ಹಾಲುಮತದ ಪಟ್ಟದ ಪೂಜಾರಿಗಳ ಹಾಗೂ ಜಡೆತಲೆ ಪೂಜಾರಿಗಳ 15ನೆಯ ಧರ್ಮಸಭೆ

ವಿಜಯಪುರ: ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಯನಾರಳ ಗ್ರಾಮದ ಶ್ರೀ ಮಾಯಮ್ಮ ದೇವಿಯ ಗುಡಿಯ ಆವರಣದಲ್ಲಿ ಹಾಲುಮತದ ಪಟ್ಟದ ಪೂಜಾರಿಗಳ ಹಾಗೂ ಜಡೆತಲೆ ಪೂಜಾರಿಗಳ 15ನೆಯ ಧರ್ಮಸಭೆಯನ್ನು ನಡೆಯಿತು.  ಧರ್ಮಸಭೆಯ ಅಧ್ಯಕ್ಷತೆ ವಹಿಸಿದ್ದ ಯರನಾಳ ಶ್ರೀ ಮಾಯಮ್ಮ ದೇವಿ ದೇವಸ್ಥಾನ ಪೂಜಾರಿ ಶ್ರೀ ಸಂಗಪ್ಪ ಮುತ್ಯಾ ಪೂಜಾರಿ ಜಿಲ್ಲೆಯ ಜಿಲ್ಲೆಗಳ ಪೂಜಾರಿಗಳನ್ನು ಸ್ವಾಗತಿಸಿ ಮಾತನಾಡಿದರು. ಡಿಸಿಸಿ ಬ್ಯಾಂಕ್ ನಿರ್ದೇಶಕ ಬೀರಪ್ಪ ಜುಮನಾಳ ಮಾತನಾಡಿ, ಸಂಘಟನೆಯಲ್ಲಿರುವ ಎಲ್ಲಾ ಪಟ್ಟದ ಪೂಜ್ಯರು ಮತ್ತು ಜಡೆತಲೆ ಪೂಜಾರಿಗಳು ಆರಾಧಿಸುವ ದೇವತೆಗಳ ಚರಿತ್ರೆಗಳನ್ನು […]

ವಿಜಯಪುರ ನಗರದ ಐತಿಹಾಸಿಕ ಸ್ಮಾರಕ ತಾಜಬಾವಡಿಗೆ ಜಿಲ್ಲಾಧಿಕಾರಿಗಳ ಭೇಟಿ

ವಿಜಯಪುರ: ಜಿಲ್ಲಾಧಿಕಾರಿ ಟಿ. ಭೂಬಾಲನ್ ಅವರು ನಾನಾ ಅಧಿಕಾರಿಗಳೊಂದಿಗೆ ನಗರದಲ್ಲಿರುವ ಐತಿಹಾಸಿಕ ತೆರೆದ ಬಾವಿ ತಾಜಬಾವಡಿಗೆ ಭೇಟಿ ನೀಡಿದರು.  ರಾಜ್ಯದ ಸ್ಮಾರಕ ಸಂರಕ್ಷಣೆ ಮತ್ತು ಮೂಲಭೂತ ಸೌಕರ್ಯಗಳನ್ನು ಒದಗಿಸಿ ಸ್ಮಾರಕಗಳನ್ನು ಅಭಿವೃದ್ಧಿ ಪಡಿಸಿ ಕಾರ್ಫೊರೇಟ್ ಸಾಮಾಜಿಕ ಹೊಣೆಗಾರಿಕೆ (ಸಿಎಸ್‌ಆರ್) ಅಡಿಯಲ್ಲಿ ಸ್ಮಾರಕಗಳ ದತ್ತು ಪಡೆಯಲು ಅವಕಾಶವನ್ನು ಕಲ್ಪಿಸಿ ದತ್ತು ಯೋಜನೆಯನ್ನು ಜಾರಿಗೊಳಿಸಲಾಗಿರುತ್ತದೆ.  ತಾಜಬಾವಡಿ ಸ್ಮಾರಕವನ್ನು ಮುಂಬೈನ ವಿಶ್ವ ಸ್ಮಾರಕ ನಿಧಿ ಸಂಸ್ಥೆ ದತ್ತು ಪಡೆದಿದೆ.  ಈ ಸ್ಮಾರಕದಲ್ಲಿ ಸಂರಕ್ಷಣೆ ಮತ್ತು ಪ್ರವಾಸಿ ಮೂಲಭೂತ ಸೌಕರ್ಯಗಳು, ಸೌಂದರೀಕರಣ, ಸುಧಾರಿತ […]

ವಿಜಯಪುರ ನಗರದಲ್ಲಿ ಏಳು ತಾಯಿ ಮಕ್ಕಳ ದೇವಸ್ಥಾನ ಲೋಕಾರ್ಪಣೆ- ಗಮನ ಸೆಳೆದ ಭವ್ಯ ಕಾರ್ಯಕ್ರಮ

ವಿಜಯಪುರ: ನಗರದ ಎಸ್. ಎಸ್. ಕಾಲೇಜ್ ರಸ್ತೆಯಲ್ಲಿರುವ ಭಜಂತ್ರಿ ಗಲ್ಲಿಯ ಶ್ರೀ ಏಳು ಮಕ್ಕಳ ತಾಯಿಯ ದೇವಸ್ಥಾನ ನೂತನ ಕಟ್ಟಡ ಉದ್ಘಾಟನೆ, ಪ್ರಾಣ ಪ್ರತಿಷ್ಠಾಪನೆ ಹಾಗೂ ಕಳಸಾರೋಹಣ ಕಾರ್ಯಕ್ರಮ ಅದ್ಧೂರಿಯಾಗಿ ನಡೆಯಿತು. ಕಾರ್ಯಕ್ರಮದ ಅಂಗವಾಗಿ ಪೂರ್ಣಕುಂಭ ಹೊತ್ತ ಮಹಿಳೆಯರು ನಗರದ ಪ್ರಮುಖ ರಸ್ತೆಗಳಲ್ಲಿ ವಾದ್ಯ ಮೇಳದೊಂದಿಗೆ ಭವ್ಯ ಮೆರವಣಿಗೆ ನಡೆಸಿದರು.  ಮಧ್ಯಾಹ್ನ ಅನ್ನ ಪ್ರಸಾದ ಸಂಜೆ ಮೂರ್ತಿ ಪ್ರತಿಷ್ಠಾಪನೆನ ಕಾರ್ಯಕ್ರಮ ನಡೆಯಿತು.  ದೇವಾಲಯದ ಆಡಳಿತ ಮಂಡಳಿ ಸದಸ್ಯರು, ನಾನಾ ಸ್ವಾಮೀಜಿಗಳು, ಹಿರಿಯರು, ಸೇರಿದಂತೆ ಸಾವಿರಾರು ಭಕ್ತರು ಈ […]

ಛತ್ರಪತಿ ಶಿವಾಜಿ ಮಹಾರಾಜರ ಆದರ್ಶಮಯ ಜೀವನವನ್ನು ಯುವಕರು ಅರಿಯಬೇಕು: ಅಪರ ಜಿಲ್ಲಾದಿಕಾರಿ ಮಹಾದೇವ ಮುರಗಿ

ವಿಜಯಪುರ: ಛತ್ರಪತಿ ಶಿವಾಜಿಯ ಶೌರ್ಯ, ಸಾಹಸ, ರಾಷ್ಟ್ರಭಕ್ತಿ ಹಾಗೂ ಅವರ ಆದರ್ಶ ಅರಿತುಕೊಳ್ಳುವುದರ ಜೊತೆಗೆ, ಅವರ ಜೀವನ ಮೌಲ್ಯಗಳು ಮುಂದಿನ ಜನಾಂಗಕ್ಕೆ ತಿಳಿಸಬೇಕು. ಅವರ ಜೀವನಾದರ್ಶ ಇಂದಿನ ಯುವಕರು ಮಾದರಿಯಾಗಿ ಇಟ್ಟುಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಹೇಳಿದ್ದಾರೆ.  ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆಯೋಜಿಸಲಾದ ಛತ್ರಪತಿ ಶಿವಾಜಿ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಛತ್ರಪತಿ ಶಿವಾಜಿಯ ದೈರ್ಯ, ಸಾಹಸದ […]

ಕುಡಿಯುವ ನೀರು ಪೂರೈಸಲು 1.80 ಟಿಎಂಸಿ ನೀರು ಬಿಡುಗಡೆ- ಟೇಲ್ ಎಂಡ್ ವರೆಗೆ ತಲುಪಿಸಲು ಕ್ರಮ ಕೈಗೊಳ್ಳಿ- ಡಿಸಿ ಟಿ. ಭೂಬಾಲನ್

ವಿಜಯಪುರ: ಆಲಮಟ್ಟಿ ಜಲಾಶಯದಿಂದ ಫೆ.19ರಿಂದ ಮಾರ್ಚ 10ರವರೆಗೆ ಮುಳವಾಡ ಏತ ನೀರಾವರಿಯ ಹಾಗೂ ಚಿಮ್ಮಲಗಿ ಏತ ನೀರಾವರಿ ಕಾಲುವೆ ವ್ಯಾಪ್ತಿಯ 96 ಕೆರೆಗೆಳಿಗೆ 1.8 ಟಿಎಂಸಿ ನೀರು ಕುಡಿಯುವ ಉದ್ಧೇಶಕ್ಕಾಗಿ ನೀರು ಹರಿಸಲಾಗುತ್ತಿದ್ದು, ಕೊನೆಯಂಚಿನವರೆಗೆ ಸಮರ್ಪಕವಾಗಿ ನೀರು ಹರಿಸಲು ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚನೆ ನೀಡಿದರು. ಜಿಲ್ಲಾಧಿಕಾರಿ ಕಚೇರಿಯ ಕೆಸ್ವಾನ್ ಕಚೇರಿಯಲ್ಲಿ ವಿಡಿಯೋ ಕಾನ್ಪರೆನ್ಸ್ ಮೂಲಕ ನಡೆದ ನೀರು ನಿರ್ವಹಣೆ ಸಭೆಯಲ್ಲಿ ಮಾತನಾಡಿದ ಅವರು, ಜನ-ಜಾನುವಾರುಗಳಿಗೆ ಕುಡಿಯುವ ಉದ್ದೇಶಕ್ಕಾಗಿ ನೀರು ಹರಿಸಲಾಗುತ್ತಿದ್ದು, ಅನ್ಯ ಉದೇಶಕ್ಕಾಗಿ […]

ಸಮಾಜ ಕಲ್ಯಾಣ ಇಲಾಖೆ, ವಸತಿ ಶಾಲೆಗಳ ಪ್ರವೇಶ ದ್ವಾರದಲ್ಲಿ ಕುವೆಂಪು ಬರಹದ ಶಬ್ದಗಳು ಬದಲು- ಜ್ಞಾನದೇಗುಲವಿದು ಧೈರ್ಯವಾಗಿ ಪ್ರಶ್ನಿಸಿ ಎಂದು ಬದಲಾವಣೆ

ವಿಜಯಪುರ: ಜ್ಞಾನ ದೇಗುಲವಿದು, ಕೈ ಮುಗಿದು ಒಳಗೆ ಬಾ ಎಂದು ರಾಷ್ಟ್ರಕವಿ ಕುವೆಂಪು ಅವರು ಮಕ್ಕಳಿಗೆ ಶಾಲೆಗಳ ಬಗ್ಗೆ ಧನ್ಯತಾ ಭಾವ ಬರಲಿ ಎಂದು ಕವನ ರಚಿಸಿದ್ದಾರೆ.  ಬಹುತೇಕ ಶಾಲೆಗಳಲ್ಲಿ ಪ್ರವೇಶ ದ್ವಾರಗಳಲ್ಲಿಯೇ ಈ ಸಾಲುಗಳು ರಾರಾಜಿಸುತ್ತವೆ.  ಅಷ್ಟೇ ಅಲ್ಲ, ಮಕ್ಕಳಲ್ಲಿ ಶಾಲೆ ಮತ್ತು ಅಲ್ಲಿ ವಿದ್ಯೆ ಬೋಧಿಸುವ ಶಿಕ್ಷಕರ ಬಗ್ಗೆ ಗೌರವ ಭಾವನೆಗಳನ್ನು ಹೆಚ್ಚಿಸುತ್ತವೆ. ಆದರೆ, ಸಮಾಜ ಕಲ್ಯಾಣ ಇಲಾಖೆ ಮತ್ತು ವಸತಿ ಶಾಲೆಗಳ ಪ್ರವೇಶ ದ್ವಾರದ ಮೇಲೆ ಜ್ಞಾನ ದೇಗುಲವಿದು, ದೈರ್ಯವಾಗಿ ಪ್ರಶ್ನಿಸಿ ಎಂದು […]

ಫೆ.24ರಂದು ಇಂಡಿಯಲ್ಲಿ ಜಿಲ್ಲಾ ಗಾಣಿಗ ಸಮಾವೇಶ- ನೂತನ ಸಭಾಭವನ ಭೂಮಿಪೂಜೆ ಕಾರ್ಯಕ್ರಮ- ಎಂ. ಎಸ್. ಲೋಣಿ

ವಿಜಯಪುರ: ಫೆ. 24ರಂದು ಇಂಡಿಯಲ್ಲಿ ವಿಜಯಪುರ ಜಿಲ್ಲಾ‌ ಗಾಣಿಗ ಸಂಘದ ಬೃಹತ್ ಸಮಾವೇಶ ನಡೆಯಲಿದೆ ಎಂದು ಅಖಿಲ ಭಾರತ ಗಾಣಿಗ ಸಂಘದ ರಾಜ್ಯ ಕಾರ್ಯಾಧ್ಯಕ್ಷ ಮಲ್ಲಿಕಾರ್ಜುನ ಲೋಣಿ ತಿಳಿಸಿದ್ದಾರೆ. ವಿಜಯಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲಾ ಗಾಣಿಗರ ಸಂಘ ಮತ್ತು ಇಂಡಿ ತಾಲೂಕು‌ ಘಟಕದ ಸಂಯುಕ್ತಾಶ್ರಯದಲ್ಲಿ ಫೆ. 24ರಂದು ಬೆಳಿಗ್ಗೆ 10.30 ಕ್ಕೆ ಇಂಡಿ ಪಟ್ಟಣದ ತಾಲೂಕು ಕ್ರೀಡಾಂಗಣದ ಬಳಿಯ ಗಾಣಿಗ ಸಮಾಜದ ಜಾಗದಲ್ಲಿ ಈ ಕಾರ್ಯಕ್ರಮ ನಡೆಯಲಿದೆ.  ಈ ಸಂದರ್ಭದಲ್ಲಿ ಶತಮಾನದ ಸಂತ ಶ್ರೀ ಸಿದ್ದೇಶ್ವರ […]

ರಾಂಪುರದಲ್ಲಿ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನೆ- ವಿದ್ಯೆ ಬೋಧಿಸಿದ ಗುರುಗಳನ್ನು ಮೆರವಣಿಗೆ ನಡೆಸಿದ ಶಿಷ್ಯಂದಿರು

ಬಾಗಲಕೋಟೆ: 20 ವರ್ಷಗಳ ಹಿಂದೆ ತಮಗೆ ವಿದ್ಯೆ ಬೋಧಿಸಿದ ಶಿಕ್ಷಕರನ್ನು ಮೆರವಣಿಗೆಯಲ್ಲಿ ಕರೆತಂದ ಶಿಷ್ಯಂದಿರು ಗುರುವಂದನೆ ಸಲ್ಲಿಸಿದ ಕಾರ್ಯಕ್ರಮ ಬಾಗಲಕೋಟೆ ತಾಲೂಕಿನ ರಾಂಪೂರದಲ್ಲಿರುವ ಸರಕಾರಿ ಪ್ರೌಢಶಾಲೆ ಸೀತಿಮನಿ ಆರ್. ಎಸ್. ಶಾಲೆಯಲ್ಲಿ ನಡೆಯಿತು.  ಈ ಶಾಲೆಯಲ್ಲಿ 2003-04ರಲ್ಲಿ ಎಸ್.ಎಸ್.ಎಲ್.ಸಿ ಪೂರ್ಣಗೊಳಿಸಿದ ವಿದ್ಯಾರ್ಥಿಗಳು ಈ ಅರ್ಥಪೂರ್ಣ ಗುರುವಂದನೆ ಮತ್ತು ಸ್ನೇಹ ಸಮ್ಮಿಲನ ಕಾರ್ಯಕ್ರಮ ಆಯೋಜಿಸಿ ಗಮನ ಸೆಳೆದರು. ಕಾರ್ಯಕ್ರಮ ಪ್ರಾರಂಭಕ್ಕೂ ಮುಂಚೆ ಊರಿನ ಪ್ರಮುಖ ಬೀದಿಗಳಲ್ಲಿ ಶಿಕ್ಷಕರನ್ನು ಅದ್ಧೂರಿಯಾಗಿ ಮೆರವಣಿಗೆ ಮೂಲಕ ಶಾಲೆಗೆ ಕರೆತರಲಾಯಿತು.  ಈ ಕಾರ್ಯಕ್ರಮದಲ್ಲಿ ಹಳೆ […]

ಬಸವಾದಿ ಶರಣರ ವೇಷಭೂಷಣ ಧರಿಸಿ ಗಮನ ಸೆಳೆದ ಆಕ್ಸಫರ್ಡ್ ಶಾಲೆಯ ಮಕ್ಕಳು

ವಿಜಯಪುರ: ನಗರದ ಆಕ್ಸಫರ್ಡ್ ಶಾಲೆಯ ವಿದ್ಯಾರ್ಥಿಗಳು ಬಸವಾದಿ ಶರಣರ ವೇಷಭೂಷಣಗಳನ್ನು ಧರಿಸಿ ಗಮನ ಸೆಳೆದಿದ್ದಾರೆ. ನಗರದ ಜಿ. ಪಂ. ಸಭಾಂಗಣದಲ್ಲಿ ಜಿಲ್ಲಾಡಳಿತದ ವತಿಯಿಂದ ಆಯೋಜಿಸಲಾಗಿದ್ದ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಭಾವಚಿತ್ರ ಅನಾವರಣ ಕಾರ್ಯಕ್ರಮದಲ್ಲಿ ಪ್ರತಿಷ್ಠಿತ ಆಕ್ಸ್ಫರ್ಡ್ ಶಿಕ್ಷಣ ಸಂಸ್ಥೆಯ ಮುದ್ದು ಮಕ್ಕಳು ಬಸವಾದಿ ಶರಣರ ವೇಷಭೂಷಣಗಳನ್ನು ಧರಿಸಿ ಸಮಾರಂಭಕ್ಕೆ ಆಗಮಿಸಿ ಎಲ್ಲರ ಗಮನವನ್ನು ಸೆಳೆದರು. ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಭಾವಚಿತ್ರ ಅನಾವರಣಗೊಳಿಸಿದ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಅವರಿಗೆ ಬಸವಾದಿ ಶರಣರ […]

ಬಸವಾದಿ ಶರಣರ ಆಶಯದಂತೆ ಸರಕಾರದ ಆಡಳಿತ ನಡೆಸುತ್ತಿದೆ- ಸಚಿವ ಡಾ. ಎಂ. ಬಿ. ಪಾಟೀಲ

ವಿಜಯಪುರ: ಜಿಲ್ಲೆಯ ಬಸವನ ಬಾಗೇವಾಡಿಯ ಇಂಗಳೇಶ್ವರಲ್ಲಿ ಜನಿಸಿದ ಅಣ್ಣ ಬಸವಣ್ಣ ಅವರನ್ನು ಕರ್ನಾಟಕ ರಾಜ್ಯದ ಸಾಂಸ್ಕೃತಿಕ ನಾಯಕ ಎಂದು ಕ್ಯಾಬಿನೆಟ್‍ನಲ್ಲಿ ನಿರ್ಣಯ ಮಾಡುವ ಮೂಲಕ ಬಸವಣ್ಣನವರಿಗೆ ಗೌರವ ಸೂಚಿಸಲಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ. ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ವಿಶ್ವಗುರು ಬಸವಣ್ಣ ಕರ್ನಾಟಕದ ಸಾಂಸ್ಕøತಿಕ ನಾಯಕ ಭಾವಚಿತ್ರ ಅನಾವರಣಗೊಳಿಸಿ, ಪುಷ್ಪಾರ್ಚನೆ ಮಾಡಿ ಅವರು ಮಾತನಾಡಿದರು. ಮುಖ್ಯಮಂತ್ರಿಗಳ ಬಳಿ ಈ ಬಗ್ಗೆ […]