನಸಭೆ ಚುನಾವಣೆ: ಮತದಾನ ಕುರಿತು ಜನರಲ್ಲಿ ಜಾಗೃತಿ ಮೂಡಿಸಿದ ಜಿ. ಪಂ. ಸಿಇಒ ರಾಹುಲ ಶಿಂಧೆ

ವಿಜಯಪುರ: ಕಳೆದ ಚುನಾವಣೆಗಿಂತ ಈ ಬಾರಿ ಚುನಾವಣೆಯಲ್ಲಿ ಜಿಲ್ಲೆಯಾದ್ಯಂತ ಮತದಾನ ಪ್ರಮಾಣ ಹೆಚ್ಚಾಗಲಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶಿಂಧೆ ಅವರು ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಆಯೋಜಿಸಿದ್ದ ಮತದಾನ ಜಾಗೃತಿ ಕಾರ್ಯಕ್ರಮದ ಅಂಗವಾಗಿ ಜಿಲ್ಲೆಯ ವಿವಿಧೆಡೆ ಸಂಚರಿಸುವ ಬಸ್‌ಗಳಿಗೆ ಮತದಾನ ಜಾಗೃತಿ ಸ್ವೀಕರ್ಸ್ಗಳನ್ನು ಅಂಟಿಸುವುದು, ಬಸ್ ನಿಲ್ದಾಣದಲ್ಲಿ ಸೇಲ್ಪಿ ಸ್ಟ್ಯಾಂಡ್ ಅಳವಡಿಸಿ, ಕರ ಪತ್ರ ಹಂಚಿ, ಜಾಗೃತಿ ಗೀತೆಗಳನ್ನು ಹಾಡಿ, […]

ಬುದ್ದನ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಮುನ್ನಡೆಯಬೇಕು- ಡಾ. ನಾರಾಯಣ ಬಿ. ಪವಾರ

ವಿಜಯಪುರ: ಬುದ್ಧನ ತತ್ವಾದರ್ಶಗಳು ಜಗತ್ತನ್ನೇ ಸೆಳೆದಿವೆ. ಬುದ್ಧ ಹೇಳಿಕೊಟ್ಟ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಅಭಿವೃದ್ಧಿ ಸಾಧಿಸಬೇಕು ಎಂದು ಡಾ. ನಾರಾಯಣ ಬಿ. ಪವಾರ ಹೇಳಿದ್ದಾರೆ.  ತೊರವಿಯಲ್ಲಿರುವ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಡಾ. ಬಿ. ಆರ್. ಅಂಬೇಡ್ಕರ ಅಧ್ಯಯನ ಕೇಂದ್ರದ ವತಿಯಿಂದ ಆಯೋಜಿಸಿದ್ದ ಬುದ್ಧ ಪೂರ್ಣಿಮ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ವಿಶೇಷ ಉಪನ್ಯಾಸ ನೀಡಿದ ಡಾ. ನಾರಾಯಣ ಬಿ. ಪವಾರ, ಬುದ್ಧ ಜಗತ್ತಿಗೆ ಬೆಳಕು ನೀಡಿದ್ದಾರೆ.  ಕರ್ನಾಟಕದ ಸಾಕಷ್ಟು ಪ್ರದೇಶಗಳಲ್ಲಿ ಹಾಗೂ ಪ್ರಪಂಚದ ನಾನಾ ದೇಶಗಳಲ್ಲಿ […]