ಯುಜಿಸಿ- ಎನ್ ಇ ಟಿ ಪಾಸಾದ ಬಸವನಾಡಿನ ಯುವಕ ಸುದರ್ಶನ ಯಡಹಳ್ಳಿ

ವಿಜಯಪುರ: ಬಸವನಾಡಿನ ಯುವಕ ಸುದರ್ಶನ ಯಡಹಳ್ಳಿ ಎನ್ಇಟಿ ಪಾಸಾಗುವ ಮೂಲಕ ಉತ್ತಮ ಸಾಧನೆ ಮಾಡಿದ್ದಾರೆ. ವಿಶ್ವವಿದ್ಯಾಲಯ ಧನ ಸಹಾಯ ಆಯೋಗ ಡಿಸೆಂಬರ್ 2023ರಲ್ಲಿ ನಡೆಸಿದ ಜೆ ಆರ್ ಎಫ್- ಮತ್ತು ಅಸಿಸ್ಟಂಟ ಪ್ರೊಫೆಸರ್ ಪರೀಕ್ಷೆಯಲ್ಲಿ ಸುದರ್ಶನ ಯಡಹಳ್ಳಿ ಅವರು ಅಸಿಸ್ಟಂಟ್ ಪ್ರೊಫೆಸರ್ ಪರೀಕ್ಷೆ ಪಾಸಾಗಿದ್ದಾರೆ.  ಯುಜಿಸಿ ಪ್ರತಿ ವರ್ಷ ಎರಡು ಬಾರಿ ಆನ್ ಲೈನ್ ಮೂಲಕ ನೆಟ್ ಮತ್ತು ಜೆ ಆರ್ ಎಫ್ ಪರೀಕ್ಷೆ ನಡೆಸುತ್ತದೆ.  ಕಳೆದ ಡಿಸೆಂಬರ್ ನಲ್ಲಿ ನಡೆಸಿದ ಈ ಪರೀಕ್ಷೆಯಲ್ಲಿ ಒಟ್ಟು 9.50 […]

ಬಸವಣ್ಣ ಕರ್ನಾಟಕದ ಸಾಂಸ್ಕೃತಿಕ ರಾಯಭಾರಿ: ಸರಕಾರದ ನಿರ್ಧಾರಕ್ಕೆ ಕೃತಜ್ಞತೆ ಸಲ್ಲಿಸಿದ ಸಂಗಮೇಶ ಬಬಲೇಶ್ವರ

ವಿಜಯಪುರ: 12ನೇ ಶತಮಾನದ ಸಮಾಜ ಸುಧಾರಕ, ವಿಶ್ವದ ಪ್ರಥಮ ಪ್ರಜಾಪ್ರಭುತ್ವ ಸ್ಥಾಪಕ ಅಣ್ಣ ಬಸವಣ್ಣ ಅವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ರಾಜ್ಯ ಸರಕಾರ ಘೋಷಣೆ ಮಾಡಿರುವುದಕ್ಕೆ ಎಂದು ಕೆಪಿಸಿಸಿ ಪ್ರಚಾರ ಸಮಿತಿಯ ಮುಖ್ಯ ವಕ್ತಾರ ಸಂಗಮೇಶ ಬಬಲೇಶ್ವರ ಕೃತಜ್ಞತೆ ಸಲ್ಲಿಸಿದ್ದಾರೆ.  ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ರಾಜ್ಯ ಸರಕಾರ ಐತಿಹಾಸಿಕ ತೀರ್ಮಾನ ಮಾಡಿದೆ.  ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಎಸ್. ಸಿದ್ದರಾಮಯ್ಯ, ಸಚಿವರಾದ ಶರಣ ಎಂ. ಬಿ. ಪಾಟೀಲ, ರಾಜ್ಯ ಸಚಿವ ಸಂಪುಟದ ಎಲ್ಲ […]

ಬಸವ ನಾಡಿನ ವೈದ್ಯರಿಂದ ಯಶಸ್ಸಿ ಕಿಡ್ನಿ ಕಸಿ- ಬಿಹಾರ ಮೂಲದ ಯುವಕನಿಗೆ ಉಚಿತವಾಗಿ ಮೂತ್ರಪಿಂಡ ಶಸ್ತ್ರಚಿಕಿತ್ಸೆ

ವಿಜಯಪುರ: ರೋಗಿಗಳಿಗೆ ಶಸ್ತ್ರಚಿಕಿತ್ಸೆಗಳೆಂದರೆ ಸಾಕು ಅವರಿಗಷ್ಟೇ ಅಲ್ಲ ಅವರ ಸಂಬಂಧಿಕರಿಗೆ ಚಿಂತೆ ಎದುರಾಗುತ್ತದೆ.  ಅದರಲ್ಲೂ ಬಡವರಿಗೆ ಮೂತ್ರಪಿಂಡ ಕೃಸಿ ಶಸ್ತ್ರಚಿಕಿತ್ಸೆ ಬಗ್ಗೆ ಕೇಳಿದರೂ ಆತಂಕ ಉಂಟಾಗುತ್ತದೆ.  ಅದರ ಚಿಕಿತ್ಸಾ ವೆಚ್ಚದ ಬಗ್ಗೆಯೂ ಗಾಬರಿಯಾಗುತ್ತದೆ.  ಬಡವರ ಪಾಲಿಗೆ ಈ ಶಸ್ತ್ರಚಿಕಿತ್ಸೆಗಳು ಕೈಗೆಟುಕದಂತಾಗಿ ಬಿಡುತ್ತದೆ.  ಆದರೆ, ಬಸವನಾಡು ವಿಜಯಪುರದ ಬಿ.ಎಲ್.ಡಿ.ಇ ಸಂಸ್ಥೆಯ ಶ್ರೀ ಬಿ. ಎಂ. ಪಾಟೀಲ ಸೂಪರ್ ಸ್ಪೇಷಾಲಿಟಿ ಆಸ್ಪತ್ರೆಯ ವೈದ್ಯರು ಬಿಹಾರ ಮೂಲದ 17 ವರ್ಷದ ಯುವಕನೊಬ್ಬನಿಗೆ ಉಚಿತವಾಗಿ ಕಿಡ್ನಿಕಸಿ ಮಾಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಕಿಡ್ನಿಕಸಿ […]

ಎಲ್ಲರನ್ನು ವಿಶ್ವಾಸಕ್ಕೆ ಪಡೆದು ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸುವೆ- ಆರ್. ಎಸ್. ಪಾಟೀಲ ಕೂಚಬಾಳ

ವಿಜಯಪುರ: ಪಕ್ಷದ ಕಾರ್ಯಕರ್ತರು ಮತ್ತು ಹಿರಿ ಮುಖಂಡರ ಆಶೀರ್ವಾದದಿಂದ ತಮಗೆ ಮತ್ತೋಮ್ಮೆ ಬಿಜೆಪಿ ಜಿಲ್ಲಾಧ್ಯ್ಕಷ ಸ್ಥಾನದ ಜವಾಬ್ದಾರಿ ಒಲಿದು ಬಂದಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಆರ್. ಎಸ್. ಪಾಟೀಲ ಕೂಚಬಾಳ ತಿಳಿಸಿದ್ದಾರೆ. ವಿಜಯಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಮಮಂದಿರ ಲೋಕಾರ್ಪಣೆಯ ಈ ಶುಭ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷನಾಗಿ ಪುನರಾಯ್ಕೆಯಾಗಿರುವುದು ನನ್ನ ಸುದೈವ.  ಜಿಲ್ಲಾ ಬಿಜೆಪಿಯಲ್ಲಿ ಯಾವ ಬಣವೂ ಇಲ್ಲ.  ಎಲ್ಲ ನಾಯಕರು ನನ್ನ ಆಯ್ಕೆಗೆ ಸಹಕರಿಸಿ ಈ ಜವಾಬ್ದಾರಿಯನ್ನು ಹೊರೆಸಿದ್ದಾರೆ, ಅವರ ವಿಶ್ವಾಸವನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ […]

ಅಯೋಧ್ಯೆ ಸಂಭ್ರಮೋತ್ಸವ: ಜೆಎಸ್ಎಸ್ ಆಸ್ಪತ್ರೆಯಲ್ಲಿ ಜ. 18 ರಿಂದ 22ರ ವರೆಗೆ ಉಚಿತ ಹೆರಿಗೆ ಸೌಲಭ್ಯ

ವಿಜಯಪುರ: ಅಯೋಧ್ಯೆಯಲ್ಲಿ ರಾಮ ಮಂದಿರ ಲೋಕಾರ್ಪಣೆ ಹಿನ್ನೆಲೆಯಲ್ಲಿ ಶಾಸಕ ಬಸನಗೌಡ ಪಾಟೀಲ ನೇತೃತ್ವದ ಶ್ರೀ ಸಿದ್ಧೇಶ್ವರ ಲೋಕ ಕಲ್ಯಾಣ ಚಾರಿಟೇಬಲ್ ಟ್ರಸ್ಟ್ ನಿರ್ಮಿತ ಜ್ಞಾನಯೋಗಿ ಶ್ರೀ ಸಿದ್ಧೇಶ್ವರ ಸ್ವಾಮೀಜಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಜನೇವರಿ 18 ರಿಂದ ಜನೇವರಿ 22ರ ವರೆಗೆ ಐದು ದಿನಗಳ ಕಾಲ ಹೆರಿಗೆ ಮಾಡಿಸಿಕೊಳ್ಳುವ ಮಹಿಳೆಯರಿಗೆ ಯಾವುದೇ ಶುಲ್ಕವಿಲ್ಲದೇ ಉಚಿತವಾಗಿ ಹೆರಿಗೆ ಆರೋಗ್ಯ ಸೇವೆ ಸಿಗಲಿದೆ. ಜನೇವರಿ 22ರಂದು ಅಯೋಧ್ಯೆಯಲ್ಲಿ ರಾಮಮಂದಿರ ಲೋಕಾರ್ಪಣೆಯಾಗಲಿದ್ದು, ಶ್ರೀರಾಮನ ಮೂರ್ತಿಯ ಪ್ರಾಣ ಪ್ರತಿಷ್ಠಾಪನೆ ನಡೆಯಲಿದೆ.  ಈ ಅಯೋಧ್ಯಾ […]

ಸಂಚಾರಿ ನಿಯಮ ಪಾಲನೆ, ಜಾಗರೂಕತೆಯಿಂದ ವಾಹನ ಚಾಲನೆಯಿಂದ ರಸ್ತೆ ಅಪಘಾತ ತಪ್ಪಿಸಬಹುದು- ಬಸವರಾಜ ಯಲಿಗಾರ

ವಿಜಯಪುರ: ಸಂಚಾರಿ ನಿಯಮಗಳ ಪಾಲನೆ ಮತ್ತು ಜಾಗರೂಕತೆಯಿಂದ ವಾಹನ ಚಲಾಯಿಸಿದರೆ ರಸ್ತೆ ಅಪಘಾತ ಹಾಗೂ ಜೀವಹಾನಿ ತಡೆಯಲು ಸಾಧ್ಯ ಎಂದು ವಿಜಯಪುರ ನಗರ ಡಿವೈಎಸ್ಪಿ ಬಸವರಾಜ ಯಲಿಗಾರ ಹೇಳಿದ್ದಾರೆ. ನಗರದ ಬಿ. ಎಲ್. ಡಿ. ಇ ಡೀಮ್ಡ್ ವಿಶ್ವವಿದ್ಯಾಲಯದ ಟ್ರಾಮಾ ಸೆಂಟರ್ ನಲ್ಲಿ ವಿವಿಯ ಐಕ್ಯೂಎಸಿ ವಿಭಾಗದ ವತಿಯಿಂದ ಇಂದು ಬುಧವಾರ ಆಯೋಜಿಸಲಾಗಿದ್ದ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು. ರಸ್ತೆ ಅಪಘಾತಗಳು ಮತ್ತು ಅವುಗಳಿಗೆ ಕಾರಣಗಳ ಕುರಿತು ಎಳೆಎಳೆಯಾಗಿ ಮಾಹಿತಿ ನೀಡಿದ […]

ಬಿಜೆಪಿ ಎಂಪಿ ಟಿಕೆಟ್ ನನಗೆ ಸಿಗಲಿದೆ- ಎಂಎಲ್ಎ ಚುನಾವಣೆಯಲ್ಲಿ ಸ್ಪರ್ಧೆ ಬಯಸಿ ಸಿಪಿಐ ಹುದ್ದೆಗೆ ರಾಜೀನಾಮೆ ನೀಡಿದ್ದೆ- ಮಹೇಂದ್ರಕುಮಾರ ನಾಯಕ

ವಿಜಯಪುರ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯಿಂದ ನನಗೆ ಟಿಕೆಟ್ ಸಿಗಲಿದೆ ಎಂದು ಶೇ. 200ರಷ್ಟು ವಿಶ್ವಾಸವಿದೆ ಎಂದು ಕಳೆದ ವಿಧಾನ ಸಭೆ ಚುನಾವಣೆ ಸಂದರ್ಭದಲ್ಲಿ ಸಿಪಿಐ ಹುದ್ದೆಗೆ ರಾಜೀನಾಮೆ ನೀಡಿದ್ದ ಮಹೇಂದ್ರಕುಮಾರ ನಾಯಕ ತಿಳಿಸಿದ್ದಾರೆ. ವಿಜಯಪುರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಳೆದ ಬಾರಿ ನಾಗಠಾಣ ಮೀಸಲು ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಸಿಪಿಐ ಹುದ್ದೆಗೆ ರಾಜೀನಾಮೆ ನೀಡಿದ್ದೆ.  ಆದರೆ, ಕಾಣದ ಕೈಗಳ ಕುತಂತ್ರದಿಂದ ಕಳೆದ ಬಾರಿ ನಾಗಠಾಣ ಟಿಕೇಟ್ ತಪ್ಪಿದೆ.  ಮುಂಬರುವ ಲೋಕಸಭೆ ಚುನಾವಣೆಯಲ್ಲಿ […]

ನಾಗರಾಳೆ ಶಾಲೆ ವಾರ್ಷಿಕೋತ್ಸವ: ವಿದ್ಯಾರ್ಥಿಗಳ ಶೈಕ್ಷಣಿಕ ಗುಣಮಟ್ಟವನ್ನು ಹೆಚ್ಚಿಸುವಲ್ಲಿ ಶಿಕ್ಷಕರ ಪಾತ್ರ ಬಹು ಮುಖ್ಯ- ಎಡಿಸಿ ಮಹಾದೇವ ಮುರಗಿ

ವಿಜಯಪುರ: ಇಂದಿನ ದಿನಗಳಲ್ಲಿ ಖಾಸಗಿ ಶಾಲೆಗಳನ್ನು ನಡೆಸುವುದು ತುಂಬಾ ಕಷ್ಟಕರವಾಗಿದೆ.  ಇಂಥ ಪರಿಸ್ಥಿತಿಯಲ್ಲಿ ನಾಗರಾಳೆ ಪಬ್ಲಿಕ್ ಸ್ಕೂಲ್ ಕಳೆದ 23 ವರ್ಷಗಳಿಂದ ಉತ್ತಮ ಶಿಕ್ಷಣ ನೀಡುತ್ತ ಮುಂಚೂಣಿಯಲ್ಲಿರುವುದು ಶ್ಲಾಘನೀಯವಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಹೇಳಿದರು. ನಗರದ ಗಚ್ಚಿನಕಟ್ಟಿ ಕಾಲನಿಯಲ್ಲಿರುವ ನಾಗರಾಳೆ ಪಬ್ಲಿಕ್ ಶಾಲೆಯ 23ನೇ ವಾರ್ಷಿಕೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಶಾಲೆಯ ವಿದ್ಯಾರ್ಥಿಗಳ ಬಗ್ಗೆ ಪ್ರತಿ ತಿಂಗಳು ಪರೀಕ್ಷೆಗಳನ್ನು ತೆಗೆದುಕೊಳ್ಳುತ್ತ, ವಿದ್ಯಾರ್ಥಿಗಳ ಶೈಕ್ಷಣಿಕ ಗುಣಮಟ್ಟವನ್ನು ಹೆಚ್ಚಿಸುವಲ್ಲಿ ಶಿಕ್ಷಕರ ಪಾತ್ರ ಬಹಳ ಮುಖ್ಯವಾಗಿದೆ.  […]

ತುಷಾರ ಚಲನಚಿತ್ರಕ್ಕೆ ಸಿದ್ಧನಕೊಳ್ಳದಲ್ಲಿ ಸಂಕ್ರಾಂತಿ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರಧಾನ

ಬಾಗಲಕೋಟೆ: ಬಾಗಲಕೋಟೆ ಜಿಲ್ಲೆಯ ಸಿದ್ದನಕೊಳ್ಳದಲ್ಲಿ ಸಂಕ್ರಾಂತಿ ಹಬ್ಬದ ಅಂಗವಾಗಿ ನಡೆದ 2024 ರ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ವಿಜಯಪುರ ಜಿಲ್ಲೆಯ ಸಿಂದಗಿಯ ನಟ, ನಿರ್ದೇಶಕ, ನಿರ್ಮಾಪಕ ವಿಶ್ವಪ್ರಕಾಶ ಟಿ. ಮಲಗೊಂಡ ನಟಿಸಿರುವ ತುಷಾರ ಚಲನಚಿತ್ರಕ್ಕೆ ಹಿರಿಯ ನಿರ್ದೇಶಕರು, ಕಲಾವಿದರು ಮತ್ತು ಆಯ್ಕೆದಾರರ ಸಮಿತಿ ಮೆಚ್ಚುಗೆ ಪ್ರಶಸ್ತಿ ಲಭಿಸಿದೆ. ರಾಜ್ಯದ ನಾನಾ ಗಡೆಗಳಿಂದ ನೂರಾರು ಚಲನಚಿತ್ರಗಳು ಆಯ್ಕೆಗೆ ಅರ್ಜಿ ಸಲ್ಲಿಸಿದ್ದವು.  ಈ ವೇಳೆ ಮಲಗೊಂಡ ಫಿಲಂ ಪ್ರೊಡಕ್ಷನ್ ನಡಿ ತಯಾರಾದ ತುಷಾರ್ ವನ್ನೂ ಕಳುಹಿಸಲಾಗಿತ್ತು.  ಈ ಸಿನೇಮಾ ವೀಕ್ಷಿಸಿದ ಹಿರಿಯ […]

ಅನುಭಾವಿ ಕವಿ ಫಾರೂಖಿ ಅವರ ಕವನ ಸಂಕಲನ ಬಿಡುಗಡೆ

ವಿಜಯಪುರ: ವಿಜಯಪುರದ ಇತಿಹಾಸದಲ್ಲಿ ಅಚ್ಬಳಿಯದ ನೆನಪು ಉಳಿಸಿದ ಬ್ರಿಟಿಷ್ ವಾಯುದಳ (ಆರ್‌ಎಎಫ್)ದ ಅಧಿಕಾರಿಯಾಗಿದ್ದ ದಿ. ಅನ್ವರ ಹುಸೇನ ಫಾರೂಖಿ ಅವರ ಅಪ್ರಕಟಿತ ಇಂಗ್ಲೀಷ ಕವನಗಳ ಸಂಗ್ರಹ ವಾಯ್ಸ್ ಫ್ರಾಮ್ ಹೆವನ್ ಬಿಡುಡಗೆ ಸಮಾರಂಭ ನಗರದ ಕಂದಗಲ್ಲ ಹನುಮಂತರಾಯ ರಂಗಮಂದಿರದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಖ್ಯಾತ ಕವಿ, ಲೇಖಕ, ಕೇಂದ್ರ ಸಾಹಿತ್ಯ ಅಕಾಡೆಮಿ ಹಾಗೂ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕವಿ ಡಾ. ಮಾಹಿರ್ ಮನ್ಸೂರ್, ದಿ. ಅನ್ವರ್ ಹುಸೇನ್ ಫಾರೂಖಿ ಅವರ ಕವಿತೆಗಳಲ್ಲಿ ಶರಣರ, ಸರ್ವಜ್ಞನ ಅನುಭವ ಹಾಗೂ […]