ಇಂದು ವಿಶ್ವ ಕಿಡ್ನಿ ದಿನ- ಮೂತ್ರಪಿಂಡದ ಕಾಳಜಿ ಹೇಗೆ? ಖ್ಯಾತ ವೈದ್ಯರಾದ ಡಾ. ಸಂದೀಪ ಹುಯಿಲಗೋಳ ನೀಡಿದ ಸಲಹೆಗಳನ್ನು ತಪ್ಪದೇ ಓದಿ

ಕಿಡ್ನಿ ಫೇಲ್ ಕುರಿತು ಜನರು ಭಯಪಡುವ ಅಗತ್ಯವಿಲ್ಲ, ಇದಕ್ಕೆ ಸೂಕ್ತವಾದ ಚಿಕಿತ್ಸೆಯಿದೆ ಎಂದು ಮೂತ್ರಪಿಂಡ ತಜ್ಞರಾದ ಡಾ. ಸಂದೀಪ ಹುಯಿಲಗೋಳ ಹೇಳಿದ್ದಾರೆ. ಇವರು ಬಾಗಲಕೋಟೆಯ ಜನಪ್ರಿಯ ವೈದ್ಯರು ಮತ್ತು Prepare Edutech ಎಂಬ ದೇಶದ ಮೊದಲ ಪ್ಯಾರಾಮೆಡಿಕಲ್ ಮತ್ತು ನರ್ಸಿಂಗ್ ವಿದ್ಯಾರ್ಥಿಗಳಿಗೆ ಕಲಿಕಾ ತಾಣವಾದ preped.in ನ ಸಿಇಒ ಮತ್ತು ಸಹ-ಸ್ಥಾಪಕರು. ವಿಶ್ವ ಮೂತ್ರಪಿಂಡ ದಿನಾಚರಣೆ ಪ್ರಯುಕ್ತ (World Kidney Day ) ನಮ್ಮ ವೆಬ್ ತಾಣದ ಓದುಗರಿಗೆ ಅಮೂಲ್ಯ ಸಲಹೆಗಳನ್ನು ನೀಡಿದ್ದಾರೆ. ಜೊತೆಗೆ, ಕಿಡ್ನಿ ತೊಂದರೆಗಳ […]

ಭಾರತ ಬಿಟ್ಟು ತೊಲಗಿ ಚಳವಳಿ ಸ್ಮರಣೆ- ಡಾ. ಗಂಗಾಧರ ಸಂಬಣ್ಣಿ ನೇತತ್ವದಲ್ಲಿ ಕಾಂಗ್ರೆಸ್ ಪಥಸಂಚಲನ

ವಿಜಯಪುರ: ದೇಶದ ಸ್ವಾತಂತ್ರ್ಯಕ್ಕಾಗಿ ನಡೆದ ಅಂತಿಮ ಹೋರಾಟ ಬ್ರಿಟೀಷರೇ ಭಾರತ ಬಿಟ್ಟು ತೊಲಗಿ ಚಳವಳಿಯ 79ನೇ ವರ್ಷಾಚರಣೆ ವಿಜಯಪುರದಲ್ಲಿ ನಡೆಯಿತು‌.   ವಿಜಯಪುರ ಜಿಲ್ಲಾ ಕಾಂಗ್ರೆಸ್ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಸೇವಾದಳದ ಜಿಲ್ಕಾಧ್ಯಕ್ಷ ಡಾ. ಗಂಗಾಧರ ಸಂಬಣ್ಣಿ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಪಥ ಸಂಚಲನ ನಡೆಸಿದರು. ವಿಜಯಪುರ ನಗರದ ಕೋರ್ಟಗ ಬಳಿ ಇರುವ ದೇವರಾಜ ಅರಸ ವೃತ್ತದಿಂದ ಜಿಲ್ಲಾ ಕಾಂಗ್ರೆಸ್ ಕಚೇರಿವರೆಗೆ ಕೈಯಲ್ಲಿ ಕಾಂಗ್ರೆಸ್ ಧ್ವಜವನ್ನು ಹಿಡಿದ ಮುಖಂಡರು ಮತ್ತು ಕಾರ್ಯಕರ್ತರು ಜಾಥಾದಲ್ಲಿ […]

ಕೇಂದ್ರ ಮೇಕೆದಾಟು ಯೋಜನೆಗೆ ಶೀಘ್ರದಲ್ಲಿ ಅನುಮೋದನೆ ನೀಡಲಿದೆ- ಸಿಎಂ ಬಸವರಾಜ ಬೊಮ್ಮಾಯಿ ವಿಶ್ವಾಸ

ಮೈಸೂರು: ಮೇಕೆದಾಟು ಯೋಜನೆಯ ಡಿ ಪಿ ಆರ್ ಗೆ ಕೇಂದ್ರ ಸರಕಾರ ಶೀಘ್ರದಲ್ಲಿ ಅನುಮೋದನೆ ನೀಡಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಮೈಸೂರು ಪ್ರವಾಸದಲ್ಲಿರುವ ಅವರು, ನಾಡದೇವತೆ ತಾಯಿ ಚಾಮುಂಡೇಶ್ವರಿಯ ದರ್ಶನ ಪಡೆದ ನಂತರ ಮಾಧ್ಯಮ ಪ್ರತಿನಿಧಿಗಳ ಜೊತೆ ಪ್ರತಿಕ್ರಿಯೆ ಮಾತನಾಡಿದರು. ಮೇಕೆದಾಟು ಯೋಜನೆಯ ಡಿ ಪಿ ಆರ್ ಅನ್ನು ಕೇಂದ್ರ ಜಲ ಆಯೋಗಕ್ಕೆ ಈಗಾಗಲೇ ಸಲ್ಲಿಸಲಾಗಿದೆ. ಕಳೆದ ಬಾರಿ ದೆಹಲಿಗೆ ತೆರಳಿದ್ದಾಗ ಈ ಯೋಜನೆಗೆ ಒಪ್ಪಿಗೆ ನೀಡುವ ಭರವಸೆ ದೊರೆತಿದೆ. ಇದಕ್ಕೆ ಕೆಲವು […]

ಖಾತೆಯ ಬಗ್ಗೆ ಕ್ಯಾತೆ ತೆಗೆಯದೆ ಜನಸೇವೆಗೆ ಮಹತ್ವ ನೀಡುವುದು ಒಳ್ಳೆಯದು- ಸಚಿವೆ ಶಶಿಕಲಾ ಜೊಲ್ಲೆ

ವಿಜಯಪುರ: ಖಾತೆ ಕುರಿತು ಅಸಮಾಧಾನ ವ್ಯಕ್ತ ಪಡಿಸುವುದು ಅವರವರಿಗೆ ಬಿಟ್ಟ ವಿಚಾರ. ಕೆಲಸ ಮಾಡುವವರಿಗೆ ಯಾವ ಖಾತೆ ಯಾದರೇನು? ಎಂದು ಮುಜರಾಯಿ, ಹಜ್ ಮತ್ತು ವಕ್ಪ ಖಾತೆ ಸಚಿವೆ ಶಶಿಕಲಾ ಜೊಲ್ಲೆ ಹೇಳಿದ್ದಾರೆ. ವಿಜಯಪುರದಲ್ಲಿ ಗ್ರಾಮದೇವತೆ ಶ್ರೀ ಸಿದ್ಧೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ ಬಳಿಕ ಅವರು ಮಾತನಾಡಿದರು. ಕೆಲಸ ಮಾಡುವ ಮತ್ತು ಜನರಿಗೆ ಸ್ಪಂದನೆ ಮಾಡುವ ಇಚ್ಛೆ ಇದ್ದರೆ ಯಾವ ಖಾತೆಯಾದರೇನು? ಕೆಲಸ ಮಾಡಬಹುದು ಎಂದು ಖಾತೆ ವಿಚಾರವಾಗಿ ಅಸಮಾಧಾನಗೊಂಡಿರುವ ಸಚಿವರಿಗೆ ಸಚಿವೆ ಶಶಿಕಲಾ […]

ಜನಸೇವೆಗಾಗಿ ಯಾವ ಖಾತೆಯನ್ನೂ ನಿಭಾಯಿಸುವೆ- ಹೊಸ ಖಾತೆ ಬಗ್ಗೆ ಬೇಸರವಿಲ್ಲ- ಸಚಿವೆ ಶಶಿಕಲಾ ಜೊಲ್ಲೆ

ವಿಜಯಪುರ: ಕೆಲಸ ಮಾಡುವವರಿಗೆ ಜನತೆಗೆ ನ್ಯಾಯ ಒದಗಿಸಲು ಖಾತೆ ಯಾವುದಾದರೇನು? ಎಂದು ಪ್ರಶ್ನಿಸುವ ಮೂಲಕ ಮೂಲಕ ಮುಜರಾಯಿ, ಹಜ್ ಮತ್ತು ವಕ್ಫ್ ಖಾತೆ ಸಚಿವೆ ಶಶಿಕಲಾ ಜೊಲ್ಲೆ ತಮಗೆ ನೀಡಿರುವ ಖಾತೆಯ ಬಗ್ಗೆ ಯಾವುದೇ ಅಸಮಾಧಾನವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನಲ್ಲಿ ಪ್ರವಾಹ ಪೀಡಿತ ಪ್ರದೇಶಗಳ ಭೇಟಿಯ ನಂತರ ಮಾತನಾಡಿದ ಅವರು, ಯಾವ ಖಾತೆ ಇದ್ದರೂ ಆ ಖಾತೆ ಯೋಜನೆಗಳನ್ನು ತಳಮಟ್ಟದ ಜನತೆಗೆ ಮುಟ್ಟಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಎರಡು ವರ್ಷಗಳಿಂದ ಮಹಿಳಾ ಮತ್ತು […]

ಸಿಎಂ ಬಸವರಾಜ ಬೊಮ್ಮಾಯಿ ಭೇಟಿ ಮಾಡಿದ ಮಹಾರಾಷ್ಟ್ರದ ನೀರಾವರಿ ಸಚಿವ ಜಯಂತ ಪಾಟೀಲ- ಜಲ ವಿಷಯಗಳ ಕುರಿತು ಚರ್ಚೆ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಮಹಾರಾಷ್ಟ್ರ ನೀರಾವರಿ ಸಚಿವ ಜಯಂತ ಪಾಟೀಲ ಭೇಟಿ ಮಾಡಿದರು. ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ‌ ಭೇಟಿ ಮಾಡಿದ ಅವರು, ಉಭಯ ರಾಜ್ಯಗಳ ನಡುವಿನ ಜಲ ವಿಷಯಗಳ ಕುರಿತು ಪರಸ್ಪರ ಸಮಾಲೋಚನೆ ನಡೆಸಿದರು. ಈ ಸಂದರ್ಭದಲ್ಲಿ ಸಚಿವ ಮುರುಗೇಶ ನಿರಾಣಿ ಉಪಸ್ಥಿತರಿದ್ದರು. ಬೆಳಿಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಜೊತೆ ಶರದ ಪವಾರ ಚರ್ಚೆ ಈ ಮಧ್ಯೆ, ಬೆಳಿಗ್ಗೆ ಮಹಾರಾಷ್ಟ್ರದ ಮಾಜಿ ಸಿಎಂ ಮತ್ತು ಎನ್ ಸಿ ಪಿ ಮುಖ್ಯಸ್ಥ ಶರದ […]

ಆ. 23 ರಿಂದ , 9, 10, ಪಿಯು ತರಗತಿಗಳು ಆರಂಭ- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು: ಕೊರೊನಾ ಹಿನ್ನೆಲೆಯಲ್ಲಿ ಸ್ಥಗಿತಗೊಳಿಸಲಾಗಿದ್ದ ಹೈಸ್ಕೂಲ್ ಮತ್ತು ಪಿಯು ಕಾಲೇಜು ಭೌತಿಕ ತರಬೇತಿಗಳನ್ನು ಆ. 23 ರಿಂದ ಪುನಾರಂಭಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಕೊರೊನಾ ಸ್ಥಿತಿಗತಿ ಕುರಿತು ಕೋವಿಡ್ ಟಾಸ್ಕಫೋರ್ಸ್ ಸಮಿತಿ ಮತ್ತು ಆರೋಗ್ಯ ಹಾಗೂ ಇತರ ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಆ. 23 ರಿಂದ ಎರಡು ಹಂತಗಳಲ್ಲಿ ಶಾಲೆ, ಕಾಲೇಜುಗಳನ್ನು ಪುನಾರಂಭಿಸಲು ನಿರ್ಧರಿಸಲಾಗಿದೆ. ಮೊದಲ ಹಂತದಲ್ಲಿ 9 ರಿಂದ 12ನೇ ತರಗತಿಯ ಶಾಲೆ ಮತ್ತು […]

ಮಹಾರಾಷ್ಟ್ರ, ಕೇರಳ ಗಡಿ ಜಿಲ್ಲೆಗಳಲ್ಲಿ ವಾರಾಂತ್ಯ ಕರ್ಪ್ಯೂ, ರಾತ್ರಿ ಕರ್ಪ್ಯೂ ಒಂದು ಗಂಟೆ ಹೆಚ್ಚಳ- ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ಕೊರೊನಾ ಮೂರನೇ ಅಲೆ ನಿಯಂತ್ರಣಕ್ಕೆ ರಾಜ್ಯ ಸರಕಾರ ಮಹಾರಾಷ್ಟ್ರ ಮತ್ತು ಕೇರಳ ಗಡಿ ಜಿಲ್ಲೆಗಳಲ್ಲಿ ವಾರಾಂತ್ಯ ಕರ್ಫ್ಯೂ ಜಾರಿಗೆ ನಿರ್ಧರಿಸಿದೆ. ಅಲ್ಲದೆ, ರಾಜ್ಯಾದ್ಯಂತ ಈ ಮುಂಚೆಯಿದ್ದ ರಾತ್ರಿ ಕರ್ಪ್ಯೂವನ್ನು ಒಂದು ಗಂಟೆ ಹೆಚ್ಚುಗೆ ಮಾಡಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ರಾಜ್ಯದಲ್ಲಿನ ಕೋವಿಡ್ ಸ್ಥಿತಿಗತಿ ಕುರಿತು ಮುಖ್ಯಮಂತ್ರಿ ಬೆಂಗಳೂರಿನಲ್ಲಿ ಇಂದು ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ ಸಚಿವರು, ಕೋವಿಡ್ ಟಾಸ್ಕ್ ಫೋರ್ಸ್, ಮತ್ತು ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳ ಜತೆ ಸಭೆ ನಡೆಸಿದ […]

ಮಹಾರಾಷ್ಟ್ರ ಮಾಜಿ ಸಿಎಂ ಶರದ ಪವಾರ ಅವರಿಂದ ರಾಜ್ಯ ಸಿಎಂ ಬಸವರಾಜ ಬೊಮ್ಮಾಯಿ ಭೇಟಿ

ಬೆಂಗಳೂರು: ಮಹಾರಾಷ್ಟ್ರದ ಮಾಜಿ ಸಿಎಂ ಮತ್ತು ಎನ್ ಸಿ ಪಿ ಮುಖ್ಯಸ್ಥ ಶರದ ಪವಾರ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿದ್ದಾರೆ. ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಅವರನ್ನು ಸೌಜನ್ಯಯುತವಾಗಿ ಭೇಟಿ ಮಾಡಿದ ಶರದ ಪವಾರ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಸಚಿವರಾದ ಆರ್. ಅಶೋಕ ಮತ್ತು ಡಾ. ಕೆ. ಸುಧಾಕರ ಉಪಸ್ಥಿತರಿದ್ದರು.

ಮಾನವೀಯ ಮೌಲ್ಯಗಳನ್ನು ಕಾನೂನಿನ ಚೌಕಟ್ಟಿಗೆ ಅಳವಡಿಸುವುದು ಅಗತ್ಯ- ಸಿಎಂ ಬಸವರಾಜ ಎಸ್. ಬೊಮ್ಮಾಯಿ

ಬೆಂಗಳೂರು : ಮಾನವೀಯ ಮೌಲ್ಯಗಳನ್ನು ಕಾನೂನಿನ ಚೌಕಟ್ಟಿನಲ್ಲಿ ಅಳವಡಿಸುವುದರಿಂದ ಹಲವು ಸಮಸ್ಯೆಗಳಿಗೆ ಪರಿಹಾರ ದೊರೆಯುತ್ತವೆ. ಅಲ್ಲದೇ, ನ್ಯಾಯಾಂಗ ಇನ್ನಷ್ಟು ಮಾನವೀಯ ಹಾಗೂ ಜನಸ್ನೇಹಿಯಾಗಲು ಸಾಧ್ಯ ಎಂದು ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ ಅಭಿಪ್ರಾಯಪಟ್ಟಿದ್ದಾರೆ. ಹುಬ್ಬಳ್ಳಿ ಕರ್ನಾಟಕ ಕಾನೂನು ವಿಶ್ವವಿದ್ಯಾಲಯದ ವಿಜ್ಞಾನೇಶ್ವರ ಅಧ್ಯಯನ ಪೀಠವು ಏರ್ಪಡಿಸಿದ್ದ ಕರ್ನಾಟಕದಲ್ಲಿ ಮಿತಾಕ್ಷರ, ವಚನ ದಾಸ ಮತ್ತು ಜಾನಪದ ಸಾಹಿತ್ಯದಲ್ಲಿ ಕಾನೂನಿನ ಸಮಾಜಮುಖಿ ಮೌಲ್ಯಗಳು- ಒಂದು ಪರಿಶೋಧನೆ ಕುರಿತ ವೆಬಿನಾರ್ ಉದ್ಘಾಟಿಸಿ ಅವರು ಮಾತನಾಡಿದರು. ಕರ್ನಾಟಕದ ವಚನ, ದಾಸ ಸಾಹಿತ್ಯ ಹಾಗೂ ಜಾನಪದ […]