2024 ಮತ್ತೊಮ್ಮೆ ಮೋದಿ: ವಿಜಯಪುರ ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ಗೋಡೆ ಬರಹಕ್ಕೆ ಚಾಲನೆ

ವಿಜಯಪುರ: 2024 ಮತ್ತೊಮ್ಮೆ ಮೋದಿ ಎಂಬ ಗೋಡೆ ಬರಹವನ್ನು ವಿಜಯಪುರದ ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ಬರೆಯುವ ಮೂಲಕ ಬಿಜೆಪಿ ಎಸ್.ಸಿ. ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಉಮೇಶ ಕಾರಜೋಳ ಚಾಲನೆ ನೀಡಿದರು. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಎಲ್ಲ ವಾರ್ಡ್ ಗಳಲ್ಲಿ ಈ ಸಂದೇಶದ ಗೋಡೆಬರಹವನ್ನು ಬರೆಯುವ ಕಾರ್ಯಕ್ರಮವನ್ನು ಜಿಲ್ಲಾ ಬಿಜೆಪಿ ರೂಪಿಸಿರುವ ಈ ಕಾರ್ಯಕ್ರಮಕ್ಕೆ ಅವರು ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ದೇಶ ಇನ್ನಷ್ಟೂ ಅಭಿವೃದ್ಧಿ ಪಥದತ್ತ ಮುನ್ನಡೆಯಲು ಮೋದಿಜಿ ಅವರು ಇನ್ನೊಮ್ಮೆ ಪ್ರಧಾನಿಯಾಗಬೇಕು.  ಭಾರತವನ್ನು […]

ಗೋ ಸಂಪತ್ತು ಉಳಿಸಲು ಜೋಳಕ್ಕೆ ಬೆಂಬಲ ಬೆಲೆ ಅಗತ್ಯವಾಗಿದೆ- ಶಾಸಕ ಬಸನಗೌಡ ಪಾಟೀಲ ಯತ್ನಾಳ

ವಿಜಯಪುರ: ವೈಜ್ಞಾನಿಕ ಕಾರಣಗಳಿಂದಲೇ ಋಷಿಮುನಿಗಳು, ಹಿರಿಯರು ಆಕಳನ್ನು ಗೋಮಾತೆ ಎಂದು ಕರೆದಿದ್ದಾರೆ.  ಜೋಳ ಬೆಳೆಯುವುದು ಕಡಿಮೆ ಆಗಿದ್ದರಿಂದ, ಕ್ರಮೇಣ ಗೋ ಸಂಪತ್ತು ಕಡಿಮೆಯಾಗುತ್ತಿದ್ದು, ಮುಂದಿನ ಅಧಿವೇಶನದಲ್ಲಿ ಪ್ರತಿ ಕ್ವಿಂಟಾಲ್ ಜೋಳಕ್ಕೆ ಕನಿಷ್ಠ ರೂ. 5000 ಬೆಂಬಲ ಬೆಲೆ ನಿಗದಿ ಪಡಿಸಲು ಸರಕಾರದ ಮೇಲೆ ಒತ್ತಡ ತಂದು ಪ್ರಯತ್ನಿಸುತ್ತೇನೆ ಎಂದು ಶಾಸಕ ಬಸನಗೌಡ ರಾ. ಪಾಟೀಲ ಯತ್ನಾಳ ಹೇಳಿದರು. ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ತೊರವಿ ಸಮೀಪ ಸಂಕ್ರಾಂತಿ ಅಂಗವಾಗಿ ಆಯೋಜಿಸಲಾಗಿರುವ ಶ್ರೀ ಸಿದ್ದೇಶ್ವರ ಜಾನುವಾರು ಜಾತ್ರಾ ಮಹೋತ್ಸವದ […]

ಗಾಳಿಪಟ ಹಾರಿಸುವುದು ಒಂದು ವಿಶಿಷ್ಟ ಕಲೆ- ದೈಹಿಕ ನಿರ್ದೇಶಕ ಪ್ರೊ. ಎಸ್. ಎ. ಪಾಟೀಲ

ವಿಜಯಪುರ: ಗಾಳಿಪಟ ಹಾರಿಸುವುದು ಒಂದು ವಿಶೇಷ ಕಲೆಯಾಗಿದೆ.  ಪುರಾತನ ಕಾಲದಿಂದಲೂ ನಮ್ಮ ದೇಶದಲ್ಲಿ ಇದು ರೂಢಿಗತವಾಗಿ ಬಂದಿದೆ ಎಂದು ದೈಹಿಕ ನಿರ್ದೇಶಕ ಪ್ರೊ. ಎಸ್. ಎ. ಪಾಟೀಲ ಹೇಳಿದ್ದಾರೆ. ನಗರದ ಬಿ. ಎಲ್. ಡಿ. ಇ ಸಂಸ್ಥೆಯ ಎ. ಎಸ್. ಪಾಟೀಲ ವಾಣಿಜ್ಯ ಮಹಾವಿದ್ಯಾಲಯ ಸಂಕ್ರಾಂತಿ ಹಬ್ಬದ ಅಂಗವಾಗಿ ವಿದ್ಯಾರ್ಥಿಗಳಿಗಾಗಿ ಆಯೋಜಿಸಿ್ದ ಕೈಟ ಫೆಸ್ಟ್(ಗಾಳಿಪಟ ಉತ್ಸವ) ಉದ್ಘಾಟಿಸಿ ಅವರು ಮಾತನಾಡಿದರು. ಗಾಳಿಪಟ ತಯಾರಿಸಲು ಕೌಶಲ್ಯ ಅಗತ್ಯವಾಗಿದೆ.  ಪತಂಗ ಹಾರಿಸುವುದು ಮನರಂಜನೆ ಜೊತೆಗೆ ಅದರ ವೃತ್ತಿಪರತೆಯನ್ನು ಹೆಚ್ಚಿಸುತ್ತದೆ.  ಆದರೆ, […]

ವಿ. ಭ. ದರಬಾರ ಪಿಯು ಕಾಲೇಜಿನಲ್ಲಿ ವಾರ್ಷಿಕ ಸ್ನೇಹ ಸಮ್ಮೇಳನ, ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ

ವಿಜಯಪುರ: ನಗರದ ವಿ. ಭ. ದರಬಾರ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ವಾರ್ಷಿಕ ಸ್ನೇಹ ಸಮ್ಮೇಳನ ಮತ್ತು ಪಿಯುಸಿ ದ್ವಿತೀಯ ವರ್ಷದ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಅಪರಾಧ ವಿಭಾಗದ ಹೆಚ್ಚುವರಿ ಎಸ್ಪಿ ರಾಮನಗೌಡ ಎ. ಹಟ್ಟಿ ಮಾತನಾಡಿ, ಬಡವನಾಗಿ ಜನಿಸಿದರೂ ಬಡವನಾಗಿಯೇ ಸಾಯುವುದು ತಪ್ಪು.  ಜೀವನದಲ್ಲಿ ಮಾನವೀಯ ಗುಣಗಳನ್ನು ಬೆಳೆಸಿಕೊಂಡು ಸಮಾಜಕ್ಕೆ ಪೂರಕವಾದ ಕೆಲಸಗಳನ್ನು ಮಾಡುವ ಮೂಲಕ ಇತರರಿಗೆ ಮಾದರಿಯಾಗಿ ಬದುಕು ಸಾಗಿಸಬೇಕು ಎಂದು ಹೇಳಿದರು. ಶಾಲಾ ಶಿಕ್ಷಣ ಇಲಾಖೆ […]

ಶ್ರೀ ಗೋಪಾಲ ನಂದುಲಾಲ ಮಹಾರಾಜರಿಗೆ ರಾಮ ಮಂದಿರ ಉದ್ಘಾಟನೆಗೆ ಆಹ್ವಾನ-ಸಂತಸ ವ್ಯಕ್ತಪಡಿಸಿದ ಮಹಾರಾಜರು

ವಿಜಯಪುರ: ಅಯೋಧ್ಯೆಯಲ್ಲಿ ಜನೇವರಿ 22 ರಂದು ನಡೆಯಲಿರುವ ಶ್ರೀರಾಮ ಮಂದಿರ ಪ್ರಾಣ ಪ್ರತಿಷ್ಠಾಪನಾ ಸಮಾರಂಭಕ್ಕೆ ವಿಜಯಪುರ ಜಿಲ್ಲೆಯಿಂದ ಶ್ರೀ ಗೋಪಾಲ ನಂದುಲಾಲ ಮಹಾರಾಜ ಅವರನ್ನು ಆಹ್ವಾಸಲಾಗಿದೆ. ಈ ಕುರಿತು ಸಂತಸ ವ್ಯಕ್ತಪಡಿಸಿರುವ ಮಹಾರಾಜರು, ತಮಗೆ ಆಹ್ವಾನ ನೀಡಿರುವುದು ಬಂಜಾರಾ ಸಮಾಜಕ್ಕೂ ಪ್ರಾತಿನಿಧ್ಯ ನೀಡಿದಂತಾಗಿದ್ದು, ಇದು ಖುಷಿಯ ಸಂಗತಿಯಾಗಿದೆ.  ರಾಮ ಮಂದಿರದ ಟ್ರಸ್ಟ್ ಸಮಿತಿಯವರಿಗೆ ಗೌರವಪೂರ್ವಕವಾಗಿ ಕೃತಜ್ಞತೆಗಳನ್ನು ಸಲ್ಲಿಸುವೆ ಎಂದು ತಿಳಿಸಿದ್ದಾರೆ. ವಿಜಯಪುರ ಜಿಲ್ಲೆಯ ತೊರವಿಎಲ್. ಟಿ- 1ರಿಂದ ಅಯೋಧ್ಯೆಗೆ ಹೋಗುತ್ತಿರುವುದು ನನ್ನ ಸೌಭಾಗ್ಯ.  ಸಂತ ಸೇವಾಲಾಲ ಮಹಾರಾಜರ […]

ವಿಜಯಪುರದಲ್ಲಿ ಜಿಲ್ಲಾಡಳಿತದಿಂದ ಶಿವಯೋಗಿ ಸಿದ್ಧರಾಮೇಶ್ವರ ಜಯಂತಿ ಆಚರಣೆ

ವಿಜಯಪುರ: ಸಮ ಸಮಾಜದ ಕನಸು ಹೊತ್ತು,ಆ ಮೂಲಕ ಸತ್ಯಪಥದಲ್ಲಿ ನಡೆದು, ತಮ್ಮ ವಚನಗಳ ಮೂಲಕ ಸಾಮಾನ್ಯರಿಗೂ ತಿಳಿಯುವಂತೆ ಬರೆದಂತೆ,ನುಡಿದಂತೆ ನಡೆದು ಜನಸಾಮಾನ್ಯರಿಗೆ ಅರಿವಿನ ಗುರುವಾಗಿದ್ದವರು 12ನೇ ಶತಮಾನದ ಶರಣರು ಎಂದು ಅಪರ ಜಿಲ್ಲಾಧಿಕಾರಿ ಮಹದೇವ ಮುರಗಿ ಹೇಳಿದ್ದಾರೆ.  ಜಿಲ್ಲಾಡಳಿತ ಮತ್ತು ನಾನಾ ಇಲಾಖೆಗಳ ಸಹಯೋಗದಲ್ಲಿ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮAದಿರದಲ್ಲಿ ಹಮ್ಮಿಕೊಂಡಿದ್ದ ಶಿವಯೋಗಿ ಸಿದ್ಧರಾಮೇಶ್ವರ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಶಿವಯೋಗಿ ಸಿದ್ಧರಾಮೇಶ್ವರ ಭಾವಚಿತ್ರಕ್ಕೆ ಪುಷ್ಪ ನಮನ ಅರ್ಪಿಸಿ ಗೌರವ ಸಲ್ಲಿಸಿ ಅವರು ಮಾತನಾಡಿದರು. ಶಿವಯೋಗಿ […]

ಬಸವ ನಾಡಿನ ರಾಮಭಕ್ತರ ಭಕ್ತಿ- ಬ್ಯಾಂಕಾಕ್ ಬಳಿ 13 ಸಾವಿರ ಅಡಿ ಸ್ಕೈ ಡೈವಿಂಗ್ ಮೂಲಕ ಧುಮುಕಿ ದೈವಭಕ್ತಿ ಸಮರ್ಪಣೆ

ವಿಜಯಪುರ: ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಉದ್ಘಾಟನೆಗೆ ಒಂದು ವಾರ ಮಾತ್ರ ಬಾಕಿ ಉಳಿದಿದ್ದು, ಭಕ್ತರು ತರಹೇವಾರಿಯಾಗಿ ತಂತಮ್ಮ ಭಕ್ತಿಯ ಪರಾಕಾಷ್ಟೆ ತೋರಿಸುತ್ತಿದ್ದಾರೆ. ಕೆಲವು ಭಕ್ತರು ಪಾದಯಾತ್ರೆ ಮೂಲಕ ಅಯೋಧ್ಯೆಗೆ ತೆರಳುತ್ತಿದ್ದರೆ, ಮತ್ತೆ ಹಲವರು ತಮ್ಮ ಕೈಲಾದ ಉಡುಗೊರೆಗಳನ್ನು ಕಳುಹಿಸಿಕೊಟ್ಟಿದ್ದಾರೆ.  ಗುಜರಾತಿನಿಂದ ಅತೀ ಉದ್ದವಾದ ಊದಿನ ಕಡ್ಡಿಯನ್ನು ಕಳುಹಿಸಿ ಕೊಟ್ಟಿದ್ದರೆ, ಮತ್ತೋಬ್ಬರು ಚಿನ್ನದ ಪಾದುಕೆಗಳನ್ನು ಕಳುಹಿಸಿದ್ದಾರೆ.  ಮತ್ತೆ ಹಲವರು ವಸ್ತ್ರಗಳು, ಸುಗಂಧ ದ್ರವ್ಯಗಳು, ಬಟ್ಟೆಗಳು, ಪೂಜಾ ಸಾಮಗ್ರಿಗಳು, ತರಹೇವಾರಿ ಖಾದ್ಯಗಳು, ಪಾತ್ರೆಗಳು, ಗಂಟೆಗಳನ್ನು ಭಕ್ತಿ ಸಮರ್ಪಣೆ ಮಾಡಿದ್ದಾರೆ. ಮತ್ತೆ […]

StarpUp Story: ಉ. ಕ. ದ ಪ್ರಥಮ ಸ್ಟೀಲ್ ರಿಂಗ್ ಯಂತ್ರ: ಕಟ್ಟಡ ನಿರ್ಮಾಪಕರಿಗೆ ವರವಾದ ವಿನೋದ ಪೀರಗೊಂಡರ ವೈಭವಿ ಟ್ರೆಡರ್ಸ್

ಮಹೇಶ ವಿ. ಶಟಗಾರ ವಿಜಯಪುರ: ಮನೆಕಟ್ಟಿ ನೋಡು.  ಮದುವೆ ಮಾಡಿ ನೋಡು ಎಂಬುದು ನಾಣ್ಣುಡಿ.  ಆದರೆ, ಮನೆ ಕಟ್ಟುವಾಗ ಸಿಕ್ಕ ಅನುಭವವನ್ನೇ ಜೀವನದಲ್ಲಿ ಉದ್ಯಮವಾಗಿಸಿಕೊಂಡು ಯಶಸ್ವಿಯಾದರೆ ಹೇಗಿರಬೇಡ.  ಹೌದು.  ಈ ರೀತಿ ಮನೆ ಕಟ್ಟುವಾಗ ಎದುರಿಸಿದ ಸಮಸ್ಯೆಗಳು ಮತ್ತು ಅವುಗಳಿಗೆ ಪರಿಹಾರ ಕಂಡುಕೊಳ್ಳಲು ರೂಪಿಸಿದ ಯೋಜನೆಗಳ ಮೇಲೆ ಯುವಕನೊಬ್ಬ ಉದ್ಯಮ ಪ್ರಾರಂಭಿಸಿ ಯಶಸ್ವಿಯಾಗಿರುವ ಸ್ಟೋರಿ ಇದು. ವಿಜಯಪುರ ನಗರದ ಸೋಲಾಪುರ ರಸ್ತೆಯಿಂದ ಶ್ರೀ ಸಿದ್ಧಾರೂಢ ಮಠದ ಕಡೆಗೆ ಹೊರಟರೆ ಸಾಕು ಮೂರ್ನಾಲ್ಕು ಅಂಗಡಿಗಳನ್ನು ದಾಟಿದರೆ ವೈಭವಿ ಟ್ರೇಡರ್ಸ್ […]

ವಿಜಯಪುರ ಜಿ. ಪಂ. ನೂತನ ಸಿಇಓ ರಿಶಿ ಆನಂದ ಅಧಿಕಾರ ಸ್ವೀಕಾರ

ವಿಜಯಪುರ: ಜಿ. ಪಂ. ನೂತನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯಾಗಿ ರಿಶಿ ಆನಂದ ಅಧಿಕಾರ ಸ್ವೀಕರಿಸಿದ್ದಾರೆ. ವಿಜಯಪುರ ಜಿ. ಪಂ. ಸಿಇಓ ಆಗಿದ್ದ ರಾಹುಲ ಶಿಂಧೆ ಅವರು ಬೆಳಗಾವಿ ಜಿ. ಪಂ. ಸಿಇಓ ಆಗಿ ವರ್ಗಾವಣೆಯಾಗಿದ್ದಾರೆ.  ಅವರ ಸ್ಥಾನಕ್ಕೆ ಈಗ ರಿಶಿ ಆನಂದ ಅವರು ವರ್ಗವಣೆಯಾಗಿದ್ದು, ಅಧಿಕಾರ ಸ್ವೀಕರಿಸಿದರು. ನಿರ್ಗಮಿತ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಾಹುಲ ಶಿಂಧೆ ಅವರು ಅಧಿಕಾರ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಜಿ. ಪಂ. ಉಪಕಾರ್ಯದರ್ಶಿ ಡಾ. ವಿಜಯಕುಮಾರ ಆಜೂರ, ಮುಖ್ಯ ಯೋಜನಾಧಿಕಾರಿ ನಿಂಗಪ್ಪ ಗೋಠೆ […]

ದೇಶದ 500 ಟಾಪ್ ಸ್ಕೂಲ್ ಗಳಲ್ಲಿ ಬಸವನಾಡಿನ ಪ್ರೇರಣಾ ಪಬ್ಲಿಕ್ ಸ್ಲೂಕ್ ಗೆ ಸ್ಥಾನ- ಇಟಿ ಟೆಕ್ ಎಕ್ಸ್ ಸ್ಕೂಲ್ ಎಕ್ಸಲೆನ್ಸ್ ಅವಾರ್ಡ್ಸ್ ಗೌರವ

ವಿಜಯಪುರ: ನಗರದ ಪ್ರೇರಣಾ ಪಬ್ಲಿಕ್ ಸ್ಕೂಲ್ ದೇಶದ 500 ಟಾಪ್ ಶಾಲೆಗಳಲ್ಲಿ ಸ್ಥಾನ ಪಡೆದಿದೆ.  ಇತ್ತೀಚೆಗೆ ಹೈದರಾಬಾದಿನಲ್ಲಿ ನಡೆದ ಇಟಿ ಟೆಕ್ ಎಕ್ಸ್ ಸ್ಕೂಲ್ ಎಕ್ಸಲೆನ್ಸ್ ಅವಾರ್ಡ್- 2023 ನೀಡಿ ಗೌರವಿಸಲಾಗಿದೆ.  ವಿದ್ಯಾರ್ಥಿಗಳ ಶೈಕ್ಷಣಿಕ ಮತ್ತು ಸಮಗ್ರ ಅಭಿವೃದ್ಧಿಯಲ್ಲಿ ಶಾಲೆಯ ಶ್ರೇಷ್ಠತೆಯನ್ನು ಪರಿಗಣಿಸಿ ಈ ಗೌರವ ನೀಡಲಾಗುತ್ತದೆ. ಅಷ್ಟೇ ಅಲ್ಲ, ಈ ಶಾಲೆಯು ಕರ್ನಾಟಕದ 25 ಅತ್ಯುತ್ತಮ ಸಿಬಿಎಸ್‌ಇ ಶಾಲೆಗಳಲ್ಲಿ ಒಂದು ಎಂದು ಗುರುತಿಸಲ್ಪಟ್ಟಿದೆ.  ಅಲ್ಲದೇ, ಈ ಹೆಗ್ಗಳಿಕೆಗೆ ಪಾತ್ರವಾಗಿರುವ ವಿಜಯಪುರ ಜಿಲ್ಲೆಯ ಏಕೈಕ ಶಾಲೆ ಇದಾಗಿದೆ. […]