ಕಾನೂನು ವಿವಿ ವಿಜ್ಞಾನೇಶ್ವರ ಅಧ್ಯಯನ ಪೀಠದಿಂದ ವೆಬಿನಾರ ಕಾರ್ಯಕ್ರಮ- ಸಿಎಂ ಬಸವರಾಜ ಬೊಮ್ಮಾಯಿ ಚಾಲನೆ

ಬೆಂಗಳೂರು: ಹುಬ್ಬಳ್ಳಿಯ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ವಿಜ್ಞಾನೇಶ್ವರ ಅಧ್ಯಯನ ಪೀಠದ ವತಿಯಿಂದ ಆಯೋಜಿಸಲಾದ ಕರ್ನಾಟಕದಲ್ಲಿ ಮಿತಾಕ್ಷರ, ವಚನ, ದಾಸ ಮತ್ತು ಜಾನಪದ ಸಾಹಿತ್ಯದಲ್ಲಿ ಕಾನೂನಿನ ಸಮಾಜಮುಖಿ ಮೌಲ್ಯಗಳು: ಒಂದು ಪರಿಶೋಧನೆ ವೆಬಿನಾರ್ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆನ್ ಲೈನ್ ಮೂಲಕ ಬೆಂಗಳೂರಿನಲ್ಲಿ ಉದ್ಘಾಟಿಸಿ ಮಾತನಾಡಿದರು. ಈ ಕಾರ್ಯಕ್ರಮದಲ್ಲಿ ಸಚಿವರಾದ ವಿ. ಸೋಮಣ್ಣ, ಡಾ. ಕೆ. ಸುಧಾಕರ, ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ನ್ಯಾ. ಶಿವರಾಜ ಪಾಟೀಲ, ನ್ಯಾ. ಬಿ. ಎನ್. ಕೃಷ್ಣ, ಕಾನೂನು ವಿವಿ […]

ಸಿಎಂ ಬಸವರಾಜ ಬೊಮ್ಮಾಯಿ ಭೇಟಿಯಾದ ಭಾರತದಲ್ಲಿನ ಬ್ರಿಟಿಷ್ ಹೈ ಕಮಿಷನರ್

ಬೆಂಗಳೂರು: ಭಾರತದಲ್ಲಿನ ಬ್ರಿಟಿಷ್ ಹೈ ಕಮಿಷನರ್ ಅಲೆಕ್ಸ್ ಎಲ್ಲಿಸ್ ಅವರು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ ಅವರನ್ನು ಭೇಟಿ ಮಾಡಿದರು. ಇ ಈ ಸಂದರ್ಭದಲ್ಲಿ ನಾನಾ ಕ್ಷೇತ್ರಗಳಲ್ಲಿ ಪರಸ್ಪರ ಸಹಕಾರದ ಕುರಿತು ಚರ್ಚಿ ನಡೆಸಿದರು. ಇ ಈ ಸಂದರ್ಭದಲ್ಲಿ ಬೆಂಗಳೂರಿನ ಬ್ರಿಟಿಷ್ ಡೆಪ್ಯುಟಿ ಹೈ ಕಮಿಷನರ್ ಜೆರೆಮಿ ಪಿಲ್ಮೋರ್ ಬೆಡ್ ಫೋರ್ಡ್, ಸಚಿವರಾದ ಆರ್. ಅಶೋಕ್, ಡಾ. ಸಿ. ಎನ್. ಅಶ್ವತ್ಥನಾರಾಯಣ, ಮುಖ್ಯಮಂತ್ರಿಯವರ ಕಾರ್ಯದರ್ಶಿ ವಿ. ಪೊನ್ನುರಾಜ್ ಹಾಗೂ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಆಯುಕ್ತ […]

29 ಜನರಿಗೆ ಸಚಿವ ಸ್ಥಾನ, ಡಿಸಿಎಂ ಇಲ್ಲ, ವಿಜಯೇಂದ್ರಗೂ ಅವಕಾಶವಿಲ್ಲ- ಸಿಎಂ ಬಸವರಾಜ ಬೊಮ್ಮಾಯಿ

ಬೆಂಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕ್ಷಣಗಣನೆ ಆರಂಭವಾಗಿದ್ದು, ಈ ಬಾರಿ 29 ಜನರಿಗೆ ಸಚಿವ ಸ್ಥಾನ ನೀಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಾರಿ ಸಂಪುಟದಲ್ಲಿ ಡಿಸಿಎಂ ಇರುವುದಿಲ್ಲ. ಬಿ. ವೈ. ವಿಜಯೇಂದ್ರ ಅವರಿಗೂ ಸಚಿವ ಸ್ಥಾನ ಇಲ್ಲ ಎಂದು ಸ್ಪಷ್ಟಪಡಿಸಿದರು. ಈ ಬಾರಿ ಅನುಭವ ಹಾಗೂ ಹೊಸಶಕ್ತಿಗಳ ಸಮ್ಮಿಶ್ರ ಸಚಿವ ಸಂಪುಟ ಕಾರ್ಯ ನಿರ್ವಹಿಸಲಿದೆ. 7 ಜನ ಒಬಿಸಿ, 3 ಜನ ಎಸ್.ಸಿ., ಓರ್ವ ಎಸ್. […]

ಸಚಿವ ಸಂಪುಟ ಸೇರಲಿರುವ 26 ಶಾಸಕರ ಪಟ್ಟಿ ಇಲ್ಲಿದೆ

ಬೆಂಗಳೂರು: ರಾಜ್ಯ ಸಚುವ ಸಂಪುಟ ವಿಸ್ತರಣೆಗೆ ಕ್ಷಣಗಣನೆ ಆರಂಭವಾಗಿದ್ದು, ಪ್ರಮಾಣ ವಚನ ಸ್ವೀಲರಿಸಲು ಆಗಮಿಸುವಂತೆ ಸ್ವತಃ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶಾಸಕರಿ ಕರೆ ಮಾಡಿ ಆಹ್ವಾನಿಸಿದ್ದಾರೆ. ಸಿಎಂ ಕರೆ ಮಾಡಿ ತಿಳಿಸಿರುವ ಈವರೆಗಿನ 26 ಶಾಸಕರ ಪಟ್ಟಿ .ಎಸ್.ಈಶ್ವರಪ್ಪ ಆರ್.ಅಶೋಕ್ ಅರವಿಂದ ಲಿಂಬಾವಳಿ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಬಿ.ಶ್ರೀ ರಾಮುಲು ಉಮೇಶ್ ಕತ್ತಿ ಬಿ.ಸಿ.ಪಾಟೀಲ್ ಎಸ್.ಟಿ.ಸೋಮಶೇಖರ್ ಡಾ.ಕೆ.ಸುಧಾಕರ್ ಬೈರತಿ‌ ಬಸವರಾಜ ಮುರುಗೇಶ್ ನಿರಾಣಿ ಶಿವರಾಂ ಹೆಬ್ಬಾರ್ ಶಶಿಕಲಾ ಜೊಲ್ಲೆ ಕೆ.ಸಿ ನಾರಾಯಣಗೌಡ ಸುನಿಲ್ ಕುಮಾರ್ ಅರಗ ಜ್ಞಾನೇಂದ್ರ ಗೋವಿಂದ್ […]

ಸಚಿವ ಸಂಪುಟ ವಿಸ್ತರಣೆ ಹಿನ್ನೆಲೆ- ಬೆಂಗಳೂರಿಗೆ ಬಂದ ಬಿಜೆಪಿ ರಾಜ್ಯ ಉಸ್ತುವಾರಿ ಅರುಣಸಿಂಗ್

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯ ಉಸ್ತುವಾರಿ ಅರುಣಸಿಂಗ್ ಬೆಂಗಳೂರಿಗೆ ಆಗಮಿಸಿದ್ದಾರೆ. ಬೆಂಗಳೂರಿಗೆ ಆಗಮಿಸಿದ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜೊತೆ ವಿಧಾನ ಸೌಧಕ್ಕೆ ಆಗಮಿಸಿದರು.

ಇಂದು ಸೀಲ್ ಮಾಡಿದ ಲಕೋಟೆಯಲ್ಲಿ ಸಚಿವರ ಪಟ್ಟಿ ತರ್ತಿದ್ದಾರಾ ಸಿಎಂ? ಸುಮಾರು 15 ಜನರಿಗೆ ಸಚಿವ ಸ್ಥಾನ ನಿರೀಕ್ಷೆ

ನವದೆಹಲಿ: ದೆಹಲಿಯಲ್ಲಿ ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತು ಎರಡು ದಿನಗಳ ಸತತ ಚರ್ಚೆಯ ಬಳಿಕ ಸಿಎಂ ಬಸವರಾಜ ಬೊಮ್ಮಾಯಿ ಇಂದು ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ನಿನ್ನೆ ತಡರಾತ್ರಿ ನವದೆಹಲಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, 2-3 ವಿಚಾರಗಳ ಬಗ್ಗೆ ಚರ್ಚೆ ನಡೆದಿದೆ. ಸಂಪುಟ ವಿಸ್ತರಣೆ ಕುರಿತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ ಅವರೊಂದಿಗೆ ಎರಡು ಸಲ ಚರ್ಚೆ ನಡೆಸಲಾಗಿದೆ. ಕೆಲವು ಸ್ಪಷ್ಠೀಕರಣ ಕೇಳಿದ್ದರು. ಅವುಗಳಗೆ ಸ್ಪಷ್ಟನೆ ನೀಡಲಾಗಿದೆ‌ ಎಂದು ತಿಳಿಸಿದರು.ಬುಧವಾರ ಬೆಳಿಗ್ಗೆ ಹೈಕಮಾಂಡನಿಂದ ಬೇಗ […]

ನವದೆಹಲಿಯಲ್ಲಿ ಉಪರಾಷ್ಟ್ರಪತಿ, ಬಿಜೆಪಿ ರಾಜ್ಯ ಉಸ್ತುವಾರಿ ಭೇಟಿ ಮಾಡಿದ ಸಿಎಂ

ಸನವದೆಹಲಿ: ಸಚಿವ ಸಂಪುಟ ವಿಸ್ತರಣೆ ಸಂಬಂಧ ನವದೆಹಲಿಯಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಷ್ಟ್ರ ನಾಯಕರ ಭೇಟಿ ಮುಂದುವರೆಸಿದ್ದಾರೆ. ರಾಜ್ಯಸಭೆಗೆ ತೆರಳಿದ ಸಿಎಂ, ಅಲ್ಲಿ ಉಪರಾಷ್ಟ್ರಪತಿ ಮತ್ತು ಸಭಾಫತಿಯಾಗಿರುವ ಎಂ. ವೆಂಕಯ್ಯ ನಾಯ್ಡು ಅವರನ್ನು ಭೇಟಿ ಮಾಡಿ ಕುಷಲೋಪರಿ ವಿಚಾರಿಸಿದರು‌. ಬಳಿಕ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರನ್ನು ಭೇಟಿ ಮಾಡಿದ ಅವರು, ಮಾತುಕತೆ ನಡೆಸಿದರು. ಅಲ್ಲದೇ, ತಾವು ಮುಖ್ಯಮಂತ್ರಿಯಾಗಲು ಸಹಕರಿಸಿದ್ದಕ್ಕೆ ಕೃತಹಜ್ಞತೆ ಸಲ್ಲಿಸಿದರು.

ನಾಗಠಾಣ ಮತಕ್ಷೇತ್ರದಲ್ಲಿ ನಾನಾ ಅಭಿವೃದ್ಧಿ ಕಾಮಗಾರಿಗಳಿಗೆ ಜೆಡಿಎಸ್ ಶಾಸಕ ಡಾ. ದೇವಾನಂದ ಚವ್ಹಾಣ ಚಾಲನೆ

ವಿಜಯಪುರ: ನಾಗಠಾಣ ಜೆಡಿಎಸ್ ಶಾಸಕ ಡಾ. ದೇವಾನಂದ ಚವ್ಹಾಣ ತಮ್ಮ ಮತಕ್ಷೇತ್ರ ವ್ಯಾಪ್ತಿಯ ನಾನಾ ಕಡೆಗಳಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ, ಶಂಕುಸ್ಥಾಪನೆ ನೆರವೇರಿಸಿದ್ದಾರೆ. ಚಡಚಣ ಪಟ್ಟಣದಲ್ಲಿ ಅಂದಾಜು ರೂ. 58 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಪ್ರವಾಸಿ ಮಂದಿರದ ಎರಡನೇ ಮಹಡಿಯ ಕಟ್ಟಡದ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಚಡಚಣ ಪಟ್ಟಣದ ನಾನಾ ಮುಖಂಡರು ಮತ್ತು ಅಧಿಕಾರಿಗಳು ಉಪಸ್ಥಿತರಿದ್ದರು. ನಂತರ ಚಡಚಣ ತಾಲೂಕಿನ ಬರಡೋಲ ಗ್ರಾಮದಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ 2020-21 […]

ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡ ಭೇಟಿ ಮಾಡಿ ಆಶೀರ್ವಾದ ಪಡೆದ ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಿಎಂ ಆದ ಬಳಿಕ ಇದೇ ಮೊದಲ ಬಾರಿಗೆ ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.   ಸಿಎಂ ಆದ ಬಳಿಕ ಇದೇ ಮೊದಲ ಬಾರಿ ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡ ಅವರ ಬೆಂಗಳೂರಿನ ಪದ್ಮನಾಭನಗರ ನಿವಾಸಕ್ಕೆ ತೆರಳಿದ ಬಸವರಾಜ ಬೊಮ್ಮಾಯಿ ಮಾಜಿ ಪ್ರಧಾನಿ ಪಾದ ಸ್ಪರ್ಶಿಸಿ ಆಶೀರ್ವಾದ ಪಡೆದರು. ಬಳಿಕ ಹಾರ ಹಾಕಿ ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ಮಾಜಿ ಪ್ರಧಾನಿ ಎಚ್. ಡಿ. […]

ಯತ್ನಾಳ ಹೇಳಿಕೆ ನೀಡಿ ಹಾಳಾಗುತ್ತಿದ್ದಾರೆ- ಮಠಾಧೀಶರ ಗೊಡ್ಡು ಬೆದರಿಕೆಗಳಿಗೆ ಬಿಜೆಪಿಯಲ್ಲಿ ಕವಡೆ ಕಾಸಿನ ಕಿಮ್ಮತ್ತಿಲ್ಲ- ಮಾಜಿ ಸಚಿವ ಕೆ. ಎಸ್. ಈಶ್ವರಪ್ಪ

ವಿಜಯಪುರ: ವಿಜಯಪುರ ನಗರ ಬಿಜೆಪಿ ಶಾಸಕ ಬಸನಗಡೌಡ ಪಾಟೀಲ ಯತ್ನಾಳ ಬಹಿರಂಗ ಹೇಳಿಕೆ ‌ಕೊಟ್ಟು ಅವರೇ ಹಾಳಾಗುತ್ತಿದ್ದಾರೆ. ಅವರು ನನ್ನ ಆತ್ಮೀಯ ಸ್ನೇಹಿತ. ಹೀಗಾಗಿ ಬಹಿರಂಗ ಹೇಳಿಕೆ ಕೊಡುವುದನ್ನು ತಕ್ಷಣ ನಿಲ್ಲಿಸಬೇಕೆಂದು ಮಾಜಿ ಸಚಿವ ಕೆ. ಎಸ್. ಈಶ್ವರಪ್ಪ ಯತ್ನಾಳಗೆ ಬುದ್ದಿವಾದ ಹೇಳಿದ್ದಾರೆ. ವಿಜಯಪುರದಲ್ಲಿ ಮಾತನಾಡಿದ ಅವರು, ಯತ್ನಾಳ ಅವರ ಹೇಳಿಕೆಗಳಿಂದ ಪಕ್ಷಕ್ಕೆ ಹಾನಿಯಾಗುತ್ತದೆ ಎಂದು ನನಗೇನು ಅನಿಸುವದಿಲ್ಲ. ನಾಲ್ಕು ಗೋಡೆಗಳ ಮದ್ಯ ಕುಳಿತು ಸಮಸ್ಯೆ ಬಗೆಹರಿಸಿಕೊಳ್ಳಬೇಕು. ಈ ಕುರಿತು ನಾನು ಯತ್ನಾಳ ಅವರೊಂದಿಗೆ ಮಾತನಾಡುತ್ತೇನೆ ಎಂದು […]