200ಕ್ಕೂ ಹೆಚ್ಚಿನ ವಿದ್ಯಾರ್ಥಿಗಳಿಂದ ಗಾಂಧಿಭವನ ವೀಕ್ಷಣೆ- ರಾಷ್ಟ್ರಪಿತನ ಕುರಿತು ಅರಿತುಕೊಳ್ಳಲು ಉಪಯುಕ್ತವಾದ ಭವನ- ಸುರೇಶ ಮುಂಜೆ

ವಿಜಯಪುರ: ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಮಹಾತ್ಮಗಾಂಧೀಜಿಯವರ ಚಳುವಳಿಗೆ ಸತ್ಯ ಮತ್ತು ಅಹಿಂಸಾ ಅಸ್ತ್ರಗಳಾಗಿದ್ದವು.  ಇಂಥ ಸತ್ಯ, ಶಾಂತ, ತ್ಯಾಗಮೂರ್ತಿ ಮಹಾತ್ಮ ಗಾಂಧೀಜಿವರ ತತ್ವಾದರ್ಶಗಳನ್ನು ವಿದ್ಯಾರ್ಥಿ ದೆಸೆಯಿಂದಲೇ ಮೈಗೂಡಿಸಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ವಿಜಯಪುರ ತಹಶೀಲ್ದಾರ ಸುರೇಶ ಮುಂಜೆ ಕರೆ ನೀಡಿದರು. ನಗರದ ಇಟ್ಟಂಗಿಹಾಳದ ತುಂಗಳ ಶಾಲೆಯ 200ಕ್ಕೂ ಹೆಚ್ಚು ವಿದ್ಯಾರ್ಥಿಗಳು ನಗರದ ಜಿ. ಪಂ. ಬಳಿ ಇರುವ ಗಾಂಧಿಭವನಕ್ಕೆ ಭೇಟಿ ನೀಡಿ, ವೀಕ್ಷಣೆ ನಡೆಸಿದ ಸಂದರ್ಭದಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ ಅವರು ಮಾತನಾಡಿದರು. ಜ್ಞಾನ, ಉದ್ಯೋಗ, ಶಿಕ್ಷಣ ಅನಿವಾರ್ಯವಾಗಬೇಕು.  ಮಹಾನ್ […]

ಯಶಸ್ಸಿಗೆ ಕಠಿಣ ಪರಿಶ್ರಮ ಅವಶ್ಯ- ಮಹಾನಗರ ಪಾಲಿಕೆ ಉಪಆಯುಕ್ತ ಮಹಾವೀರ ಬೋರಣ್ಣನವರ

ವಿಜಯಪುರ: ಉದ್ದಿಮೆದಾರರು ಆತ್ಮವಿಶ್ವಾಸವನ್ನು ವೃದ್ಧಿಸಿಕೊಳ್ಳಬೇಕು.  ಕೈಗೊಳ್ಳಬೇಕಾಗಿರುವ ಕಾರ್ಯ ಮೊಟಕುಗೊಳಿಸದೇ, ಹಿಡಿದ ಕಾರ್ಯ ಯಶಸ್ವಿಯಾಗುವತ್ತ ಕಠಿಣ ಪರಿಶ್ರಮ ರೂಢಿಸಿಕೊಳ್ಳಬೇಕು ಎಂದು ವಿಜಯಪುರ ಮಹಾನಗರ ಪಾಲಿಕೆಯ ಉಪಆಯುಕ್ತ ಮಹಾವೀರ ಬೋರಣ್ಣನವರ ಹೇಳಿದ್ದಾರೆ. ನಗರದ ಹೊರವಲಯದ ಭೂತನಾಳ ಕೆರೆಯ ಬಳಿ ಇರುವ ಮೀನುಗಾರಿಕೆ ಸಂಶೋಧನಾ ಮತ್ತು ಮಾಹಿತಿ ಕೇಂದ್ರದಲ್ಲಿ ಆಯೋಜಿಸಲಾಗಿದ್ದ ಸಿಹಿ ನೀರು ಅಲಂಕಾರಿಕ ಮೀನು ಸಾಕಾಣಿಕೆ ಕುರಿತ ಮೂರು ದಿವಸಗಳ ತರಬೇತಿ ಕಾರ್ಯಗಾರದ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಗುರಿ ಸಾಧನೆ ಪಥದ ನಡುವೆ ಸಮಸ್ಯೆ ಉದ್ಭವಿಸಿದರೆ ಪರಿಹಾರ […]

ಸರಕಾರಿ ಶಾಲೆ ಅಡುಗೆ ಸಾಮಗ್ರಿ, ಆಡು ಕಳ್ಳರ ಬಂಧನ- ವಿಜಯಪುರ ಗ್ರಾಮೀಣ ಪೊಲೀಸರ ಯಶಸ್ವಿ ಕಾರ್ಯಾಚರಣೆ

ವಿಜಯಪುರ: ಸರಕಾರಿ ಶಾಲೆಯ ಅಡುಗೆ ಸಾಮಗ್ರಿಗಳು ಮತ್ತು ಆಡುಗಳನ್ನು ಕಳ್ಳತನ ಮಾಡಿದ್ದ ಐದು ಜನ ಆರೋಪಿಗಳನ್ನು ವಿಜಯಪುರ ಗ್ರಾಮೀಣ ಪೊಲೀಸರು ಬಂಧಿಸಿದ್ದಾರೆ. 27.02.2023 ರಂದು ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯ ಹುಣಶ್ಯಾಳ ಗ್ರಾಮದ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಅಡುಗೆ ಸಾಮಗ್ರಿಗಳನ್ನು ಕಳ್ಳತನ ಮಾಡಲಾಗಿತ್ತು.  ಅಲ್ಲದೇ, 01.07.2023ರಂದು ಇದೇ ಪೊಲೀಸ್ ಠಾಣೆಯ ವ್ಯಾಪ್ತಿಯ ಖಂಡಸಾರಿ ತಾಂಡಾದ ಕ್ರಾಸ್ ಹತ್ತಿರ ಇರುವ ಕಾಳೆ ಇವರ ಹೊಲದಲ್ಲಿದ್ದ 14 ಆಡುಗಳನ್ನು ಕಳ್ಳತನ ಮಾಡಲಾಗಿತ್ತು. ಈ ಪ್ರಕರಣಗಳಗಳನ್ನು ಗಂಭೀರವಾಗಿ ಪರಿಗಣಿಸಿದ ಎಸ್ಪಿ […]

ಮಹಿಳಾ ವಿವಿಯಲ್ಲಿ ಹೆಸರಿನಲ್ಲಿ ಸುಳ್ಳು ನೇಮಕಾತಿ ಆದೇಶ ಪತ್ರ ವಿತರಣೆ ಆರೋಪ- ಎಚ್ಚರದಿಂದಿರಲು ಕುಲಸಚಿವರ ಸೂಚನೆ

ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದಲ್ಲಿ ನೌಕರಿ ಕೊಡಿಸುವುದಾಗಿ ವಿಶ್ವವಿದ್ಯಾನಿಲಯದ ಲಾಂಛನ ಮತ್ತು ಕವರಗಳನ್ನು ಬಳಸಿಕೊಂಡು ಅನಾಮಿಕ ವ್ಯಕ್ತಿಗಳು ಹಿಂದಿನ ಮತ್ತು ಪ್ರಸ್ತುತ ಕುಲಸಚಿವರು ಮತ್ತು ಸಹಾಯಕ ಕುಲಸಚಿವರ ಸಹಿಯೊಂದಿಗೆ ಸುಳ್ಳು ಪತ್ರಗಳನ್ನು ನೀಡುತ್ತಿದ್ದಾರೆ ಎಂಬುದು ಗಮನಕ್ಕೆ ಬಂದಿದ್ದು ಇಂಥ ವ್ಯಕ್ತಿಗಳ ಮೋಸದ ಜಾಲದ ಬಗೆಗೆ ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು ಎಂದು ಕುಲಸಚಿವ ಪ್ರೊ. ಬಿ. ಎಸ್. ನಾವಿ ಮನವಿ ಮಾಡಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಇದುವರೆಗೆ ಮಹಿಳಾ ವಿಶ್ವವಿದ್ಯಾಲಯದಲ್ಲಿ ಬೋಧಕರ […]

ಜೈನಮುನಿ ಹತ್ಯೆ ಪ್ರಕರಣ ಸಿಬಿಐಗೆ ವಹಿಸಲು ಆಗ್ರಹ- ಗುಮ್ಮಟ ನಗರಿಯಲ್ಲಿ ಬಿಜೆಪಿ ಪ್ರತಿಭಟನೆ- ಕೇಶ ಮುಂಡನ ಮಾಡಿಕೊಂಡು ಆಕ್ರೋಶ ವ್ಯಕ್ತಪಡಿಸಿದ ಯುವಕರು

ವಿಜಯಪುರ: ಚಿಕ್ಕೋಡಿ ತಾಲೂಕಿನ ಹಿರೇಕೋಡಿಯ ಜೈನಮುನಿ ಕಾಮಕುಮಾರ ನಂದಿ ಮಹಾರಾಜರ ಹತ್ಯೆ ಖಂಡಿಸಿ ಬಿಜೆಪಿ ಜಿಲ್ಲಾ ಘಟಕದ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು. ನಗರದ ಡಾ. ಬಿ. ಆರ್. ಅಂಬೇಡ್ಕರ್ ವೃತ್ತದಲ್ಲಿ ಜಮಾಯಿಸಿದ ಬಿಜೆಪಿಯ ನೂರಾರು ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.  ನಂತರ ಮೆರವಣಿಗೆ ನಡೆಸಿದರು.  ಅಲ್ಲದೇ, ಈ ಸಂದರ್ಭದಲ್ಲಿ ಕಾಂಗ್ರೆಸ್ ಸರಕಾರ ಹಿಂದೂ ವಿರೋಧಿಯಾಗಿದೆ ಎಂದು ಆರೋಪಿಸಿ ಘೋಷಣೆ ಹಾಕಿ ಆಕ್ರೋಶ ವ್ಯಕ್ತಪಡಿಸಿದರು.  ನಂತರ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಮನವಿ ಪತ್ರ ಸಲ್ಲಿಸಿದರು ಈ ಸಂದರ್ಭದಲ್ಲಿ ಮಾತನಾಡಿದ […]

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ- ವರ್ಗಾವಣೆ ದಂಧೆ ನಡೆಯುತ್ತಿದೆ- ಆರ್. ಎಸ್. ಪಾಟೀಲ ಕೂಚಬಾಳ

ವಿಜಯಪುರ: ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿದ್ದು, ವರ್ಗಾವಣೆ ದಂಧೆ ನಡೆಯುತ್ತಿದೆ ಎಂದು ವಿಜಯಪುರ ಬಿಜೆಪಿ ಜಿಲ್ಲಾಧ್ಯಕ್ಷ ಆರ್. ಎಸ್. ಪಾಟೀಲ ಕೂಚಬಾಳ ಆರೋಪಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸುಳ್ಳು ಭರವಸೆ ನೀಡಿ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿದೆ ಎಂದು ಕಿಡಿಕಾರಿದರು. ಕಾಂಗ್ರೆಸ್ ಒಂದು ಕೈಯಲ್ಲಿ ಯೋಜನೆ ನೀಡಿ ಮತ್ತೊಂದು ಕಡೆಗೆ ಕಸಿದುಕೊಳ್ಳುವ ಕೆಲಸ ಮಾಡುತ್ತಿದೆ.  ನಾನಾ ಕಡೆಗಳಲ್ಲಿ ಹತ್ಯೆಗಳು ಆಗುತ್ತಿವೆ.  ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಇಲ್ಲದಂತೆ ಆಗಿದೆ.  ಜೈನ ಮುನಿಗಳ ಹತ್ಯೆ ಪ್ರಕರಣದ ತನಿಖೆಯನ್ನು […]

ಗಿಡಮೂಲಿಕೆಗಳು ಪ್ರತಿಯೊಬ್ಬರ ಆರೋಗ್ಯದಲ್ಲೂ ಮಹತ್ವದ ಪಾತ್ರ ವಹಿಸುತ್ತವೆ- ಡಾ. ಡಿ. ಎನ್. ಧರಿ

ವಿಜಯಪುರ: ದೈನಂದಿಕ ಜೀವನದಲ್ಲಿ ಮಕ್ಕಳಿಂದ ಹಿರಿಯರವರಗೂ ಆರೋಗ್ಯ ವೃದ್ಧಿಗೆ ಗಿಡಮೂಲಿಕೆಗಳು ಮಹತ್ವದ ಪಾತ್ರ ವಹಿಸುತ್ತವೆ ಎಂದು ಬಿ. ಎಲ್. ಡಿ. ಇ ಸಂಸ್ಥೆಯ ಎ. ವಿ. ಎಸ್ ಆಯುರ್ವೇದÀ ಮಹಾವಿದ್ಯಾಲಯದÀ ಪ್ರಾಧ್ಯಾಪಕ ಡಾ. ಡಿ. ಎನ್. ಧರಿ ಹೇಳಿದರು. ಇಂಡಿ ತಾಲೂಕಿನ ಹೊರ್ತಿಯ ಮುರಾರ್ಜಿ ದೇಸಾಯಿ ವಸತಿ ಶಾಲೆಯ ಆವರಣದಲ್ಲಿ ಶಾಲಾ ಔಷಧಿ ವನ ನಿರ್ಮಾಣ ಕಾರ್ಯಕ್ರಮ ಉದ್ಘಾಟನೆ ಸಮಾರಂಭದಲ್ಲಿ ಅವರು ಮಾತನಾಡಿದರು. ರಾಜ್ಯ ಔಷಧಿ ಗಿಡಮೂಲಿಕೆ ಪ್ರಾಧಿಕಾರ ಎ.ವಿ.ಎಸ್. ಆಯುರ್ವೇದ ಮಹಾವಿದ್ಯಾಲಯ, ಆಸ್ಪತ್ರೆ ಮತ್ತು ಸಂಶೋಧನೆ […]

ರಾಷ್ಟ್ರೀಯ ಮುಕ್ತ ಕರಾಟೆ ಪಂದ್ಯಾವಳಿ- ಗುಮ್ಮಟ ನಗರಿಯ ವಿದ್ಯಾರ್ಥಿ ಉಸ್ಮಾನಗಣಿ ವಾಲಿಕಾರ ಪ್ರಥಮ ಸ್ಥಾನ

ವಿಜಯಪುರ: ನಗರದ ಸ್ಟಾರ್ ಬುಡೋಕಾನ್ ಕರಾಟೆ ಕ್ಲಬ್ ಕರಾಟೆ ತರಬೇತಿಯ ವಿದ್ಯಾರ್ಥಿಗಳು ಗದಗದಲ್ಲಿ ನಡೆದ ರಾಷ್ಟ್ರೀಯ ಮುಕ್ತ ಕರಾಟೆ ಪಂದ್ಯಾವಳಿಯಲ್ಲಿ ಉತ್ತಮ ಸಾಧನೆ ಮಾಡಿದ್ದು, ಉಸ್ಮಾನಗಣಿ ಎಂ. ವಾಲಿಕಾರ ಪ್ರಥಮ ಸ್ಥಾನ ಪಡೆದು ಗಮನ ಸೆಳೆದಿದ್ದಾರೆ. ಅಲ್ಲದೇ, ವಿದ್ಯಾರ್ಥಿಗಳಾದ ಸ್ವಾಲೇಹಾ ಎಂ. ವಾಲಿಕಾರ, ಝಕಿ ಐ. ಹೊನ್ನುಟಗಿ ದ್ವಿತಿಯ ಸ್ಥಾನ ಪಡೆದಿದ್ದಾರೆ.  ವಿದ್ಯಾರ್ಥಿ ಸಫೀಯಾ ಎಂ. ವಾಲಿಕಾರ ತೃತಿಯ ಸ್ಥಾನ ಪಡೆದುಕೊಂಡು ಜಿಲ್ಲೆಗೆ ಕೀರ್ತಿ ತಂದಿದ್ದಾರೆ ಎಂದು ಎಂದು ಕ್ಲಬ್ ನ ಕರಾಟೆ ತರಬೇತಿದಾರ ನಾಸೀರ ಎಂ. […]

ಸಿಹಿ ನೀರು ಅಲಂಕಾರಿಕ ಮೀನು ಸಾಕಾಣಿಕೆ ಕುರಿತು ಮಹಿಳೆಯರಿಗೆ ತರಬೇತಿ ಕಾರ್ಯಕ್ರಮ

ವಿಜಯಪುರ: ಮೀನು ಅಧಿಕ ಜನಪ್ರೀಯಗೊಳ್ಳುತ್ತಿರುವ ಆಹಾರವಾಗಿದ್ದು, ದೇಶದ ಹೆಚ್ಚುತ್ತಿರುವ ಜನಸಂಖ್ಯೆಗೆ ಪೌಷ್ಠಿಕಾಂಶಭರಿತ ಹಾಗೂ ಕಡಿಮೆ ವೆಚ್ಚದ ಸಮತೋಲ ಆಹಾರವನ್ನು ಇದರಿಂದ ಒದಗಿಸಬಹುದಾಗಿದೆ ಎಂದು ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ, ವಿಜ್ಞಾನ ವಿಭಾಗದ ಸಂಯೋಜಕಿ ಡಾ. ರೇಣುಕಾ ಮೇಟಿ  ಹೇಳಿದರು. ನಗರದ ಹೊರ ವಲಯದ ಭೂತನಾಳ ಕೆರೆಯ ಬಳಿ ಇರುವ ಮೀನುಗಾರಿಕೆ ಸಂಶೋಧನೆ ಮತ್ತು ಮಾಹಿತಿ ಕೇಂದ್ರದಲ್ಲಿ ಸಿಹಿನೀರು ಅಲಂಕಾರಿಕ ಮೀನು ಸಾಕಾಣಿಕೆ ವಿಷಯದ ಕುರಿತು ಆಯೋಜಿಸಲಾಗಿದ್ದ ಮೂರು ದಿನಗಳ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ದೇಶದ […]

ವಿಶ್ವ ಜನಸಂಖ್ಯಾ ದಿನ ಆಚರಣೆ: ಜನಸಂಖ್ಯೆ ನಿಯಂತ್ರಣ ಅತ್ಯವಶ್ಯಕ- ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ

ವಿಜಯಪುರ: ಶರವೇಗದಿಂದ ಬೆಳೆಯುತ್ತಿರುವ ಜನಸಂಖ್ಯೆ ಅಪಾಯದ ಸಂಕೇತ ಮತ್ತು ಅಭಿವೃದ್ದಿಗೆ ಮಾರಕವಾಗಿದ್ದು, ಜನಸಂಖ್ಯೆ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳುವುದು ಅಗತ್ಯವಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಹೇಳಿದ್ದಾರೆ.  ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲೂಕು ಆರೋಗ್ಯ ಅಧಿಕಾರಿಗಳ ಕಾರ್ಯಾಲಯ, ನಗರ ಆರೋಗ್ಯ ಕೇಂದ್ರ ನವಬಾಗ ಹಾಗೂ ಸರಕಾರಿ ಬಾಲಕೀಯರ ಪದವಿಪೂರ್ವ ಕಾಲೇಜ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿರುವ ವಿಶ್ವಜನಸಂಖ್ಯಾ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಜನಸಂಖ್ಯೆ ನಿಯಂತ್ರಣ ಕುರಿತು ಜಾಗೃತಿ ಮೂಡಿಸಲು ವಿಶ್ವ […]