ಕಿರಿಯ ವಯಸ್ಸಿನಲ್ಲಿ ಬಸವಣ್ಣನವರ ಭಕ್ತಿಯ ತತ್ವಗಳನ್ನು ಬಸನಗೌಡ ಎಂ. ಪಾಟೀಲ ಅಳವಡಿಸಿಕೊಂಡು ಮುನ್ನಡೆಯುತ್ತಿ್ದ್ದಾರೆ- ರಂಭಾಪುರಿ ಜಗದ್ಗುರುಗಳು

ವಿಜಯಪುರ, ಮಾ. 30: ವಯಸ್ಸಿನಿಂದ ಕಿರಿಯರಾದರೂ ಪ್ರತಿಭೆ ಮತ್ತು ತಮ್ಮ ಕೆಲಸ ಕಾರ್ಯಗಳಿಂದ ಎಲ್ಲರ ಮನದಲ್ಲಿ ಸದಾ ಕಂಗೊಳಿಸುತ್ತಿರುವ ಬಸನಗೌಡ ಎಂ. ಪಾಟೀಲ, ಸದ್ವಿನಯ ಸಂಪನ್ನರಾಗಿ ಬಾಗಿದ ತಲೆ, ಮುಗಿದ ಕೈ ಎಂಬ ಬಸವಣ್ಣನವರ ಭಕ್ತಿಯ ತತ್ವಗಳನ್ವನು ಜೀವನದಲ್ಲಿ ಅಳವಡಿಸಿಕೊಂಡು ಮುನ್ನಡೆಯುತ್ತಿದ್ದಾರೆ ಎಂದು ಬಾಳೆಹೊನ್ನೂರು ರಂಭಾಪುರಿ ಪೀಠದ ಜಗದ್ಗುರು ಶ್ರೀ ವೀರಸೋಮೇಶ್ವರ ಮಹಾಸ್ವಾಮೀಜಿ ಹೇಳಿದ್ದಾರೆ. ನಗರದ ಜೋರಾಪುರ ಪೇಟೆಯ ಪೇಟೆ ಓಣಿಯಲ್ಲಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಡಾ. ಗಂಗಾಧರ ಸಂಬಣ್ಣಿ ಅವರ ಮನೆಯಲ್ಲಿ ಆಯೋಜಿಸಿದ್ದ ಇಷ್ಟಲಿಂಗ ಪೂಜೆ […]

ವಿಧಾನಸಭೆಗೆ ಚುನಾವಣೆ: ಜಿಲ್ಲೆಯಲ್ಲಿ 39851 ಹೊಸ ಮತದಾರರ ಸೇರ್ಪಡೆ: ಎಂಟು ಕ್ಷೇತ್ರಗಳಲ್ಲಿ ಒಟ್ಟು 18.78 ಲಕ್ಷ ಮತದಾರರು- ಡಿಸಿ ಡಾ. ದಾನಮ್ಮನವರ

ವಿಜಯಪುರ: ಕೇಂದ್ರ ಚುನಾವಣೆ ಆಯೋಗ ರಾಜ್ಯ ವಿಧಾನಸಭೆ ಚುನಾವಣೆ ದಿನಾಂಕ ಘೋಷಿಸಿದ್ದು, ಮೇ 10ರಂದು ಬುಧವಾರ ಮತದಾನ ನಡೆಯಲಿದೆ.  ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಮಾದರಿ ನೀತಿ ಸಂಹಿತೆ ಜಾರಿಯಾಗಿದೆ ಎಂದು ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ತಿಳಿಸಿದ್ದಾರೆ.  ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿ ಮಾತನಾಡಿದ ಅವರು, ವೇಳಾಪಟ್ಟಿಯಂತೆ ಏ. 13 ರಂದು ಗುರುವಾರ ಚುನಾವಣೆ ಅಧಿಸೂಚನೆ ಹೊರಡಿಸಲಾಗುತ್ತದೆ.  ಏ. 20 ಗುರುವಾರ ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದ್ದು, ಏ. 21 ರಂದು ಶುಕ್ರುವಾರ ನಾಮಪತ್ರಗಳ […]

ಕಾಂಗ್ರೆಸ್ ಮೂರಂಕಿ ದಾಟಲ್ಲ- ಬಿಜೆಪಿ 120 ಸ್ಥಾನಗಳಿಸಲಿದೆ- ಕಮಲ ಪಡೆಯವರಾರೂ ಕೈ ಕಡೆ ಹೋಗಲ್ಲ- ಯತ್ನಾಳ

ವಿಜಯಪುರ: ಬಿಜೆಪಿಯಿಂದ ಕೆಲವು ಸಚಿವರು ಮತ್ತು ಶಾಸಕರು ಕಾಂಗ್ರೆಸ್ಸಿಗೆ ಸೇರ್ಪಡೆಯಾಗಲಿದ್ದಾರೆ ಎಂಬುದರ ಕುರಿತು ಬಸನಗೌಡ ಪಾಟೀಲ ಯತ್ನಾಳ ಖಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಹೋಗಿ ತಗ್ಗಿನಲ್ಲಿ ಯಾಕೆ ಬೀಳ್ತಾರೆ? ರಾತ್ರಿ ಕಂಡ ಭಾವಿ ಹಗಲಿನಲ್ಲಿ ಹೋಗಿ ಬಿದ್ದಂಗಾಗುತ್ತೆ.  ಕಾಂಗ್ರೆಸ್ ಈಗ ಮತ್ತಷ್ಟು ಡೌನ್ ಆಗಿದೆ.  ಮೂರ್ನಾಲ್ಕು ತಿಂಗಳ ಹಿಂದೆ ನಡೆದ ಸಮೀಕ್ಷೆಯಲ್ಲಿ ಕಾಂಗ್ರೆಸ್ ಏರಿತ್ತು.  90 ರಿಂದ 95 ಸ್ಥಾನಗಳಲ್ಲಿ ಗೆಲ್ಲುವ ಸೂಚನೆಯಿತ್ತು.  ಬಿಜೆಪಿ ಕೂಡ 90 ರಿಂದ 95 […]

ಅಪ್ಪು ಪಟ್ಟಣಶೆಟ್ಟಿ, ಗುರಲಿಂಗಪ್ಪ ಅಂಗಡಿ ಸೇರಿ ಎರಡ್ಮೂರು ಜನರಿಗೆ ಟಿಕೆಟ್ ಕೊಡಿ- ಬಣಜಿಗರ ಆಗ್ರಹ

ವಿಜಯಪುರ: ವಿಜಯಪುರ ಜಿಲ್ಲೆಯಲ್ಲಿ ಕನಿಷ್ಠ ಇಬ್ಬರಿಂದ ಮೂರು ಜನ ಬಣಬಣಜಿಗರಿಗೆ ಮುಂಬರುವ ಚುನಾವಣೆಯಲ್ಲಿ ಟಿಕೆಟ್ ನೀಡಬೇಕು ಎಂದು ಬಣಜಿಗ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ರೂಡಗಿ ಆಗ್ರಹಿಸಿದ್ದಾರೆ. ವಿಜಯಪುರದಲ್ಲಿ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಜಯಪುರ ಜಿಲ್ಲೆಯಲ್ಲಿ 1.60 ಲಕ್ಷ ಬಣಜಿಗರಿದ್ದಾರೆ‌. ಜಿಲ್ಲೆಯ 8 ಮತಕ್ಷೇತ್ರಗಳಿಂದ ಸ್ಪರ್ಧಿಸುವ ಆಕಾಂಕ್ಷಿಗಳಿಗೆ ರಾಷ್ಟ್ರೀಯ ಪಕ್ಷಗಳು ಟಿಕೆಟ್ ನೀಡಬೇಕು. ವಿಜಯಪುರ ನಗರದಲ್ಲಿಯೇ 35 ಸಾವಿರ ಬಣಜಿಗ ಸಮಾಜದವರಿದ್ದಾರೆ. ‌ನಾನಾ ಮತಕ್ಷೇತ್ರಗಳಲ್ಲಿ ಕನಿಷ್ಠ 25 ಸಾವಿರ ಜನಸಂಖ್ಯೆಯಿದೆ. ಪ್ರತಿ ಮತಕ್ಷೇತ್ರದಿಂದ ಬಜಣಜಿಗ ಸಮಾಜದ […]

ಮೇ 10 ರಂದು ಚುನಾವಣೆ- ಮೇ 13 ರಂದು ಮತ ಎಣಿಕೆ

ವಿಜಯಪುರ: ಕೇಂದ್ರ ಚುನಾವಣೆ ಆಯೋಗ ರಾಜ್ಯ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟಿಸಿದೆ. ನವದೆಹಲಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕೇಂದ್ರ ಚುನಾವಣೆ ಆಯೋ್ದ ಮುಖ್ಯ ಚುನಾವಣಾದಿಕಾರಿ ರಾಜೀವ ಕುಮಾರ ಈ ಮಾಹಿತಿ‌ ನೀಡಿದ್ದಾರೆ. ರಾಜ್ಯದಲ್ಲಿ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ.  ಚುನಾವಣೆ ಪ್ರಕ್ರಿಯೆಯ ಮಾಹಿತಿ‌ಇಲ್ಲಿದೆ. ಅಧಿಸೂಚನೆ- 13.04.2023 ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕ- 20.04.2023 ನಾಮಪತ್ರ ಪರಿಷ್ಕರಣೆ- 21.04.2023 ನಾಮಪತ್ರ ಹಿಂಪಡೆಯಲು ಕೊನೆಯ ದಿನಾಂಕ- 24.04.2023 ಮತದಾನ- 10.05.2023(ಬುಧವಾರ) ಮತ ಎಣಿಕೆ- 13.05.2023(ಶನಿವಾರ) ಚುನಾಚಣೆ ಪ್ರಕ್ರಿಯೆ ಮುಕ್ತಾಯ- 15.05.2023.

ಸೌಮ್ಯ ರೀತಿ ಹೋರಾಟಕ್ಕೆ ಸ್ಪಂದಿಸದಿದ್ದರೆ ಉಗ್ರ ಹೋರಾಟ- ಒಳಮೀಸಲಾತಿ ವಿರುದ್ಧ ಶಾಸಕ ದೇವಾನಂದ ಚವ್ಹಾಣ ಆಕ್ರೋಶ

ವಿಜಯಪುರ: ರಾಜ್ಯ ಸರಕಾರ ಘೋಷಣೆ ಮಾಡಿರುವ ಒಳಮೀಸಲಾತಿಗೆ ವಿಜಯಪುರ ಜಿಲ್ಲೆಯ ನಾಗಠಾಣ(ಮೀ) ಜೆಡಿಎಸ್ ಶಾಸಕ ದೇವಾನಂದ ಚವ್ಹಾಣ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಜಯಪುರದಲ್ಲಿ ಮಾತನಾಡಿದ ಅವರು, ರಾಜ್ಯ ಸರಕಾರದ ವಿರುದ್ಧ ಹರಿಹಾಯ್ದಿದ್ದಾರೆ.  ಬಂಜಾರಾ ಸಮುದಾಯಕ್ಕೆ ಮೀಸಲಾತಿ ಪ್ರಮಾಣದಲ್ಲಿ ಕಡಿಮೆಯಾಗಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ಅವರು, ಸರಕಾರ ಜೇನುಗೂಡಿಗೆ ಕಲ್ಲು ಹೊಡೆದಿದೆ.  ಒಳ ಮೀಸಲಾತಿಯಿಂದ‌ ಒಂದು ಕಣ್ಣಿಗೆ ಬೆಣ್ಣೆ, ಇನ್ನೊಂದು ಕಣ್ಣಿಗೆ ಸುಣ್ಣ ಎಂಬಂತೆ ಅನ್ಯಾಯ ಮಾಡಲಾಗಿದೆ ಎಂದು ಆರೋಪಿಸಿದರು. ಬಂಜಾರ ಸಮುದಾಯದ ತಾಳ್ಮೇ ಪರೀಕ್ಷಿಸಬೇಡಿ.  ಸರಕಾರಕ್ಕೆ ಎಚ್ಚರಿಕೆ ಕೊಡ್ತೀನಿ.  ಬಂಜಾರ‌ […]

ಒಳಮೀಸಲಾತಿ ಘೋಷಣೆ ಸಂತಸ ತರಿಸಿದೆ- ಬಿಜೆಪಿ ಸಂಸದ ರಮೇಶ ಜಿಗಜಿಣಗಿ

ವಿಜಯಪುರ: ಮಾದಿಗ ಸಮುದಾಯಕ್ಕೆ ಒಳ ಮೀಸಲಾತಿ ಕಲ್ಪಿಸುವ ನಿಟ್ಟಿನಲ್ಲಿ ರಾಜ್ಯ ಸರಕಾರ ಸಚಿವ ಸಂಪುಟ ನಿರ್ಧರಿಸಿರುವುದು ಅತ್ಯಂತ ಸಂತೋಷ ತರಿಸಿದೆ.  ಇದು ಶೋಷಿತ ಜನರಿಗೆ ಅತೀವ ಸಂತೋಷ ತರಿಸಿದೆ ಎಂದು ಸಂಸದ ರಮೇಶ ಜಿಗಜಿಣಗಿ ಹೇಳಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಮಾದಿಗ ಸಮುದಾಯ ಆರ್ಥಿಕವಾಗಿ, ಶೈಕ್ಷಣಿಕವಾಗಿ, ರಾಜಕೀಯವಾಗಿ ಹಿಂದುಳಿದಿದೆ, ಮೀಸಲಾತಿಯ ಸಂಪೂರ್ಣ ಪ್ರಯೋಜನ ದೊರಕಿಲ್ಲ, ಹೀಗಾಗಿ ಒಳ ಮೀಸಲಾತಿ ಸೌಲಭ್ಯ ಕಲ್ಪಿಸುವುದು ಅಗತ್ಯವಾಗಿತ್ತು. ಈ ಹಿಂದೆ ಆಳಿದ ಸರ್ಕಾರಗಳು ಈ ನ್ಯಾಯಯುತ ಬೇಡಿಕೆ […]

ಒಳ ಮೀಸಲಾತಿಯಿಂದ ಬಂಜಾರಾ, ಭೋವಿ, ಕೊರಚ ಸಮುದಾಯಗಳಿಗೆ ಅನ್ಯಾಯ- ಕಾಂತಾ ನಾಯಕ ಆರೋಪ

ವಿಜಯಪುರ: ಒಳ ಮೀಸಲಾತಿಯಿಂದಾಗಿ ಬಂಜಾರಾ ಸಮಾಜ ಸೇರಿದಂತೆ ಭೋವಿ ಹಾಗೂ ಕೊರಚ ಸಮುದಾಯಗಳಿಗೆ ಅನ್ಯಾಯವಾಗಲಿದೆ.  ಬಿಜೆಪಿಯ ಈ ಹುನ್ನಾರದಿಂದಾಗಿ ಈ ಸಮುದಾಯಗಳ ಬೆನ್ನಿಗೆ ಚೂರಿ ಹಾಕುವಂಥ ಕೆಲಸವನ್ನು ಬಿಜೆಪಿ ಮಾಡುತ್ತಿರುವುದು ತಪ್ಪು ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕಾಂತಾ ನಾಯಕ ಬಿಜೆಪಿ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಬಿಜೆಪಿ ಸರಕಾರ ಯಾವಾಗಲೂ ಜನರ ಬೆನ್ನಿಗೆ ಚೂರಿ ಹಾಕುವಂಥ ಕೆಲಸವನ್ನು ಮಾಡುತ್ತಲೇ ಬಂದಿದೆ.  ಬಿಜೆಪಿಯವರ ಆಟಕ್ಕೆ ಜನರು ಬಲಿಯಾಗುತ್ತಿದ್ದಾರೆ.  ಈಗ […]

ಮುಂಬರುವ ಚುನಾವಣೆಯಲ್ಲಿ ಮಹಿಳೆಯರಿಗೆ ಹೆಚ್ಚಿಗೆ ಟಿಕೆಟ್ ನೀಡಬೇಕು- ಡಾ. ಸರಸ್ವತಿ ಚಿಮ್ಮಲಗಿ

ವಿಜಯಪುರ: ರಾಷ್ಟ್ರ ನಿರ್ಮಾಣದಲ್ಲಿ ಪ್ರಮುಖ ಪಾತ್ರ ವಹಿಸುವ ಮಹಿಳೆಯರಿಗೆ ಸ್ವಾತಂತ್ರ್ಯ ಬಂದು 75 ವರ್ಷ ಕಳೆದರೂ ಇನ್ನೂ ಸೂಕ್ತ ಸ್ಥಾನಮಾನ ಸಿಗುತ್ತಿಲ್ಲ.  ಇದಕ್ಕೆ ರಾಜಕೀಯ ಕ್ಷೇತ್ರವೂ ಹೊರತಾಗಿಲ್ಲ.  ಮುಂಬರುವ ಚುನಾವಣೆಯಲ್ಲಿ ಮಹಿಳೆಯರಿಗೆ ಹೆಚ್ಚಿನ ಟಿಕೆಟ್ ನೀಡಬೇಕು ಎಂದು ಸಾಹಿತಿ ಮತ್ತು ಮಹಿಳಾಪರ ಹೋರಾಟಗಾರ್ತಿ ಡಾ. ಸರಸ್ವತಿ ಚಿಮ್ಮಲಗಿ ಹೇಳಿದ್ದಾರೆ.  ನಗರದಲ್ಲಿ ಜ್ಞಾನದೀಪ ಗ್ರಾಮೀಣಾಭಿವೃದ್ಧಿ ಸಂಸ್ಥೆ ಮತ್ತು ಯುಗದರ್ಶಿನಿ ಫೌಂಡೇಶನ್ ವತಿಯಿಂದ ಆಯೋಜಿಸಲಾಗಿದ್ದ ಜಂಟಿ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಎಲ್ಲ ರಾಜಕೀಯ ಪಕ್ಷಗಳ ನಾಯಕರು ಮಹಿಳಾ ಸಬಲೀಕರಣ ಕುರಿತು […]

ಆಯುಷ್ಮಾನ ಭಾರತ ಆರೋಗ್ಯ ಕಾರ್ಡ ವಿತರಿಸಿದ ಡಿಸಿ ಡಾ. ದಾನಮ್ಮನವರ

ವಿಜಯಪುರ: ರಾಷ್ಟ್ರೀಯ ಆಯುಷ್ಮಾನ ಭಾರತ ಆರೋಗ್ಯ ಕಾರ್ಯಕ್ರಮದ ಜನ ಆರೋಗ್ಯ ಯೋಜನೆಯಡಿಯಲ್ಲಿ  ರಾಜ್ಯ ಸರ್ಕಾರದ ಇಡಿಸಿಎಸ್ ನಿರ್ದೇಶಕರಿಂದ ಪಡೆದ ಕಾರ್ಡಗಳನ್ನು  ಜಿಲ್ಲೆಯ ಅರ್ಹ ಫಲಾನುಭವಿಗಳಿಗೆ ಸೋಮವಾರ ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಅವರು 5 ಜನ ಫಲಾನುಭವಿಗಳಿಗೆ ಸಾಂಕೇತಿಕವಾಗಿ ಕಾರ್ಡ ವಿತರಿಸಿದರು. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕಾರ್ಡ ವಿತರಿಸಿದ ಅವರು, ಎಲ್ಲಾ ಗ್ರಾಮ ಒನ್ ಕೇಂದ್ರದ ಪ್ರಬಂಧಕರು ತಮ್ಮ ಗ್ರಾಮಗಳಲ್ಲಿ ಬರುವ ಎಲ್ಲಾ ಅರ್ಹ ಫಲಾನುಭವಿಗಳಿಗೆ ಆರೋಗ್ಯ ಇಲಾಖೆಯವರ ಸಿಬ್ಬಂದಿಯವರ ಸಹಾಯ ಪಡೆದು ಅರ್ಹ ಫಲಾನುಭವಿಗಳಿಗೆ ಕಾರ್ಡ ವಿತರಿಸುವಚಿತೆ ತಿಳಿಸಿದ್ದಾರೆ. […]