ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ರೈತರು, ಮಹಿಳೆಯರು, ಯುವಕರಿಗೆ ಕಾಟಾ ಕಟ್.. ಕಟಾ ಕಟ್.. ಕಟಾ ಕಟ್… ಎಂದು ಪ್ರತಿ ತಿಂಗಳು ಹಣ ಸಿಗಲಿದೆ- ರಾಹುಲ ಗಾಂಧಿ

ವಿಜಯಪುರ: ಕೇಂದ್ರದಲ್ಲಿ ಇಂಡಿ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ರೈತರು, ಮಹಿಳೆಯರು ಮತ್ತು ಯುವಕರಿಗೆ ಬ್ಯಾಂಕ್ ಖಾತೆಗಳಿಗೆ ಪ್ರತಿ ತಿಂಗಳು ಕಟಾ ಕಟ್.. ಕಟಾ ಕಟ್.. ಕಟಾ ಕಟ್. ಎಂಬಂತೆ ಹಣ ಜಮೆಯಾಗಲಿದೆ ಎಂದು ಸಂಸದ ಮತ್ತು ಎಐಸಿಸಿ ರಾಷ್ಟ್ರೀಯ ಮುಖಂಡ ರಾಹುಲ ಗಾಂಧಿ ಹೇಳಿದ್ದಾರೆ. ವಿಜಯಪುರದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು. ನಮ್ಮ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ದೇಶದಲ್ಲಿರುವ ಬಡವರ ಪಟ್ಟಿ ತಯಾರಿಸಿ ಪ್ರತಿಯೊಂದು ಕುಟುಂಬದ ಓರ್ವ ಮಹಿಳೆಗೆ ಪ್ರತಿ ವರ್ಷ ರೂ. 1 ಲಕ್ಷ […]

ನಾಳೆ ಗುಮ್ಮಟ ನಗರಿಯಲ್ಲಿ ರಾಹುಲ ಗಾಂಧಿ ಪ್ರಚಾರ- ಸಿದ್ಧತೆ ಪರಿಶೀಲಿಸಿದ ಸಚಿವ ಎಂ. ಬಿ. ಪಾಟೀಲ

ವಿಜಯಪುರ: ಕಾಂಗ್ರೆಸ್ ರಾಷ್ಟ್ರೀಯ ಮುಖಂಡ ರಾಹುಲ ಗಾಂಧಿ ಅವರು ಏ. 26 ರಂದು ಶುಕ್ರವಾತ ನಗರಕ್ಕೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಅವರು ಇಂದು ಗುರುವಾರ ಬಿ.ಎಲ್.ಡಿ.ಇ ನ್ಯೂ ಕ್ಯಾಂಪಸ್ ಗೆ ಭೇಟಿ ನೀಡಿದರು. ಸಂಸದ ಮತ್ತು ಎಐಸಿಸಿ ರಾಷ್ಟ್ರೀಯ ಮುಖಂಡ ರಾಹುಲ ಗಾಂಧಿ ಅವರು ವಿಜಯಪುರ ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ಪರ ಮತಯಾಚನೆ ಮಾಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಕಾರ್ಯಕ್ರಮ ನಡೆಯಲಿರುವ ಸ್ಥಳದಲ್ಲಿ […]

ಅಭ್ಯರ್ಥಿಗಳ ಚುನಾವಣೆ ವೆಚ್ಚಗಳ ಲೆಕ್ಕಪತ್ರ ತಪಾಸಣೆ ದಿನಾಂಕ‌ ನಿಗದಿ ಪಡಿಸಿದ ಟಿ. ಭೂಬಾಲನ

ವಿಜಯಪುರ: ಪರಿಶಿಷ್ಟ ಜಾತಿ ಮೀಸಲು ಲೋಕಸಭೆ ಮತಕ್ಷೇತ್ರಕ್ಕೆ ಸ್ಪರ್ಧಿಸಿರುವ ಅಭ್ಯರ್ಥಿಗಳ ಲೆಕ್ಕಪತ್ರವನ್ನು ಜನಪ್ರತಿನಿಧಿಗಳ ಕಾಯ್ದೆ 1951 ರ ಕಲಂ 77(1)ರ ಪ್ರಕಾರ ವೆಚ್ಚ ವೀಕ್ಷಕರು ತಪಾಸಣೆ ನಡೆಸಲಿದ್ದಾರೆ. ಏಪ್ರೀಲ್ 26ರಂದು ಮೊದಲ ಮತ್ತು‌‌ ಮೇ 1ರಂದು 2ನೇ ಹಾಗೂ ಮೇ 5 ರಂದು ಬೆಳಿಗ್ಗೆ 11 ಗಂಟೆಯಿಂದ 3ನೇ ತಪಾಸಣೆ ಮಾಡಲಾಗುತ್ತಿದೆ. ಈ ನಿಗದಿತ ದಿನಗಳಂದು ಅಭ್ಯರ್ಥಿಗಳು ತಮ್ಮ ಚುನಾವಣೆ ಏಜೆಂಟರುಗಳ ಮೂಲಕ ಬಿಳಿ ಬಣ್ಣದ ದೈನಂದಿನ ಖರ್ಚು ವೆಚ್ಚಗಳ ಪುಸ್ತಕ ಭಾಗ-ಎ, ಗುಲಾಬಿ ಬಣ್ಣದ ನಗದು […]

ಸಿಂದಗಿ ಪಟ್ಟಣದಲ್ಲಿ ಕಾಂಗ್ರೆಸ್ ಸಚಿವರು, ಶಾಸಕರು, ನಾಯಕರಿಂದ ಮತಬೇಟೆ- ಪ್ರೊ. ರಾಜು ಆಲಗೂರ ಪರ ಮತಯಾಚನೆ

ವಿಜಯಪುರ: ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ಪರ ಸಾಮೂಹಿಕವಾಗಿ ಪ್ರಚಾರ ನಡೆಸುತ್ತಿರುವ ವಿಜಯಪುರ ಜಿಲ್ಲೆಯ ಸಚಿವರು, ಶಾಸಕರು ಮತ್ತು ನಾಯಕರು ಮೂರನೇ ದಿನ ಸಿಂದಗಿ ಪಟ್ಟಣದಲ್ಲಿ ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ಮತಯಾಚಿಸಿದರು. ಸಿಂದಗಿ ಪಟ್ಟಣದ ಮಾಂಗಲ್ಯ ಭವನದಲ್ಲಿ ನಡೆದ ಕಾರ್ಯಕ್ರಮವನ್ನು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ, ಜವಳಿ, ಸಕ್ಕರೆ, ಕಬ್ಬು ಅಭಿವೃದ್ಧಿ ಹಾಗೂ ಎಪಿಎಂಸಿ ಸಚಿವ ಶಿವಾನಂದ ಪಾಟೀಲ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಎಂ. […]

ಮಹಿಳೆಯರ ರಕ್ಷಣೆ, ಸಶಕ್ತಿಕರಣಕ್ಕೆ ಬಿಜೆಪಿ ಪ್ರಥಮ ಆದ್ಯತೆ ನೀಡಿದೆ- ಬಿಜೆಪಿ ಮಹಿಳಾ‌ ಜಿಲ್ಲಾಧ್ಯಕ್ಷೆ ಸಪ್ನಾ ಕಣಮುಚನಾಳ

ವಿಜಯಪುರ : ದೇಶದ ರಕ್ಷಣೆ ಹಾಗೂ ಅಭಿವೃದ್ಧಿಯ ಜೊತೆಗೆ ದೇಶದಲ್ಲಿ ಮಹಿಳೆಯರ ರಕ್ಷಣೆ ಹಾಗೂ ಸಬಲೀಕರಣಕ್ಕಾಗಿ ಬಿಜೆಪಿ ಪಕ್ಷ ಅಧಿಕಾರವಕಾಶ ಸಿಕ್ಕಾಗಲೆಲ್ಲಾ ಪ್ರಥಮ ಆದ್ಯತೆ ನೀಡಿ ಹಲವಾರು ಮಹಿಳಾಪರ ಯೋಜನೆಗಳನ್ನು ಅನುಷ್ಠಾನಕ್ಕೆ ತಂದು ಮಹಿಳಾ‌ ಸಶಕ್ತಿಕರಣಗೊಳಿಸಲು ಶ್ರಮಿಸುತ್ತಿದೆ ಎಂದು ಬಿಜೆಪಿ ಮಹಿಳಾ ಮೊರ್ಚಾ ಜಿಲ್ಲಾಧ್ಯಕ್ಷೆ ಸಪ್ನಾ ಕಣಮುಚನಾಳ ಹೇಳಿದ್ದಾರೆ.   ನಗರದ ಬಿಜೆಪಿ‌ ಚುನಾವಣಾ ಕಾರ್ಯಾಲಯದಲ್ಲಿ ಆಯೋಜಿಸಲಾಗಿದ್ದ ಬಿಜೆಪಿ ಮಹಿಳಾ‌ ಮೊರ್ಚಾದ ಜಿಲ್ಲಾ ನೂತನ ಪದಾಧಿಕಾರಿಗಳ‌ ಪದಗ್ರಹಣ ಸಮಾರಂಭದಲ್ಲಿ ಅವರು ಮಾತನಾಡಿದರು. ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ […]

ದ್ರಾಕ್ಷಿನಾಡು ತಿಕೋಟಾದಲ್ಲಿ ಕಾಂಗ್ರೆಸ್ ಚುನಾವಣೆ ಕಹಳೆ- ಕಾಂಗ್ರೆಸ್ ನಾಯಕರಿಂದ ಸಾಮೂಹಿಕವಾಗಿ ಪ್ರಚಾರ

ವಿಜಯಪುರ: ಕಾಂಗ್ರೆಸ್ ಅಭ್ಯರ್ಥಿ ಪ್ರೊ ರಾಜು ಆಲಗೂರ ಪರ ಸಾಮೂಹಿಕ ಪ್ರಚಾರ ಮಾಡುತ್ತಿರುವ ಜಿಲ್ಲೆಯ ಸಚಿವರು, ಶಾಸಕರು ಮತ್ತು ಮುಖಂಡರು ಇಂದು ಮಂಗಳವಾರ ದ್ರಾಕ್ಷಿನಾಡು ತಿಕೋಟಾದಲ್ಲಿ ಭರ್ಜರಿ ಪ್ರಚಾರ ನಡೆಸಿದರು. ಜತ್ ರಸ್ತೆಯಲ್ಲಿ ಆಯೋಜಿಸಲಾಗಿದ್ದ ಬೃಹತ್ ಕಾರ್ಯಕ್ರಮವನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ. ಬಿ. ಪಾಟೀಲ, ಜವಳಿ, ಸಕ್ಕರೆ ಮತ್ತು ಎಪಿಎಂಸಿ ಸಚಿವ ಶಿವಾನಂದ ಪಾಟೀಲ, ಮತ್ತು ಶಾಸಕರು ಸಾಮೂಹಿಕವಾಗಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜನ ಎಸ್. ಲೋಣಿ, ಜಿಲ್ಲೆಯಲ್ಲಿ […]

ದೇಶದ ಸುರಕ್ಷತೆ, ಅಭಿವೃದ್ಧಿಗಾಗಿ ಮೋದಿಯನ್ನು ಮತ್ತೋಮ್ಮೆ ಪ್ರಧಾನಿ ಮಾಡೋಣ- ಸಂಸದ ರಮೇಶ ಜಿಗಜಿಣಗಿ

ವಿಜಯಪುರ: ಪ್ರಧಾನಿ ನರೇಂದ್ರ ಮೋದಿ ಅವರಿಂದ ದೇಶ ಸುರಕ್ಷಿತವಾಗಿದೆ.  ಎಲ್ಲಾ ಕ್ಷೇತ್ರಗಳಲ್ಲಿಯೂ ಅಭಿವೃದ್ಧಿ ಆಗುತ್ತಿದೆ. ಅವರನ್ನು ಮತ್ತೊಮ್ಮೆ ಪ್ರಧಾನಿಯಾಗಿ ತಮ್ಮ ಸೇವೆ ಮಾಡಲು ಬೆಂಬಲಿಸಬೇಕು ಎಂದು ಸಂಸದ ರಮೇಶ ಜಿಗಜಿಣಗಿ ಮನವಿ ಮಾಡಿದರು. ವಿಜಯಪುರ ನಗರ ಮತಕ್ಷೇತ್ರ ವ್ಯಾಪ್ತಿಯ ವಾರ್ಡ 26ರ ವ್ಯಾಪ್ತಿಯ ದಿವಟಗೇರಿ ಗಲ್ಲಿಯಲ್ಲಿ ಬಿಜೆಪಿ ನಗರ ಮಂಡಲ ವತಿಯಿಂದ ವಿಜಯಪುರ ಲೋಕಸಭೆ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಮೇಶ ಜಿಗಜಿಣಗಿ ಅವರ ಪ್ರಚಾರದ ಅಂಗವಾಗಿ ಆಯೋಜಿಸಲಾಗಿದ್ದ ಬಾವುರಾವ ದೇಶಪಾಂಡೆ ಮಹಾಶಕ್ತಿ ಕೇಂದ್ರದ ಸಭೆಯಲ್ಲಿ ಅವರು ಮಾತನಾಡಿದರು. […]

ಏ. 26 ರಂದು ರಾಹುಲ ಗಾಂಧಿ ವಿಜಯಪುರದಲ್ಲಿ ಪ್ರಚಾರ- ಬೃಹತ್ ಕಾರ್ಯಕ್ರಮ ಆಯೋಜನೆ- ಸಚಿವ ಎಂ. ಬಿ. ಪಾಟೀಲ

ವಿಜಯಪುರ: ಸಂಸದ ಮತ್ತು ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ ಗಾಂಧಿ ಅವರು ಏಪ್ರಿಲ್ 26 ರಂದು ವಿಜಯಪುರ ಪ್ರವಾಸ ಕೈಗೊಳ್ಳುತ್ತಿದ್ದು, ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ಪರ ಪ್ರಚಾರ ನಡೆಸಲಿದ್ದಾರೆ ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ತಿಳಿಸಿದ್ದಾರೆ. ವಿಜಯಪುರದಲ್ಲಿ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಏ. 26 ರಂದು ಬೆಳಿಗ್ಗೆ 11ಕ್ಕೆ ನಗರದ ಸೋಲಾಪುರ ರಸ್ತೆಯಲ್ಲಿರುವ ಬಿ.ಎಲ್.ಡಿ.ಇ ನ್ಯೂಸ್ ಕ್ಯಾಂಪಸ್ ನಲ್ಲಿ ಬೃಹತ್ ಕಾರ್ಯಕ್ರಮ ಆಯೋಜಿಸಲಾಗಿದೆ.  […]

ದೀಪ ಆರುವಾಗ ಬಹಳ ಉರಿಯುತ್ತೆ ಎರಡೂ ಜಿಲ್ಲೆಗಳಲ್ಲಿ 2 ಗೊಡ್ಮೆಮ್ಮೆಗಳಿವೆ ಬಿಜೆಪಿ ಮುಖಂಡರ ವಿರುದ್ಧ ಸಚಿವ ಶಿವಾನಂದ ಎಸ್ ಪಾಟೀಲ ವಾಗ್ದಾಳಿ

ವಿಜಯಪುರ: ಬಿಜೆಪಿ ಸ್ಟಾರ್ ಪ್ರಚಾರಕ ಮತ್ತು ಶಾಸಕ ಬಸನಗೌಡ ಪಾಟೀಲ ಯತ್ನಾಳ ದೀಪ ಆರುವಾಗ ಬಹಳ ಉರಿಯುವಂತೆ ವರ್ತಿಸುತ್ತಿದ್ದಾರೆ.  ಮಂಗನಿಗೆ ಮದ್ಯ ಕುಡಿಸಿದಂತೆ ಮಾತನಾಡುತ್ತಾರೆ.  ಗಂಡಸ್ತನ ಇದ್ದರೆ ಲೋಕಸಭೆ ಚುನಾವಣೆಯ ನಂತರವೇ ವಿಜಯಪುರದಿಂದ ಸ್ಪರ್ಧೆ ಮಾಡೋಣ ಎಂದು ಸಚಿವ ಶಿವಾನಂದ ಎಸ್. ಪಾಟೀಲ ಸವಾಲು ಹಾಕಿದ್ದಾರೆ. ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಶಾಸಕ ಯತ್ನಾಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ವಿಜಯಪುರದಲ್ಲಿ ಒಬ್ಬ ಸ್ಟಾರ್ ಪ್ರಚಾರಕರಿದ್ದಾರೆ.  ದೀಪ ಆರುವಾಗ ಬಹಳ […]

ಕೈ ಸಚಿವ, ಶಾಸಕರಿಂದ ಒಗ್ಗಟ್ಟು ಪ್ರದರ್ಶನ- ಬಸವನಾಡಿನಿಂದ ಪ್ರೊ. ರಾಜು ಆಲಗೂರ ಪ್ರಚಾರಕ್ಕೆ ಚಾಲನೆ

ವಿಜಯಪುರ: ಜಿಲ್ಲೆಯ ಕಾಂಗ್ರೆಸ್ ಸಚಿವರು, ಶಾಸಕರು ಮತ್ತು ಮುಖಂಡರು ಒಗ್ಗಟ್ಟು ಪ್ರದರ್ಶನ ಮಾಡಿದ್ದು, ಬಸವಣ್ಣನ ತವರು ಬಸವನ ಬಾಗೇವಾಡಿಯಿಂದ ಕೈ ಅಭ್ಯರ್ಥಿ ಪ್ರೊ. ರಾಜು ಆಲಗೂರ ಪರ ಪ್ರಚಾರಕ್ಕೆ ಚಾಲನೆ ನೀಡಿದ್ದಾರೆ. ಬಸವನ ಬಾಗೇವಾಡಿ ಪಟ್ಟಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಚಿವರಾದ ಎಂ. ಬಿ. ಪಾಟೀಲ, ಶಿವಾನಂದ ಎಸ್. ಪಾಟೀಲ, ಶಾಸಕರಾದ ಸಿ. ಎಸ್. ನಾಡಗೌಡ, ಯಶವಂತರಾಯಗೌಡ ವಿ. ಪಾಟೀಲ, ವಿಠ್ಠಲ ಧೋಂಡಿಬಾ ಕಟಕದೊಂಡ, ಅಶೋಕ ಮನಗೂಳಿ, ನಿಗಮದ ಅಧ್ಯಕ್ಷೆ ಕಾಂತಾ ನಾಯಕ, ಮಾಜಿ ಶಾಸಕ ಶರಣಪ್ಪ ಸುಣಗಾರ, […]