ಚಡಚಣ ಪಿಎಸ್ಐ ಮಹಾದೇವ ಯಲಿಗಾರ ಅಮಾನತು- ಸಂಜಯ ಕಲ್ಲೂರ ನೂತನ‌‌ ಪಿಎಸ್ಐ ಆಗಿ ವರ್ಗಾವಣೆ

ವಿಜಯಪುರ: ಚಡಚಣ  ಪಿಎಸ್ಐ ಮಹಾದೇವ ಯಲಿಗಾರ ಅವರನ್ನು ಕರ್ತವ್ಯಲೋಪ ಆರೋಪದಡಿ ಅಮಾನತು ಮಾಡಿ ಬೆಳಗಾವಿ ಉತ್ತರ ವಲಯ ಆರಕ್ಷಕ ಮಹಾನಿರೀಕ್ಷಕ ವಿಕಾಶ್ ಕುಮಾರ್ ವಿಕಾಶ್ ಆದೇಶ ಹೊರಡಿಸಿದ್ದಾರೆ. ಈ ಹಿಂದೆ ಬಿಜೆಪಿ ಸರಕಾರದ ಅವಧಿಯಲ್ಲಿ ಅನುಪಮ ಅಗರವಾಲ ಎಸ್ಪಿಯಾಗಿದ್ದ ಸಂದರ್ಭದಲ್ಲಿ ಇದೇ ಚಡಚಣದಲ್ಲಿ ಪಿಎಸ್‌ಐ ಆಗಿದ್ದ ಮಹಾದೇವ ಯಲಿಗಾರ ಕೊರೊನಾ ಮಾರ್ಗಸೂಚಿ ಉಲ್ಲಂಘನೆ ಸೇರಿದಂತೆ ನಾನಾ ಕರ್ತವ್ಯಲೋಪ ಆರೋಪದಡಿ ಅಮಾನತು ಆಗಿದ್ದರು.  ಆದರೆ, ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿದ್ದಂತೆ ಇದೇ ಚಡಚಣ ಪೊಲೀಸ್ ಠಾಣೆಗೆ ಮತ್ತೆ […]

ಸೂಕ್ತ ಸಮಯದಲ್ಲಿ ಜಾನುವಾರುಗಳಿಗೆ ಸೂಕ್ತ ಚಿಕಿತ್ಸೆ ಅಗತ್ಯ ಲಸಿಕೆ ನೀಡಿ- ಜಿ. ಪಂ. ಸಿಇಓ ರಾಹುಲ ಶಿಂಧೆ

ವಿಜಯಪುರ: ರೋಗಗಸ್ಥ ಜಾನುವಾರುಗಳಿಗೆ ಸರಿಯಾದ ಸಮಯದಲ್ಲಿ ಸೂಕ್ತ ಚಿಕಿತ್ಸೆ ಹಾಗೂ ಲಸಿಕೆ ನೀಡುವಂತೆ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ಶಿಂಧೆ ಹೇಳಿದರು. ಅವರು ಜಿಲ್ಲಾ ಪಶು ವೈಧ್ಯಕೀಯ ಪಾಲಿಕ್ಲಿನಿಕಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಅಧಿಕಾರಿಗಳಿಗೆ ಸೂಚನೆ ನೀಡಿದರು. ಪ್ರತಿ ದಿನ ಪಶು ವೈಧ್ಯಕೀಯ ಪಾಲಿಕ್ಲಿನಿಕ್ ಭೇಟಿ ನೀಡುವ ಸಾರ್ವಜನಿಕರು, ರೈತರ ಭೇಟಿ ಕುರಿತು ಮಾಹಿತಿ ಪಡೆದುಕೊಂಡರು. ಜಾನುವಾರುಗಳಿಗೆ ಮತ್ತು ರೈತರಿಗೆ ನೀಡುವ ಚಿಕಿತ್ಸೆಗಳ ಕುರಿತು ಪರಿಶೀಲನೆ ನಡೆಸಿದ ಅವರು, ಇಲ್ಲಿನ ನಾನಾ ವಿಭಾಗಗಳಿಗೆ […]

ಸಿದ್ಧರಾಮಯ್ಯ ಎರಡನೇ ಬಾರಿಗೆ ಮುಖ್ಯಮಂತ್ರಿಯಾದರೂ ಆಡಳಿತ ನಡೆಸಲು ಬರುತ್ತಿಲ್ಲ- ರಾಜ್ಯಾಧ್ಯಕ್ಷ ನಳೀನ ಕುಮಾರ ಕಟೀಲ ವಾಗ್ದಾಳಿ

ವಿಜಯಪುರ: ಮುಖ್ಯಮಂತ್ರಿ ಎಸ್. ಸಿದ್ಧರಾಮಯ್ಯ ಅವರು ಎರಡು ಬಾರಿ ಸಿಎಂ ಆದರೂ ಅವರಿಗೆ ಆಡಳಿತ ನಡೆಸಲು ಬರುತ್ತಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳೀನ ಕುಮಾರ ಕಟೀಲ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿ ಬರ ಅಧ್ಯಯನ ತಂಡದೊಂದಿಗೆ ತಿಕೋಟಾ ತಾಲೂಕಿನ ಬರಪೀಡಿದ ಜಾಲಗೇರಿ ಗ್ರಾಮಕ್ಕೆ ಭೇಟಿ ನೀಡಿದ ಅವರು, ಬರದಿಂದ ಉಂಟಾಗಿರುವ ಬೆಳೆಹಾನಿ ಕುರಿತು ರೈತರಿಂದ ಮಾಹಿತಿ ಪಡೆದರು. ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದರು. ಬರದ ವಿಚಾರದಲ್ಲಿ ರಾಜ್ಯದ […]

ನಾನಾ ಮತಗಟ್ಟೆ, ಶಾಲೆಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ. ರಿಚರ್ಡ್ ವಿನ್ಸೆಂಟ್ ಡಿಸೋಜಾ ಭೇಟಿ, ಪರಿಶೀಲನೆ

ವಿಜಯಪುರ: ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಸರ್ಕಾರದ ಕಾರ್ಯದರ್ಶಿಗಳಾದ ವಿಜಯಪುರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ, ಮತದಾರರ ಪಟ್ಟಿಯ ವೀಕ್ಷಕರಾದ ಡಾ.ರಿಚರ್ಡ್ ವಿನ್ಸೆಂಟ್ ಡಿಸೋಜ್ ಅವರು ಇಂಡಿ ವಿಧಾನಸಭಾ ಮತಕ್ಷೇತ್ರದ ನಾನಾ ಮತಗಟ್ಟೆಗಳಿಗೆ ಹಾಗೂ ಶಾಲೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇಂಡಿ ತಾಲೂಕಿನ ಹೊರ್ತಿ ಸರಕಾರಿ ಕನ್ನಡ ಗಂಡು ಮಕ್ಕಳ ಹಿರಿಯ ಪ್ರಾಥಮಿಕ ಶಾಲೆ ಭೇಟಿ ನೀಡಿದ ಅವರು, ಮಕ್ಕಳ ಹಾಜರಾತಿ ಮತ್ತು ನಿರ್ಮಾಣ ಹಂತದ ಕಟ್ಟಡ ಪರಿಶೀಲನೆ ನಡೆಸಿ ಅಗತ್ಯ ಸೂಚನೆಗಳನ್ನು ನೀಡಿದರು. ನಂತರ ಸರಕಾರಿ […]

ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿರ್ವಹಿಸಿ- ಡಾ.ರಿ ಚರ್ಡ್ ವಿನ್ಸೆಂಟ್ ಡಿಸೋಜಾ ಅಧಿಕಾರಿಗಳಿಗೆ ಸೂಚನೆ

ವಿಜಯಪುರ: ಜಿಲ್ಲೆಯಲ್ಲಿ ಬರ ಪರಿಸ್ಥಿತಿ ಇರುವುದರಿಂದ ಉದ್ಭವಿಸಬಹುದಾದ ಸಮಸ್ಯೆಗಳನ್ನು ಯೋಜನಾಬದ್ಧವಾಗಿ ಮತ್ತು ವ್ಯವಸ್ಥಿತವಾಗಿ ಯಾವುದೇ ಸಮಸ್ಯೆ ಬರದಂತೆ ನಿರ್ವಹಿಸಬೇಕು ಎಂದು ವಾಣಿಜ್ಯ ಮತ್ತು ಕೈಗಾರಿಕಾ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ. ರಿಚರ್ಡ್ ವಿನ್ಸೆಂಟ್ ಡಿಸೋಜಾ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಬರ ಪರಿಸ್ಥಿತಿ ಇರುವುದರಿಂದ ಎಲ್ಲಾ ಅಧಿಕಾರಿಗಳು ಜವಾಬ್ದಾರಿಯಿಂದ ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು. ಯಾವುದೇ ಲೋಪಗಳಿಗೆ ಆಸ್ಪದ […]

ಶುದ್ಧ ಅಂತಿಮ ಮತದಾರ ಪಟ್ಟಿ ಪ್ರಕಟಣೆಗೆ ಸಹಕರಿಸಿ: ಡಾ. ರಿಚರ್ಡ್ ವಿನ್ಸೆಂಟ್ ಡಿಸೋಜ್

ವಿಜಯಪುರ: ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಅರ್ಹತಾ ದಿನಾಂಕ : 01-01-2024ಕ್ಕೆ ಸಂಬಂಧಿಸಿದಂತೆ ಕರಡು ಮತದಾರರ ಪಟ್ಟಿಯನ್ನು ಈಗಾಗಲೇ ಪ್ರಕಟಿಸಲಾಗಿದ್ದು, ಜಿಲ್ಲೆಯಲ್ಲಿ 5 ಮತಗಟ್ಟೆಗಳನ್ನು ವಿಲೀನಗೊಳಿಸಲಾಗಿದ್ದು, 18 ಹೊಸ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಸಮನ್ವಯತೆ ಸಾಧಿಸಲು ಬಿಎಲ್‍ಎಗಳ ನೇಮಕ ಮಾಡಿಕೊಂಡು ಶುದ್ಧ ಅಂತಿಮ ಮತದಾರರ ಪಟ್ಟಿಗೆ ಸಹಕರಿಸುವಂತೆ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಸರ್ಕಾರದ ಕಾರ್ಯದರ್ಶಿಗಳಾದ ವಿಜಯಪುರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ, ಮತದಾರರ ಪಟ್ಟಿಯ ವೀಕ್ಷಕರಾದ ಡಾ.ರಿಚರ್ಡ್ ವಿನ್ಸೆಂಟ್ ಡಿಸೋಜಾ ಹೇಳಿದ್ದಾರೆ. ಜಿಲ್ಲಾಧಿಕಾರಿಗಳ […]

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಎಸ್. ಡಿ. ಕುಮಾನಿ ಅವರನ್ನು ಸನ್ಮಾನಿಸಿ ಗೌರವಿಸಿದ ಕಾರ್ಪೋರೇಟರ್ ಪ್ರೇಮಾನಂದ ಬಿರಾದಾರ

ವಿಜಯಪುರ: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತಿ ಹಿರಿಯ ಸಮಾಜ ಸೇವಕ ಸಿದ್ರಾಮಪ್ಪ ದುಂಡಪ್ಪ ಕುಮಾನಿ ಅವರ ನಿವಾಸಕ್ಕೆ ತೆರಳಿದ ಕಾರ್ಪೋರೇಟರ್ ಪ್ರೇಮಾನಂದ ಬಿರಾದಾರ ಸನ್ಮಾನಿಸಿ ಗೌರವಿಸಿದರು. ಜಲಗನರದ ಸ್ನೇಹಿತರೊಂದಿಗೆ ಸಿದ್ರಾಮಪ್ಪ ದುಂಡಪ್ಪ ಕುಮಾನಿ ಅವರ ಮನೆಗೆ ತೆರಳಿದ ಅವರು, ಗೌರವ ಸಮರ್ಪಿಸಿ ಆಶೀರ್ವಾದರು. ಬಳಿಕ ಮಾತನಾಡಿದ ಪ್ರೇಮಾನಂದ ಬಿರಾದಾರ, ವಿಜಯಪುರ ನಗರದಲ್ಲಿ ಯಾವುದೇ ಸೌಲಭ್ಯವಿಲ್ಲದೇ ಪರದಾಡುತ್ತಿದ್ದ ಹಮಾಲರಿಗೆ ಪ್ರತ್ಯೇಕವಾಗಿ ಒಂದು ಬಡಾವಣೆ ಮಾಡಲು ಕುಮಾನಿ ಅವರು ಕಾರಣರಾಗಿದ್ದಾರೆ.  ಮೂರ್ನಾಲ್ಕು ದಶಕಗಳ ಹಿಂದೆ ಅವರು ಮಾಡಿದ ಸಮಾಜಪ ಸೇವೆಯಿಂದಾಗಿ […]

ಜೈಲಿನ ಕೈದಿಗಳಿಗೆ ಉನ್ನತ ಶಿಕ್ಷಣ- ಕೌಶಲ್ಯಾಧಾರಿತ ವೃತ್ತಿಪರ ಕೋರ್ಸ್ಗಳ ಅಧ್ಯಯನ ಕೇಂದ್ರ ಉದ್ಘಾಟನೆ

ವಿಜಯಪುರ: ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ನಗರದ ಕೇಂದ್ರ ಕಾರಾಗೃಹದಲ್ಲಿ ಮೈಸೂರು ಗಂಗೋತ್ರಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸಹಯೋಗದಲ್ಲಿ ಬಂಧಿಗಳಿಗೆ ಉನ್ನತ ಶಿಕ್ಷಣ ಮತ್ತು ಕೌಶಲ್ಯಾಧಾರಿತ ವೃತ್ತಿಪರ ಕೋರ್ಸ್‍ಗಳ ಅಧ್ಯಯನ ಕೇಂದ್ರಕ್ಕೆ ಚಾಲನೆ ನೀಡಲಾಯಿತು. ಜಿಲ್ಲಾಧಿಕಾರಿ ಟಿ. ಭೂಬಾಲನ್ ಅವರು ಕೇಂದ್ರದ ಉದ್ಘಾಟನೆ ನೆರವೇರಿಸಿದರು. ಬಳಿಕ ಮಾತನಾಡಿದ ಅವರು, ಕಾರಾಗೃಹದ ಬಂಧಿಗಳು ಬಿಡುಗಡೆಯ ನಂತರದ ಭವಿಷ್ಯದ ಬದುಕನ್ನು ರೂಪಿಸಿಕೊಳ್ಳಲು ಉನ್ನತ ಶಿಕ್ಷಣ ಕೇಂದ್ರಗಳು ಅತೀ ಅಗತ್ಯವಾಗಿವೆ.  ಬಂದಿಗಳ ಭವಿಷ್ಯದ ಕೌಶಲ್ಯಾಭಿವೃದ್ದಿ ತರಬೇತಿಗಳನ್ನು ಆಯೋಜಿಸಲು ಜಿಲ್ಲಾಡಳಿತದಿಂದ ಸಹಕಾರ ನೀಡಲಾಗುವುದು.  […]

ಕೇಂದ್ರ ಬರ ಅಧ್ಯಯನ ತಂಡ ನ. 4ರಂದು ವಿಜಯಪುರ ಜಿಲ್ಲೆಗೆ ಭೇಟಿ- ಆರ್. ಎಸ್. ಪಾಟೀಲ ಕೂಚಬಾಳ

ವಿಜಯಪುರ: ಜಿಲ್ಲೆಯಲ್ಲಿ ಉಂಟಾಗಿರುವ ಬರ ಅಧ್ಯಯನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನಕುಮಾರ ಕಟೀಲ್‌ ನೇತೃತ್ವದ ತಂಡ ನ. 4ರಂದು ಭೇಟಿ ನೀಡಲಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಆರ್‌. ಎಸ್. ಪಾಟೀಲ ಕೂಚಬಾಳ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ತಂಡದಲ್ಲಿ ಸಂಸದರಾದ ರಮೇಶ ಜಿಗಜಿಣಗಿ, ಪಿ. ಸಿ. ಗದ್ದಿಗೌಡರ, ಶಾಸಕ ಬಸನಗೌಡ ಪಾಟೀಲ ಯತ್ನಾಳ, ಮಾಜಿ ಸಚಿವ ಮುರುಗೇಶ ನಿರಾಣಿ, ಮಾಜಿ ಶಾಸಕರಾದ ಪಿ. ರಾಜೀವ, ವೀರಣ್ಣ ಚರಂತಿಮಠ, ಎ. ಎಸ್‌. ಪಾಟೀಲ ನಡಹಳ್ಳಿ, ಸಿದ್ದು ಸವದಿ ಇರಲಿದ್ದಾರೆ ಎಂದು ತಿಳಿಸಿದರು. […]

ಶ್ರೀ ಸಿದ್ಧಾರೂಢರ ತತ್ವಾದರ್ಶಗಳು ಎಲ್ಲರಿಗೂ ದಾರಿದೀಪವಾಗಿವೆ- ಬೀದರಿನ ಡಾ. ಶಿವಕುಮಾರ ಮಹಾಸ್ವಾಮೀಜಿ

ವಿಜಯಪುರ: ಶ್ರೀ ಸಿದ್ಧಾರೂಢರ ತತ್ವಾದರ್ಶಗಳು ಇಂದಿಗೂ ಎಲ್ಲರಿಗೂ ದಾರಿದೀಪವಾಗಿವೆ ಎಂದು ಬೀದರಿನ ಶ್ರೀ ಶಿವಕುಮಾರ ಮಹಾಸ್ವಾಮೀಜಿ ಹೇಳಿದ್ದಾರೆ. ನಗರದ ಸೋಲಾಪುರ ರಸ್ತೆ ಬಳಿಯ ಸಂಸ್ಕೃತಿ ಕಾಲನಿ ಹತ್ತಿರವಿರುವ ಶ್ರೀ ಸಿದ್ಧಾರೂಢರ ಮಠದಲ್ಲಿ ಮೂರು ದಿನಗಳ ಕಾಲ ನಡೆದ ಶ್ರೀ ಸಿದ್ಧಾರೂಢರ ಮೂರ್ತಿ ಪ್ರತಿಷ್ಠಾಪನೆಯ 17ನೇ ವಾರ್ಷಿಕೋತ್ಸವ ಹಾಗೂ ಮಾತೋಶ್ರೀ ಪಾರ್ವತಮ್ಮನವರ ಮೂರ್ತಿ ಪ್ರಾಣ ಪ್ರತಿಷ್ಠಾಪನೆಯ 5ನೇ ವರ್ಷಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಶ್ರೀ ಸಿದ್ಧಾರೂಢರು ತಮ್ಮ ಅವಧಿಯಲ್ಲಿ ಅನೇಕ ಪವಾಡಗಳನ್ನು ಮಾಡುವ ಮೂಲಕ ಗಮನ ಸೆಳೆದಿದ್ದಾರೆ.  12ನೇ […]