ಚಡಚಣ ಪಟ್ಟಣದಲ್ಲಿ ಪೊಲೀಸರಿಂದ ಮಾದಕ ದ್ರವ್ಯಗಳ ಬಳಕೆ ವಿರುದ್ದ ಜನಜಾಗೃತಿ ಜಾಥಾ

ವಿಜಯಪುರ: ಚಡಚಣ ಪಟ್ಟಣದಲ್ಲಿ ಪೊಲೀಸರು ಮಾದಕ ವಸ್ತುಗಳ ಬಳಕೆಯಿಂದಾಗುವ ದುಷ್ಪರಿಣಾಮ ಕುರಿತು ಜಾಗೃತಿ ಜಾಥಾ ನಡೆಸಿದರು.  ಸಿಬಿಐ ಸುರೇಶ ಬೆಂಡೆಗುಂಬಳ ನೇತೃತ್ವದಲ್ಲಿ ಪಿಎಸ್‌ಐ ಸಂಜಯ ಕಲ್ಲೂರ ಮತ್ತು ಸಿಬ್ಬಂದಿ ಚಡಚಣ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸುವ ಮೂಲಕ.ಮಾದಕ ವಸ್ತುಗಳ ಬಳಕೆ ತಡೆಯುವ ಕುರಿತು ಜಾಗೃತಿ ಮೂಡಿಸಿದರು. ಅಲ್ಲದೇ, ಬಸವೇಶ್ವರ ವೃತ್ತದಲ್ಲಿ ಮಾನವ ಸರಪಳಿ ಮಾಡುವ ಮೂಲಕ ಸಾರ್ವಜನಿಕರಲ್ಲಿ ಅರಿವು ಮಾಡಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸುರೇಶ ಬೆಂಡೆಗುಂಬಳ, ಮಾದಕ ವಸ್ತುಗಳ ಸಾಗಾಟ ಮತ್ತು ಮಾರಾಟ ಕಾನೂನು […]

ವಿಜಯಪುರದಲ್ಲಿ ಸಂಸ್ಕೃತೋತ್ಸವ ಕಾರ್ಯಕ್ರಮ- ಪೇಜಾವರ ಶ್ರೀ, ಬಸವಲಿಂಗ ಸ್ವಾಮೀಜಿ ಚಾಲನೆ

ವಿಜಯಪುರ: ನಗರದ ಕಂದಗಲ ಹಣಮಂತರಾಯ ರಂಗ ಮಂದಿರದಲ್ಲಿ ಸಂಸ್ಕೃತೋತ್ಸವ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮವನ್ನು ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಮತ್ತು ಜ್ಞಾನಯೋಗಾಶ್ರಮದ ಅಧ್ಯಕ್ಷ ಶ್ರೀ ಬಸವಲಿಂಗ ಸ್ವಾಮೀಜಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಪೇಜಾವರ ಶ್ರೀಗಳು, ಸಂಸ್ಕೃತ ಅತ್ಯಂತ ಪ್ರಾಚೀನವಾದ ಭಾಷೆಯಾಗಿದೆ.  ಇಂದು ಅದು ಕೇವಲ ಕೆಲವೇ ಜನ ಬಳಿಕೆ ಮಾಡುವ ಭಾಷೆಯಾಗಿದೆ.  ದೇಶದ ಪ್ರತಿಯೊಂದು ಭಾಷೆಯಲ್ಲೂ ನಾವು ಶೇ. 60ರಷ್ಟು ಸಂಸ್ಕೃತ ಭಾಷೆಯ ಶಬ್ದಗಳನ್ನು ಬಳಿಕೆ ಕಾಣುತ್ತೇವೆ.  ನಿಸರ್ಗದ ಪ್ರಾಣಿ ಪಕ್ಷಿಗಳ […]

ಅಕ್ಷರದವ್ವ ಸಾವಿತ್ರಿಬಾಯಿ ಫುಲೆಯವರ 193ನೇ ಜನ್ಮದಿನ, ಪ್ರಶಸ್ತಿ ಪ್ರಧಾನ ಸಮಾರಂಭ- ದಲಿತ ವಿದ್ಯಾರ್ಥಿ ಪರಿಷತನಿಂದ ಆಯೋಜನೆ

ವಿಜಯಪುರ: ದಲಿತ ವಿದ್ಯಾರ್ಥಿ ಪರಿಷತ್ ವತಿಯಿಂದ ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಸಾವಿತ್ರಿಬಾಯಿ ಫುಲೆ ಅವರ 193ನೇ ಜನ್ಮದಿನದ ಅಂಗವಾಗಿ 2024ನೇ ವರ್ಷದ ರಾಜ್ಯಮಟ್ಟದ ಅಕ್ಷರದವ್ವ ಸಾವಿತ್ರಿಬಾಯಿ ಫುಲೆ ಪ್ರಶಸ್ತಿ ಪ್ರಧಾನ ಸಮಾರಂಭ ಹಾಗೂ ಅಕ್ಷರದವ್ವ ಸಾವಿತ್ರಿಬಾಯಿ ಫುಲೆ ನಾಟಕ ಪ್ರದರ್ಶನ ನಡೆಯಿತು.  ಈ ಕಾರ್ಯಕ್ರಮವನ್ನು ಪ್ರಜಾ ಪರಿವರ್ತನ ವೇದಿಕೆ ಹಾಗೂ ಕೆಪಿಸಿಸಿ ರಾಜ್ಯ ಉಪಾಧ್ಯಕ್ಷ ಬಿ. ಗೋಪಾಲ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಸಾವಿತ್ರಿಬಾಯಿ ಫುಲೆ ಅವರು ಅಂದಿನ ದಿನಗಳಲ್ಲಿ ಮೆಲ್ಜಾತಿಯವರ ತುಳಿತ, ಹೆಣ್ಣುಮಕ್ಕಳು, ಶೊಷಿತ […]

ವಿಜಯಪುರದ ಐಶ್ವರ್ಯ ನಗರದಲ್ಲಿ ರಾಮ ಮಂದಿರ ಉದ್ಘಾಟನೆ ಆಮಂತ್ರಣ ಮಂತ್ರಾಕ್ಷತೆ ವಿತರಣೆ

ವಿಜಯಪುರ: ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಉದ್ಘಾಟನೆಗೆ ಸಿದ್ಧವಾಗಿದ್ದು, ಈ ಕಾರ್ಯಕ್ರಮದ ಮಂತ್ರಾಕ್ಷತೆ ಮತ್ತು ಆಮಂತ್ರಣ ಪತ್ರಿಕೆ ವಿತರಣೆ ಕಾರ್ಯಕ್ರಮ ನಗರದಲ್ಲಿ ನಡೆಯಿತು. ನಗರದ ಜ್ಞಾನಯೋಗಾಶ್ರಮ ಬಳಿ ಇರುವ ಐಶ್ವರ್ಯ ನಗರದ ಶ್ರೀ ವೀರಾಂಜನೇಯ ದೇವಾಲಯದಲ್ಲಿ ಅಯೋಧ್ಯದಿಂದ ಬಂದಿರುವ ಮಂತ್ರಾಕ್ಷತೆ, ಆಮಂತ್ರಣ ಪತ್ರಿಕೆ, ಅಯೋಧ್ಯೆ ದೇವಾಲಯದ ಚಿತ್ರಗಳನ್ನು ವಿತರಿಸಲಾಯಿತು.  ಐಶ್ವರ್ಯ ನಗರದ ಸುತ್ತಲಿನ ಬಡಾವಣೆಗಳ ರಾಮಭಕ್ತರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡರು ಈ ಸಂದರ್ಭದಲ್ಲಿ ಮುಖಂಡರಾದ ಗಿರೀಶ ಪಾಟೀಲ, ಸಿದ್ದು ಕರಲಗಿ, ವಿರಾಜ ಅಂಗಡಿ, ಜಯಪ್ರಕಾಶ ಅಂಬಲಿ, ರವಿ ಹಿತ್ತಲಮನಿ, […]

ಜಿಲ್ಲೆಯ ಸಮಗ್ರ ಅಭಿವೃದ್ದಿಗೆ ಕ್ರಮ ಕೈಗೊಳ್ಳಿ- ಅಧಿಕಾರಿಗಳಿಗೆ ಸಚಿವ ಎಂ. ಬಿ. ಪಾಟೀಲ ಸೂಚನೆ

ವಿಜಯಪುರ: ಐತಿಹಾಸಿಕ ಸ್ಮಾರಕಗಳನ್ನೊಳಗೊಂಡ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ದಿಗೆ ರೋಡ್ ಮ್ಯಾಪ್ ಸಿದ್ಧಪಡಿಸಬೇಕು. ಪಾರಂಪರಿಕ ತಾಣಗಳಿಗೆ ಹೆಚ್ಚೆಚ್ಚು ಪ್ರವಾಸಿಗರನ್ನು ಆಕರ್ಷಿಸುವ ನಿಟ್ಟಿನಲ್ಲಿ ಪಾರಂಪರಿಕ ತಾಣಗಳ ರಕ್ಷಣೆ ಹಾಗೂ ಸ್ವಚ್ಛತೆಯೊಂದಿಗೆ ಪ್ರವಾಸೋದ್ಯಮ ಉತ್ತೇಜನಕ್ಕೆ ಕ್ರಮ ವಹಿಸುವಂತೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಭೂತ ಸೌಕರ್ಯ ಖಾತೆ ಸಚಿವರಾದ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಅವರು ಸೂಚನೆ ನೀಡಿದ್ದಾರೆ. ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜರುಗಿದ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ (ಕೆಡಿಪಿ) ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಜಿಲ್ಲೆಯ […]

ಸಿದ್ದೇಶ್ವರ ಸ್ವಾಮೀಜಿಗಳ ನೀತಿ, ಆದರ್ಶಗಳನ್ನು ಸರಕಾರ ಪಾಲಿಸಲಿದೆ-ನಾನು ಬಸವಾದಿ ಶರಣರ ಅನುಯಾಯಿ- ಸಿಎಂ ಸಿದ್ಧರಾಮಯ್ಯ

ವಿಜಯಪುರ: ನಾನು ಬಸವಾದಿ ಶರಣರ ಅನುಯಾಯಿ.  ಶ್ರೀ ಸಿದ್ಧೇಶ್ವರ ಸ್ವಾಮೀಜಿಗಳ ನೀತಿ ಆದರ್ಶಗಳನ್ನು ನಾನು ಮತ್ತು ನಮ್ಮ ಸರಕಾರ ಪಾಲನೆ ಮಾಡಲಿದೆ ಎಂದು ಮುಖ್ಯಮಂತ್ರಿ ಎಸ್. ಸಿದ್ಧರಾಮಯ್ಯ ಹೇಳಿದ್ದಾರೆ. ವಿಜಯಪುರ ನಗರದ ಜ್ಞಾನಯೋಗಾಶ್ರಮದ ಶ್ರೀ ಸಿದ್ದೇಶ್ವರ ಸ್ವಾಮೀಜಿ ಲಿಂಗೈಕ್ಯರಾಗಿ ಇಂದಿಗೆ ಒಂದು ವರ್ಷ ಪೂರ್ಣವಾಗುತ್ತಿರುವ ಹಿನ್ನೆಲೆಯಲ್ಲಿ ಆಯೋಜಿಸಲಾದ ಶ್ರೀ ಸಿದ್ದೇಶ್ವರ ಸ್ವಾಮೀಜಿಗಳ ಗುರುನಮನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ನಾನು ಬಸವಾದಿ ಶರಣರ ಅನುಯಾಯಿ.  ಅವರು ಜಾತಿ ಮತ್ತು ಧರ್ಮ ರಹಿತವಾದ ಸಮಾಜ ನಿರ್ಮಾಣ ಗುರಿ […]

ಶ್ರೀ ಸಿದ್ಧೇಶ್ವರ ಅಪ್ಪನವರಂಥ ಗುರು ಮತ್ತೊಬ್ಬರು ಸಿಗಲು ಸಾಧ್ಯವಿಲ್ಲ- ಸಂಸದ ರಮೇಶ ಜಿಗಜಿಣಗಿ ಭಾವುಕ ನುಡಿ

ವಿಜಯಪುರ: ಶ್ರೀ ಸಿದ್ದೇಶ್ವರ ಅಪನವರಂಥ ಗುರು ಮತ್ತೊಬ್ಬರು ಸಿಗಲು ಸಾಧ್ಯವಿಲ್ಲ ಎಂದು ಸಂಸದ ರಮೇಶ ಜಿಗಜಿಣಗಿ ಹೇಳಿದ್ದಾರೆ. ನಗರದ ಜ್ಞಾನಯೋಗಾಶ್ರಮದಲ್ಲಿ ನಡೆಯುತ್ತಿರುವ ಗುರುನಮನ ಮಹೋತ್ಸವದ ಅಂಗವಾಗಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ನಾನು ಸಮಾಜದ ಅತ್ಯಂತ ಸಣ್ಣ ವ್ಯಕ್ತಿ.  ಆದರೆ, ಶ್ರೀಗಳು ನನ್ನನ್ನು ಅತ್ಯಂತ ಆತ್ಮೀಯವಾಗಿ ಮಾತನಾಡಿಸುತ್ತಿದ್ದರು.  ತಮ್ಮ ಪಕ್ಕದಲ್ಲಿಯೇ ಕೂಡಿಸಿಕೊಂಡು ಊಟ ಮಾಡುತ್ತಿದ್ದರು.  ಅವರಂಥ ಸಂತರನ್ನು ನನ್ನ ಇಡೀ ಜೀವನದಲ್ಲಿಯೇ ಕಂಡಿಲ್ಲ.  ವ್ಯಕ್ತಿತ್ವದಿಂದಲೇ ಅವರು ಜಗತ್ಪ್ರಸಿದ್ಧಿಯನ್ನು ಗಳಿಸಿದ್ದರು.  ಸ್ವಂತಕ್ಕೆ ಏನನ್ನು ಭಯಸದೆ ಸದಾ ಸಮಾಜಕ್ಕೆ […]

ಅಲೆಮಾರಿ ಜನಾಂಗದ ಸೌಲಭ್ಯಗಳ ಕುರಿತು ಅರಿವು ಮೂಡಿಸಿ ಅನುಷ್ಠಾನಗೊಳಿಸಿ- ಜಿಲ್ಲಾಧಿಕಾರಿ ಟಿ. ಭೂಬಾಲನ ಸೂಚನೆ

ವಿಜಯಪುರ: ಅಲೆಮಾರಿ, ಅರೆಅಲೆಮಾರಿ ಜನಾಂಗದವರಿಗೆ ಸರಕಾ ರದಿಂದ ದೊರೆಯುವ ಸೌಲಭ್ಯಗಳ ಕುರಿತು ಸೂಕ್ತ ಜಾಗೃತಿ ಹಾಗೂ ಅರಿವು ಮೂಡಿಸಿ ಸಮರ್ಪಕವಾಗಿ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಸೂಚನೆ ನೀಡಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಅಲೆಮಾರಿ ಮತ್ತು ಅರೆ ಅಲೆಮಾರಿ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಅಲೆಮಾರಿ-ಅರೆ ಅಲೆಮಾರಿ ಜನಾಂಗಕ್ಕೆ ದೊರೆಯುವ ಸೌಲಭ್ಯಗಳನ್ನು ದೊರಕಿಸಿ ಆರ್ಥಿಕ ಸ್ವಾವಲಂಬನೆಗೆ ಅಧಿಕಾರಿಗಳು ಕ್ರಮ ವಹಿಸಬೇಕು. ಅಲೆಮಾರಿ […]

ಜ್ಞಾನಯೋಗಾಶ್ರಮದಲ್ಲಿ ಶತಮಾನದ ಸಂತನಿಗೆ ಗುರುನಮನ- ಸಾಗರೋಪಾದಿಯಲ್ಲಿ ಹರಿದು ಬರುತ್ತಿದೆ ಶ್ರೀ ಸಿದ್ಧೇಶ್ವರ ಸ್ವಾಮೀಜಿ ಭಕ್ತಗಣ

ವಿಜಯಪುರ: ಹೊಸ ವರ್ಷವನ್ನು ವಿಶ್ವಾದ್ಯಂತ ಸಡಗರ ಮತ್ತು ಸಂಭ್ರಮದಿಂದ ಆರಂಭಿಸಿದ್ದಾರೆ.  ಆದರೆ, ಇದೇ ವೇಳೆ, ಬಸವ ನಾಡಿನ ಜನ ಮಾತ್ರ ಇದನ್ನು ಶ್ರದ್ಧಾ ಭಕ್ತಿಯಿಂದ ಶತಮಾನದ ಸಂತ ಶ್ರೀ ಸಿದ್ಧೇಶ್ವರ ಸ್ವಾಮೀಜಿಗಳ ಪುಣ್ಯಭೂಮಿಗೆ ಭೇಟಿ ನೀಡುವ ಮೂಲಕ ತಮ್ಮ ಚಟುವಟಿಕೆಗಳನ್ನು ಪ್ರಾರಂಭಿಸಿದ್ದಾರೆ. ನಡೆದಾಡಿದ ದೇವರು ಶ್ರೀ ಸಿದ್ಧೇಶ್ವರ ಸ್ವಾಮೀಜಿಗಳು ದೇಹತ್ಯಾಗ ಮಾಡಿ ಈಗ ಒಂದು ವರ್ಷ ಪೂರ್ಣವಾಗುತ್ತಿದೆ.  ಈ ಹಿನ್ನೆಲೆಯಲ್ಲಿ ಕಳೆದ ಸುಮಾರು ಒಂದು ತಿಂಗಳಿಂದ ಗುರುನಮನ ಕಾರ್ಯಕ್ರಮದ ಅಂಗವಾಗಿ ನಾನಾ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು […]

Year End Poem: 2023 ವರ್ಷಾಂತ್ಯದ ಸಂದರ್ಭದಲ್ಲಿ ಡಾ. ಅರುಣ ಚಂ. ಇನಾಮದಾರ ರಚಿಸಿರುವ ಕವನ

ವಿಜಯಪುರ: ಸಾಕಷ್ಟು ನಲಿವು ಮತ್ತು ನೋವಗಳನ್ನು ನೀಡಿದ ವರ್ಷ 2023.  ಈ ವರ್ಷದಲ್ಲಿ ಹಲವರಿಗೆ ಒಳ್ಳೆಯದಾಗಿದ್ದರೆ, ಮತ್ತೆ ಕೆಲವರಿಗೆ ಸಂಕಷ್ಟ ತಂದಿದೆ.  ಈ ಸಂದರ್ಭದಲ್ಲಿ ಚರ್ಮರೋಗ ಖ್ಯಾತ ತಜ್ಞ ಮತ್ತು ವಿಜಯಪುರದ ಪ್ರತಿಷ್ಠಿತ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಸಮಕುಲಪತಿ ಡಾ. ಅರುಣ ಚಂ. ಇನಾಮದಾರ ಅವರು  ನೆನಪು ಹೆಸರಿನಲ್ಲಿ ಕವಿತೆಯೊಂದನ್ನು ರಚಿಸಿದ್ದಾರೆ. ಮುಪ್ಪಾವಸ್ಥೆಯಲ್ಲಿರುವ ದಂಪತಿ ತಮ್ಮ ಯೌವ್ವನಾವಸ್ಥೆಯ ನೆನಪುಗಳನ್ನು ಸ್ಮರಿಸುವ ಪದ್ಯ ಇದಾಗಿದೆ.  ಅಲ್ಲದೇ, ಮುಂಬರುವ ಹೊಸ ವರ್ಷವನ್ನು ಸ್ವಾಗತಿಸುವ ಸಂದೇಶವೂ ಇದರಲ್ಲಿದೆ. ಡಾ. ಅರುಣ ಚಂ. […]