ದೇಶದ ಅಭ್ಯುದಯಕ್ಕಾಗಿ ಕಡ್ಡಾಯವಾಗಿ ಮತದಾನ ಮಾಡಿ- ಸಂತೋಶ ಕುಂದರ ಕರೆ

ವಿಜಯಪುರ: ದೇಶದ ಅಭ್ಯುದಯಕ್ಕೆ ಎಲ್ಲ ಅರ್ಹ ಮತದಾರರು ಮತದಾನದ ಹಕ್ಕನ್ನು ಚಲಾಯಿಸಬೇಕು. ಸಂವಿಧಾನ ಕಲ್ಪಿಸಿದ ಮತದಾನದಿಂದ ಯಾರೂ ವಂಚಿತರಾಗದೇ ಪ್ರತಿಯೊಬ್ಬರು ಮತದಾನ ಮಾಡುವ ಮೂಲಕ ತಮ್ಮ ಹಕ್ಕನ್ನು ಚಲಾಯಿಸುವಂತೆ ಹಿರಿಯ ಸಿವಿಲ್ ನ್ಯಾಯಾಧೀಶ ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಂತೋಷ ಕುಂದರ ಕರೆ ನೀಡಿದ್ದಾರೆ. ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ನ್ಯಾಯಾಂಗ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಪೊಲೀಸ್ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ […]

ಎನ್ಇಪಿ ಮುಂದುವರಿಸಲು ಆಗ್ರಹ- ಪಿಪಲ್ಸ್ ಫೋರಮ್ ಫಾರ್ ಕರ್ನಾಟಕ ಎಜುಕೇಶನ್ ನಿಂದ ರಾಜ್ಯಪಾಲರಿಗೆ ವರದಿ ಸಲ್ಲಿಕೆ

ಬೆಂಗಳೂರು: ರಾಷ್ಟ್ರೀಯ ಶಿಕ್ಷಣ ನೀತಿ(ಎನ್‌ಇಪಿ) ಮುಂದುವರೆಸುವಂತೆ ಆಗ್ರಹಿಸಿ ಪಿಪಲ್ಸ್ ಫೋರಮ್ ಫಾರ್ ಕರ್ನಾಟಕ ಎಜುಕೇಶಷನ್ ವತಿಯಿಂದ ರಾಜ್ಯಪಾಲ ಥಾವರಚಂದ ಗೆಹ್ಲೊಟ್ ಅವರಿಗೆ ವರದಿಯನ್ನು ಸಲ್ಲಿಸಲಾಯಿತು. ರಾಷ್ಟ್ರೀಯ ಶಿಕ್ಷಣ ನೀತಿ-2020 ಅಳವಡಿಕೆಯನ್ನು ರಾಜ್ಯದಲ್ಲಿ ಮುಂದುವರೆಸುವಂತೆ ಆಗ್ರಹಿಸಿ ಫೋರಮ್ ವತಿಯಿಂದ ರಾಜ್ಯಾದ್ಯಂತ ಸಹಿ ಸಂಗ್ರಹಿಸಲಾಗಿದೆ.  34 ಶೈಕ್ಷಣಿಕ ಜಿಲ್ಲೆಗಳ 168 ತಾಲೂಕುಗಳ 2630 ಶಾಲೆಗಳು, 83600 ಶಿಕ್ಷಕರು ಮತ್ತು ಆಡಳಿತ ಮಂಡಳಿಯ ಸದಸ್ಯರು, 26980 ಪೋಷಕರು, 19327 ಆನಲೈನ್ ಮೂಲಕ ಕ್ಯಾಂಪೇನ್ ಸಹಿ, 8,88,173 ವಿದ್ಯಾರ್ಥಿಗಳು ಸೇರಿ ಒಟ್ಟು 10 […]

ಓಐಡಿವೈಓ ವತಿಯಿಂದ ನೇತಾಜಿ ಸುಭಾಸಚಂದ್ರ ಬೋಸ ಅವರ 127ನೇ ಜನ್ಮದಿನಾಚರಣೆ

ವಿಜಯಪುರ: ಎಐಡಿವೈಓ ವತಿಯಿಂದ ನಗರದ ಹುತಾತ್ಮ ಸರ್ಕಲ್ ಮತ್ತು ಸರಕಾರಿ ಐಟಿಐ ಕಾಲೇಜ್‌ನಲ್ಲಿ ಎಐಡಿವೈಒ ಸಂಘಟನೆಯ ನೇತೃತ್ವದಲ್ಲಿ ನೇತಾಜಿ ಸುಭಾಸಚಂದ್ರ ಬೋಸ್‌ರವರ 127ನೇ ಜನ್ಮದಿನಾಚರಣೆ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಎಐಡಿವೈಒ ರಾಜ್ಯ ಕಾರ್ಯದರ್ಶಿ ಸಿದ್ದಲಿಂಗ ಬಾಗೇವಾಡಿ, ಇಂದಿನ ಯುವಜನರಿಗೆ ನೇತಾಜಿಯವರ ಜೀವನ ಚರಿತ್ರೆ ಆದರ್ಶವಾಗಿರಬೇಕು.  ನೇತಾಜಿಯವರು ಜೀವನದುದ್ದಕ್ಕೂ ಸಂಧಾನತೀತವಾಗಿ ಬ್ರಿಟೀಷರ ವಿರುದ್ಧ ಹೋರಾಟ ಮಾಡಿದರು.  ಎರಡು ಬಾರಿ ಕಾಂಗ್ರೆಸ್ ಸಮ್ಮೇಳನದ ಅಧ್ಯಕ್ಷರಾಗಿ ಪೂರ್ಣ ಸ್ವರಾಜ್ಯದ ಬಗ್ಗೆ ಹಾಗೂ ಕಾರ್ಮಿಕ ವರ್ಗ ಅಧಿಕಾರಕ್ಕೆ ಬರಬೇಕು ಎಂದು ಸ್ಪಷ್ಟವಾದ […]

ಆರೋಗ್ಯ ಎಲ್ಲ ಸಂಪತ್ತಿಗಿಂತ ದೊಡ್ಡದು- ಹಿಟ್ಟಿನಹಳ್ಳಿ ಕೃಷಿ ಕಾಲೇಜಿನ ವಿದ್ಯಾಧಿಕಾರಿ ಡಾ. ಭೀಮಪ್ಪ

ವಿಜಯಪುರ: ಮನುಷ್ಯನಿಗೆ ಎಲ್ಲಾ ಸಂಪತ್ತುಗಳಿಗಿಂತ ಆರೋಗ್ಯ ಸಂಪತ್ತು ಬಹಳ ದೊಡ್ಡದು.  ಅದನ್ನು ಸರಿಯಾಗಿ ಕಾಯ್ದುಕೊಳ್ಳಬೇಕೆಂದು ವಿಜಯಪುರ ಕೃಷಿ ಮಹಾವಿದ್ಯಾಲಯದ ವಿದ್ಯಾಧಿಕಾರಿ ಡಾ. ಬೀಮಪ್ಪ ಹೇಳಿದರು. ರಾಜ್ಯ ಏಡ್ಸ್ ಪ್ರಿವೆನ್ಷನ್ ಸೊಸೈಟಿ ಬೆಂಗಳೂರ. ಜಿಲ್ಲಾ ಆಡಳಿತ. ಜಿಲ್ಲಾ ಪಂಚಾಯಿತಿ. ಹಿಟ್ಟಿನಹಳ್ಳಿ ಕೃಷಿ ಮಹಾವಿದ್ಯಾಲಯ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ತಡೆಗಟ್ಟುವ ಘಟಕ. ಜಿಲ್ಲಾ ಆಸ್ಪತ್ರೆ ಪಿಪಿಟಿಸಿಟಿ ವಿಭಾಗ ವಿಜಯಪುರ. ಇವುಗಳ ಸಂಯುಕ್ತ ಆಶ್ರಯದಲ್ಲಿ ಎರಡನೇ ಹಂತದ ಸಮುದಾಯ ಆಧಾರಿತ ಆರೋಗ್ಯ […]

ಆಲಮಟ್ಟಿ ಜವಾಹರ ನವೋದಯ ವಿದ್ಯಾಲಯಕ್ಕೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಭೇಟಿ : ಪರಿಶೀಲನೆ

ವಿಜಯಪುರ:  ನಿಡಗುಂದಿ ತಾಲೂಕಿನ ಆಲಮಟ್ಟಿಯ ಜವಾಹರ ನವೋದಯ ವಿದ್ಯಾಲಯಕ್ಕೆ ಜಿಲ್ಲಾಧಿಕಾರಿ ಟಿ. ಭೂಬಾಲನ್ ಅವರು ಭೇಟಿ ನೀಡಿ ಅಲ್ಲಿನ ಸ್ಥಿತಿಗತಿಗಳ ಕುರಿತು ಪರಿಶೀಲನೆ ನಡೆಸಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅಗತ್ಯ ಸೂಚನೆಗಳನ್ನು ನೀಡಿದರು. ವಿದ್ಯಾಲಯದ ಸಲಹಾ ಸಮಿತಿ ಸಭೆ ನಡೆಸಿದ ಅವರು, ವಿದ್ಯಾಲಯದ ಬೋಧನಾ ಗುಣಮಟ್ಟವನ್ನು ಹೆಚ್ಚಿಸಿ ಫಲಿತಾಂಶ ಹೆಚ್ಚಳಕ್ಕೆ ಕ್ರಮ ವಹಿಸಬೇಕು. ಮಕ್ಕಳ ಸರ್ವಾಂಗೀಣ ವ್ಯಕ್ತಿತ್ವ ಬೆಳವಣಿಗೆ ದೃಷ್ಟಿಯಿಂದ ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಿಗೆ ಆದ್ಯತೆ ನೀಡಿ, ಮಕ್ಕಳ ಕೌಶಲ್ಯತೆಯನ್ನು ಹೆಚ್ಚಿಸಲು ಕ್ರಿಯಾತ್ಮಕ ಚಟುವಟಿಕೆಗಳನ್ನು ಹಮ್ಮಿಕೊಳ್ಳಬೇಕು. […]

ವಿಜಯಪುರ ನಗರದ ದರ್ಗಾ ನಗರ ಆರೋಗ್ಯ ಕೇಂದ್ರದಲ್ಲಿ ವಿಶೇಷ ಆರೋಗ್ಯ ತಪಾಸಣೆ

ವಿಜಯಪುರ: ನಗರದ ದರ್ಗಾ ನಗರ ಆರೋಗ್ಯ ಕೇಂದ್ರದಲ್ಲಿ ಹಿರಿಯ ಮಹಿಳೆಯರ ವಿಶೇಷ ಆರೋಗ್ಯ ತಪಾಸಣೆಯನ್ನು ನಡೆಸಲಾಯಿತು. ನಗರದ ಖ್ಯಾತ ಸ್ತ್ರೀರೋಗ ತಜ್ಞೆ ಡಾ. ವಿದ್ಯಾ ಥೊಬ್ಬಿ ಮತ್ತು ತಂಡ ಮಹಿಳೆಯರ ಗರ್ಭಾಶಯ ಹಾಗೂ ಗರ್ಭಾಶಯ ಕೊರಳಿನ ಕ್ಯಾನ್ಸರ್ ಪತ್ತೆ ಹಚ್ಚುವ ವಿಶೇಷ ತಪಾಸಣೆ ನಡೆಸಿದರು.  25 ಮಹಿಳೆಯರ ತಪಾಸಣೆ ನಡೆಸಲಾಗಿದ್ದು, ಚಿಕಿತ್ಸೆ ಅವಶ್ಯಕವಿರುವ ಮಹಿಳೆಯರನ್ನು ಮೇಲ್ದರ್ಜೆ ಆಸ್ಪತ್ರೆಗೆ ಶಿಫಾರಸ್ಸು ಮಾಡಲಾಯಿತು. ಆರೋಗ್ಯ ತಪಾಸಣೆ ಕಾರ್ಯಕ್ರಮದಲ್ಲಿ ಆಡಳಿತ ವೈದ್ಯಾಧಿಕಾರಿ ಡಾ. ಈರಣ್ಣಾ ಧಾರವಾಡಕರ, ಹಿರಿಯ ಸಮುದಾಯ ಆರೋಗ್ಯಾಧಿಕಾರಿ ನಾಗರತ್ನಾ […]

ಡಾ. ಬಿದರಿಯವರ ಅಶ್ವಿನಿ ಆಸ್ಪತ್ರೆ ವೈದ್ಯರ ಸಾಧನೆ- ಒಂದೇ ದಿನ ಎಂಟು ಮಕ್ಕಳು ಸೇರಿ 13 ಜನರಿಗೆ ಹೃದಯ ಸಂಬಂಧಿ ಯಶಸ್ವಿ ಶಸ್ತ್ರಚಿಕಿತ್ಸೆ

ವಿಜಯಪುರ: ನಗರದ ಡಾ. ಬಿದರಿಯವರ ಅಶ್ವಿನಿ ಮಲ್ಟಿಸ್ಪೇಷಾಲಿಟಿ ಆಸ್ಪತ್ರೆಯ ವೈದ್ಯರು ಬೆಂಗಳೂರಿನ ವೈದ್ಯರ ಜೊತೆ ಸೇರಿ ಒಂದೇ ದಿನ ಎಂಟು ಮಕ್ಕಳು ಸೇರಿ ಒಟ್ಟು 13 ಜನರಿಗೆ ಹೃದಯ ಸಂಬಂಧಿ ಶಸ್ತ್ರಚಿಕಿತ್ಸೆ ನೀಡಿ ಗಮನ ಸೆಳೆದಿದ್ದಾರೆ. ಬೆಂಗಳೂರಿನ ನಾರಾಯಣ ಹೃದಯಾಲಯದ ಖ್ಯಾತ ಹೃದಯರೋಗ ತಜ್ಞ ಡಾ. ಪಿ. ವಿ. ಸುರೇಶ, ಅಶ್ವಿನಿ ಆಸ್ಪತ್ರೆಯ ಡಾ. ಗೌತಮ ವಗ್ಗರ, ಡಾ. ಗೋಪಾಲಕೃಷ್ಣ ದೇಶಪಾಂಡೆ, ಡಾ. ಬಸವರಾಜ ಉಟಗಿ ಸೇರಿಕೊಂಡು ಎಂಟು ಮಕ್ಕಳ ಡಿವೈಸ್ ಕ್ಲೋಸರ್ ಅಂದರೆ ಹೃದಯ ರಂಧ್ರ […]

ಶ್ರೀ ಸಿದ್ದೇಶ್ವರ ಸಹಕಾರಿ ಬ್ಯಾಂಕಿನಲ್ಲಿ ರಾಮ ಮಂದಿರ ಲೋಕಾರ್ಪಣೆ ಅಂಗವಾಗಿ ಶ್ರೀರಾಮನಿಗೆ ಪೂಜೆ

ವಿಜಯಪುರ: ಅಯೋಧ್ಯೆಯಲ್ಲಿ ಶ್ರೀರಾಮಮಂದಿರ ಉದ್ಘಾಟನೆಯ ಅಂಗವಾಗಿ ನಗರದ ಶ್ರೀ ಸಿದ್ದೇಶ್ವರ ಸಹಕಾರಿ ಬ್ಯಾಂಕಿನ ಆವರಣದಲ್ಲಿ ಶ್ರೀರಾಮನ ಭಾವಚಿತ್ರಕ್ಕೆ ವಿಶೇಷ ಪೂಜೆ ಸಲ್ಲಿಸಿ ಸಂಭ್ರಮಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಬ್ಯಾಂಕಿನ ಅಧ್ಯಕ್ಷ ವಿಜಯಕುಮಾರ ಡಿ. ಇಜೇರಿ, ನೂರಾರು ವರ್ಷಗಳ ಹಿಂದೆ ಆಗಬೇಕಾಗಿದ್ದ ಶ್ರೀರಾಮ ಮಂದಿರವನ್ನು ಈಗ ಪೂರ್ಣಗೊಳಿಸಿ ಉದ್ಗಾಟಿಸಿರುವುದು ಸಂತಸ ತಂದಿದೆ ಎಂದು ಹೇಳಿದರು. ಈ ಕಾರ್ಯಕ್ರಮದಲ್ಲಿ ಬ್ಯಾಂಕಿನ ಉಪಾಧ್ಯಕ್ಷೆ ಸೌಭಾಗ್ಯ ಎಸ್. ಭೋಗಶೆಟ್ಟಿ, ನಿರ್ದೇಶಕರಾದ ಶಾಂತಪ್ಪ ಎಸ್. ಜತ್ತಿ,  ಪ್ರಕಾಶ ಬಗಲಿ, ಗುರುರಾಜ ಗಂಗನಳ್ಳಿ, ಈರಣ್ಣ ಪಟ್ಟಣಶೆಟ್ಟಿ, ಡಾ. […]

ಬಬಲೇಶ್ವರ ಮತಕ್ಷೇತ್ರಾದ್ಯಂತ ನಾನಾ ದೇವಸ್ಥಾನಗಳಲ್ಲಿ ಎಂಬಿಪಿ ಅಭಿಮಾನಿಗಳ ಬಳಗದಿಂದ ವಿಶೇಷ ಪೂಜೆ

ವಿಜಯಪುರ: ಅಯೋಧ್ಯೆ ಶ್ರೀರಾಮ ಮಂದಿರದಲ್ಲಿ ಶ್ರೀರಾಮನ ವಿಗ್ರಹದ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ಅಂಗವಾಗಿ ಸರಕಾರದ ಸುತ್ತೋಲೆಯಂತೆ ಬಬಲೇಶ್ವರ ಮತಕ್ಷೇತ್ರದ ನಾನಾ ಗ್ರಾಮಗಳಲ್ಲಿ ರಾಮ- ಹನುಮಂತದೇವರ ಗುಡಿಗಳು ಹಾಗೂ ಗ್ರಾಮದೇವರ ದೇವಸ್ಥಾನಗಳಲ್ಲಿ ವಿಶೇಷ ಪೂಜೆ- ಪ್ರಾರ್ಥನೆ ನೆರವೇರಿಸಲಾಯಿತು. ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಉಪ್ಪಲದಿನ್ನಿ ಗ್ರಾಮದಲ್ಲಿ ಎಂಬಿಪಿ ಅಭಿಮಾನಿಗಳಿಂದ ಹನುಮಾನ ಮಂದಿರದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತುಅದೇ ರೀತಿ ಶ್ರೀ ಎಂ. ಬಿ. ಪಾಟೀಲ ಅವರ ಅಭಿಮಾನಿಗಳ ಬಳಗದವರು ಕೂಡಾ ಬಬಲೇಶ್ವರ ಮತಕ್ಷೇತ್ರದ ಪ್ರತಿಯೊಂದು ಗ್ರಾಮಗಳಲ್ಲಿ ರಾಮ, ಹನುಮಂತ ಮತ್ತು […]

ದುಬೈನಲ್ಲಿ ಜೈ ಶ್ರೀರಾಮ ಎಂದು ಸಂಭ್ರಮಿಸಿದ ಬಸವನಾಡಿನ ಪ್ರವಾಸಿಗರು

ವಿಜಯಪುರ: ಈಗ ದೇಶಾದ್ಯಂತ ಶ್ರೀರಾಮ ಮಂದಿರದಲ್ಲಿ ಶ್ರೀರಾಮಚಂದ್ರನ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಮತ್ತು ರಾಮ ಮಂದಿರ ಲೋಕಾರ್ಪಣೆ ಸಂಚಲನ ಸೃಷ್ಠಿಸಿದೆ.  ಎಲ್ಲೆಡೆ ಜೈ ಶ್ರೀರಾಮ ಘೋಷಣೆಗಳು ಮೊಳಗುತ್ತಿದ್ದರೆ, ಎಲ್ಲ ಕಡೆ ರಾಮಭಕ್ತರು ನಾನಾ ರೀತಿಯಲ್ಲಿ ಸಾಂಸ್ಕೃತಿ ಮತ್ತು ಧಾರ್ಮಿಕ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಸಂಭ್ರಮಿಸುತ್ತಿದ್ದಾರೆ. ಇದೇ ರೀತಿ, ದುಬೈ ಪ್ರವಾಸದಲ್ಲಿರುವ ಬಸವನಾಡು ವಿಜಯಪುರ ಜಿಲ್ಲೆಯ ಹಲವಾರು ಜನರು ತಾವೀಗ ಪ್ರವಾಸ ಕೈಗೊಂಡಿರುವ  ಸ್ಖಳದಲ್ಲಿಯೇ ಕೈಯ್ಯಲ್ಲಿ ಭಗವಾ ಧ್ವಜ ಹಿಡಿದು ರಾಮ ಮಂದಿರ ಲೋಕಾರ್ಪಣೆ ಕ್ಷಣಗಳನ್ನು ಸ್ಮರಣೀಯವಾಗಿಸಿಕೊಂಡಿದ್ದಾರೆ.  ವಿಜಯಪುರ […]