ಮಕ್ಕಳ ಸರ್ವತೋಮುಖ ಅಭಿವೃದ್ಧಿ ಶಿಕ್ಷಣ ಸಂಸ್ಥೆಗಳು ಗುರಿಯಾಗಬೇಕು- ಶೈಲಜಾ ಬಸನಗೌಡ ಪಾಟೀಲ ಯತ್ನಾಳ

ವಿಜಯಪುರ: ಮಕ್ಕಳು ಪಾಠದ ಜೊತೆಗೆ, ಪಠ್ಯಗಳ ಹೊರತಾದ ಚಟುವಟಿಕೆಗಳಲ್ಲಿಯೂ ಪಾಲ್ಗೋಳ್ಳಬೇಕು ಎಂದು ಶೈಲಜಾ ಬಸನಗೌಡ ಪಾಟೀಲ ಯತ್ನಾಳ ಹೇಳಿದರು. ನಿಡಗುಂದಿ ತಾಲೂಕಿನ ಮುಕಾರ್ತಿಹಾಳ ಗ್ರಾಮದ ಗ್ರಾಮದ ಮಾತೋಶ್ರೀ ಶಕುಂತಲಾ ಬಾಯಿ ಬೆಳ್ಳಿ ಪಬ್ಲಿಕ್ ಶಾಲೆಯಲ್ಲಿ ನಡೆದ ಶಾಲಾ ವಾರ್ಷಿಕೋತ್ಸವ ಉದ್ಘಾಟಿಸಿ ಅವರು ಮಾತನಾಡಿದರು. ಇಂದಿನ ಮಕ್ಕಳಿಗೆ ಬಾಲ್ಯದಲ್ಲಿಯೇ ಗುಣಮಟ್ಟದ ಶಿಕ್ಷಣ ಕೊಡುವ ನೀಡುವ ನೆಪದಲ್ಲಿ ಅವರ ಹೆಗಲಿಗೆ ಭಾರವಾದ ಪುಸ್ತಕಗಳ ಬ್ಯಾಗನ್ನು ಹಾಕಿಸಿ ಕೇವಲ ಓದು, ಓದು ಎಂದು ಒತ್ತಡ ಹಾಕಲಾಗುತ್ತದೆ.  ಇದರಿಂದ ಅನೇಕ ಮಕ್ಕಳು ಒತ್ತಡದಿಂದ […]

ನರೇಗಾ ಯೋಜನೆಯಡಿ ಉದ್ಯೋಗ ಒದಗಿಸಿ ಗುಳೆ ತಡೆಯಲು ಕ್ರಮ: ಸಿಇಓ ರಾಹುಲ ಸಿಂಧೆ

ವಿಜಯಪುರ: ಈ ವರ್ಷ ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯಡಿ ಮಹಿಳೆಯರ ಭಾಗವಹಿಸುವಿಕೆ ಶೇ.60 ರಷ್ಟು ಗುರಿ ಹೊಂದಲಾಗಿದೆ ಮತ್ತು ವಿಶೇಷಚೇತನರಿಗೂ ಕೂಡ ಆದ್ಯತೆ ನೀಡಲಾಗಿದೆ. ಬೇಸಿಗೆಯ ದಿನಗಳಲ್ಲಿ ಜನರು ಬೇರೆ ಊರಿಗೆ ಕೆಲಸ ಅರಸಿ ಗುಳೆ ಹೋಗುವುದನ್ನು ತಡೆಗಟ್ಟಲು ಗ್ರಾಮ ಪಂಚಾಯಿತಿ ಮಟ್ಟದಲ್ಲೇ ನರೇಗಾ ಯೋಜನೆಯಡಿ ಉದ್ಯೋಗ ಒದಗಿಸುವಂತೆ ಅಧಿಕಾರಿಗಳಿಗೆ  ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶಿಂಧೆ ಅವರು ತಿಳಿಸಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, […]

ಧೂಳಾಪುರ ಅಪಖ್ಯಾತಿಯ ವಿಜಯಪುರ ಚಿತ್ರಣ ಬದಲು- ಬಸನಗೌಡ ಪಾಟೀಲ ಯತ್ನಾಳ

ವಿಜಯಪುರ: ಉಳಿದವಂತೆ ನಾನು ಬೋಗಸ್ ಭೂಮಿಪೂಜೆ ಮಾಡುತ್ತಿಲ್ಲ.  ಅನುದಾನ ಬಿಡುಗಡೆಯಾಗಿ ಟೆಂಡರ್ ಮುಗಿದ ಬಳಿಕವೇ ಗುಣಮಟ್ಟದ ರಸ್ತೆಗಳ ಅಭಿವೃದ್ಧಿ ಮಾಡಲು ಭೂಮಿಪೂಜೆ ಮಾಡುತ್ತಿದೇನೆ ಎಂದು ಶಾಸಕ ಬಸನಗೌಡ ಆರ್. ಪಾಟೀಲ ಯತ್ನಾಳ ಹೇಳಿದ್ದಾರೆ.  ನಗರದ ವಾರ್ಡ್ ಸಂಖ್ಯೆ 1ರ ಸಂಗಮೇಶ್ವರ ಕಾಲೊನಿಯ ಆಂತರಿಕ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.  ಸಿಸಿ ರಸ್ತೆ ಕಾಣದ ನಗರದಲ್ಲಿ, ನನ್ನ ಅವಧಿಯಲ್ಲಿ ಅಭಿವೃದ್ದಿಗೊಂಡ ರಸ್ತೆಗಳು, ಸುಳ್ಳು ಹೇಳಿ ಹೋಗುವ ರಾಜಕಾರಣಿ ಅಲ್ಲ. ಹೇಳಿದಂತೆ ನಡೆದುಕೊಳ್ಳುವೆ ಎಂದು ಅವರು […]

ಕುಡಿಯುವ ನೀರನ್ನು ಕೃಷಿ ಚಟುವಟಿಕೆಗೆ ಬಳಸದಂತೆ ಡಿಸಿ ಡಾ. ದಾನಮ್ಮನವರ ಆದೇಶ

ವಿಜಯಪುರ: ಜಿಲ್ಲೆಯ ಎಲ್ಲ ಜಲ ಮೂಲಗಳಲ್ಲಿರುವ ನೀರನ್ನು ಜನ-ಜಾನುವಾರುಗಳ ಕುಡಿಯುವ ಉದ್ದೇಶಕ್ಕೆ ಮಾತ್ರ ಬಳಕೆ ಮಾಡಿಕೊಳ್ಳಬೇಕಾಗಿರುವುದರಿಂದ ಬೇರೆ ಉದ್ದೇಶಗಳಿಗೆ ಮತ್ತು ಕೃಷಿ ಚಟುವಟಿಕೆಗಳಿಗೆ ಕುಡಿಯುವ ನೀರು ಬಳಕೆ ಮಾಡುವುದನ್ನು ನಿಷೇಧಿಸಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆದ ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಅವರು ಆದೇಶ ಹೊರಡಿಸಿದ್ದಾರೆ. 16.02.2023ರ ಸಭೆಯ ನಿರ್ದೇಶನದಂತೆ ಕೆಬಿಜೆಎನ್‍ಎಲ್ ಕಾಲುವೆ ಜಾಲಗಳ ಮೂಲಕ ವಾರಾಬಂದಿ ಮೂಲಕ ಹರಿಸಲಾದ ನೀರನ್ನು ಕುಡಿಯುವ ನೀರಿನ ಸಲುವಾಗಿ ಎಲ್ಲ ಜಲಮೂಲಗಳನ್ನು ಭರ್ತಿ ಮಾಡಿಕೊಳ್ಳಲಾಗಿದೆ. ಕುಡಿಯುವ ನೀರನ್ನು ಕೃಷಿ […]

ಮೀಸಲಾತಿಯಲ್ಲಿ ನನ್ನ ಪಾತ್ರ ದೊಡ್ಡದಿದೆ- ಹೈಕಮಾಂಡಿಗೆ ನನ್ನ ಶಕ್ತಿ ಗೊತ್ತಾಗಿದೆ- ಕೂಡಲ ಸಂಗಮ ಶ್ರೀಗಳ ಮೇಲೆ ಯಾರೂ ಒತ್ತಡ ಹಾಕಿಲ್ಲ- ಯತ್ನಾಳ

ವಿಜಯಪುರ: ಮೀಸಲಾತಿ ಆಗಬೇಕಾದರೆ ನನ್ನ ದೊಡ್ಡ ಕೊಡುಗೆ ಇದೆ.  ನಾನು ಎಲ್ಲ ಅಧಿಕಾರ ತ್ಯಾಗ ಮಾಡಿದ ಕಾರಣ ಹೈಕಮಾಂಡ್ ನನ್ನ ಜೊತೆ ಚರ್ಚಿಸಿ ನಮ್ಮ ಸಮಾಜ ಮೀಸಲಾತಿ ನೀಡಿದೆ.  ಮಾತ್ರವಲ್ಲ ಇತರ ಸಮಾಜಗಳ ಮೀಸಲಾತಿ ಪ್ರಮಾಣ ಹೆಚ್ಚಿಸಿದೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದ್ದಾರೆ. ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಹೈಕಮಾಂಡಿಗೆ ಬಸನಗೌಡರ ಜನಪ್ರೀಯತೆ ಗೊತ್ತಾಗಿದೆ. ಅದಕ್ಕೆ ಮೀಸಲಾತಿ ಸಿಕ್ಕಿದೆ.  ನಮಗೆಲ್ಲ ಮೀಸಲಾತಿ ನೀಡಬೇಕಾದರೆ, ಅದಕ್ಕೂ ಮೊದಲು ಎಸ್.ಸಿ.ಎಸ್.ಟಿ. ಜನಾಂಗಕ್ಕೆ ಮೀಸಲಾತಿ ಪ್ರಮಾಣ ಹೆಚ್ಚಳ […]

ಅಂತಾರಾಜ್ಯ ಚೆಕಪೋಸ್ಟ್ ಗಳಿಗೆ ಡಿಸಿ ಡಾ. ದಾನಮ್ಮನವರ, ಎಸ್ಪಿ ಎಚ್. ಡಿ. ಆನಂದಕುಮಾರ ದಿಢೀರ್ ಭೇಟಿ

ವಿಜಯಪುರ: ಮುಂಬರುವ ವಿಧಾನ ಸಭಾ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಜಿಲ್ಲೆಯ ನಾನಾ ಕಡೆ ಸ್ಥಾಪಿಸಲಾದ ಚೆಕ್‌ಪೋಸ್ಟ್ ಗಳಿಗೆ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ಹಾಗೂ ಎಸ್ಪಿ  ಎಚ್. ಡಿ. ಆನಂದ ಕುಮಾರ ಅವರು ಶನಿವಾರ ತಡರಾತ್ರಿ  ದಿಢೀರ ಭೇಟಿ ನೀಡಿ ಚೆಕ್‌ಫೋಸ್ಟನ ಅಧಿಕಾರಿಗಳ ಕಾರ್ಯವೈಖರಿ ಕುರಿತು ಪರಿಶೀಲನೆ ನಡೆಸಿದರು. ಜಿಲ್ಲೆಯ ತಿಕೋಟಾ ತಾಲೂಕಿನ ಕನಮಡಿ, ಅಳಗಿನಾಳ ಸೇರಿದಂತೆ ನಾನಾ ಕಡೆ ಸ್ಥಾಪಿಸಲಾದ ಚೆಕ್‌ಪೋಸ್ಟ್ಗಳಿಗೆ ಭೇಟಿ ನೀಡಿದ ಅವರು, ಚುನಾವಣಾ ನೀತಿ ಸಂಹಿತೆ ಜಾರಿಯಾಗುವ ಮುನ್ನವೇ ಚುನಾವಣಾ […]

ಹೃದ್ರೋಗ ಸಮಸ್ಯೆಯಿಂದ ಬಳಲುತ್ತಿದ್ದ ಯುವಕನಿಗೆ ಉಚಿತವಾಗಿ ಚಿಕಿತ್ಸೆ ಕೊಡಿಸಿ ಹೃದಯ ವೈಶಾಲ್ಯತೆ ಮೆರೆದ ಎಂಎಲ್‌ಸಿ ಸುನೀಲಗೌಡ ಪಾಟೀಲ

ವಿಜಯಪುರ: ಹೃದ್ರೋಗ ಸಮಸ್ಯೆಯಿಂದ ಬಳಲುತ್ತಿದ್ದ ಬಡ ಕಟ್ಟಡ ಕಾರ್ಮಿಕನಿಗೆ ಶಸ್ತ್ರಚಿಕಿತ್ಸೆಗೆ ನೆರವಾಗುವ ಮೂಲಕ ವಿಧಾನ ಪರಿಷತ ಸದಸ್ಯ ಸುನೀಲಗೌಡ ಪಾಟೀಲ ಹೃದಯ ವೈಶಾಲ್ಯತೆ ಮೆರೆದಿದ್ದಾರೆ. ವಿಜಯಪುರ ನಗರದ ಇಂಡಿ ರೋಡ್ ನಿವಾಸಿ ಹಣಮಂತ ಗೋಠೆ(28) ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದರು. ಕಟ್ಟಡ ಕೂಲಿ ಕಾರ್ಮಿಕರಾಗಿರುವ ಈ ಯುವಕ ತಂದೆ, ತಾಯಿ ಮತ್ತು ಪತ್ನಿಯನ್ನು ಕಳೆದುಕೊಂಡು ತೀವ್ರ ಸಂಕಷ್ಟದಲ್ಲಿದ್ದರು. ಈ ವಿಷಯ ತಿಳಿದ ಸುನೀಲಗೌಡ ಪಾಟೀಲ ಅವರು, ಯುವಕನಿಗೆ ಶ್ರೀ ಬಿ. ಎಂ. ಪಾಟೀಲ ಸೂಪರ್ ಸ್ಪೇಷಾಲಿಟಿ ಆಸ್ಪತ್ರೆಯಲ್ಲಿ […]

ಬಸವಜಯ ಮೃತ್ಯುಂಜಯ ಸ್ವಾಮೀಜಿ ಒತ್ತಡದಿಂದಾಗಿ ಕಣ್ಣೀರಿಟ್ಟಿದ್ದಾರೆ- ಸಂಗಮೇಶ ಬಬಲೇಶ್ವರ

ವಿಜಯಪುರ: ಕೂಡಲಸಂಗಮ ಜಗದ್ಗುರುಗಳು ಕೆಲವರ ಒತ್ತಡ ತಾಳಲಾರದೆ ಕಣ್ಣೀರಿಟ್ಟಿದ್ದಾರೆ ಎಂದು ಅಖಿಲ ಭಾರತ ಲಿಂಗಾಯಿತ ಪಂಚಮಸಾಲಿ ಸಮಾಜದ ರಾಷ್ಟ್ರೀಯ ವಕ್ತಾರ ಸಂಗಮೇಶ ಬಬಲೇಶ್ವರ ಆರೋಪಿಸಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ  ದೊರಕಿಸಿ ಕೊಡುವ ಮೂಲಕ ಸಮುದಾಯದ ಮಕ್ಕಳ ಶೈಕ್ಷಣಿಕ ಹಾಗೂ ಉದ್ಯೋಗದ ಮೀಸಲಾತಿಗಾಗಿ ಐತಿಹಾಸಿಕ ಹೋರಾಟ ಮಾಡಿದ ಬಸವಜಯ ಮೃತ್ಯುಂಜಯ ಮಹಾಸ್ವಾಮಿಗಳ ಕಣ್ಣೀರಿನ ಶಾಪ ಸಮುದಾಯವನ್ನು ಹಾಗೂ ಸಮುದಾಯದ ಜಗದ್ಗುರುಗಳನ್ನು ಅತ್ಯಂತ ಕೆಟ್ಟದಾಗಿ ನಡೆಸಿಕೊಂಡವರಿಗೆ ತಟ್ಟದೇ ಬಿಡುವುದಿಲ್ಲ ಎಂದು […]

ನಗರಾಭಿವೃದ್ದಿ ಪ್ರಾಧಿಕಾರದ ಬಜೆಟ್ ಸಭೆ- ರೂ. 17.72 ಕೋ. ಉಳಿತಾಯ ಆಯವ್ಯಯ ಮಂಡಿಸಿದ ಆಯುಕ್ತ ಶಂಕರಗೌಡ ಸೋಮನಾಳ

ವಿಜಯಪುರ: ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರ 2023-24ನೇ ಆರ್ಥಿಕ ವರ್ಷದಲ್ಲಿ ರೂ. 17.72 ಕೋ. ಉಳಿತಾಯ ಬಜೆಟ್ ಮಂಡನೆಯಾಗಿದೆ. ವಿಜಯಪುರ ನಗರ ಅಭಿವೃದ್ಧಿ ಪ್ರಾಧಿಕಾರದ ಸಭಾಂಗಣದಲ್ಲಿ ನಡೆದ ಬಜೆಟ್ ಸಭೆಯಲ್ಲಿ ಆಯುಕ್ತ ಶಂಕರಗೌಡ ಸೋಮನಾಳ ಆಯವ್ಯಯ ಮಂಡಿಸಿದರು.  ಈ ಸಭೆಯಲ್ಲಿ ಒಟ್ಟು ಅಂದಾಜು ರೂ. 122. 60 ಕೋ. ಆದಾಯ ಕ್ರೋಢೀಕರಿಸಲು ಮತ್ತು ರೂ. 104.88 ಕೋ. ವೆಚ್ಚ ಮಾಡಲು ಅನುಮೋದನೆ ನೀಡಲಾಯಿತು. ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪರಶುರಾಮಸಿಂಗ್ ರಜಪೂತ ಅಧ್ಯಕ್ಷತೆಯಲ್ಲಿ ನಡೆದ ಈ ಸಭೆಯಲ್ಲಿ ಶಾಸಕ ಬಸನಗೌಡ […]

ಮತ್ದೊಂದು ಹೊಸ ರೋಗ ಬರ್ತೈತಾದ್ರ ಕೊರೊನಾದಂಗಲ್ಲ- ಭಾರತ ಪ್ರೀತಿಯಿಂದ ಬೇರೆ ದೇಶ ಆಳ್ತೈತಿ- ರಾಜಕೀಯ ಗೊಂದಲ ಐತಿ- ಕತ್ನಳ್ಳಿ ಕಾರ್ಣಿಕ ಭವಿಷ್ಯ

ವಿಜಯಪುರ: ಕೊರೊನಾ ಬಳಿಕ ವೈದ್ಯರಿಗೆ ತಲೆನೋವು ತರುವ ಮತ್ತೊಂದು ರೋಗಬಾಧೆ ಜನರನ್ನು ಕಾಡಲಿದೆ.  ಆದರೆ, ಇದು ಕೊರೊನಾದಷ್ಟು ಮಾರಕವಾಗಿರಲ್ಲ ಎಂದು ಬಸವನಾಡು ವಿಜಯಪುರ ಜಿಲ್ಲೆಯ ಕತ್ನಳ್ಳಿ ಶ್ರೀ ಸದಾಶಿವ ಮುತ್ಯಾ ಮಠಾಧೀಶ ಶ್ರೀ ಶಿವಯ್ಯ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ.  ಸುಕ್ಷೇತ್ರ ಕತ್ನಳ್ಳಿಯಲ್ಲಿ ಯುಗಾದಿ ಅಂಗವಾಗಿ ಶ್ರೀ ಸದಾಶಿವ ಮುತ್ಯಾನ ಜಾತ್ರೆಯ ಅಂಗವಾಗಿ ನಡೆದ ಸಾಮೂಹಿಕ ವಿವಾಹದ ಬಳಿಕ ಪ್ರತಿವರ್ಷದಂತೆ ಈ ವರ್ಷವೂ ವರ್ಷದ ಭವಿಷ್ಯ ನುಡಿದ ಅವರು, ಹೊಸ ರೋಗದ ಬಗ್ಗೆ ವಿವರವಾದ ಮಾಹಿತಿ ನೀಡಿದರು. ಪ್ರಾಣಿ […]