ಡಿ. 24 ರಂದು ವೃಕ್ಷೋತ್ಥಾನ ಹೆರಿಟೇಜ್ ರನ್-2023 ಆಯೋಜನೆ- ಲಾಂಛನ ಅನಾವಣ ಮಾಡಿದ ಸಚಿವ ಎಂ. ಬಿ. ಪಾಟೀಲ

ವಿಜಯಪುರ: ಬರದ ನಾಡಿನಲ್ಲಿ ಅರಣ್ಯ ಕ್ರಾಂತಿ ಮಾಡುವ ಉದ್ದೇಶದಿಂದ ಮತ್ತು ಬಸವ ನಾಡಿನ ಪಾರಂಪರಿಕ ತಾಣಗಳ ಬಗ್ಗೆ ಜಾಗೃತಿ ಮೂಡಿಸುವ ಸದುದ್ದೇಶ ಹೊಂದಿರುವ ಕೋಟಿ ವೃಕ್ಷ ಅಭಿಯಾನದ ಅಂಗವಾಗಿ ಆಯೋಜಿಸಲಾಗಿರುವ ವೃಕ್ಷೋತ್ಥಾನ್ ಹೆರಿಟೇಜ್ ರನ್- 2023ರ ಲಾಂಛನ ಬಿಡುಗಡೆ ಸಮಾರಂಭ ವಿಜಯಪುರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆಯಿತು.  ಬೃಹತ್ ಮತ್ತು ಮಧ್ಯಮ ಕೈಗಾರಿಗೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಲಾಂಛನ ಬಿಡುಗಡೆ ಮಾಡಿ ಮಾತನಾಡಿದರು. […]

ನಂದಿ ಸಹಕಾರಿ ಸಕ್ಕರೆ ಕಾರ್ಖಾನೆಯ ಬಾಯ್ಲರ್ ಪ್ರದೀಪನಾ ಸಮಾರಂಭ- ಸ್ವಾಮೀಜಿ, ಆಡಳಿತ ಮಂಡಳಿ ಪದಾಧಿಕಾರಿಗಳು ಭಾಗಿ

ವಿಜಯಪುರ: ಬಬಲೇಶ್ವರ ತಾಲೂಕಿನ ಕೃಷ್ಣಾನಗರದ ನಂದಿ ಸಹಕಾರಿ ಸಕ್ಕರೆ ಕಾರ್ಖಾನೆಯ 2023-24ನೇ ಕಬ್ಬು ನುರಿಸುವ ಹಂಗಾಮಿನ ಕೇನ್ ಕ್ಯಾರಿಯರ್ ಮತ್ತು ಬಾಯ್ಲರ್ ಪ್ರದೀಪನಾ ಸಮಾರಂಭ ನಡೆಯಿತು. ಕಾರ್ಖಾನೆಯ ಅಧ್ಯಕ್ಷ ಕುಮಾರ ಚಂದ್ರಕಾಂತ ದೇಸಾಯಿ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಬೀಳೂರಿನ ಶ್ರೀ ಮುರುಗೇಂದ್ರ ಮಹಾಸ್ವಾಮಿ ಸಾನಿಧ್ಯ ವಹಿಸಿ ಶುಭ ಕೋರಿದರು. ಈ ಸಂದರ್ಭದಲ್ಲಿ ಮಾತನಾಡಿದ ಸ್ವಾಮೀಜಿ, ಮೂರು ದಶಕಗಳ ಹಿಂದೆ ಈ ಭಾಗದ ಒಡನಾಟ ಹಾಗೂ ರೈತರ ಜೀವನ ಶೈಲಿಯನ್ನು ನಾನು ನೋಡಿದ್ದೇನೆ.  ಕೃಷ್ಣಾನದಿ ಮತ್ತು ನಂದಿ […]

ಕಾಲುವೆಗಳು ರೈತರ ಆಸ್ತಿ- ನೀರಿನಾಸೆಗೆ ಒಡೆಯಬೇಡಿ- ಎಂಎಲ್‌ಸಿ ಸುನೀಲಗೌಡ ಪಾಟೀಲ ಕಳಕಳಿ

ವಿಜಯಪುರ: ಕಾಲುವೆಗಳು ರೈತರ ಆಸ್ತಿ. ನೀರಿಗಾಗಿ ಯಾರೂ ಅವುಗಳನ್ನು ಒಡೆದು ಹಾನಿ ಮಾಡಬಾರದು ಎಂದು ವಿಧಾನ ಪರಿಷತ ಸದಸ್ಯ ಸುನೀಲಗೌಡ ಪಾಟೀಲ ಹೇಳಿದ್ದಾರೆ. ವಿಜಯಪುರದಲ್ಲಿ ಕೃಷ್ಣಾ ಭಾಗ್ಯ ಜಲ ನಿಗಮ ಮತ್ತು ಕರ್ನಾಟಕ ನೀರಾವರಿ ನಿಗಮದ ವತಿಯಿಂದ 2022-23ನೇ ವರ್ಷದ ಎಸ್.ಸಿ.ಪಿ, ಟಿ.ಎಸ್.ಪಿ. ಯೋಜನೆ ಅಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಫಲಾನುಭವಿಗಳಿಗೆ ವೈಯಕ್ತಿಕ ಕೊಳವೆ ಭಾವಿ ಕೊರೆದು, ವಿದ್ಯುತ್ ಸಂಪರ್ಕ ಕಲ್ಪಿಸಿ ನೀರಾವರಿ ಸೌಲಭ್ಯ ಕಲ್ಪಿಸುವ ಯೋಜನೆಗೆ ಭೂಮಿಪೂಜೆ ನೇರವೇರಿಸಿ ಅವರು ಮಾತನಾಡಿದರು. ನೀರಾವರಿಯಿಂದಾಗಿ […]

ಶ್ರೀ ಬಿ. ಎಂ. ಪಾಟೀಲ ಸೂಪರ್ ಸ್ಪೇಷಾಲಿಟಿ ಆಸ್ಪತ್ರೆಯಲ್ಲಿ ಮೊದಲ ತೆರೆದ ಹೃದಯ ಶಸ್ತ್ರಚಿಕಿತ್ಸೆ ಯಶಸ್ವಿ- ಡಾ. ಆರ್. ಎಸ್. ಮುಧೋಳ

ವಿಜಯಪುರ: ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ. ಎಂ. ಪಾಟೀಲ ಸೂಪರ್ ಸ್ಪೇಷಾಲಿಟಿ ಆಸ್ಪತ್ರೆಯಲ್ಲಿ ಇದೇ ಮೊದಲ ಬಾರಿಗೆ ತೆರೆದ ಹೃದಯ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನೆರವೇರಿಸಲಾಗಿದೆ ಎಂದು ವಿವಿ ಕುಲಪತಿ ಡಾ. ಆರ್. ಎಸ್. ಮುಧೋಳ ಹೇಳಿದರು. ಆಸ್ಪತ್ರೆಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಶ್ರೀ ಬಿ. ಎಂ. ಪಾಟೀಲ ಸೂಪರ್ ಸ್ಪೇಷಾಲಿಟಿ ಆಸ್ಪತ್ರೆ ಅತ್ಯಾಧುನಿಕ ಸೌಲಭ್ಯಗಳು ಮತ್ತು ಜನಪರ ಆರೋಗ್ಯ ಸೇವೆಗಳ ಮೂಲಕ ಜನರನ್ನು ತಲುಪುತ್ತಿದೆ. ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಕುಲಾಧಿಪತಿಗಳು ಮತ್ತು ಸಚಿವರಾದ ಶ್ರೀ […]

ಬಾಲ್ಯ ವಿವಾಹ ತಡೆಗಟ್ಟಲು ಸಾರ್ವಜನಿಕರ ಸಹಭಾಗಿತ್ವ ಅಗತ್ಯ- ಸಂತೋಷ ಕುಂದರ್

ವಿಜಯಪುರ: ಬಾಲ್ಯ ವಿವಾಹ ಬಗ್ಗೆ ಸಾರ್ವಜನಿಕರಿಗೆ ಹೆಚ್ಚಿನ ಅರಿವು ಮೂಡಿಸಬೇಕು.  ಬಾಲ್ಯ ವಿವಾಹ ತಡೆಗಟ್ಟುವಲ್ಲಿ ಸಾರ್ವಜನಿಕ ಸಹಕಾರ ಅಗತ್ಯ ಎಂದು  ಹಿರಿಯ ಸಿವಿಲ್ ನ್ಯಾಯಾಧೀಶ ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಂತೋಷ ಎಸ್. ಕುಂದರ ಹೇಳಿದ್ದಾರೆ.   ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಶಿಶು  ಅಭಿವೃದ್ಧಿ ಯೋಜನೆ ವಿಜಯಪುರ ನಗರ ಮತ್ತು ಗ್ರಾಮೀಣ ಇವರ ಸಹಯೋಗದಲ್ಲಿ […]

ಬಸವ ನಾಡಿಗೆ ಬಂದ ಕಿತ್ತೂರು ಚನ್ನಮ್ಮ ವಿಜಯ ವೀರಜ್ಯೋತಿ ಯಾತ್ರೆ- ಅಧಿಕಾರಿಗಳು, ಗಣ್ಯರಿಂದ ಸ್ವಾಗತ

ವಿಜಯಪುರ: ವೀರರಾಣಿ ಕಿತ್ತೂರು ಚೆನ್ನಮ್ಮ ಅವರ ಹೋರಾಟ  ನಮ್ಮೆಲ್ಲರಿಗೂ ಸ್ಪೂರ್ತಿಯಾಗಿದೆ. ಕಿತ್ತೂರು ಚನ್ನಮ್ಮ ಅವರು ಬ್ರಿಟಿಷ್ರ ವಿರುದ್ಧ ಹೋರಾಟ ನಡೆಸಿದರು.  ಅವರ ಹೋರಾಟ, ತ್ಯಾಗ, ಬಲಿದಾನ ಹಾಗೂ ಅವರ ದೇಶ ಭಕ್ತಿ ಸ್ಮರಿಸಿಕೊಳ್ಳುವ ಮೂಲಕ ಗೌರವ ಸಲ್ಲಿಸೋಣ ಎಂದು ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಅವರು ಹೇಳಿದರು. ನಗರದ ಜಿಲ್ಲಾಧಿಕಾರಿ ಕಚೇರಿಯ ಆವರಣದಲ್ಲಿ ಕಿತ್ತೂರು ಚನ್ನಮ್ಮ ಅವರ ವಿಜಯ ವೀರಜ್ಯೋತಿ ಯಾತ್ರೆಯ ರಥಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ಸಲ್ಲಿಸಿ ಮಾತನಾಡಿದರು. ಕಿತ್ತೂರ ಚನ್ನಮ್ಮ ಅವರ ಸ್ವಾತಂತ್ರ‍್ಯ […]

ರಾಜ್ಯ ಸರಕಾರದ ವಿರುದ್ಧ ಗುಮ್ಮಟ ನಗರಿಯಲ್ಲಿ ಬಿಜೆಪಿ ಪ್ರತಿಭಟನೆ

ವಿಜಯಪುರ: ಸರಕಾರಿ ಅಧಿಕಾರಿಗಳ ವರ್ಗಾವಣೆ ದಂಧೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ವಿದ್ಯುತ್ ಕಡಿತ ಹಾಗೂ ಜನವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ಸಂಸದ ರಮೇಶ ಜಿಗಜಿಣಗಿ ನೇತೃತ್ವದಲ್ಲಿ ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ನಗರದಲ್ಲಿ ಬೃಹತ್ ಪ್ರತಿಭಟನೆ ಜಾಥಾ ನಡೆಸಿದರು. ನಗರದ ಡಾ. ಬಿ. ಆರ್. ಅಂಬೇಡ್ಕರ ವೃತ್ತದಿಂದ ಆರಂಭವಾದ ಜಾಥಾ ಜಿಲ್ಲಾಧಿಕಾರಿಗಳ ಕಚೇರಿ ತಲುಪಿತು.  ಈ ಸಂದರ್ಭದಲ್ಲಿ ಯಾವ ಅಧಿಕಾರಿಗಳೂ ಸ್ಥಳದಲ್ಲಿ ಇರದ ಕಾರಣ ಜಿಲ್ಲಾಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕಿ ಕೆಲ ಹೊತ್ತು ಧರಣಿ […]

ಕಾನಿಪ 37ನೇ ರಾಜ್ಯಮಟ್ಟದ ಪತ್ರಕರ್ತರ ಸಂಘದ ಸಮ್ಮೇಳನದ ಸ್ಮರಣ ಸಂಚಿಕೆ ಬಿಡುಗಡೆ ಮಾಡಿದ ಸಚಿವ ಎಂ. ಬಿ. ಪಾಟೀಲ

ವಿಜಯಪುರ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಕಳೆದ ಫೆ. 4 ಮತ್ತು 5 ರಂದು ನಡೆದ 37ನೇ ರಾಜ್ಯ ಮಟ್ಟದ ಪತ್ರಕರ್ತರ ಸಮ್ಮೇಳನದ ಸವಿ ನೆನಪಿಗಾಗಿ ಹೊರ ತಂದ ಕರ್ನಾಟಕ ಪತ್ರಕರ್ತರ ಸ್ಮರಣ ಸಂಚಿಕೆಯನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ನಗರದಲ್ಲಿ ಬಿಡುಗಡೆ ಮಾಡಿದರು. ಜಿ. ಪಂ. ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸ್ಮರಣ ಸಂಚಿಕೆ ಬಿಡುಗಡೆ […]

ಔಷಧಿಗಳ ಸಂಶೋಧನೆಗಳನ್ನು ವೈದ್ಯಕೀಯ ಕ್ಷೇತ್ರಕ್ಕೆ ಪರಿಚಯಿಸುವುದು ಸಂಶೋಧಕರ ಮುಖ್ಯ ಕರ್ತವ್ಯವಾಗಿದೆ- ಡಾ. ರಂಜೀತ ಕಾಂತ

ಬಾಗಲಕೋಟೆ: ಹೊಮಿಯೋಪಥಿ ಹೊಸ ಔಷಧಿಗಳ ಸಂಶೋಧನೆಗಳನ್ನು ವೈದ್ಯಕೀಯ ಕ್ಷೇತ್ರಕ್ಕೆ ಪರಿಚಯಿಸುವುದು ಸಂಶೋಧಕರ ಮುಖ್ಯ ಕರ್ತವ್ಯವಾಗಿದೆ ಎಂದು ದೆಹಲಿಯ ಹೋಮಿಯೋಪಥಿ ಸಂಶೋಧಕ ಡಾ. ರಂಜೀತ ಕಾಂತ ಹೇಳಿದ್ದಾರೆ. ನಗರದ ಬಿವಿವಿಎಸ್ ಹೋಮಿಯೋಪಥಿಕ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಹೋಮಿಯೋಪಥಿ ಔಷಧಿಗಳ ಪ್ರಮಾಣಿಕರಣ ಕುರಿತು ಆಯೋಜಿಸಲಾಗಿದ್ದ ಒಂದು ದಿನದ ಮುಂದುವರೆದ ವೈದ್ಯಕೀಯ ಶಿಕ್ಷಣ ಕಾಯಾ೯ಗಾರ ಉದ್ಘಾಟಿಸಿ ಅವರು ಮಾತನಾಡಿದರು. ಆಯುಷ್ ಇಲಾಖೆಯ ಹೋಮಿಯೋಪಥಿ ಉಪನಿದೇ೯ಶಕ ಡಾ. ಅಶ್ವಥನಾರಾಯಣ ಮಾತನಾಡಿ, ಯುವ ವೈದ್ಯರು ದುಡ್ಡಿನ ಹಿಂದೆ ಬೀಳದೇ ಸೇವಾ ಮನೋಭಾವದಿಂದ ಕಾರ್ಯ ನಿರ್ವಹಿಸಬೇಕು ಎಂದು ಹೇಳಿದರು. […]

ಅ. 20 ರಂದು ಬಿ.ಎಲ್.ಡಿ.ಇ ಡಿಮ್ಡ್ ವಿವಿ ಘಟಿಕೋತ್ಸವ- ಶಾಮನೂರು ಶಿವಶಂಕರಪ್ಪ ಅವರಿಗೆ ಗೌರವ ಡಾಕ್ಟರೇಡ್ ಪ್ರಧಾನ

ವಿಜಯಪುರ: ನಗರದ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ 11ನೇ ಘಟಿಕೋತ್ಸವ ಅ. 20ರಂದು ಶುಕ್ರವಾರ ಬೆ.11.30ಕ್ಕೆ ಬಿ. ಎಂ. ಪಾಟೀಲ ವೈದ್ಯಕೀಯ ಕಾಲೇಜಿನ ಗ್ರಂಥಾಲಯ ಸಭಾಂಗಣದಲ್ಲಿ ನಡೆಯಲಿದೆ. ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯ ಅಭಿವೃದ್ಧಿ ಸಚಿವ ಡಾ. ಶರಣಪ್ರಕಾಶ ಆರ್. ಪಾಟೀಲ ಅವರು ಘಟಿಕೋತ್ಸವ ಭಾಷಣ ಮಾಡಲಿದ್ದಾರೆ.  ಬಿ. ಎಲ್. ಡಿ. ಇ ವಿಶ್ವವಿದ್ಯಾಲಯದ ಕುಲಾಧಿಪತಿ ಡಾ. ಎಂ. ಬಿ. ಪಾಟೀಲ ಅಧ್ಯಕ್ಷತೆ ವಹಿಸಲಿದ್ದಾರೆ.  ಕುಲಪತಿ ಡಾ. ಆರ್. ಎಸ್. ಮುಧೋಳ ವರದಿ ವಾಚನ ಮಾಡಲಿದ್ದಾರೆ. ಈ ಸಂದರ್ಭದಲ್ಲಿ […]