ಅನಲಾಕ್ ಮಧ್ಯೆಯೂ ಬಸವ ನಾಡಿನಲ್ಲಿ ಬಸ್ ಸಂಚಾರ ಆರಂಭ- ಸಿಂಗರಿಸಿಕೊಂಡು ನಿಲ್ದಾಣಗಳಿಗೆ ಬಂದ ಬಸ್ಸುಗಳು

ವಿಜಯಪುರ: ಬಸವ ನಾಡು ವಿಜಯಪುರ ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವಿಟಿ ದರ ಶೇ. 5ಕ್ಕಿಂತ ಕಡಿಮೆ ಇದ್ದರೂ ಅನಲಾಕ್ ಮಾಡಿಲ್ಲ. ಅನಲಾಕ್ ಭಾಗ್ಯವಿಲ್ಲದಿದ್ದರೂ ವಿಜಯಪುರ ಜಿಲ್ಲಾದ್ಯಂತ ಬಸ್ ಸಂಚಾರ ಆರಂಭವಾಗಿದೆ. ಬೆಳಿಗ್ಗೆಯಿಂದಲೇ ಬಸ್ಸುಗಳ ಓಡಾಟ ಬಹಳ ದಿನಗಳ ನಂತರ ಪುನಾರಂಭವಾಗಿದ್ದು, ಪ್ರಯಾಣಿಕರೂ ಕೂಡ ಉತ್ಸಾಹದಿಂದಲೇ ಬಸ್ ನಿಲ್ದಾಣಗಳಿಗೆ ಆಗಮಿಸುತ್ತಿದ್ದಾರೆ. ಆಗಮಿಸುತ್ತಿದ್ದಾರೆ. ವಿಜಯಪುರ ನಗರದಲ್ಲಿರುವ ವಿಜಯಪುರ ಕೇಂದ್ರ ಬಸ್ ನಿಲ್ದಾಣ ಮತ್ತು ಸೆಟಲೈಟ್ ಬಸ್ ನಿಲ್ದಾಣಗಳಲ್ಲಿ ಬಸ್ ಸೇವೆ ಬೆಳಿಗ್ಗೆ 6 ಗಂಟೆಯಿಂದಲೇ ಪುನಾರಂಭವಾಗಿದೆ. ಲಾಕಡೌನ್ ನಂತರ ಬಸ್ಸುಗಳು ಸಂಚಾರ […]

ವಿಜಯಪುರ ಜಿಲ್ಲೆಯಲ್ಲಿ ಅನಲಾಕ್ ಬಗ್ಗೆ ನಾಳೆ ನಿರ್ಧಾರ ನಿರೀಕ್ಷೆ- ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ

ವಿಜಯಪುರ: ಕೊರೊನಾ ಪಾಸಿಟಿವಿಟಿ ದರ ಶೇ. 5ಕ್ಕಿಂತ ಕಡಿಮೆಯಿದ್ದರೂ ವಿಜಯಪುರ ಜಿಲ್ಲೆಯನ್ನು ಅನಲಾಕ್ ಜಿಲ್ಲೆಗಳ ಪಟ್ಟಿಯಿಂದ ಕೈಬಿಟ್ಟಿದ್ದಕ್ಕೆ ಜಿಲ್ಲಾದ್ಯಂತ ವ್ಯಾಪಕ ಅಸಮಾಧಾನ ವ್ಯಕ್ತವಾಗಿತ್ತು. ಈ ಕುರಿತು ಬಸವ ನಾಡು ಕೂಡ ಕೆಲವು ಹೊತ್ತಿನ ಮುಂಚೆ ವರದಿ ಪ್ರಕಟ ಮಾಡಿತ್ತು. ಇದೀಗ ಈ ಕುರಿತು ವಿಜಯಪುರ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ಪ್ರತಿಕ್ರಿಯೆ ನೀಡಿದ್ದು, ವಿಜಯಪುರ ಜಿಲ್ಲೆಯಲ್ಲೂ ಅನಲಾಕ್ ಜಾರಿಯ ಬಗ್ಗೆ ನಾಳೆ ನಿರ್ಧಾರ ಪ್ರಕಟವಾಗುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ. ವಿಜಯಪುರ ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ […]

ನಾಳೆ ಸೋಮವಾರದಿಂದ ವಿಜಯಪುರ ಜಿಲ್ಲೆಯಲ್ಲೂ ಬಸ್ ಸಂಚಾರ ಆರಂಭ- ನಾರಾಯಣಪ್ಪ ಕುರುಬರ

ವಿಜಯಪುರ: ನಾಳೆ ಸೋಮವಾರದಿಂದ ವಿಜಯಪುರ ಜಿಲ್ಲೆಯಲ್ಲೂ ಬಸ್ ಸಂಚಾರ ಆರಂಭವಾಗಲಿವೆ. ಕೊರೊನಾ ಮಾರ್ಗಸೂಚಿಯನ್ವಯ ಸರಕಾರದ ಸೂಚನೆಯಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು ಬಸ್ ಸಂಚಾರ ಆರಂಭವಾಗಲಿದೆ ಎಂದು ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ವಿಜಯಪುರ ವಿಭಾಗ ನಿಯಂತ್ರಣಾಧಿಕಾರಿ ನಾರಾಯಣಪ್ಪ ಕುರುಬುರ ತಿಳಿಸಿದ್ದಾರೆ. ಕೊರೊನಾ ನಿಯಂತ್ರಣಕ್ಕೆ ಬಂದಿರುವುದರಿಂದ ರಾಜ್ಯ ಸರಕಾರ ಜೂ.21ರ ಬೆ.6 ಗಂಟೆಯಿಂದ ಜು. 5ರ ಬೆ. 5 ಗಂಟೆಯವರೆಗೆ ಪರಿಷ್ಕೃತ ಮಾರ್ಗಸೂಚಿಯನ್ನು ಹೊರಡಿಸಿದೆ. ಅದರಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ. ಸರಕಾರದ […]

ವಿಜಯಪುರ ನಗರದಲ್ಲಿ ಇಂದು ಕೊರೊನಾ ಒಂದೂ ಹೊಸ ಕೇಸ್ ಇಲ್ಲ- ಪಾಸಿಟಿವಿಟಿ ದರವೂ ಇಂದು ಶೇ. 1ಕ್ಕಿಂತಲೂ ಕಡಿಮೆ- ಆದರೂ ಅನಲಾಕ್ ಯಾಕಿಲ್ಲ?

ವಿಜಯಪುರ: ಬಹಳ ತಿಂಗಳ ಬಳಿಕ ವಿಜಯಪುರ ನಗರದಲ್ಲಿ ಕೊರೊನಾಕ್ಕೆ ಸಂಬಂಧಿಸಿದಂತೆ ಇಂದು ಒಂದೂ ಹೊಸ ಪ್ರಕರಣ ದಾಖಲಾಗಿಲ್ಲ. ಆದರೆ, ಜಿಲ್ಲೆಯಲ್ಲಿ ಇತ್ತೀಚಿನ ದಿನಗಳಲ್ಲಿಯೇ ಅತೀ ಕಡಿಮೆ ಅಂದರೆ 23 ಹೊಸ ಪ್ರಕರಣಗಳು ಪತ್ತೆಯಾಗಿವೆ. ಕಳೆದ ಒಂದು ವಾರದಿಂದ ವಿಜಯಪುರ ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವಿಟಿ ದರ ಕಡಿಮೆಯಾಗುತ್ತ ಸಾಗಿದೆ. ಒಟ್ಟು ನಡೆಸಲಾಗುವ ಪರೀಕ್ಷೆಗಳಲ್ಲಿ ಶೇ. 5 ಕ್ಕಿಂತಲೂ ಕಡಿಮೆ ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಕಳೆದ ಒಂದು ಎಂಟು ದಿನಗಳಲ್ಲಿ ಜಿಲ್ಲೆಯಲ್ಲಿ ದಾಖಲಾದ ಹೊಸ ಪ್ರಕರಣಗಳು ಮತ್ತು ಶೇಕಡವಾರು […]

ಜೂ. 21 ಮತ್ತು 22 ರಂದು ಶಾಸಕ ಎಂ. ಬಿ. ಪಾಟೀಲ ಬಬಲೇಶ್ವರ ಮತಕ್ಷೇತ್ರದಲ್ಲಿ ಪ್ರವಾಸ

ವಿಜಯಪುರ: ಮಾಜಿ ಸಚಿವ ಮತ್ತು ಬಬಲೇಶ್ವರ ಕಾಂಗ್ರೆಸ್ ಶಾಸಕ ಎಂ. ಬಿ. ಪಾಟೀಲ ಅವರು ನಾಳೆ ಜೂ. 21 ಮತ್ತು ಜೂ. 22 ರಂದು ಬಬಲೇಶ್ವರ ಮತಕ್ಷೇತ್ರದಲ್ಲಿ ಪ್ರವಾಸ ಕೈಗೊಂಳ್ಳಲಿದ್ದಾರೆ. ಈ ಸಂದರ್ಭದಲ್ಲಿ ಅವರು ನಾನಾ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ. ಜೂ. 21 ಸೋಮವಾರ ಬೆ.10ಕ್ಕೆ ನಿರ್ಮಿತಿ ಕೇಂದ್ರದಿಂದ ಅರಕೇರಿ ಸರಕಾರಿ ಪ್ರೌಢ ಶಾಲೆ ಹಾಗೂ ಬಿಸೇನ ದೊಡ್ಡಿ ಸರಕಾರಿ ಪ್ರಾಥಮಿಕ ಶಾಲೆ ಕಟ್ಟಡ ನಿರ್ಮಾಣಕ್ಜೆ ಭೂಮಿ ಪೂಜೆ ನೆರವೇರಿಸಲಿದ್ದಾರೆ. ಬೆ.11.30ಕ್ಕೆ ಲೋಕೋಪಯೋಗಿ ಇಲಾಖೆಯಿಂದ ತಿಕೋಟಾದಲ್ಲಿ […]

ಮಲೇರಿಯಾಮುಕ್ತ ರಾಷ್ಟ್ರ ನಿರ್ಮಾಣಕ್ಕೆ ತಾಲೂಕು ಆರೋಗ್ಯಾಧಿಕಾರಿ ಡಾ. ಕವಿತಾ ಕರೆ

ವಿಜಯಪುರ: 2030 ರೊಳಗಾಗಿ ಭಾರತವನ್ನು ಮಲೇರಿಯಾ ಮುಕ್ತ ದೇಶವನ್ನಾಗಿಸೋಣ. ಈ ನಿಟ್ಟಿನಲ್ಲಿ ಮಾಧ್ಯಮದವರ ಪಾತ್ರ ಬಹು ಮುಖ್ಯವಾದದ್ದು ಎಂದು ವಿಜಯಪುರ ತಾಲೂಕು ಆರೋಗ್ಯಾಧಿಕಾರಿ ಕವಿತಾ ಕರೆ ನೀಡಿದ್ದಾರೆ. ವಿಜಯಪುರ ನಗರದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಭಾಭವನದಲ್ಲಿ ಮಲೇರಿಯಾ ವಿರೋಧಿ ಮಾಸಾಚರಣೆ ಅಂಗವಾಗಿ ಮಲೇರಿಯಾ ಹಾಗೂ ಮಾಧ್ಯಮ ಕುರಿತು ಒಂದು ದಿನದ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಮಾಧ್ಯಮದವರು ಹಗಲು-ರಾತ್ರಿ ಎನ್ನದೆ ಇಂಥ ಪರಿಸ್ಥಿತಿ ಮಧ್ಯೆ ಕೊರೊನಾ ನಿಯಂತ್ರಣ ಮಾಡುವಲ್ಲಿ ತುಂಬಾ ಶ್ರಮ ವಹಿಸುತ್ತಿದ್ದಾರೆ. ಮಾಧ್ಯಮಗಳ […]

ಕೃಷ್ಣಾ ನದಿ ನೀರು ಹಂಚಿಕೆ ವಿಚಾರ- ಅಂತಿಮ ಅಧಿಸೂಚನೆಗೆ ಕರ್ನಾಟಕ- ಮಹಾರಾಷ್ಟ್ರ ಜಂಟಿ ಪ್ರಯತ್ನ- ಸಚಿವ ಬೊಮ್ಮಾಯಿ

ಬೆಂಗಳೂರು: ಕೃಷ್ಣಾ ನದಿ ನೀರು ಹಂಚಿಕೆ ಕುರಿತಂತೆ ಬ್ರಿಜೇಶ್ ಮಿಶ್ರಾ ನ್ಯಾಯಾಧೀಕರಣ ನೀಡಿರುವ ಐ ತೀರ್ಪಿನ ಕುರಿತು ಅಂತಿಮ ಅಧಿಸೂಚನೆ ಹೊರಡಿಸುವಂತೆ ಸುಪ್ರೀಂಕೋರ್ಟಿನಲ್ಲಿ ಜಂಟಿ ಹೋರಾಟಕ್ಕೆ ಕರ್ನಾಟಕ ಮತ್ತು ಮಹಾರಾಷ್ಟ್ರ ನಿರ್ಧರಿಸಿವೆ ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ಬೆಂಗಳೂರಿನಲ್ಲಿ ನಡೆದ ಕೃಷ್ಣಾ ಮತ್ತು ಭೀಮಾ ಪ್ರದೇಶದ ಕರ್ನಾಟಕ ಮತ್ತು ಮಹಾರಾಷ್ಟ್ರದ ಅಂತಾರಾಜ್ಯ ಪ್ರವಾಹ ಪರಿಶೀಲನಾ ಸಮಿತಿಯ ಸಭೆಯ ಬಳಿಕ […]

ಸಿಎಂ ಜೊತೆ ಮಹಾರಾಷ್ಟ್ರದ ಜಲಸಂಪನ್ಮೂಲ ಸಚಿವರು, ಅಧಿಕಾರಿಗಳ ಸಭೆ- ಕೃಷ್ಣಾ, ಭೀಮಾ ಪ್ರವಾಹ ನಿಯಂತ್ರಣ ಕುರಿತು ನಿರ್ಧಾರ

ಬೆಂಗಳೂರು: ಕೃಷ್ಣಾ ಮತ್ತು ಭೀಮಾ ಪ್ರವಾಹ ನಿಯಂತ್ರಣ ಮತ್ತು ಇತರ ನೀರಾವರಿ ವಿಚಾರಗಳ ಕುರಿತು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಬೆಂಗಳೂರಿಗೆ ಆಗಮಿಸಿದ್ದ ಮಹಾರಾಷ್ಟ್ರದ ಜಲಸಂಪನ್ಮೂಲ ಸಚಿವ ಜಯಂತ ಪಾಟೀಲ ಮತ್ತು ಅಧಿಕಾರಿಗಳು ಹಾಗೂ ರಾಜ್ಯ ಪ್ರವಾಹ ನಿಯಂತ್ರಣ ಮತ್ತು ನಿರ್ವಹಣಾ ಸಮಿತಿಯ ಸಭೆ ನಡೆಸಿದರು. ಈ ಸಭೆಯಲ್ಲಿ ಕೃಷ್ಣಾ ಮತ್ತು ಭೀಮಾ ಜಲಾನಯನ ಪ್ರದೇಶದಲ್ಲಿ ಪರಿಣಾಮಕಾರಿ ಪ್ರವಾಹ ನಿರ್ವಹಣೆಯ ಕುರಿತು ನಾನಾ ವಿಷಯಗಳ ಕುರಿತು ಚರ್ಚಿಸಲಾಯಿತು. ಎರಡೂ ರಾಜ್ಯಗಳ ನಡುವೆ ಸಚಿವರು, ಕಾರ್ಯದರ್ಶಿಗಳ ಹಂತ ಹಾಗೂ […]

ಪ್ರವಾಹ ಪರಿಸ್ಥಿತಿ ಎದುರಿಸಲು ಸಿದ್ಧರಿದ್ದೇವೆ ಎಂದು ಸಿಎಂಗೆ ಭರವಸೆ ನೀಡಿದ ವಿಜಯಪುರ ಜಿಲ್ಲಾಧಿಕಾರಿ

ವಿಜಯಪುರ: ಮುಂಗಾರು ಆರಂಭವಾಗಿರುವ ಹಿನ್ನೆಲೆಯಲ್ಲಿ ಅತೀವೃಷ್ಠಿ ಮತ್ತು ಪ್ರವಾಹ ನಿಯಂತ್ರಣ ಕುರಿತು ಜಿಲ್ಲಾಧಿಕಾರಿಗಳ ಜೊತೆ ಸಿಎಂ ಬಿ. ಎಸ್. ಯಡಿಯೂರಪ್ಪ ವಿಡಿಯೋ ಕಾನ್ಫರೆನ್ಸ್ ನಡೆಸಿದರು. ಈ ಸಭೆಯಲ್ಲಿ ವಿಜಯಪುರ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ಕೂಡ ಭಾಗಿಯಾಗಿದರು. ಸಂಭವನೀಯ ಪ್ರವಾಹ ಸಿದ್ಧತೆಗಳ ಬಗ್ಗೆ ಸಿಎಂ‌ ಯಡಿಯೂರಪ್ಪಗೆ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ಮಾಹಿತಿ ನೀಡಿದರು. ಚಾಮರಾಜನಗರದಿಂದ ಸಿಎಂ ಸಭೆಗೆ ಹಾಜರಾದ ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ, ಕಳೆದ ಬಾರಿ ಮಹಾರಾಷ್ಟ್ರ ಅಧಿಕಾರಿಗಳು ಸರಿಯಾದ ಮಾಹಿತಿ ನೀಡದ […]

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ಗುಂದವಾನ ಸರಕಾರಿ ಶಾಲೆಗೆ ರೂ. 2.10 ಕೋ. ಅನುದಾನ- ಸಂಸದ ರಮೇಶ ಜಿಗಜಿಣಗಿ ಸಂತಸ

ವಿಜಯಪುರ: ಇದು ನಿಜವಾಗಿಯೂ ಸಂತಸದ ಸುದ್ದಿ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಸರಕಾರಿ ಇಂಡಿ ತಾಲೂಕಿನ ಗುಂದವಾನ ಸರಕಾರಿ ಪ್ರಾಥಮಿಕ ಶಾಲೆಯ ಅಭಿವೃದ್ಧಿಗೆ ರೂ. 2.10 ಕೋ. ಅನುದಾನ ಮಂಜೂರು ಮಾಡಿದೆ ಎಂದು ವಿಜಯಪುರ ಬಿಜೆಪಿ ಸಂಸದ ರಮೇಶ ಜಿಗಜಿಣಗಿ ತಿಳಿಸಿದ್ದಾರೆ. ಈ ಸರಕಾರಿ ಶಾಲೆಯನ್ನು ಆದರ್ಶ ಹಾಗೂ ಮಾದರಿ ಶಾಲೆಯಾಗಿ ರೂಪಿಸಲು ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ 2.1 ಕೋಟಿ ರೂ. ಅನುದಾನ ಮಂಜೂರಾಗಿದೆ. ವಿಜಯಪುರ-ಸೊಲ್ಲಾಪೂರ ರಾಷ್ಟ್ರೀಯ ಹೆದ್ದಾರಿ ಬಳಿ […]