ಹದಿಹರೆಯದಲ್ಲಿ ಪೋಷಕರ ಬೆಂಬಲ ಅಗತ್ಯ: ಡಾ.ವಿಶ್ವನಾಥ ಜಾಲವಾದಿ

ವಿಜಯಪುರ: ಹದಿಹರೆಯ ಎನ್ನುವದು ಜೀವನದ ಅತ್ಯಂತ ವಿಶಿಷ್ಠವಾದ ಬೆಳವಣಿಗೆ ಹಂತವಾಗಿರುವುದರಿಂದ ಈ ಸಂದರ್ಭದಲ್ಲಿ ಪೋಷಕರ ಮತ್ತು ಕುಟುಂಬ ಸದಸ್ಯರ ಬೆಂಬಲ ಅಗತ್ಯವಿದೆ ಎಂದು ವಿಜಯಪುರ ಜಾಲವಾದಿ ಆಸ್ಪತ್ರೆಯ ಹೃದಯ ಮತ್ತು ಮಧುಮೇಹ ತಜ್ಞ ಡಾ. ವಿಶ್ವನಾಥ ಜಾಲವಾದಿ ಹೇಳಿದ್ದಾರೆ. ಕೊಲ್ಹಾರ ತಾಲೂಕಿನ ಕೂಡಗಿ ಸರಕಾರಿ ಪಿಯು ಕಾಲೇಜಿನಲ್ಲಿ ಆಸ್ಪತ್ರೆ ವತಿಯಿಂದ ಆಯೋಜಿಸಲಾಗಿದ್ದ ಉಚಿತ ಆರೋಗ್ಯ ತಪಾಸಣೆ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು. ಹರೆಯದ ವಯಸ್ಸಿನಲ್ಲಿ ಪೋಷಕರು ಮತ್ತು ಕುಟುಂಬ ಸದಸ್ಯರ ಬೆಂಬಲ ಇಲ್ಲದಿದ್ದರೆ ಅನೇಕ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ.  […]

ಸವನಹಳ್ಳಿಯಲ್ಲಿ ಮಳೆಗಾಗಿ ಪ್ರಾರ್ಥಿಸಿ ಗ್ರಾಮಸ್ಥರಿಂದ ಗುಳ್ಳವನ ಪೂಜೆ

ವಿಜಯಪುರ: ಮುಂಗಾರು ಹಂಗಾಮು ಪ್ರಾರಂಭವಾಗಿ ಒಂದು ತಿಂಗಳಿಗೂ ಹೆಚ್ಚು ಕಾಲವಾಗಿದ್ದರೂ ಮಳೆ ಸುರಿಯದ ಹಿನ್ನೆಲೆಯಲ್ಲಿ ಸವನಹಳ್ಳಿ ಗ್ರಾಮಸ್ಥರು ಗುಳ್ಳವನ ಅಂದರೆ ಗುರ್ಜಿ ಪೂಜೆ ಮೊರೆ ಹೋಗಿದ್ದಾರೆ. ಮಳೆಗಾಗಿ ಪ್ರಾರ್ಥಿಸಿದ ರೈತರ ಮಕ್ಕಳು ಮನೆ ಮನೆಗಳಿಗೆ ಹೋಗಿ ಗುರಜಿ ಗುರುಜಿ ಎಲ್ಲ್ಯಾಡಿ ಬಂದೆ ಹಳ್ಳಾ ಕೊಳ್ಳಾ ತಿರುಗಾಡಿ ಬಂದೆ ಕಾರ ಮಳೆಯೇ ಕಪ್ಪತ ಮಳೆಯೇ ಹಳ್ಳಾ ಕೊಳ್ಳಾ ತುಂಬಿಸು ಮಳೆಯೇ ಸುಣ್ಣಾ ಕೊಡತೀನಿ ಸುರಿಯಲೆ ಮಳೆಯೇ ಬಣ್ಣಾ ಕೊಡತೀನಿ ಬಾರಲೆ ಮಳೆಯೇ ಸುರಿಮಳೆಯೇ ಸುರಿಮಳೆಯೇ ಕಾರ ಮಳೆಯೇ ಕಪ್ಪತ […]

ರಾಹುಲ ಗಾಂಧಿ ವಿರುದ್ಧ ಕೇಂದ್ರ ಸರಕಾರ ದ್ವೇಷ ರಾಜಕಾರಣ ಆರೋಪ- ಗುಮ್ಮಟ ನಗರಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ ಮೌನ ಪ್ರತಿಭಟನೆ

ವಿಜಯಪುರ: ಪ್ರಜಾಪ್ರಭುತ್ವ ಉಳಿವಿಗಾಗಿ ದೇಶದ ಹಿತಾಸಕ್ತಿ ಕಾಪಾಡಲು ಹೋರಾಟ ನಡೆಸುತ್ತಿರುವ ಕಾಂಗ್ರೆಸ್ ನಾಯಕ ರಾಹುಲ ಗಾಂಧಿ ವಿರುದ್ಧ ಕೇಂದ್ರ ಸರಕಾರ ಸುಳ್ಳು ಆರೋಪಗಳನ್ನು ಮಾಡಿ ದ್ವೇಷ ರಾಜಕೀಯ ನಡೆಸುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ವಿಜಯಪುರ ನಗರದಲ್ಲಿ ಮೌನ ಪ್ರತಿಭಟನೆ ನಡೆಸಿದರು.  ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಜಿಲ್ಲಾ ಕಾಂಗ್ರೆಸ್ ವತಿಯಿಂದ ನಡೆದ ಹೋರಾಟದಲ್ಲಿ ಪಾಲ್ಗೋಂಡ ನಾನಾ ಮುಖಂಡರು ರಾಹುಲ ಗಾಂಧಿ ಅವರಿಗೆ ನೈತಿಕ ಬೆಂಬಲ ವ್ಯಕ್ತಪಡಿಸಿದರು. ಕಾಂಗ್ರೆಸ್ ಜಿಲ್ಲಾಧ್ಯಕ್ಷ ರಾಜು ಆಲಗೂರ ಮಾತನಾಡಿ, ರಾಹುಲ್ ಗಾಂಧಿ […]

ಎನ್ಎಸ್ಎಸ್ ಸ್ವಯಂ ಸೇವಕರ ಜೀವನವನ್ನೇ ಬದಲಿಸುತ್ತದೆ- ಶಂಕರ ಮಾರಿಹಾಳ

ವಿಜಯಪುರ: ರಾಷ್ಟ್ರೀಯ ಸೇವಾ ಯೋಜನೆ ಸ್ವಯಂ ಸೇವಕರ ಜೀವನವನ್ನೇ ಬದಲಿಸುತ್ತದೆ ಎಂದು ವಿಜಯಪುರ ಎಎಸ್ಪಿ ಶಂಕರ ಮಾರಿಹಾಳ ಹೇಳಿದ್ದಾರೆ. ವಿಜಯಪುರ ತಾಲೂಕಿನ ಬರಟಗಿ ಗ್ರಾಮದಲ್ಲಿ ಬಿ.ಎಲ್.ಡಿ.ಇ ಸಂಸ್ಥೆಯ ಎ. ಎಸ್. ಪಾಟೀಲ ವಾಣಿಜ್ಯ ಮಹಾವಿದ್ಯಾಲಯದ ಎನ್ಎಸ್ಎಸ್ ಘಟಕ 1 ಮತ್ತು 2ರ ಆಶ್ರಯದಲ್ಲಿ ಆಯೋಜಿಸಲಾಗಿದ್ದ 2023ರ ವಿಶೇಷ ಸೇವಾ ಶಿಬಿರದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು. ಸ್ವಯಂ ಸೇವಕರಾಗಿದ್ದಾಗ ಇಷ್ಟಪಟ್ಟು ಇನ್ನೂ ಕೆಲವರು ಕಷ್ಟಪಟ್ಟು ಮಾಡಿದ ಶ್ರಮದಾನ, ಕಾರ್ಯಕ್ರಮಗಳ ಆಯೋಜನೆ, ಯೋಜನಾಧಿಕಾರಿಗಳ ಮಾರ್ಗದರ್ಶನ ಎಲ್ಲವೂ ಮುಂದೊಂದು ದಿನ […]

ಕಲುಷಿತ ನೀರು ಪೂರೈಕೆ ಬಗ್ಗೆ ಎಚ್ಚರಿಕೆ ವಹಿಸಿ: ಸಕಾಲದಲ್ಲಿ ಕುಡಿಯುವ ನೀರು ಪೂರೈಸಲು ಜಲಮೂಲ, ಟ್ಯಾಂಕರ್ ವ್ಯವಸ್ಥೆ ಮಾಡಿ- ಡಿಸಿ ಭೂಬಾಲನ್ ಟಿ

ವಿಜಯಪುರ: ಜಿಲ್ಲೆಯ ಗ್ರಾಮ ಪಂಚಾಯಿತಿ ಮತ್ತು ತಾಲೂಕು ಮಟ್ಟದಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸುವ ಹಳ್ಳಿ ಹಾಗೂ ವಾರ್ಡಗಳಲ್ಲಿ ಸಕಾಲದಲ್ಲಿ ಕುಡಿಯುವ ನೀರು ಪೂರೈಸಲು ಜಲಮೂಲಗಳನ್ನು ಗುರುತಿಸಿಟ್ಟುಕೊಳ್ಳಬೇಕು.  ಜಲಮೂಲವಿಲ್ಲದೆಡೆ ಖಾಸಗಿ ಟ್ಯಾಂಕರ್ ಮೂಲಕ ನೀರು ಪೂರೈಸಲು ಅವಶ್ಯಕ ಸಿದ್ಧತೆ ಮಾಡಿಟ್ಟುಕೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಭೂಬಾಲನ್ ಟಿ. ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲೆಯ ಕುಡಿಯುವ ನೀರಿನ ಪರಿಸ್ಥಿತಿ ನಿರ್ವಹಣಾ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಮುಂಗಾರು ಮಳೆ ವಿಳಂಬದಿಂದ ಅವಶ್ಯವಿದ್ದ ಕಡೆ ಟ್ಯಾಂಕರ್ ಗಳ […]

ಜೈನ ಮುನಿ ಕೊಲೆ ಪ್ರಕರಣ- ಹಂತಕರನ್ನು ಗಲ್ಲಿಗೇರಿಸಬೇಕು- ಮನಗೂಳಿ ಹಿರೇಮಠದ ಸಂಗನಬಸವ ಶ್ರೀಗಳ ಆಗ್ರಹ

ವಿಜಯಪುರ: ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನಲ್ಲಿ ನಡೆದ ಜೈನ ಮುನಿಗಳ ಕೊಲೆ ಆರೋಪಿಗಳನ್ನು ಗಲ್ಲಿಗೇರಿಸಬೇಕು ಎಂದು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಮನಗೂಳಿ ಹಿರೇಮಠದ ಶ್ರೀ ಸಂಗನಬಸವ ಶಿವಾಚಾರ್ಯ ಸ್ವಾಮೀಜಿ ಆಗ್ರಹಿಸಿದ್ದಾರೆ. ಈ ಕುರಿತು ವಿಡಿಯೋ ಸಂದೇಶ ನೀಡಿರುವ ಅವರು, ಜೈನಮುನಿಗಳ ಕೊಲೆಯನ್ನು ಖಂಡಿಸುತ್ತೇನೆ.  ಇಂದು ರಾಜ್ಯದಲ್ಲಿ ಯಾವುದೇ ಧರ್ಮದ ಸ್ವಾಮೀಜಿಗಳು ತಮ್ಮ ಸ್ವಂತಕ್ಕಾಗಿ ಯಾವ ಕೆಲಸ ಕಾರ್ಯಗಳನ್ನು ಮಾಡುವುದಿಲ್ಲ.  ಈ ಸಮಾಜದ ಜನರೇ ತಂದೆ-ತಾಯಿ, ಈ ಸಮಾಜದ ಜನತೆಯೇ ನಮ್ಮ ಬಂಧು- ಬಳಗ ಎಂಬ […]

ಹುಂಡೈ ಎಕ್ಸ್ಟರ್ ಕಾರ್ ಬಿಡುಗಡೆ ಮಾಡಿದ ಮಹಾನಗರ ಪಾಲಿಕೆ ಆಯುಕ್ತ ಬದರುದ್ದೀನ್ ಸೌದಾಗರ

ವಿಜಯಪುರ: ನಗರದ ಹೊರವಲಯದಲ್ಲಿರುವ ನಾರಾಯಣ ಹುಂಡೈ ಕಾರ್ ಶೋರೂಂ ನಲ್ಲಿ ಹುಂಡೈ ಎಕ್ಸ್ ಟರ್ ನೂತನ ವಾಹನವನ್ನು ಮಹಾನಗರ ಪಾಲಿಕೆ ಆಯುಕ್ತ ಬದರುದ್ದಿನ್ ಸೌದಾಗರ ಮಾರುಕಟ್ಟೆಗೆ ಬಿಡುಗಡೆ ಮಾಡಿದರು.  ಕಾರ್ ಶೋರೂಂ ಮಾಲೀಕ ಗೋವಿಂದ ಜೋಶಿ ನೂತನ ಕಾರಿನ ಕುರಿತು ಮಾತನಾಡಿ, ನೂತನ ಕಾರು ತನ್ನದೇಯಾದ ವೈಶಿಷ್ಟ್ಯತೆಗಳೊಂದಿಗೆ ಮಾರುಕಟ್ಟೆಗೆ ಲಗ್ಗೆ ಇಟ್ಟಿದ್ದು,  ಹೊಸ ಎಕ್ಸ್ಟರ್ ಧ್ವನಿ ಆಜ್ಞೆಗಳೊಂದಿಗೆ ಎಲೆಕ್ಟ್ರಿಕ್ ಸನ್‌ರೂಫ್ (ಮೊದಲ-ಸೆಗ್ಮೆಂಟ್) ಮತ್ತು ಡ್ಯುಯಲ್ ಕ್ಯಾಮೆರಾಗಳೊಂದಿಗೆ ಡ್ಯಾಶ್‌ಕ್ಯಾಮ್ ಅನ್ನು ತೆರೆದುಕೊಳ್ಳುತ್ತದೆ ಎಂದು ತಿಳಿಸಿದರು. ಎರಡನೆಯದು 2.31 ಇಂಚಿನ […]

ರಾಷ್ಟ್ರೀಯ ಲೋಕ್ ಅದಾಲತ್ ಯಶಸ್ವಿ- ವಿಚಾರಣೆಗೆ ಬಾಕಿ ಇದ್ದ 7914 ಪ್ರಕರಣಗಳು ಇತ್ಯರ್ಥ

ವಿಜಯಪುರ: ಜಿಲ್ಲೆಯಲ್ಲಿ ನಡೆದ ರಾಷ್ಟ್ರೀಯ ಲೋಕ ಅದಾಲತ್ ಯಶಸ್ವಿಯಾಗಿದ್ದು, ಜಿಲ್ಲಾದ್ಯಂತ ವಿಚಾರಣಗೆಗೆ ಬಾಕಿಯಿದ್ದ 7914 ಪ್ರಕರಣಗಳ್ನು ಇತ್ಯರ್ಥ ಪಡಿಸಲಾಗಿದೆ. ಆಸ್ತಿ ವಿಭಾಗಕ್ಕೆ ಸಂಬಂಧಿಸಿದ 141 ಪ್ರಕರಣಗಳು, 174 ಚೆಕ್ ಬೌನ್ಸ್ ಪ್ರಕರಣಗಳು, ಮೋಟಾರ ವಾಹನ ಅಪಘಾತ ಪರಿಹಾರಕ್ಕೆ ಸಂಬಂಧಿಸಿದ 125 ಪ್ರಕರಣಗಳು ಹಾಗೂ ರಾಜಿಯಾಗಬಹುದಾದ 71 ಕ್ರಿಮಿನಲ್ ಪ್ರಕರಣಗಳು ಸೇರಿದಂತೆ ನ್ಯಾಯಾಲಯದಲ್ಲಿ ವಿಚಾರಣೆಗೆ ಬಾಕಿ ಇದ್ದ ಒಟ್ಟು 7914 ಪ್ರಕರಣಗಳು ಲೋಕ್ ಅದಾಲತ್‌ನಲ್ಲಿ ಇತ್ಯರ್ಥವಾಗಿವೆ. ರಾಷ್ಟ್ರೀಯ ಲೋಕ್ ಅದಾಲತ್‌ ನಲ್ಲಿ ಕಕ್ಷಿದಾರರು ಹಾಗೂ ಸರಕಾರಕ್ಕೆ ಒಟ್ಟು ರೂ. […]

ವಿಜಯಪುರ ನೂತನ ಡಿಸಿಯಾಗಿ ಭೂಬಾಲನ ಟಿ. ಅಧಿಕಾರ ಸ್ವೀಕಾರ- ಡಾ. ದಾನಮ್ಮನವರ ವರ್ಗಾವಣೆ

ವಿಜಯಪುರ: ನೂತನ ಜಿಲ್ಲಾಧಿಕಾರಿಯಾಗಿ ಭೂಬಾಲನ ಟಿ. ಅಧಿಕಾರ ಸ್ವೀಕಾರಿಸಿದ್ದಾರೆ. ಸರಕಾರ ವರ್ಗಾವಣೆ ಆದೇಶ ಹೊರಡಿಸಿದ ತಕ್ಷಣವೇ ವಿಜಯಪುರಕ್ಕೆ ಆಗಮಿಸಿದ ಭೂಬಾಲನ ಟಿ. ಅಧಿಕಾರ ಸ್ವೀಕರಿಸಿದರು.  ನಿರ್ಗಮಿತ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ನೂತನ ಡಿಸಿಯನ್ನು ಸ್ವಾಗತಿಸಿ ಬರಮಾಡಿಕೊಂಡರು.  ನಂತರ ಅಧಿಕಾರ ಹಸ್ತಾಂತರಿಸಿದರು. ನೂತನ ಜಿಲ್ಲಾಧಿಕಾರಿ ಹಿನ್ನೆಲೆ ಭೂಬಾಲನ ಟಿ.  ಅವರು ಈವರೆಗೆ ಬಾಗಲಕೋಟೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳಾಗಿದ್ದರು.  ವರ್ಗಾವಣೆ ಆದೇಶ ಹೊರಬರುತ್ತಿದ್ದಂತೆ ವಿಜಯಪುರಕ್ಕೆ ಬಂದು ಅಧಿಕಾರ ಸ್ವೀಕರಿಸಿದರು. 2015ರ ಬ್ಯಾಚ್‍ನ ಐಎಎಸ್ ಅಧಿಕಾರಿಯಾಗಿರುವ […]

ಅಭಿಮಾನಿಯ ಆಸೆ ಈಡೇರಿಸಿ ಸರಳತೆ ತೋರಿದ ಸಚಿವ ಎಂ. ಬಿ. ಪಾಟೀಲ- ಹೇಗೆ ಗೊತ್ತಾ?

ವಿಜಯಪುರ: ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಸಚಿವ ಎಂ. ಬಿ. ಪಾಟೀಲ ಅವರಿಗೆ ಕಾರ್ಯಕರ್ತರು ಮತ್ತು ಅಭಿಮಾನಿಗಳೆಂದರೆ ಎಲ್ಲಿಲ್ಲದ ಪ್ರೀತಿ ಮತ್ತು ಅಭಿಮಾನ.  ಬಬಲೇಶ್ವರ ತಾಲೂಕಿನ ಶೇಗುಣಸಿ ಬಳಿ ನಡೆದ ಮಧ್ಯಾಹ್ನ ನಡೆದ ಘಟನೆಯೊಂದು ಸಚಿವರ ಸರಳತೆಗೆ ಸಾಕ್ಷಿಯಾಯಿತು. ಶೇಗುಣಸಿ ಬಳಿ ಮುಳವಾಡ ಏತ ನೀರಾವರಿ ಹಂತ- 3ರಡಿ ಬರುವ ವಿತರಣೆ ಕಾಲುವೆಗಳ ನಿರ್ಮಾಣ ಕಾಮಗಾರಿಗಳಿಗೆ ಸಚಿವರು ಭೂಮಿಪೂಜೆ ನೆರವೇರಿಸುವ ಕಾರ್ಯಕ್ರಮ ನಡೆಯಿತು.  ಈ ಕಾರ್ಯಕ್ರಮ ಆರಂಭಕ್ಕೂ ಮುನ್ನ ವಾಹನವೊಂದರಲ್ಲಿ ಬಂದಿದ್ದ ಯುವಕನೊಬ್ಬ ಕಾರ್ಯಕ್ರಮ […]