ರೋಗಶಾಸ್ತ್ರಜ್ಞರು ವೈದ್ಯರಲ್ಲಿಯೇ ಜಾಣ ವೈದ್ಯರಾಗಿದ್ದಾರೆ- ಡಾ. ಮಂಜುನಾಥ ಕೋಟೆಣ್ಣವರ

ವಿಜಯಪುರ: ರೋಗಶಾಸ್ತ್ರಜ್ಞರು ವೈದ್ಯರಲ್ಲಿಯೇ ಜಾಣ ವೈದ್ಯರಾಗಿದ್ದಾರೆ ಎಂದು ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯ, ಆಸ್ಪತ್ರೆ ಮತ್ತು ಸಂಶೋಧನೆ ಕೇಂದ್ರದ ಶಸ್ತ್ರಚಿಕಿತ್ಸೆ ವಿಭಾಗದ ಮುಖ್ಯಸ್ಥ ಡಾ. ಮಂಜುನಾಥ ಕೋಟೆಣ್ಣವರ ಹೇಳಿದ್ದಾರೆ. ಬುಧವಾರ ವೈದ್ಯಕೀಯ ಮಹಾವಿದ್ಯಾಲಯದ ವೈದ್ಯಕೀಯ ಶಿಕ್ಷಣ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ವಿಶ್ವ ರೋಗನಿರ್ಣಯ ಶಾಸ್ತ್ರ ದಿನಾಚರಣೆ ಉದ್ಘಾಟಿಸಿ ಅವರು ಅವರು ಮಾತನಾಡಿದರು. ಎಲ್ಲಾ ವೈದ್ಯಕೀಯ ವಿಭಾಗಗಳಲ್ಲೂ ರೋಗಗಳನ್ನು ಪತ್ತೆ ಹಚ್ಚಲು ರೋಗಶಾಸ್ತ್ರ ತಜ್ಞ ವೈದ್ಯರ ಪಾತ್ರ ಪ್ರಮುಖವಾಗಿದೆ.  ರೋಗಶಾಸ್ತ್ರ ವೈದ್ಯರು ಎಲ್ಲಾ […]

ಭೀಮಸೇನ ಕೋಕರೆ ಕೇಂದ್ರ ತೋಟಗಾರಿಕೆ ಸಮಗ್ರ ಅಭಿವೃದ್ಧಿ ಎಂಐಡಿಎಚ್ ಗೆ ಸದಸ್ಯರಾಗಿ ನೇಮಕ

ವಿಜಯಪುರ: ಪ್ರಗತಿಪರ ರೈತ ಮತ್ತು ಕೃಷಿ ಪದವೀಧರ ಭೀಮಸೇನ ಕೋಕರೆ ಅವರನ್ನು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರು ಎಂಐಡಿಎಚ್ ಸದಸ್ಯರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಮಿಶನ್ ಫಾರ್ ಇಂಟಿಗ್ರೇಟೆಡ್ ಡೆವಲೆಪಮೆಂಟ್ ಆಫ್ ಹರ್ಟಿಕಲ್ಚ್ ಫಾರ್ ದಿ ಹೋಲಿಸ್ಟಿಕ್ ಡೆವಲೆಪಮಂಟ್ ಆಫ್ ಹರ್ಟಿಕಲ್ಚರ್ ಇನ್ ದಿ ಕಂಟ್ರಿ( ದೇಶದಲ್ಲಿ ಸಮಗ್ರ ತೋಟಗಾರಿಕೆಗಾಗಿ ತೋಟಗಾರಿಕೆ ಅಭಿವೃದ್ಧಿ ಮಿಷನ್) ಯೋಜನೆಗೆ ಈ ನೇಮಕಾತಿ ಮಾಡಲಾಗಿದೆ. ಹೊಸ ಜವಾಬ್ದಾರಿ ಸಿಕ್ಕಿರುವುದಕ್ಕೆ ದ್ರಾಕ್ಷಿ ಬೆಳೆಗಾರರೂ ಆಗಿರುವ ಬಿ. ಎಂ. […]

ಸಿಎಂ ಭೇಟಿಯಾದ ಶಾಸಕ ಯಶವಂತರಾಯಗೌಡ ವಿ. ಪಾಟೀಲ- ಇಂಡಿ ಮತಕ್ಷೇತ್ರದ ಕೆರೆ, ಕಾಲುವೆಗಳಿಗೆ ನೀರು ಬಿಡುಗಡೆಗೆ ಮನವಿ ಪತ್ರ ಸಲ್ಲಿಕೆ

ವಿಜಯಪುರ: ಇಂಡಿ ಮತಕ್ಷೇತ್ರದ ಕೊನೆಯ ಭಾಗದವರೆಗೆ ಕೆರೆ ಮತ್ತು ಕಾಲುವೆಗಳಿಗೆ ನೀರು ಹರಿಸದಿದ್ದರೆ ಮತ್ತು ಇಂಡಿ ನೂತನ ಜಿಲ್ಲೆಯಾಗಿ ಘೋಷಣೆ ಮಾಡದಿದ್ದರೆ ರಾಜೀನಾಮೆ ನೀಡುವುದಾಗಿ ಎಚ್ಚರಿಕೆ ನೀಡಿದ್ದ ಇಂಡಿ ಕಾಂಗ್ರೆಸ್ ಶಾಸಕ ಯಶವಂತರಾಯಗೌಡ ವಿ. ಪಾಟೀಲ ಸಿಎಂ ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, 07.11.2023ರಂದು ಸುದ್ದಿ ಗೋಷ್ಠಿ ನಡೆಸಿ ಇಂಡಿ ಭಾಗದಲ್ಲಿ ನೀರಾವರಿ ಯೋಜನೆಗಳು ಭೌತಿಕವಾಗಿ ಪೂರ್ಣಗೊಂಡಿದ್ದರೂ ಕಳೆದ 22 ವರ್ಷಗಳಿಂದ ನೀರು ಬರುತ್ತಿಲ್ಲ.  ಈಗಿನ ಬರ […]

ಗುಮ್ಮಟ ನಗರಿಯಲ್ಲಿ ಟಿಪ್ಪು ಜಯಂತಿ ಸಂಭ್ರಮ- ಟಿ. ಎಸ್. ಎಸ್. ಸಂಘಟನೆಯಿಂದ ಆಯೋಜನೆ

ವಿಜಯಪುರ: ನಗರದ ಟಿಪ್ಪು ಸುಲ್ತಾನ ಸರ್ಕಲ್‌ನಲ್ಲಿ ಟಿ. ಎಸ್. ಎಸ್ ಸಂಘಟನೆಯ ವತಿಯಿಂದ ಮೈಸೂರು ಹುಲಿ ಟಿಪ್ಪು ಸುಲ್ತಾನ ಅವರ ಜಯಂತಿಯವನ್ನು ಸಂಭ್ರಮದಿಂದ ಆಚರಿಸಲಾಯಿತು. ಈ ಕಾರ್ಯಕ್ರಮದ ಅಂಗವಾಗಿ ಮೈಸೂರು ಹುಲಿ ಟಿಪ್ಪು ಸುಲ್ತಾನ ಅವರ ಭಾವಚಿತ್ರಕ್ಕೆ ಸರ್ವಧರ್ಮಿಯರು ಒಗ್ಗೂಡಿ ಪುಷ್ಪಾರ್ಚನೆ ಸಲ್ಲಿಸಿ ಟಿಪ್ಪು ಧ್ವಜಾರೋಹಣ ನೆರವೇರಿಸಿ ಜೈಕಾರ ಹಾಕಿದರು.  ಈ ಸಂದರ್ಭದಲ್ಲಿ ಇತ್ತೀಚೆಗೆ ಬೆಂಗಳೂರಿನಲ್ಲಿ ರಾಜ್ಯ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಪಡೆದ ಹಿರಿಯ ಉರ್ದು ಪತ್ರಕರ್ತ ರಫೀ ಭಂಡಾರಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಈ ಕಾರ್ಯಕ್ರಮದಲ್ಲಿ […]

ಅನಾಥಾಶ್ರಮ ಮಕ್ಕಳಿಗೆ ದೀಪಾವಳಿ ಗಿಫ್ಟ್ ನೀಡಿದ ವಿಜಯಪುರದ ನಾಗರಾಳೆ ಶಿಕ್ಷಣ ಸಂಸ್ಥೆ ಹಾರೈಕೆ

ವಿಜಯಪರ: ನಗರದ ನಾಗರಾಳೆ ಶಿಕ್ಷಣ ಸಂಸ್ಥೆ ವತಿಯಿಂದ ದೀಪಾವಳಿ ಅಂಗವಾಗಿ ನಗರದ ಬಾಗಲಕೋಟೆ ರಸ್ತೆಯ ಬಸವ ನಗರದಲ್ಲಿರುವ ಅನಾಥಾಶ್ರಮದ ಮಕ್ಕಳಿಗೆ ಸಿಹಿ ಮತ್ತು ಸ್ವೇಟರ್ ವಿತರಿಸಲಾಯಿತು.  ಈ ಸಂದರ್ಭದಲ್ಲಿ ಮಾತನಾಡಿದ ಸಂಸ್ಥೆಯ ಅಧ್ಯಕ್ಷ ಸಿದರಾಯ ಬಿ. ನಾಗರಾಳೆ, ಇಲ್ಲಿ ವಾಸವಾಗಿರುವ ಅನಾಥ ಮಕ್ಕಳಿಗೆ ಸ್ವೇಟರ್ ನೀಡಿದ್ದು ಅತೀವ ಸಂತಸವನ್ನುಂಟು ಮಾಡಿದೆ.  ಈ ಎಲ್ಲ ಮಕ್ಕಳಿಗೆ ದೇವರು ಆರೋಗ್ಯವನ್ನು ನೀಡಲಿ.  ದೀಪಾವಳಿ ಇವರ ಬಾಳಲ್ಲಿ ಹೊಸ ಹುಮ್ಮಸ್ಸನ್ನು ತರಲಿ ಎಂದು ಶುಭ ಹಾರೈಸಿದರು. ಕರ್ನಾಟಕ ರಾಜ್ಯ ಕಾರ್ಮಿಕರ ಮತ್ತು […]

ಬಸವ ನಾಡಿನಲ್ಲಿ ಅಪ್ಪು ಪಟ್ಟಣಶೆಟ್ಟಿ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರ ಸಂಭ್ರಮಾಚರಣೆ- ಬಿ. ವೈ. ವಿಜಯೇಂದ್ರ ಪರ ಜಯಕಾರ

ವಿಜಯಪುರ: ಶಿಕಾರಿಪುರ ಶಾಸಕ ಬಿ. ವೈ. ವಿಜಯೇಂದ್ರ ಅವರನ್ನು ಭಾರತೀಯ ಜನತಾ ಪಕ್ಷದ ನೂತನ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿದ ಹಿನ್ನೆಲೆಯಲ್ಲಿ ಬಸವ ನಾಡು ವಿಜಯಪುರದಲ್ಲಿ ಬಿ ಜೆ ಪಿ ಕಾರ್ಯಕರ್ತರು ಮಾಜಿ ಸಚಿವ ಅಪ್ಪು ಪಟ್ಟಣಶೆಟ್ಟಿ ನೇತೃತ್ವದಲ್ಲಿ ಸಂಭ್ರಮಾಚರಣೆ ನಡೆಸಿದರು. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ ಅವರು ಬಿ. ವೈ. ವಿಜಯೇಂದ್ರ ಅವರನ್ನು ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿದ ಆದೇಶ ಮಾಹಿತಿ ತಿಳಿಯುತ್ತಿದ್ದಂತೆ ಬಿಜೆಪಿ ಕಾರ್ಯಕರ್ತರು ಪರಸ್ಪರ ಕರೆ ಮಾಡಿ ಸಂಭ್ರಮಿಸಲವು ನಿರ್ಧರಿಸಿದರು.  […]

ಶಾಸಕ ಬಿ. ವೈ. ವಿಜಯೇಂದ್ರ ದೀಪಾವಳಿ ಗಿಫ್ಟ್- ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ನೇಮಕ ಮಾಡಿದ ಜೆ. ಪಿ. ನಡ್ಡಾ

ವಿಜಯಪುರ: ದೀಪಾವಳಿ ಗಿಫ್ಟ್ ಎಂಬಂತೆ ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ಮಾಜಿ ಸಿಎಂ ಬಿ. ಎಸ್. ಯಡಿಯೂರಪ್ಪ ಪುತ್ರ ಮತ್ತು ಶಿಕಾರಿಪುರ ಶಾಸಕ ಬಿ. ವೈ. ವಿಜಯೇಂದ್ರ ಅವರನ್ನು ನೇಮಕ ಮಾಡಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ ಆದೇಶ ಹೊರಡಿಸಿದ್ದಾರೆ. ತಕ್ಷಣದಿಂದಲೇ ಜಾರಿಗೆ ಬರುವಂತೆ ಈ ನೇಮಕ ಮಾಡಿ ಜೆ. ಪಿ. ನಡ್ಡಾ ಆದೇಶ ಹೊರಡಿಸಿದ್ದಾರೆ.  ಈವರೆಗೆ ರಾಜ್ಯಾಧ್ಯಕ್ಷರಾಗಿದ್ದ ನಳೀನಕುಮಾರ ಕಟೀಲ ಅವರ ಬದಲಾವಣೆ ಮಾತು ಬಹಳ ದಿನಗಳಿಂದಲೇ ಕೇಳಿ ಬರುತ್ತಿತ್ತು.  ಈ ಮಧ್ಯೆ ಕೇಂದ್ರ […]

ಸರಕಾರಿ ಗಂಡು, ಹೆಣ್ಣು ಮಕ್ಕಳ ಮರಾಠಿ ಶಾಲೆಯಲ್ಲಿ ವಿಶ್ವ ಆಹಾರ ದಿನಾಚರಣ

ವಿಜಯಪುರ: ನಗರದ ಸರಕಾರಿ ಮರಾಠಿ ಗಂಡು ಮಕ್ಕಳ ಶಾಲೆ ಸಂಖ್ಯೆ 1 ಮತ್ತು ಸರಕಾರಿ ಹೆಣ್ಣು ಮಕ್ಕಳ ಹಿರಿಯ ಪ್ರಾಥಮಿಕ ಶಾಲೆ ಸಂಖ್ಯೆ 11ಯಲ್ಲಿ ಬಿ. ಎಲ್. ಡಿ. ಈ ಸಂಸ್ಥೆಯ ಎ. ವಿ. ಎಸ್ ಆಯರ್ವೇದ ಮಹಾವಿದ್ಯಾಲಯ ವತಿಯಿಂದ ವಿಶ್ವ ಆಹಾರ ದಿನಾಚರಣೆಯ ಆಂಗವಾಗಿ ಉಚಿತ ಆರೋಗ್ಯ ತಪಾಸಣೆ ಶಿಬಿರ ನಡೆಯಿತು.  ಈ ಸಂದರ್ಭದಲ್ಲಿ ಮಾತನಾಡಿದ ಕಾಲೇಜಿನ ಸಂಹಿತಾ ಸಿದ್ದಾಂತ ವಿಭಾಗದ ಮುಖ್ಯಸ್ಥೆ ಪ್ರೊ. ರೇಣುಕಾ ತೆನಹಳ್ಳಿ, ಪ್ರತಿನಿತ್ಯ ಪೌಷ್ಠಿಕ ಆಹಾರ ಸೇವನೆ ವಿಧಾನ ಮತ್ತು […]

ಕೃಷ್ಣಾನಗರ ನಂದಿ ಶಾಲೆಯ ವಿದ್ಯಾರ್ಥಿಗಳ ಸಾಧನೆ- ಜಿಲ್ಲಾ ಮಟ್ಟದ ಕಬ್ಬಡ್ಡಿ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ

ವಿಜಯಪುರ: ಬಬಲೇಶ್ವರ ತಾಲೂಕಿನ ಕೃಷ್ಣಾನಗರದ ನಂದಿ ಸಹಕಾರಿ ಸಕ್ಕರೆ ಕಾರ್ಖಾನೆಯ ಆಶ್ರಯದಲ್ಲಿ ನಡೆಯುತ್ತಿರುವ ಬಿ. ಟಿ. ಪಾಟೀಲ ಮೆಮೋರಿಯಲ್ ನಂದಿ ಅಂತರರಾಷ್ಟ್ರೀಯ ವಸತಿ ಶಾಲೆಯ ವಿದ್ಯಾರ್ಥಿನಿಯರು ಇತ್ತೀಚೆಗೆ ಸಿಂದಗಿಯ ಲೊಯೋಲ ಸಿಬಿಎಸ್ಇ ಶಾಲೆಯಲ್ಲಿ ನಡೆದ ಅಂತರಶಾಲಾ ಕ್ರೀಡಾಕೂಟದಲ್ಲಿ ಕಬಡ್ಡಿಯಲ್ಲಿ ಪ್ರಥಮ ಸ್ಥಾನ ಪಡೆದು ಗಮನ ಸೆಳೆದಿದ್ದಾರೆ. ಈ ಕ್ರೀಡಾಕೂಟದಲ್ಲಿ ಒಟ್ಟು 13 ಸಿಬಿಎಸ್ಇ ಶಾಲೆಗಳ ವಿದ್ಯಾರ್ಥಿಗಳು ಭಾಗವಹಿಸಿದ್ದರು.  ಈ ಕಬಡ್ಡಿ ತಂಡದಲ್ಲಿರುವ ಮಧು ಕಂಕಾಳಿ, ಪೂರ್ವಿ ನಾಯಿಕ, ಕೃತಿಕಾ ಕೊರ್ತಿ, ಮಾಯಾ ಶೇಗುಣಶಿ, ಲಕ್ಷ್ಮಿ ಬರಗಿ, ತ್ರೀಕ್ಷಾ […]

ದೆಹಲಿಯಲ್ಲಿ ಹವಾಮಾಲಿನ್ಯ ಪ್ರಮಾಣ AQI 400+, ಬಸವನಾಡಿನಲ್ಲಿ ಕೇವಲ 30- ಹೇಗೆ ಅಳೆಯುತ್ತಾರೆ ಗೊತ್ತಾ?

ವಿಜಯಪುರ: ರಾಜಧಾನಿ ದೆಹಲಿ ಈಗ ವಿಶ್ವದ ಅತೀ ಹೆಚ್ಚು ಹವಾಮಾಲಿನ್ಯದ ನಗರಗಳಲ್ಲಿ ಒಂದಾಗಿದ್ದು, ಜನ ಉಸಿರಾಡಲು ಎಚ್ಚರಿಕೆ ವಹಿಸಬೇಕಾದ ಅನಿವಾರ್ಯತೆ ಇದೆ.  ಅಲ್ಲಿನ ಹವಾಮಾನ ನಿಗದಿತ ಪ್ರಮಾಣಕ್ಕಿಂತ ಏಳೆಂಟು ಪ್ರಮಾಣ ಹೆಚ್ಚಾಗಿದ್ದು, ಶಾಲೆ, ಕಾಲೇಜುಗಳಿಗೆ ರಜೆಯನ್ನೂ ನೀಡಲಾಗಿದೆ.  ಆದರೆ, ಇದೇ ನಮ್ಮ ಬಸವ ನಾಡು ಈಗಲೂ ಕೂಡ ಶುದ್ಧ ಗಾಳಿಯಿಂದ ಜನಮನ ತಣಿಸುತ್ತಿದೆ.  ಅಂತರ್ಜಾಲದಲ್ಲಿ ಲಭ್ಯವಿರುವ ಮಾಹಿತಿಯಂತೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಇಂದು AQI ಅಂದರೆ ಹವಾಮಾನ ಗುಣಮಟ್ಟದ ಸೂಚ್ಯಂಕ 433ಕ್ಕೂ ಹೆಚ್ಚಾಗಿದ್ದರೆ, ಇತ್ತ ವಿಜಯಪುರ ನಗರದಲ್ಲಿ […]