ಶ್ರೀ ಸಿದ್ದೇಶ್ವರ ದನಗಳ ಜಾತ್ರೆಯನ್ನು ವ್ಯವಸ್ಥಿತವಾಗಿ ಆಯೋಜಿಸಿ- ಸಚಿವ ಶಿವಾನಂದ ಎಸ್. ಪಾಟೀಲ ಸೂಚನೆ

ವಿಜಯಪುರ: ಪ್ರತಿ ವರ್ಷದಂತೆ ವಿಜಯಪುರ ತಾಲೂಕಿನ ತೊರವಿಯಲ್ಲಿ ಜ.10ರಿಂದ 18ರವರೆಗೆ ಜರುಗುವ ಸಂಕ್ರಮಣ ಸಿದ್ದೇಶ್ವರ ಜಾನುವಾರು ಜಾತ್ರೆಯನ್ನು ಅತ್ಯಂತ ವ್ಯವಸ್ಥಿತವಾಗಿ ಆಯೋಜಿಸುವಂತೆ ಜವಳಿ, ಕಬ್ಬು ಅಭಿವೃದ್ದಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಸಿದ್ದೇಶ್ವರ ಜಾನುವಾರು ಜಾತ್ರೆ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಾನುವಾರು ಜಾತ್ರೆಯಲ್ಲಿ ಗಡಿ ಭಾಗವಾಗಿರುವುದರಿಂದ ಮಹಾರಾಷ್ಟç ಸೇರಿದಂತೆ ವಿವಿಧ ಭಾಗಗಳಿಂದ ಸಾವಿರಾರು ರೈತರು, ಜಾನುವಾರುಗಳು […]

ಹೈಕಮಾಂಡಿಗೆ ಎಲ್ಲ ವಿವರಿಸಿದ್ದೇನೆ- ನನ್ನನ್ನು ಯಡಿಯೂರಪ್ಪ ಬಿಜೆಪಿಗೆ ಕರೆತಂದಿಲ್ಲ- ರಾಮಲಿಂಗಾರೆಡ್ಡಿ ನಿರ್ಧಾರ ಸ್ವಾಗತಾರ್ಹ- ಯತ್ನಾಳ

ವಿಜಯಪುರ: ರಾಜ್ಯದ ವಿದ್ಯಮಾನಗಳ ಕುರಿತು ಹೈಕಮಾಂಡಿಗೆ ಎಲ್ಲ ವಿವರಿಸಿದ್ದೇನೆ.  ಯಡಿಯೂರಪ್ಪ ನನ್ನನ್ನು ಬಿಜೆಪಿಗೆ ಕರೆತಂದಿಲ್ಲ.  ಸಚಿವ ರಾಮಲಿಂಗಾರೆಡ್ಡಿ ಅವರ ನಿರ್ಧಾರವನ್ನು ಸ್ವಾಗತಿಸುತ್ತೇನೆ ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ತಿಳಿಸಿದ್ದಾರೆ. ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮಾಜಿ ಸಿಎಂ ಬಿ. ಎಸ್. ಯಡಿಯೂರಪ್ಪ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ವಿರುದ್ಧ ತಾವು ಮಾಡಿರುವ ಆರೋಪಗಳ ಕುರಿತು ಹೈಕಮಾಂಡಿಗೆ ಮಾಹಿತಿ ನೀಡಿದ್ದಾಗಿ ತಿಳಿಸಿದ್ದಾರೆ. ದೆಹಲಿಯ ಭೇಟಿ ಫಲಪ್ರದವಾಗಿದೆ.  ದೆಹಲಿಗೆ ಬರಲು ರಾಷ್ಟ್ರೀಯ […]

ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ, ರಾಯಭಾರಿಯಾಗಿ ಘೋಷಿಸಲು ಸ್ವಾಮೀಜಿ, ಚಿಂತಕರ ಮನವಿ- ಕ್ಯಾಬಿನೆಟ್ ನಲ್ಲಿ ಚರ್ಚಿಸಿ ತೀರ್ಮಾನ- ಸಿದ್ದರಾಮಯ್ಯ

ಬೆಂಗಳೂರು:  ಅಣ್ಣ ಬಸವಣ್ಣ ಅವರನ್ನು ಸಾಂಸ್ಕೃತಿಕ ನಾಯಕ ಅಥವಾ ರಾಯಭಾರಿಯನ್ನಾಗಿ ಘೋಷಿಸಬೇಕು ಎನ್ನುವ ಒಕ್ಕೋರಲ ಒತ್ತಾಯವನ್ನು ಗೌರವಿಸುತ್ತೇನೆ.  ವೈಯುಕ್ತಿಕವಾಗಿ ನನಗೆ ಈ ಘೋಷಣೆ ಬಗ್ಗೆ ತಕರಾರಿಲ್ಲ.  ಆದರೆ, ಈ ಕುರಿತು ಕ್ಯಾಬಿನೆಟ್ ನಲ್ಲಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಎಸ್. ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.  ವಚನ ಚಳವಳಿಯ ಅಣ್ಣ ಬಸವಣ್ಣ ಅವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಘೋಷಿಸುವಂತೆ ಒತ್ತಾಯಿಸಿ ತರಳಬಾಳು ಜಗದ್ಗುರುಗಳು ಮತ್ತು ಜಗದ್ಗುರು ಶಿವರಾತ್ರಿ ದೇಶೀಕೇಂದ್ರ ಮಹಾಸ್ವಾಮೀಜಿ ನೇತೃತ್ವದ ಲಿಂಗಾಯತ ಸ್ವಾಮೀಜಿಗಳು, ಪ್ರಗತಿಪರ ಸ್ವಾಮೀಜಿಗಳು, […]

ವೃಕ್ಷೊಥಾನ್ ಹೆರಿಟೇಜ್ ರನ್- 2023: ಅತ್ಯಧಿಕ ಓಟಗಾರರು ಪಾಲ್ಗೊಂಡ 3.50 ಕಿ. ಮೀ. ಫಲಿತಾಂಶ ಪ್ರಕಟ

ವಿಜಯಪುರ: ಡಿಸೆಂಬರ್ 24 ರಂದು ಆಯೋಜಿಸಲಾಗಿದ್ದ ವೃಕ್ಷೊಥಾನ್ ಹೆರಿಟೇಜ್ ರನ್-2023ರ 3.50 ಕಿ. ಮೀ. ಓಟದ ವಿಜೇತರ ಹೆಸರುಗಳನ್ನು ಪ್ರಕಟಿಸಲಾಗಿದೆ. ಸುಮಾರು 6000 ಕ್ರೀಡಾಪಟುಗಳು 3.50 ಕಿ. ಮೀ. ಓಟದಲ್ಲಿ ಪಾಲ್ಗೊಂಡಿದ್ದರು.  ಈ ಓಟಕ್ಕೆ ಯಾವುದೇ ಸಮಯ ನಿಗದಿ ಪಡಿಸಿರಲಿಲ್ಲ.  ಅಲ್ಲದೇ, ಸಾವಿರಾರು ಜನ ಇದರಲ್ಲಿ ಪಾಲ್ಗೊಂಡ ಹಿನ್ನೆಲೆಯಲ್ಲಿ ಪ್ರತಿಯೊಂದು ವಿಧಾನಗಳಲ್ಲಿ ಪರಿಶೀಲನೆ ನಡೆಸಿ, ದತ್ತಾಂಶಗಳನ್ನು ಸಂಗ್ರಹಿಸಿ ಈಗ ಫಲಿತಾಂಶವನ್ನು ಪ್ರಕಟಿಸಲಾಗಿದೆ ಎಂದು ವೃಕ್ಷೊಥಾನ್ ಹೆರಿಟೇಜ್ ರನ್ ರೂಟ್ ಸಮಿತಿ ಉಸ್ತುವಾರಿ ಸಂಕೇತ ಬಗಲಿ ತಿಳಿಸಿದ್ದಾರೆ. 3.50 […]

ಮಾದಕ ದ್ರವ್ಯದ ದುಷ್ಪರಿಣಾಮಗಳ ಬಗ್ಗೆ ಜನಜಾಗೃತಿಗಾಗಿ ಎಸ್ಪಿ ಋಷಿಕೇಶ ಸೋನಾವಣೆ ಭಗವಾನ ನೇತೃತ್ವದಲ್ಲಿ ವಾಕ್ ಆ್ಯಂಡ್ ರನ್

ವಿಜಯಪುರ: ಡ್ರಗ್ಸ್ ಮತ್ತು ಮಾದಕ ದ್ರವ್ಯ ಸೇವೆಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಪೊಲೀಸರು ಎಸ್ಪಿ ಋಷಿಕೇಶ ಸೋನಾವಣೆ ಭಗವಾನ ನೇತೃತ್ವದಲ್ಲಿ ನಗರದಲ್ಲಿ ವಾಕ್ ಆ್ಯಂಡ್ ರನ್ ನಡೆಸಿದರು. ಡಾ. ಬಿ. ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಿಂದ ಆರಂಭವಾದ ಜಾಥಾ, ಅಂಬೇಡ್ಕರ್ ಸರ್ಕಲ್, ಗಾಂಧಿ ಸರ್ಕಲ್ ಮೂಲಕ ವಾಟರ್ ಟ್ಯಾಂಕ್, ಗೋದಾವರಿ ಹೋಟೆಲ್ ವರೆಗೆ ನಡೆಯಿತು.  ನಂತರ ಅಲ್ಲಿಂದ ಪೊಲೀಸ್ ಕವಾಯತು ಮೈದಾನದವರೆಗೆ ಸಾಗಿತು.  ಈ ಸಂದರ್ಭದಲ್ಲಿ ಕೈಯ್ಯಲ್ಲಿ ಡ್ರಗ್ಸ್ ಮತ್ತು ಮಾದಕ ದ್ರವ್ಯಗಳ ಸೇವನೆಯಿಂದಾಗುವ […]

ಬುರಣಾಪುರದಲ್ಲಿ ಸರಕಾರಿ ಬಾಲಕರ ಪಿಯು ಕಾಲೇಜಿನ ವತಿಯಿಂದ ಎನ್ಎಸ್ಎಸ್ ವಾರ್ಷಿಕ ಶಿಬಿರ- ವಿದ್ಯಾರ್ಥಿಗಳಿಂದ ಶ್ರಮದಾನ

ವಿಜಯಪುರ: ವಿಜಯಪುರ ನಗರದಲ್ಲಿರುವ ಬಾಲಕರ ಸರಕಾರಿ ಪದವಿ ಪೂರ್ವ ಕಾಲೇಜು ವತಿಯಿಂದ  ವಿಜಯಪುರ ತಾಲೂಕಿನ ಬುರಣಾಪುರ ಗ್ರಾಮದಲ್ಲಿ ಒಂದು ವಾರ ವಾರ್ಷಿಕ ಎನ್ಎಸ್ಎಸ್ ಶಿಬಿರ ನಡೆಯಿತು. ಈ ಶಿಬಿರದಲ್ಲಿ ಶಿಬಿರಾರ್ಥಿಗಳು ಗ್ರಾಮ ಪಂಚಾಯಿತಿ, ಮಹಲ್, ಐನಾಪೂರ ಗ್ರಾಮದ ಸಾರ್ವಜನಿಕ ಪ್ರದೇಶಗಳನ್ನು ಸ್ವಚ್ಚತೆಗೆ ಶ್ರಮದಾನ ಮಾಡಿದರು.  ಈ ಶಿಬಿರದಲ್ಲಿ ಪರಿಸರ ರಕ್ಷಣೆ, ಆರೋಗ್ಯ ಕಾರ್ಯಕ್ರಮ, ನಾನಾ ಉಪನ್ಯಾಸಗಳು ಹಾಗೂ ಸಾಂಸ್ಕೃತಿಕ ಚಟುವಟಿಕೆಗಳನ್ನು ಆಯೋಜಿಸಲಾಯಿತ್ತು. ಈ ಶಿಬಿರದ ಸಮಾರೋಪ ಸಮಾರಂಭವನ್ನು ಪಿಯು ಉಪನಿದೇರ್ಶಕ ಡಾ. ಸಿ. ಕೆ. ಹೊಸಮನಿ ಉದ್ಘಾಟಿದರು.  […]

ಕೇವಲ 18 ವರ್ಷಗಳಲ್ಲಿ ರೂ. 3000 ಕೋ. ಠೇವಣಿ ಸಂಗ್ರಹಿಸಿದ ಸಿದ್ಧಸಿರಿ- ರಾಜ್ಯಾದ್ಯಂತ ಸಾವಿರಾರು ಯುವಜನರಿಗೆ ಉದ್ಯೋಗ- ರಾಘವ ಅಣ್ಣಿಗೇರಿ

ವಿಜಯಪುರ: ಸಿದ್ಧಸಿರಿ ಸೌಹಾರ್ದ ಕೇವಲ 18 ವರ್ಷಗಳಲ್ಲಿ ರೂ. 3000 ಕೋ. ಠೇವಣಿ ಪೂರೈಸಿ ದಾಖಲೆ ನಿರ್ಮಿಸಿದ್ದು, ರಾಜ್ಯಾದ್ಯಂತ ನೂರಾರು ಯುವಕ- ಯುವತಿಯರಿಗೆ ಉದ್ಯೋಗ ಕಲ್ಪಿಸಿದೆ ಎಂದು ಸೌಹಾರ್ದದ ಜಂಟಿ ವ್ಯವಸ್ಥಾಪಕ ನಿರ್ದೇಶಕ ರಾಘವ ಅಣ್ಣಿಗೇರಿ ಹೇಳಿದ್ದಾರೆ.  ಮುದ್ದೇಬಿಹಾಳ ತಾಲೂಕಿನ ತಂಗಡಗಿ ಗ್ರಾಮದಲ್ಲಿ ಸಿದ್ಧಸಿರಿ ಸೌಹಾರ್ದ ಸಹಕಾರಿಯ ಗ್ರಾಹಕರ ಸಭೆ ಸಭೆಯಲ್ಲಿ ಮಾತನಾಡಿದ ಅವರು, ಸೌಹಾರ್ದ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರ ಅಧ್ಯಕ್ಷತೆ ದಕ್ಷ ಆಡಳಿತ ಮಂಡಳಿಯನ್ನು ಹೊಂದಿದೆ.  ರಾಜ್ಯಾದ್ಯಂತ 158 ಶಾಖೆಗಳು, […]

ಕಾಲೇಜು, ವಿವಿ ಶುಲ್ಕ ಶೇ. 10ರಷ್ಟು ಹೆಚ್ಚಳಕ್ಕೆ ಎಬಿವಿಪಿ ಖಂಡನೆ- ವಿದ್ಯಾರ್ಥಿಗಳನ್ನು ಶಿಕ್ಷಣದಿಂದ ವಂಚಿರನ್ನಾಗಿ ಮಾಡುವ ಹುನ್ನಾರ ಆರೋಪ

ವಿಜಯಪುರ: ರಾಜ್ಯ ಸರಕಾರ ಕಾಲೇಜು ಮತ್ತು ವಿಶ್ವವಿದ್ಯಾಲಯಗಳ ಶುಲ್ಕವನ್ನು ಶೇ. 10ರಷ್ಟು ಹೆಚ್ಚಿಸಲು ನಿರ್ಧರಿಸಿರುವುದನ್ನು ಎಬಿವಿಪಿ ಕರ್ನಾಟಕ ಉತ್ತರ ಪ್ರಾಂತ ರಾಜ್ಯ ಕಾರ್ಯದರ್ಶಿ ಸಚೀನ ಕುಳಗೇರಿ ಖಂಡಿಸಿದ್ದಾರೆ.  ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಶಿಕ್ಷಣವು ಎಲ್ಲರಿಗೂ ಸಿಗುವಂತಾಗಬೇಕು.  ಅದು ಕೇವಲ ಉಳ್ಳವರ ಸ್ವತ್ತು ಆಗಬಾರದು.  ಬಡ ಪ್ರತಿಭಾವಂತ, ಕೂಲಿ ಕಾರ್ಮಿಕರು, ರೈತಾಪಿ ವರ್ಗದ,  ಮಕ್ಕಳಿಗೆ ಗುಣಮಟ್ಟದ ಶಿಕ್ಷಣವನ್ನು ಸುಲಭವಾಗಿ ಮತ್ತು ಕನಿಷ್ಠ ಶುಲ್ಕ ರಾಜ್ಯ ಸರಕಾರ ಶೇ.10ರಷ್ಟು ಶುಲ್ಕವನ್ನು  ಹೆಚ್ಚಿಸಲು ಒಪ್ಪಿಗೆ ನೀಡಿರುವುದನ್ನು ವಿರೋಧಿಸುವುದಾಗಿ […]

ಪುರಾತತ್ವ ಇಲಾಖೆ ಅಧೀನದ ಮ್ಯೂಸಿಯಂ ಗಳಲ್ಲಿ ಬಾಂಬ್ ಬೆದರಿಕೆ- ವಿಜಯಪುರದಲ್ಲಿ ತನಿಖೆ ನಡೆಸಿ ಇದೊಂದು ಹುಸಿ ಇ-ಮೇಲ್ ಸಂದೇಶ ಎಂದ ಪೊಲೀಸರು

ವಿಜಯಪುರ: ಭಾರತೀಯ ಪುರಾತತ್ವ ಸರ್ವೇಕ್ಷಣೆ ಇಲಾಖೆಯ ಅಧೀನದಲ್ಲಿ ಬರುವ ಮ್ಯೂಸಿಯಂ ಗಳಲ್ಲಿ ಸ್ಪೋಟಕ ಇರಿಸಲಾಗಿದೆ ಎಂದು ಕಳುಹಿಸಲಾದ ಇ-ಮೇಲ್ ಸಂದೇಶವೊಂದು ಆತಂಕ ಸೃಷ್ಠಿಸಿದ ಘಟನೆ ನಡೆದಿದೆ. ಈ ಇ-ಮೇಲ್ ಸಂದೇಶದ ಮಾಹಿತಿ ಪಡೆದ ವಿಜಯಪುರ ಪೊಲೀಸರು ಐತಿಹಾಸಿಕ ಗೋಳಗುಮ್ಮಟ ಆವರಣದಲ್ಲಿರುವ ಮ್ಯೂಸಿಯಂ ನಲ್ಲಿ ಸುಮಾರು ಮೂರು ಗಂಟೆಗಳ ಕಾಲ ತಪಾಸಣೆ ನಡೆಸಿ ಇದೊಂದು ಹುಸಿ ಇ-ಮೇಲ್ ಸಂದೇಶವಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಶುಕ್ರವಾರ ನಸುಕಿನ ಜಾವ ಬಂದ ಇ-ಮೇಲ್ ಸಂದೇಶ, ರಾತ್ರಿ ಪೊಲೀಸರಿಗೆ ಮಾಹಿತಿ ನೀಡಿದ ಅಧಿಕಾರಿಗಳು ಮ್ಯೂಸಿಯಂ […]

ಬಸವ ನಾಡಿನ ಯುವಕ ದೂರದ ಅಮೇರಿಕದಲ್ಲಿ ಕೌನ್ಸಿಲರ್ ಆಗಿ ಆಯ್ಕೆ

ವಿಜಯಪುರ: ಬಸವ ನಾಡು ವಿಜಯಪುರ ಜಿಲ್ಲೆಯ. ಯುವಕ ನವೀನ ಹಾವಣ್ಣನವರ ದೂರದ ಅಮೇರಿಕಾದಲ್ಲಿ ಕೌನ್ಸಿಲರ್ ಆಗಿ ಆಯ್ಕೆಯಾಗಿದ್ದಾರೆ. ಅಮೇರಿಕಾದ ನ್ಯೂಯಾರ್ಕ್ ರಾಜ್ಯದ ರೋಚೆಸ್ಟರ್ ಜಿಲ್ಲೆಯ ಪೀಟ್ಸ್ ಪೋರ್ಡ್ ಪ್ರದೇಶದಲ್ಲಿ ನಡೆದ ಚುನಾವಣೆಯಲ್ಲಿ ಅವರು ಕೌನ್ಸಲಿಲರ್ ಆಗಿ ಚುನಾಯಿತರಾಗಿದ್ದಾರೆ.  ಈ ಕೌನ್ಸಿಲರ್ ಚುನಾವಣೆಯಲ್ಲಿ  ಡೆಮಾಕ್ರಟಿಕ್ ಪಕ್ಷದಿಂದ ಸ್ಪರ್ದೆ ಮಾಡಿದ್ದ ನವೀನ ಹಾವಣ್ಣವರ, ರಿಪಬ್ಲಿಕನ್ ಪಾರ್ಟಿ ಅಭ್ಯರ್ಥಿ ವಿರುದ್ಧ 33 ಮತಗಳ ಅಂತರಿಂದ ಗೆಲುವು ಸಾಧಿಸಿ ಗಮನ ಸೆಳೆದಿದ್ದಾರೆ.  ಅಷ್ಟೇ ಅಲ್ಲ, ಶುಕ್ರವಾರ ಪೀಟ್ಸ್ ಪೋರ್ಡ್ ಪ್ರದೇಶದ ಕೌನ್ಸಿಲರ್ ಆಗಿ […]