ಪ್ರಾಥಮಿಕ, ಪ್ರೌಢ ಶಾಲೆಗಳ ಶಿಕ್ಷಕರ ವರ್ಗಾವಣೆ ಕೌನ್ಸಲಿಂಗ್: ಜಿ. ಪಂ. ಸಿಇಓ ರಿಷಿ ಆನಂದ ಪರಿಶೀಲನೆ

ವಿಜಯಪುರ: ಕೌನ್ಸಲಿಂಗ್ ಪ್ರಕ್ರಿಯೆ ಮೂಲಕ ನಾನಾ ಪ್ರಾಧಾನ್ಯತೆಗಳಡಿಯಲ್ಲಿ ತಮಗೆ ಅನುಕೂಲವಾಗುವ ಸ್ಥಳಗಳಲ್ಲಿ ವರ್ಗಾವಣೆ ಪಡೆಯುವ ಶಿಕ್ಷಕರು ಸಂತೃಪ್ತಿಯಿಂದ ಬೋಧನಾ ಕಾರ್ಯವನ್ನು ನಿರ್ವಹಿಸಿ ಇಲಾಖೆಯ ಗುರಿ ಉದ್ದೇಶಗಳ ಸಫಲತೆಗೆ ಹೆಚ್ಚು ಪರಿಶ್ರಮವಹಿಸಬೇಕು ಎಂದು ಜಿ. ಪಂ. ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಿಷಿ ಆನಂದ ಹೇಳಿದ್ದಾರೆ.   ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರ ಕಚೇರಿಯಲ್ಲಿ ನಡೆಯುತ್ತಿರುವ 2024-25ನೇ ವರ್ಷದ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಶಿಕ್ಷಕರ ವರ್ಗಾವಣೆ ಕೌನ್ಸಿಲಿಂಗ್‌ನಲ್ಲಿ ಭಾಗವಹಿಸಿರುವ ಶಿಕ್ಷಕರು ಆನ್-ಲೈನ್ ಪ್ರಕ್ರಿಯೆ ಮೂಲಕ ಸ್ಥಳ ಆಯ್ಕೆ ಮಾಡಿಕೊಳ್ಳುವ […]

ಸರಕಾರಿ ಕಾರ್ಯಕ್ರಮಗಳಲ್ಲಿ ಹಾರ, ಶಾಲು, ತುರಾಯಿ ಸನ್ಮಾನ ಕಡ್ಡಾಯ ನಿಷೇಧ- ತಪ್ಪಿದರೆ ಶಿಸ್ತು ಕ್ರಮ ಡಿಸಿ ಟಿ. ಭೂಬಾಲನ್

ವಿಜಯಪುರ: ಯಾವುದೇ ಸರಕಾರಿ ಸಮಾರಂಭಗಳಲ್ಲಿ ಹಾರ, ಶಾಲು ಮತ್ತು ತುರಾಯಿ ಇತ್ಯಾದಿ ವಸ್ತುಗಳಿಂದ ಸನ್ಮಾನ ಮಾಡುವುದನ್ನು ಕಡ್ಡಾಯವಾಗಿ ನಿಷೇಧಿಸಿರುವುದರಿಂದ ಈ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು.  ಈ ಆದೇಶ ಉಲ್ಲಂಘಿಸುವ ಅಧಿಕಾರಿಗಳ ವಿರುದ್ಧ ಕೆ. ಸಿ. ಎಸ್. ಆರ್. 1957ರ ಅನ್ವಯ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಟಿ. ಭೂಬಾಲನ್ ತಿಳಿಸಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಜಿಲ್ಲೆಯಲ್ಲಿ ಶಾಲಾ ಶಿಕ್ಷಣ ಇಲಾಖೆ ಅಡಿಯಲ್ಲಿ ಶಾಲಾ ಶೈಕ್ಷಣಿಕ ಕಾರ್ಯಕ್ರಮಗಳಲ್ಲಿ ಮತ್ತು ಇತರೆ ಸರಕಾರಿ ಸಮಾರಂಭಗಳಲ್ಲಿ […]

ಪತ್ರಕರ್ತರಾದ ಅಶೋಕ ಯಡಳ್ಳಿ, ಇರಫಾನ್ ಶೇಖ್ ಕಾನಿಪ ಜಿಲ್ಲಾ ಕಾರ್ಯಕಾರಿ ಸಮಿತಿಗೆ ನಾಮನಿರ್ದೆಶನ

ವಿಜಯಪುರ :ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಕಾರ್ಯಕಾರಿಣಿ ಸಮಿತಿಗೆ ಇಬ್ಬರು ಹಿರಿಯ ಪತ್ರಕರ್ತರನ್ನು ನಾಮನಿರ್ದೇಶನ ಸದಸ್ಯರನ್ನಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ. ಹೊಸ ಪತ್ರಿಕಾ ಭವನದಲ್ಲಿ ಸಂಗಮೇಶ ಚೂರಿ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಟಿವಿ ವರದಿಗಾರ ಅಶೋಕ ಯಡಳ್ಳಿ ಮತ್ತು ಗುಮ್ಮಟ ನಗರಿ ವ್ಯವಸ್ಥಾಪಕ ಮಹಮ್ಮ ಇರ್ಇಾನ್ ಶೇಖ ಅವರನ್ನು ಕಾರ್ಯಕಾರಿ ಸಮಿತಿಗೆ ನಾಮನಿರ್ದೇಶಿತ ಸದಸ್ಯರನ್ನಾಗಿ ಒಕ್ಕೋರಲಿನಿಂದ ಆಯ್ಕೆ ಮಾಡಲಾಗಿದೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಮೋಹನ ಪಿ. ಕುಲಕರ್ಣಿ ಮಾಧ್ಯಮ ಪ್ರಕಟಣೆಯಲ್ಲಿ […]

ಅಹಿಂದ ಹೆಸರಿನಲ್ಲಿ ಆಡಳಿತ ನಡೆಸುತ್ತಿರುವ ಸರಕಾರ ದಲಿತ ವಿರೋಧಿಯಾಗಿದೆ- ಗೋಪಾಲ ಘಟಕಾಂಬಳೆ

ವಿಜಯಪುರ: ಅಹಿಂದ ಹೆಸರು ಹೇಳಿಕೊಂಡು ಆಡಳಿತ ನಡೆಸುತ್ತಿರುವ ರಾಜ್ಯ ಸರಕಾರ ದಲಿತರ ವಿರೋಧಿಯಾಗಿದೆ ಎಂದು ಬಿಜೆಪಿ ಎಸ್ಸಿ ಮೋರ್ಚಾ ರಾಜ್ಯ ಉಪಾಧ್ಯಕ್ಷ ಗೋಪಾಲ ಘಟಕಾಂಬಳೆ ಆರೋಪಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಾಲ್ಮೀಕಿ ನಿಗಮದಲ್ಲಿ ರೂ. 187 ಕೋ. ಹಗರಣ ಮಾಡಿದ್ದಾರೆ.  ಈ ಹಗರಣದಲ್ಲಿ ಸಚಿವರ ತಲೆದಂಡವಾಗಿದ್ದು, ಅನೇಕರನ್ನು ಬಂಧಿಸಲಾಗಿದೆ.  ಅಹಿಂದ ನಾಯಕರು ಎಂದು ಬಿಂಬಿಸಿ ದಲಿತರಿಗೆ ಕಾಂಗ್ರೆಸ್ ವಂಚಿಸುತ್ತಿದ್ದು, ಕೈ ಪಕ್ಷ ದಲಿತರ ವಿರೋಧಿಯಾಗಿದೆ ಎಂದು ಆರೋಪಿಸಿದರು. ರಾಜ್ಯ ಸರಕಾರ ಆಡಳಿತಕ್ಕೆ ಬಂದಮೇಲೆ ಭ್ರಷ್ಟಾಚಾರ ತಾಂಡವಾಡುತ್ತಿದೆ.  […]

ಇಂಡಿಯಲ್ಲಿ ಡೆಂಗ್ಯು ಜನಜಾಗೃತಿ ಜಾಥಾಕ್ಕೆ ಡಿಸಿ ಟಿ. ಭೂಬಾಲನ್ ಚಾಲನೆ

ವಿಜಯಪುರ: ಮನೆಯ ಸುತ್ತಮುತ್ತಲಿನ ಸಂಗ್ರಹಗೊಳ್ಳುವ ನೀರಿನಲ್ಲಿ ಉತ್ಪತ್ತಿಯಾಗುವ ಈಡೀಸ್ ಸೊಳ್ಳೆಗಳು ಕಚ್ಚುವ ಮೂಲಕ ಡೆಂಗ್ಯೂ ಹರಡಲಿರುವುದರಿಂದ ಸಾರ್ವಜನಿಕ ತಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವ ಮೂಲಕ ಡೆಂಗ್ಯೂ ಹರಡದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಜಿಲ್ಲಾಧಿಕಾರಿ ಟಿ. ಭೂಬಾಲನ್ ಅವರು ಕರೆ ನೀಡಿದ್ದಾರೆ. ಇಂಡಿ ಮಿನಿ ವಿಧಾನಸೌಧದ ಆವರಣದಲ್ಲಿ ನಡೆದ ಡೆಂಗ್ಯು ಜನಜಾಗೃತಿಯ ಜಾಥಾಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಮಳೆಗಾಲ ಆರಂಭವಾಗಿರುವುದರಿಂದ ಮನೆ ಸುತ್ತಮುತ್ತ ನೀರು ಸಂಗ್ರಹವಾಗದಂತೆ ಸಾರ್ವಜನಿಕರು ಜಾಗೃತೆ ವಹಿಸಬೇಕು.  ಘನತ್ಯಾಜ್ಯ ವಸ್ತುಗಳನ್ನು ವಿಂಗಡಿಸಿ ವಿಲೇವಾರಿ ಮಾಡಬೇಕು, […]

ಕಾನಿಪ ಜಿಲ್ಲಾ ಪ್ರಶಸ್ತಿ ಪ್ರಕಟ- ರಮೇಶ, ಗೌಡರ, ಪ್ರಕಾಶ, ಇರ್ಫಾನ್, ವಿಜಯ, ಸುನೀಲಧ್ವಯರು ಸೇರಿ 31 ಪತ್ರಕರ್ತರು ಪ್ರಶಸ್ತಿಗೆ ಆಯ್ಕೆ

ವಿಜಯಪುರ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದ ವತಿಯಿಂದ ನೀಡಲಾಗುವ 2024ನೇ ವರ್ಷದ  ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಲಾಗಿದೆ. ಮಾಧ್ಯಮ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಸ್ಥಾನಿಕ ಸಂಪಾದಕರು, ಜಿಲ್ಲಾ, ತಾಲೂಕು ವರದಿಗಾರರು, ಕ್ಯಾಮೆರಾಮನ್‌ಗಳು ಹಾಗೂ ಪತ್ರಿಕಾ ವಿತರಕರು ಸೇರಿದಂತೆ ಒಟ್ಟು 31 ಜನರಿಗೆ ವಾರ್ಷಿಕ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಗುವುದು.  ಜು. 28ರಂದು ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಯೋಗದಲ್ಲಿ ನಗರದ ಪೊಲೀಸ್ ಸಮುದಾಯ ಭವನದಲ್ಲಿ ನಡೆಯಲಿರುವ ಪತ್ರಿಕಾ ದಿನಾಚರಣೆ […]

ಶರಣ ಹಡಪದ ಅಪ್ಪಣ್ಣ ಜಾತಿ, ಧರ್ಮ, ವರ್ಣ ರಹಿತ ಸಮಾಜಕ್ಕಾಗಿ ಶ್ರಮಿಸಿದ್ದಾರೆ- ಶಂಕರಗೌಡ ಬಿರಾದಾರ

ವಿಜಯಪುರ: ಶರಣ ಹಡಪದ ಅಪ್ಪಣ್ಣ ಜಾತಿ ಧರ್ಮ ಹಾಗೂ ವರ್ಣರಹಿತ ಸಮಾಜ ನಿರ್ಮಾಣಕ್ಕೆ ಶ್ರಮಿಸಿದ್ದಾರೆ ಎಂದು ರಾಷ್ಟ್ರೀಯ ಬಸವ ಸೈನ್ಯದ ಸಂಸ್ಥಾಪಕ ಅಧ್ಯಕ್ಷ ಶಂಕರಗೌಡ ಬಿರಾದಾರ ಹೇಳಿದ್ದಾರೆ. ಬಸವನ ಬಾಗೇವಾಡಿ ಪಟ್ಟಣದ ವೀರರಾಣಿ ಕಿತ್ತೂರು ಚೆನ್ನಮ್ಮ ವೃತ್ತದಲ್ಲಿ ರಾಷ್ಟ್ರೀಯ ಬಸವ ಸೈನ್ಯ ಏರ್ಪಡಿಸಿದ್ದ ಶಿವಶರಣ ಹಡಪದ ಅಪ್ಪಣ್ಣನವರ 890ನೇ ಜಯಂತೋತ್ಸವದ ಅಂಗವಾಗಿ ಶರಣ ಹಡಪದ ಅಪ್ಪಣ್ಣ ಅವರ ಭಾವಚಿತ್ರಕ್ಕೆ ಪೂಜಿ ಸಲ್ಲಿಸಿದ ನಂತರ ಮಾತನಾಡಿದರು ಶರಣರ ಕಾಯಕ ಬದುಕು ಯುವ ಪೀಳಿಗೆಗೆ ದಾರಿ ದೀಪವಾಗಬೇಕು.  ಶರಣರು ಏಕೆ […]

ರಾಜ್ಯ ಸರಕಾರದಿಂದ ಸಹಕಾರ ಸಂಘಗಳ ವಿರುದ್ಧ ಕಾನೂನು ಜಾರಿಗೆ ಯತ್ನ- ಸಂಜಯ ಪಾಟೀಲ ಕನಮಡಿ ಆರೋಪ

ವಿಜಯಪುರ: ರಾಜ್ಯ ಸರಕಾರ ಸಹಕಾರ ಸಂಘಗಳ ವಿರುದ್ಧ ಕಾನೂನು ತರಲು ಹೊರಟಿದೆ ಎಂದು ಬಿಜೆಪಿ ಸಹಕಾರ ಪ್ರಕೋಷ್ಠದ ರಾಜ್ಯ ಸಂಚಾಲಕ ಸಂಜಯ ಪಾಟೀಲ ಕನಮಡಿ ಆರೋಪಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸಹಕಾರ ಸಚಿವಾಲಯ ಸ್ಥಾಪನೆ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಎಲ್ಲ ಸಹಕಾರಿಗಳ ಒಂದು ಬಹುದಿನಗಳ ಕನಸನ್ನು ನನಸು ಮಾಡಿದ್ದಾರೆ.  ಇದರಿಂದ ದೇಶದ ಎಲ್ಲ ಸಹಕಾರ ಸಂಸ್ಥೆಗಳು, ಸದಸ್ಯರ ಮಾಹಿತಿ ಸಂಗ್ರಹಿಸಲಾಯಿತು.  ಒಟ್ಟು ಮೂರು ಹಂತದ ಬೇರೆ ಬೇರೆ ಸ್ವರೂಪಗಳನ್ನೊಳಗೊಂಡ ಸಹಕಾರಿ […]

ಬಸವ ನಾಡಿನ ರೈತರಿಂದ ಮಹಾರಾಷ್ಟ್ರದ ಮಹಾಬಳೇಶ್ವರದಲ್ಲಿ ಮಾಜಿ ಸಚಿವ ಎಸ್. ಕೆ. ಬೆಳ್ಳುಬ್ಬಿ ನೇತೃತ್ವದಲ್ಲಿ ಕೃಷ್ಣಾ ನದಿ ಉಗಮ ಸ್ಥಾನದಲ್ಲಿ ಗಂಗಾಪೂಜೆ, ಬಾಗಿನ ಅರ್ಪಣೆ

ವಿಜಯಪುರ: ಉತ್ತರ ಕರ್ನಾಟಕದ ಜೀವನದಿ ಕೃಷ್ಣೆಯ ಉಗಮ ಸ್ಥಾನ ಮಹಾರಾಷ್ಟ್ರದ ಮಹಾಬಳೇಶ್ವರದಲ್ಲಿ ಬಸವ ನಾಡಿನ ರೈತರು ಮಾಜಿ ಸಚಿವ ಎಸ್. ಕೆ. ಬೆಳ್ಳುಬ್ಬಿ ನೇತೃತ್ವದಲ್ಲಿ ಗಂಗಾಪೂಜೆ ಸಲ್ಲಿಸಿ ಬಾಗೀನ ಅರ್ಪಿಸಿದ್ದಾರೆ. ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಉತ್ತರ ಕರ್ನಾಟಕದಲ್ಲಿ ಕೃಷ್ಣಾ ನದಿ ಉಕ್ಕಿ ಹರಿಯುತ್ತಿದೆ.  ನಮ್ಮ ರಾಜ್ಯದಲ್ಲಿ ಮಳೆ ಆಗದಿದ್ದರೂ ಪ್ರತಿವರ್ಷ ಜನ, ಜಾನುವಾರುಗಳಿ ಈ ನದಿ ಜೀವಜಲ ನೀಡುತ್ತಿದೆ.  ವಿಜಯಪುರ, ಬಾಗಲಕೋಟೆ, ಯಾದಗಿರಿ, ಕಲಬುರಗಿ, ರಾಯಚೂರು ಜಿಲ್ಲೆಗಳಿಗೆ ಈ ನದಿಯೇ ಜೀವನಾಡಿಯಾಗಿದೆ.  ಆದ್ದರಿಂದ ವಿಜಯಪುರ ಮತ್ತು […]

ಬಸವ ನಾಡಿನಲ್ಲಿ ಗುರು ಪೂರ್ಣಿಮೆ ಸಂಭ್ರಮ- ಜ್ಞಾನಯೋಗಾಶ್ರಮಕ್ಕೆ ಭಕ್ತರ ದಂಡು

ವಿಜಯಪುರ: ಬಸವನಾಡು ವಿಜಯಪುರ ಜಿಲ್ಲಾದ್ಯಂತ ಗುರು ಪೂರ್ಣಿಮೆ ಹಬ್ಬದ ಸಂಭ್ರಮ ಮನೆ ಮಾಡಿದೆ.   ವಿಜಯಪುರ ನಗರದ ಜ್ಞಾನಯೋಗಾಶ್ರಮದಲ್ಲಿ ಗುರುಪೂರ್ಣಿಮಾ ಮಹೋತ್ಸವ ನಡೆಯುತ್ತಿದ್ದುಗುರು ಪೂರ್ಣಿಮೆ ಅಂಗವಾಗಿ ವೇದಾಂತಕೇಸರಿ ಮಲ್ಲಿಕಾರ್ಜುನ ಮಹಾಶಿವಯೋಗಿಗಳ ಗದ್ದುಗೆಗೆ ಆಶ್ರಮದ ಸ್ವಾಮೀಜಿಗಳು ಪೂಜೆ ಸಲ್ಲಿಸಿದರು. ಬೆಳಗ್ಗೆ 4.30ಕ್ಕೆ ಮಹಾ ಜಪಯೋಗದಿಂದ ಪ್ರಾರಂಭವಾಗಿರುವ ನಾನಾ ಧಾರ್ಮಿಕ ಕಾರ್ಯಕ್ರಮಗಳು ಈಗಲೂ ಮುಂದುವರೆದಿವೆ.   ಶ್ರೀ ಮಲ್ಲಿಕಾರ್ಜುನ ಶಿವಯೋಗಿಗಳು ಶತಮಾನದ ಸಂತ ಶ್ರೀ ಸಿದ್ದೇಶ್ವರ ಸ್ವಾಮೀಜಿಗಳ ಗುರುಗಳಾಗಿದ್ದರು.  ಪ್ರತಿ ವರ್ಷ ಗುರು ಪೂರ್ಣಿಮೆ ದಿನ ಇಲ್ಲಿ ಜಾತ್ರೆ ನಡೆಯುತ್ತದೆ.  , ಬೆಳಿಗ್ಗೆಯಿಂದಲೇ […]