ನವೆಂಬರ್ 1 ಕನ್ನಡಿಗರಾಗುವ ಬದಲು ನಂ.1 ಕನ್ನಡಿಗರಾಗಿ: ಪ್ರಕಾಶ ಆರ್. ಕೆ.

ವಿಜಯಪುರ: ನವೆಂಬರ್ 1 ಕನ್ನಡಿಗರಾಗುವ ಬದಲು ನಂ.1 ಕನ್ನಡಿಗರಾಗಬೇಕು ಎಂದು ಗಾನಯೋಗಿ ಸಂಘದ ಪ್ರಕಾಶ ಆರ್. ಕೆ. ಹೇಳಿದ್ದಾರೆ.   ಕರ್ನಾಟಕ ರಾಜ್ಯೋತ್ಸವದ 50ರ ಸಂಭ್ರಮದ ಅಂಗವಾಗಿ ಗಾನಯೋಗಿ ಸಂಘ ವತಿಯಿಂದ ಅಂಗವಾಗಿ ವಿಜಯಪುರ ನಗರದ ಸಿಂದಗಿ ಬೈಪಾಸ್ ಫ್ಲೈಓವರ್ ಗೋಡೆಗೆ ಕರ್ನಾಟಕ ಪ್ರಥಮ ಪ್ರೌಢ ಸಾಮ್ರಾಟ ಇಮ್ಮಡಿ ಪುಲಿಕೇಶಿಯ ಚಿತ್ರವನ್ನು ಬಿಡಿಸುವ ಮೂಲಕ ರಾಜ್ಯೋತ್ಸವ ಗಮನ ಸೆಳೆದಿದೆ.  ಈ ಕಾರ್ಯಕ್ರಮದ ಸಂದರ್ಭದಲ್ಲಿ ಅವರು ಮಾತನಾಡಿದರು. ಈ ಕುರಿತು ಪ್ರತಿಕ್ರಿಯೆ ನೀಡಿರುವ ಗಾನಯೋಗಿ ಸಂಘದ ಪ್ರಕಾಶ ಆರ್. ಕೆ. ಕನ್ನಡಕ್ಕಾಗಿ […]

ಡಾ. ಬಿ. ಆರ್. ಅಂಬೇಡ್ಕರ್ ಇಡೀ ಮಾನವ ಕುಲಕ್ಕೆ ಆದರ್ಶ- ಸಚಿವ ಸತೀಶ ಜಾರಕಿಹೊಳಿ

ವಿಜಯಪುರ: ಡಾ.ಬಿ.ಆರ್.ಅಂಬೇಡ್ಕರ್ ಅವರು ರಚಿಸಿದ ಸಂವಿಧಾನ ಕೇವಲ ಒಂದು ಜಾತಿ, ಸಮುದಾಯಕ್ಕೆ ಸೀಮಿತವಾಗಿಲ್ಲ ಇಡೀ ಮಾನವ ಕುಲಕ್ಕೆ ಸೀಮಿತವಾದ ಸಂವಿಧಾನ ಸಾಮಾಜಿಕ, ರಾಜಕೀಯ ಆರ್ಥಿಕ, ಶೈಕ್ಷಣಿಕವಾಗಿ ಬೆಳೆಯಲು ಸಾಧ್ಯವಾಗಿದೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ ಹೇಳಿದರು. ಇಂಡಿ ತಾಲೂಕಿನ ಹಳಗುಣಕಿ ಗ್ರಾಮದಲ್ಲಿ ಸಮಾಜ ಕಲ್ಯಾಣ ಇಲಾಖೆ ಸಚಿವರಾದ ಡಾ. ಎಚ್. ಸಿ. ಮಹದೇವಪ್ಪ ಅವರೊಂದಿಗೆ ನಾನಾ ಅಭಿವೃದ್ಧಿ ಕಾಮಗಾರಿಗಳಿಗೆ ಅಡಿಗಲ್ಲು ಮತ್ತು ಉದ್ಘಾಟನೆ ಹಾಗೂ ಡಾ. ಬಿ. ಆರ್. ಅಂಬೇಡ್ಕರ್ ಪುತ್ಥಳಿ ಅನಾವರಣ ಮಾಡಿ […]

ಪರಿಸರ, ಸ್ಮಾರಕಗಳ ಸಂರಕ್ಷಣೆಗಾಗಿ ವೃಕ್ಷೋತ್ಥಾನ್ ಹೆರಿಟೇಜ್ ರನ್- 2023 ಪೂರ್ವಸಿದ್ಧತೆ ಕುರಿತು ಕೋರ್ ಕಮಿಟಿ ಸಭೆ

ವಿಜಯಪುರ: ಪರಿಸರ ಸಂರಕ್ಷಣೆ ಮತ್ತು ಪ್ರಾಚೀನ ಸ್ಮಾರಕಗಳ ಸಂರಕ್ಷಣೆ ಉದ್ದೇಶದಿಂದ ಡಿಸೆಂಬರ್ 24 ರಂದು ನಗರದಲ್ಲಿ ಆಯೋಜಿಸಲಾಗಿರುವ ವೃಕ್ಷೋತ್ಥಾನ್ ಹೆರಿಟೇಜ್ ರನ್- 2023 ಪೂರ್ವ ಸಿದ್ಧತೆಗಳ ಕುರಿತು ಕೋರ್ ಕಮಿಟಿ ಸಭೆ ಶನಿವಾರ ನಡೆಯಿತು. ಡಾ. ಮಹಾಂತೇಶ ಬಿರಾದಾರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಪಾಲ್ಗೋಂಡ ಕೋರ್ ಕಮಿಟಿಯ ನಾನಾ ಉಪಸಮಿತಿಗಳ ಪ್ರಮುಖರು, ಈವರೆಗೆ ಕೈಗೊಳ್ಳಲಾಗಿರುವ ಕ್ರಮಗಳ ಕುರಿತು ಮಾಹಿತಿ ನೀಡಿದರು. ರೂಟ್ ಕಮಿಟಿ ಉಸ್ತುವಾರಿ ಸೋಮಶೇಖರ ಸ್ವಾಮಿ ಮತ್ತು ಸಂತೋಷ ಅವರಸಂಗ ಮಾತನಾಡಿ, ಈ ಸ್ಪರ್ಧೆಯಲ್ಲಿ ಪಾಲ್ಗೋಳ್ಳಲಿರುವ […]

ಸೈನಿಕ ಶಾಲೆಯ ನಾನಾ ವಿಭಾಗದ ಟೇಬಲ್ ಟೆನ್ನಿಸ್ ಪಂದ್ಯಾವಳಿ ಸಮಾರೋಪ

ವಿಜಯಪುರ: ದೇಶದ ಪ್ರತಿಷ್ಠಿತ ಶಾಲೆಗಳಲ್ಲಿ ಒಂದಾದ ವಿಜಯಪುರ ಸೈನಿಕ ಶಾಲೆ ಒಳಾಂಗಣದಲ್ಲಿ ಶನಿವಾರ ನಡೆದ ಅಖಿಲ ಭಾರತ ಐ ಪಿ ಎಸ್ ಸಿ (U-12, U14, U17 ಹಾಗೂ U-19 ವರ್ಷದೊಳಗಿನ) ಬಾಲಕಿಯರ ಟೇಬಲ್ ಟೆನ್ನಿಸ್ ಪಂದ್ಯಾವಳಿ ಸಮಾರಂಭ ನಡೆಯಿತು. ಸೈನಿಕ ಶಾಲೆಯ ಪ್ರಾಂಶುಪಾಲರಾದ ಗ್ರೂಪ್ ಕ್ಯಾಪ್ಟನ್ ಪ್ರತಿಭಾ ಭಿಷ್ಟ ಮಾತನಾಡಿ, ನಮ್ಮ ಶಾಲೆ ವತಿಯಿಂದ ಅಖಿಲ ಭಾರತ ಐಪಿಎಸ್ ಸಿ (U-12, U14, U17 ಹಾಗೂ U-19 ವರ್ಷದೊಳಗಿನ) ಬಾಲಕಿಯರ ಟೇಬಲ್ ಟೆನ್ನಿಸ್ ಪಂದ್ಯಾವಳಿಗಳನ್ನು ಆಯೋಜಿಸಿದ್ದು […]

ಬಸವೇಶ್ವರರ ಜನ್ಮಭೂಮಿ ಅಭಿವೃದ್ಧಿ ಪಡಿಸಿ ಕುರುಹು ಉಳಿಸುವ ಕೆಲಸವಾಗಬೇಕು- ಸಚಿವ ಶಿವಾನಂದ ಎಸ್. ಪಾಟೀಲ

ವಿಜಯಪುರ: ಬಸವಣ್ಣನವರ ಜನ್ಮಭೂಮಿ ಬಸವನ ಬಾಗೇವಾಡಿ ಅಭಿೃವೃದ್ಧಿ ಪ್ರಾಧಿಕಾರ ರಚಿಸಬೇಕು.  ಅವರ ಕುರುಹು ಉಳಿಸುವ ಕೆಲಸ ನಡೆಯಬೇಕು ಎಂದು ಜವಳಿ, ಸಕ್ಕರೆ, ಕಬ್ಬು ಅಭಿವೃದ್ಧಿ ಹಾಗೂ ಎ. ಪಿ. ಎಂ. ಸಿ. ಸಚಿವ ಶಿವಾನಂದ ಎಸ್. ಪಾಟೀಲ ಹೇಳಿದ್ದಾರೆ. ವಿಜಯಪುರದಲ್ಲಿ ತಮ್ಮನ್ನು ಭೇಟಿಯಾದ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬಸವೇಶ್ವರರ ಹೆಸರು ಈಗಾಗಲೇ ಪ್ರಚಲಿತವಾಗಿದೆ.  ಬಸವೇಶ್ವರರ ಹುಟ್ಟಿದ್ದು ವಿಜಯಪುರ ಜಿಲ್ಲೆಯಲ್ಲಿ ಎಂಬುದು ಜಗತ್ತಿಗೆ ಜಗಜ್ಜಾಹೀರು ಆಗಿದೆ.  ಆದರೆ, ಯಾವುದೇ ಸರಕಾರ ಬರಲಿ.  ಈ ಸರಕಾರವೇ ಇರಲಿ, ಬೇರೆ […]

ಮತದಾರರ ಕರಡು ಪಟ್ಟಿ ಪ್ರಕಟ- ತಿದ್ದುಪಡಿ, ಸೇರ್ಪಡೆ, ಡಿಲೀಟ್ ಆಕ್ಷೇಪಣೆ ಸಲ್ಲಿಸಲು ಡಿ. 12ರ ವರೆಗೆ ಅವಕಾಶ- ಡಿಸಿ ಟಿ. ಭೂಬಾಲನ್

ವಿಜಯಪುರ: ಮತದಾರರ ಪಟ್ಟಿ ಪ್ರಕಟಿಸಲಾಗಿದ್ದು, ಹೆಸರು ಸೇರ್ಪಡೆ, ತೆಗೆದು ಹಾಕುವುದು, ತಿದ್ದಪುಡಿ ಸೇರಿದಂತೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಸಲು 9ನೇ ಡಿಸೆಂಬರ್ 2023ರ ವರೆಗ ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಟಿ. ಭೂಬಾಲನ್ ತಿಳಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ನಾನಾ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿದ ಅವರು, ಕೇಂದ್ರ ಚುನಾವಣೆ ಆಯೋಗದ ನಿರ್ದೇಶನದಂತೆ 25.09.2023ರ ಅನ್ವಯ ಮತದಾರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಅರ್ಹತೆ ದಿನಾಂಕ 01.01.2024ಕ್ಕೆ ಸಂಬಂಧಿಸಿದಂತೆ […]

ವಿದ್ಯುತ್, ನೀರು ಪೂರೈಕೆ ಸಮಸ್ಯೆ ಬಗೆಹರಿಸಲು ಆಗ್ರಹ- ಸಾಲಮನ್ನಾಕ್ಕೆ ಒತ್ತಾಯ- ನಾನಾ ಅಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಕೆ

ವಿಜಯಪುರ: ಸಮರ್ಪಕ ವಿದ್ಯುತ್ ಪೂರೈಸಬೇಕು ಮತ್ತು ಕಾಲುವೆಗಳಿಗೆ ಸರಿಯಾಗಿ ನೀರು ಹರಿಸುವಂತೆ ಆಗ್ರಹಿಸಿ ಭಾರತೀಯ. ಕಿಸಾನ ಸಂಘದ ರಾಜ್ಯಾಧ್ಯಕ್ಷ ಭೀಮಸೇನ್ ಕೋಕರೆ ಅವರ ನೇತೃತ್ವದಲ್ಲಿ ರೈತರು ಜಿಲ್ಲಾಧಿಕಾರಿ ಟಿ. ಭೂಬಾಲನ್ ಸೇರಿದಂತೆ ನಾನಾ ಅಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು. ಬರ ಹಿನ್ನೆಲೆಯಲ್ಲಿ ಬೆಳೆಗಳು ನಷ್ಟವಾಗುತ್ತಿವೆ.  ಮಳೆಯಾಗದ ಹಿನ್ನೆಲೆಯಲ್ಲಿ ನೀರಿನ ಸಮಸ್ಯೆ ತೀವ್ರವಾಗಿದ್ದು, ಕೆಲವು ರೈತರು ನೀರಿದ್ದರೂ ವಿದ್ಯುತ್ ಸಮಸ್ಯೆಯಿಂದಾಗಿ ಬೆಳೆಗಳಿಗೆ ನೀರು ಹರಿಸಲು ಸಾಧ್ಯವಾಗುತ್ತಿಲ್ಲ.  ಇದರಿಂದಾ ರೈತರು ತೀವ್ರ ಸಂಕಷ್ಟದಲ್ಲಿದ್ದಾರೆ ಎಂದು ಅವರು ಅಳಲು ತೋಡಿಕೊಂಡರು. ರೈತರ […]

ಹೃದಯಾಘಾತ, ಪ್ರಾಥಮಿಕ ಚಿಕಿತ್ಸೆ ಕುರಿತು ಕಾರ್ಯಾಗಾರ- ಡಾ. ಚುಳಕೆ, ಡಾ. ಕಡೇಲಿ ಅವರಿಂದ ಪ್ರಾತ್ಯಕ್ಷಿಕೆ ಮೂಲಕ ವಿವರಣೆ

ವಿಜಯಪುರ: ಹೃದಯಾಘಾತ ಮತ್ತು ಪ್ರಥಮ ಚಿಕಿತ್ಸೆ ಕುರಿತ ಕಾರ್ಯಾಗಾರ ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಸಂಗನಬಸವ ಮಹಾಸ್ವಾಮೀಜಿ ಫಾರ್ಮಸಿ ಕಾಲೇಜಿನಲ್ಲಿ ಗುರುವಾರ ನಡೆಯಿತು. ಪಾರ್ಮಸಿ ಕಾಲೇಜು ಮತ್ತು ರಾಘವೇಂದ್ರ ಕಾರ್ಡಿಯೊ ಕೇರ್ ಸಂಯುಕ್ತಾಶ್ರಯದಲ್ಲಿ ನಡೆದ ಈ ಕಾರ್ಯಾಗಾರವನ್ನು ಕಾಲೇಜಿನ ಪ್ರಭಾರಿ ಪ್ರಾಚಾರ್ಯ ಡಾ. ಸಿ. ಸಿ. ಪಾಟೀಲ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಹೃದಯ ರೋಗ ಖ್ಯಾತ ವೈದ್ಯರಾದ ಡಾ. ಕಿರಣ್ ಚುಳಕಿ ಮತ್ತು ಡಾ. ದೀಪಕ ಕಡೇಲಿ ಅವರು ಹೃದಯಾಘಾತ ಸಂಭವಿಸಿದಾಗ ಕೈಗೊಳ್ಳಬೇಕಾದ ಕ್ರಮಗಳ ಕುರಿತು ವಿವರವಾಗಿ ಪ್ರಾತ್ಯಕ್ಷಿಕೆ […]

ವಿಜಯಪುರ ಮೇಯರ್, ಉಪಮೇಯರ್ ಚುನಾವಣೆ ಮುಂದೂಡಿಕೆ- ಸಂಜಯ ಶೆಟ್ಟೆಣ್ಣವರ

ವಿಜಯಪುರ: ಇದೇ ತಿಂಗಳು 30 ನಡೆಯಬೇಕಿದ್ದ ಮೇಯರ್ ಮತ್ತು ಉಪಮೇಯರ್ ಚುನಾವಣೆಯನ್ನು ಮುಂದೂಡಲಾಗಿದೆ. ಎರಡೂ ಸ್ಥಾನಗಳಿಗೆ ನಿಗದಿಯಾಗಿದ್ದ ಮೀಸಲಾತಿಯನ್ನು ಪ್ರಶ್ನಿಸಿ ಕಲಬುರಗಿ ಹೈಕೋರ್ಟ್ ನಲ್ಲಿ ರಿಟ್ ಅರ್ಜಿಯನ್ನು ಸಲ್ಲಿಸಲಾಗಿತ್ತು.  ಈ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಮುಂದಿನ ವಿಚಾರಣೆಯನ್ನು ಅಕ್ಟೋಬರ್ 30ಕ್ಕೆ ಮುಂದೂಡಿದೆ.  ಈ ಅರ್ಜಿಯ ವಿಚಾರಣೆ ಅ.30 ರಂದು ನಡೆಯಲಿದೆ.  ಹೀಗಾಗಿ  ಅಲ್ಲಿಯವರೆಗೆ ಚುನಾವಣೆ ನಡೆಸದಂತೆ ಹೈಕೋರ್ಟ್ ಸೂಚನೆ ನೀಡಿದೆ.  ಈ ಹಿನ್ನೆಲೆಯಲ್ಲಿ ಅ. 30 ರಂದು ನಡೆಯಬೇಕಿದ್ದಮೇ ಯರ್ ಮತ್ತು ಉಪಮೇಯರ್ ಚುನಾವಣೆಯನ್ನು ಮುಂದೂಡಲಾಗಿದೆ […]

ವಿಜಯಪುರ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಶಿವಾನಂದ ಪಾಟೀಲ, ಉಪಾಧ್ಯಕ್ಷರಾಗಿ ರಾಜಶೇಖರ ಗುಡದಿನ್ನಿ ಅವಿರೋಧವಾಗಿ ಪುನರಾಯ್ಕೆ

ವಿಜಯಪುರ: ರಾಜ್ಯದ ಪ್ರತಿಷ್ಠಿತ ವಿಜಯಪುರ ಜಿಲ್ಲಾ ‌ಕೇಂದ್ರ ಸಹಕಾರಿ ಬ್ಯಾಂಕಿನ ನೂತನ ಅಧ್ಯಕ್ಷರಾಗಿ ಸಚಿವ ಶಿವಾನಂದ ಎಸ್. ಪಾಟೀಲ ಮತ್ತು ಉಪಾಧ್ಯಕ್ಷರಾಗಿ ರಾಜಶೇಖರ ಬಿ. ಗುಡದಿನ್ನಿ ಪುನರಾಯ್ಕೆಯಾಗಿದ್ದಾರೆ. 2023 ರಿಂದ 2028ರ ವರೆಗೆ‌ ಐದು ವರ್ಷಗಳ ಅವಧಿಗಾಗಿ ನಡೆದ ಚುನಾವಣೆಯಲ್ಲಿ ಜವಳಿ, ಕಬ್ಬು, ಸಕ್ಕರೆ ಅಭಿವೃದ್ಧಿ ಮತ್ತು ಎ.ಪಿಎಂ.ಸಿ ಸಚಿವ ಶಿವಾನಂದ ಎಸ್. ಪಾಟೀಲ ಮತ್ತು ಉಪಾಧ್ಯಕ್ಷರಾಗಿ ರಾಜಶೇಖರ ಬಿ. ಗುಡದಿನ್ನಿ ಅವಿರೋಧವಾಗಿ ಆಯ್ಕೆಯಾದರು. ಶಿವಾನಂದ ಎಸ್. ಪಾಟೀಲ ಅವರು 1997 ರಿಂದ 2023ರ ವರೆಗೆ ಸತತವಾಗಿ […]