ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ- ಜೆಡಿಎಸ್ ದ್ವಿತೀಯ, ಬಿಜೆಪಿ ತೃತೀಯ ಸ್ಥಾನ ಪಡೆಯಲಿದೆ ಎಂದು ಭವಿಷ್ಯ ನುಡಿದ ಪ್ರಭು ದುಂಡಯ್ಯ ಚೌಕಿಮಠ

ವಿಜಯಪುರ: ರಾಜ್ಯದಲ್ಲಿ ಕಾಂಗ್ರೆಸ್ ಈ ಬಾರಿ 145ಕ್ಕೂ ಹೆಚ್ಚು ಸ್ಥಾನ ಗಳಿಸಿ ಸ್ಪಷ್ಟ ಬಹುಮತ ಪಡೆಯಲಿದೆ. ಜೆಡಿಎಸ್ ದ್ವಿತೀಯ ಮತ್ತು ಬಿಜೆಪಿ ಮೂರನೇ ಸ್ಥಾನ ಪಡೆಯಲಿದೆ ಎಂದು ಕೂಡಲ ಸಂಗಮ ಅಭಿವೃದ್ಧಿ ಪ್ರಾಧಿಕಾರ ಮಾಜಿ ನಿರ್ದೇಶಕ ಪ್ರಭು ದುಂಡಯ್ಯ ಚೌಕಿಮಠ ಭವಿಷ್ಯ ನುಡಿದಿದ್ದಾರೆ. ವಿಜಯಪುರದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾದ ಎಸ್.ಸಿದ್ಧರಾಮಯ್ಯ, ಡಿ.ಕೆ.ಶಿವಕುಮಾರ, ಎಂ.ಬಿ.ಪಾಟೀಲ ಮತ್ತು ಎಚ್.ಕೆ.ಪಾಟೀಲ ಅವರು 50 ಸಾವಿರದಿಂದ 1 ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ. ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್ […]

ಕೇಂದ್ರ, ರಾಜ್ಯ ಸರಕಾರಗಳ ಯೋಜನೆ ಕುರಿತು ಜಾಗೃತಿ ಮೂಡಿಸಿ ಯತ್ನಾಳ ಗೆಲುವಿಗೆ ಶ್ರಮಿಸಿ- ಆರ್. ಎಸ್. ಪಾಟೀಲ ಕೂಚಬಾಳ

ವಿಜಯಪುರ: ಕೇಂದ್ರ ಮತ್ತು ರಾಜ್ಯ ಸರಕಾರಗಳ ಜನಪರ ಯೋಜನೆಗಳು ಹಾಗೂ ನಗರದಲ್ಲಿ ಕೈಗೊಂಡ ಅಭಿವೃದ್ಧಿ ಕಾಮಗಾರಿಗಳ ಕುರಿತಂತೆ ಜನಸಾಮಾನ್ಯರಿಗೆ ತಿಳಿಸುವ ಮೂಲಕ ಬಸನಗೌಡ ಪಾಟೀಲ ಯತ್ನಾಳ ಅವರ ಗೆಲುವಿಗೆ ಪ್ರತಿಯೊಬ್ಬ ಕಾರ್ಯಕರ್ತರು ಶ್ರಮಿಸಬೇಕು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಆರ್. ಎಸ್. ಪಾಟೀಲ ಕೂಚಬಾಳ ಹೇಳಿದರು. ನಗರ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸನಗೌಡ ಪಾಟೀಲ ಯತ್ನಾಳ ಅವರ ಚುನಾವಣೆ ಪ್ರಚಾರ ಕಾರ್ಯಾಲಯದಲ್ಲಿ ನಡೆದ ಪದಾಧಿಕಾರಿಗಳ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಪ್ರತಿಪಕ್ಷಗಳ ಊಹಾಪೋಹಗಳಿಗೆ ಜನ ಕಿವಿಗೊಡುವುದಿಲ್ಲ.  ಅಭಿವೃದ್ಧಿ ಮಾಡಿದವರಿಗೆ […]

ಜನಸಂಖ್ಯೆಗೆ ಅನುಗುಣವಾಗಿ ಸಂಪತ್ತು, ಅಧಿಕಾರ ಹಂಚಿಕೆಯಾಗಬೇಕು- ಸಂಸತ್ತು, ಮನೆಯಿಂದ ಹೊರ ಹಾಕಿದರೂ ಜನರು ನನಗೆ ಮನಸ್ಸಿನಲ್ಲಿ ಸ್ಥಾನ ನೀಡಿದ್ದಾರೆ ರಾಹುಲ ಗಾಂಧಿ

ವಿಜಯಪುರ: ಸಮುದಾಯಗಳ ಜನಸಂಖ್ಯೆಗಳಿಗೆ ಅನುಗುಣವಾಗಿ ಮೀಸಲಾತಿ ಮತ್ತು ಅಧಿಕಾರ ಹಂಚಿಕೆಯಾಗಬೇಕು.  ಯುಪಿಎ ಸರಕಾರ ಕೈಗೊಂಡಿದ್ದ ಜಾತಿ ಸಮೀಕ್ಷೆಯನ್ನು ಬಹಿರಂಗ ಪಡಿಸಬೇಕು ಎಂದು ಎಐಸಿಸಿ ಮುಖಂಡ ರಾಹುಲ ಗಾಂಧಿ ಆಗ್ರಹಿಸಿದ್ದಾರೆ. ವಿಜಯಪುರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರ ರೋಡ್ ಶೋ ನಡೆಸಿದರು.  ನಗರದ ಶಿವಾಜಿ ಚೌಕಿನಲ್ಲಿ ಮಾಲಾರ್ಪಣೆ ಮಾಡಿ ರೋಡ್ ಶೋ ಆರಂಭಿಸಿದ ಅವರು, ಗಾಂಧಿಚೌಕ್, ಬಸವೇಶ್ವರ ಚೌಕ್, ಅಂಬೇಡ್ಕರ್ ಚೌಕ್ ಮೂಲಕ ಸಂಚರಿಸಿ ಕನಕದಾಸ ಚೌಕ್ ನಲ್ಲಿ ನಡೆದ ಬಹಿರಂಗ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಬಸವಣ್ಣನವರ ವಿಚಾರಧಾರೆಗಳು ಸಮಾನತೆಯನ್ನು […]

ಸಿದ್ಧರಾಮಯ್ಯ ವೀರಶೈವ ಲಿಂಗಾಯಿತರ ಕ್ಷಮೆ ಕೇಳಲಿ- ಲಿಂಗಾಯತ ಡ್ಯಾಂ ಒಡೆಯಲು ಜಗತ್ತಿನ ಯಾವ ಶಕ್ತಿಯಿಂದಲೂ ಸಾಧ್ಯವಿಲ್ಲ-ಯತ್ನಾಳ

ವಿಜಯಪುರ: ಸಿದ್ಧರಾಮಯ್ಯ ಇಡೀ ವೀರಶೈವ ಲಿಂಗಾಯಿತರನ್ನು ಅವಮಾನ ಮಾಡಿದ್ದಾರೆ. ಅವರು ಕ್ಷಮೆ ಕೇಳಬೇಕು ಎಂದು ಬಸನಗೌಡ ಪಾಟೀಲ ಯತ್ನಾಳ ಹೇಳಿದ್ದಾರೆ. ವಿಜಯಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲಿಂಗಾಯತರೆಲ್ಲರೂ ಬ್ರಷ್ಟರು ಎಂದು ಸಿದ್ರಾಮಯ್ಯ ಹೇಳಿದ್ದಾರೆ. ಇವರ ದ್ವೇಷ ಇದ್ದರೆ ವ್ಯಕ್ತಿಗತವಾಗಿ ಮತ್ತು ವೈಯಕ್ತಿಕವಾಗಿ ಮಾತನಾಡಬೇಕು. ಅದನ್ನು ಬಿಟ್ಟು ಇಡೀ ಲಿಂಗಾಯತ ಸಿಎಂ ಗಳು ಭ್ರಷ್ಟರು ಎಂಬುದು ಎಷ್ಟು ಸರಿ. ಧರ್ಮ ಒಡೆಯಲು ನಿಂತವರಿಗೆ ಕಳೆದ ಬಾರಿ ಪಾಠ ಕಲಿಸಿದ್ದಾರೆ. ಹೀಗಾಗಿಯೇ ಕಳೆದ ಚುನಾವಣೆಯಲ್ಲಿ ಲಿಂಗಾಯತರು ಶಕ್ತಿ ಪ್ರದರ್ಶನ ಮಾಡಿದ್ದಾರೆ. […]

ಸಾಮಾನ್ಯ ವೀಕ್ಷಕರು ಹಾಗೂ ವೆಚ್ಚ ವೀಕ್ಷಕರಿಂದ ಚುನಾವಣಾ ಸಿದ್ಧತೆಗಳ ಬಗ್ಗೆ ಪರಿಶೀಲನೆ

ವಿಜಯಪುರ: ನ್ಯಾಯ ಸಮ್ಮತವಾಗಿ ಚುನಾವಣೆ ನಡೆಸಲು ಎಲ್ಲಾ ಹಂತದ ಅಧಿಕಾರಿಗಳು ಕಟಿಬದ್ಧರಾಗಿ ಕರ್ತವ್ಯ ನಿರ್ವಹಿಸಬೇಕು ಹಾಗೂ ಚುನಾವಣಾ ಆಯೋಗದ ನಿರ್ದೇಶನವನ್ನು ತಪ್ಪದೇ ಪಾಲಿಸಬೇಕು ಎಂದು ಬಿಜಾಪೂರ ನಗರ ಹಾಗೂ ನಾಗಠಾಣ ವಿಧಾನಸಭಾ ಮತಕ್ಷೇತ್ರಗಳ ಸಾಮಾನ್ಯ ವೀಕ್ಷಕ ಉದೀತ ಪ್ರಕಾಶ ರೈ ಅವರು ಸೂಚಿನೆ ನೀಡದರು. ಜಿ. ಪಂ. ಸಭಾಂಗಣದಲ್ಲಿ ನಾನಾ ತಂಡಗಳ ನೋಡಲ್ ಅಧಿಕಾರಿಗಳ, ನಿರ್ವಚನಾಧಿಕಾರಿ ಹಾಗೂ ಸಹಾಯಕ ಚುನಾವಣಾಧಿಕಾರಿಗಳೊಂದಿಗೆ ನಡೆದ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಕೈಗೊಳ್ಳಬೇಕಾದ ಸಿದ್ಧತೆಗಳ ಕುರಿತ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ […]

ವಿಜಯಪುರ ಸೈನಿಕ ಶಾಲೆ ಮತ ಎಣಿಕೆ ಕೇಂದ್ರ ಭೇಟಿ ನೀಡಿ ಸಿದ್ಧತೆ ಪರಿಶೀಲಿಸಿದ ಚುನಾವಣೆ ವೀಕ್ಷಕರು

ವಿಜಯಪುರ: ವಿಧಾನಸಭೆ ಸಾರ್ವತ್ರಿಕ ಚುನಾವಣೆಯ ಅಂಗವಾಗಿ  ಮೇ.10 ರಂದು ಮತದಾನ ನಡೆಯಲಿದ್ದು, ಜಿಲ್ಲೆಯ ಎಂಟೂ ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ಕಾರ್ಯ ವಿಜಯಪುರದ ಸೈನಿಕ ಶಾಲೆಯಲ್ಲಿ ನಡೆಯಲಿದ್ದು, ಮತ ಏಣಿಕೆ ಕೇಂದ್ರಕ್ಕೆ ಶನಿವಾರ  ಚುನಾವಣಾ ಸಾಮಾನ್ಯ ವೀಕ್ಷಕರು ಹಾಗೂ ವೆಚ್ಚ ವೀಕ್ಷಕರು  ಭೇಟಿ ನೀಡಿ, ಮತ ಎಣಿಕೆ ಕಾರ್ಯದ ಸಿದ್ಧತೆ ಕುರಿತು ಪರಿಶೀಲನೆ ನಡೆಸಿದರು. 26-ಮುದ್ದೇಬಿಹಾಳ ಮತ್ತು 27-ದೇವರ ಹಿಪ್ಪರಗಿ ವಿಧಾನಸಭೆ ಮತಕ್ಷೇತ್ರದ ಸಾಮಾನ್ಯ ವೀಕ್ಷಕರಾದ ಎಂ. ಅರವಿಂದ, 28-ಬಸವನ ಬಾಗೇವಾಡಿ ಮತ್ತು 29-ಬಬಲೇಶ್ವರ ವಿಧಾನ ಸಭೆ […]

ಶೇ.90 ಮತದಾನ ಮಾಡಿದರೆ, 40 ಸಾವಿರ ಮತಗಳಿಂದ ಗೆಲುವು- ಯತ್ನಾಳ

ವಿಜಯಪುರ: ಕಳೆದ ಬಾರಿ ಮುಸ್ಲಿಂ ಸಮುದಾಯ ಪ್ರದೇಶಗಳಲ್ಲಿ ಸಾವಿರಕ್ಕೆ ಒಂದೇರಡು ಮತಗಳು ಮಾತ್ರ ನಮಗೆ ಬಿದ್ದಿವೆ.  ಅದೇ ರೀತಿ ನಮ್ಮ ಹಿಂದೂಗಳು ಕೂಡ ಜಾಗೃತರಾಗಿ ಒಂದಾಗಿ ಹೆಚ್ಚಿನ ಪ್ರಮಾಣದಲ್ಲಿ ನನಗೆ ಮತ ನೀಡಬೇಕು ಎಂದು ವಿಜಯಪುರ ನಗರ ಬಿಜೆಪಿ ಅಭ್ಯರ್ಥಿ ಬಸನಗೌಡ ರಾ ಪಾಟೀಲ ಯತ್ನಾಳ ಹೇಳಿದ್ದಾರೆ. ನಗರದ ವಾರ್ಡ ನಂ. 29 ಮತ್ತು 30ರ ಕಾಸಗೇರಿ ಓಣಿ, ಗೌಡರ ಓಣಿ, ರಾಮನಗರ, ರಾಜಾಜಿನಗರದಲ್ಲಿ ಮತಯಾಚನೆ ಮಾಡಿ ಮಾತನಾಡಿದ ಅವರು, ಕಳೆದ ಬಾರಿ ನಮ್ಮವರು ಶೇ. 58 […]

ಲಿಂಗಾಯಿತರು ಬಿಜೆಪಿಯಿಂದ ಬಹಿರ್ಮುಖಿಯಾಗಿದ್ದಾರೆ- ಶಾಸಕರು, ಪಕ್ಷ, ಹೈಕಮಾಂಡ್ ಅಸ್ತು ಎಂದರೆ ನಾನೂ ಸಿಎಂ ಆಗಬಹುದು- ಎಂ ಬಿ ಪಾಟೀಲ

ವಿಜಯಪುರ: ಲಿಂಗಾಯಿತ ನಾಯಕರು ಬಿಜೆಪಿಯಿಂದ ಬಹಿರ್ಮುಖಿಯಾಗಿದ್ದಾರೆ.  ಮರಳಿ ಕಾಂಗ್ರೆಸ್ ಮನೆಗೆ ಬರುತ್ತಿದ್ದಾರೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ. ಬಿ. ಪಾಟೀಲ ಹೇಳಿದ್ದಾರೆ. ವಿಜಯಪುರದಲ್ಲಿ ತುರ್ತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಲಿಂಗಾಯಿತ ನಾಯಕರನ್ನು ದಮನ ಮಾಡುತ್ತಿದೆ.  ಲಿಂಗಾಯತ ನಾಯಕರು ಬಿಜೆಪಿಯಲ್ಲಿರುವ ವಾತಾವರಣದಿಂದ ಗಾಬರಿಯಾಗಿದ್ದಾರೆ.  ಬಿಜೆಪಿ ಈಗ ವಿರೇಂದ್ರ ಪಾಟೀಲ ಅವರ ಹೆಸರನ್ನು ಪ್ರಸ್ತಾಪಿಸುತ್ತಿದೆ.  ವಿರೇಂದ್ರ ಪಾಟೀಲ ಅವರಿಗೆ ಅನಾರೋಗ್ಯ ಸಮಸ್ಯೆ ಎದುರಾಗಿತ್ತು.  ಮುಖ್ಯಮಂತ್ರಿಯಾಗಿ ಕಾರ್ಯ ನಿರ್ವಹಿಸಲು ಅವರಿಗೆ ತೊಂದರೆಯಾದ ಕಾರಣ ಅಂದು ರಾಜ್ಯದ ಹಿತದೃಷ್ಟಿಯಿಂದ […]

ಏ. 23 ಬಸವ ಜಯಂತಿಯಂದು ಬಸವ ನಾಡಿಗೆ ರಾಹುಲ ಗಾಂಧಿ ಭೇಟಿ- ರೋಡ್ ಶೋ ಮೂಲಕ ಕಾಂಗ್ರೆಸ್ ಅಭ್ಯರ್ಥಿಗಳ ಪರ ಪ್ರಚಾರ- ಎಂ. ಬಿ. ಪಾಟೀಲ

ವಿಜಯಪುರ: ಎಐಸಿಸಿ ಮುಖಂಡ ರಾಹುಲ ಗಾಂಧಿ ಏ. 23 ರಂದು ರವಿವಾರ ಬಸವ ನಾಡು ವಿಜಯಪುರ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ. ಬಿ. ಪಾಟೀಲ ತಿಳಿಸಿದ್ದಾರೆ.  ತುರ್ತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಏ. 23 ರಂದು ಬೆ. 10.30ಕ್ಕೆ ಹುಬ್ಬಳ್ಳಿಗೆ ಆಗಮಿಸಲಿರುವ ಅವರು, 11.40ಕ್ಕೆ ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಕೂಡಲ ಸಂಗಮಕ್ಕೆ ಆಗಮಿಸಲಿದ್ದಾರೆ.  ಬೆ. 11.50ಕ್ಕೆ ಬಸವಣ್ಣನವರ ಐಕ್ಯಸ್ಥಳ ಮತ್ತು ಸಂಗಮನಾಥ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ.  ಅಲ್ಲದೇ, ಉತ್ಸವ ಸಮಿತಿ […]

ಬಿಜೆಪಿ ಬಿಡಲ್ಲ- ಯತ್ನಾಳ ಪರ ಪ್ರಚಾರ ಮಾಡಲ್ಲ- ಮಾಜಿ ಸಚಿವ ಅಪ್ಪು ಪಟ್ಟಣಶೆಟ್ಟಿ ಸ್ಪಷ್ಟನೆ

ವಿಜಯಪುರ: ಬಾರತೀಯ ಜನತಾ ಪಕ್ಷದಲ್ಲಿಯೇ ಉಳಿದುಕೊಂಡು ಕೆಲಸ ಮಾಡುತ್ತೇನೆ.  ಆದರೆ, ವಿಜಯಪುರ ನಗರ ಮತಕ್ಷೇತ್ರದಲ್ಲಿ ಮಾತ್ರ ಯಾರು ಹೇಳಿದರೂ ಪ್ರಚಾರ ಮಾಡುವುದಿಲ್ಲ ಎಂದು ಮಾಜಿ ಸಚಿವ ಮತ್ತು ಬಿಜೆಪಿ ಟಿಕೆಟ್ ವಂಚಿತ ಅಪ್ಪು ಪಟ್ಟಣಶೆಟ್ಟಿ ಸ್ಪಷ್ಟಪಡಿಸಿದ್ದಾರೆ. ವಿಜಯಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಟಿಕೆಟ್ ಸಿಗದಿದ್ದರೆ ಪಕ್ಷ ಬಿಟ್ಟು ಹೋಗುತ್ತೀರಾ? ಬೇರೆ ನಿರ್ಧಾರ ಕೈಗೊಳ್ಳುತ್ತಾರೆ ಎಂದು ಎಲ್ಲರೂ ಕೇಳುತ್ತಿದ್ದರು.  ಆಗ ನಾನು ಬೆಂಬಲಿಗರು ಮತ್ತು ಹಿತೈಷಿಗಳೊಂದಿಗೆ ಮಾತನಾಡಿ ತಿಳಿಸುವುದಾಗಿ ಹೇಳಿದ್ದೆ.  ಈಗ ಕಳೆದ ಎರಡು ದಿನಗಳಿಂದ ಪಕ್ಷದ ಚಟುವಟಿಕೆಯಲ್ಲಿ […]