ವಿಜಯಪುರದ ನಗರದ ಪಾರೇಖ್ ನಗರದಲ್ಲಿ ಕೊರೊನಾ ಲಸಿಕೆ ಅಭಿಯಾನ

ವಿಜಯಪುರ: ವಿಜಯಪುರ ನಗರದಲ್ಲಿ ಕೊರೊನಾ ಲಸಿಕೆ ಅಭಿಯಾನ ಮುಂದುವರೆದಿದೆ. ವಿಜಯಪುರ ನಗರದ ಶ್ರೀ ಜ್ಞಾನಯೋಗಾಶ್ರಮದ ಬಳಿ ಇರುವ ಪಾರೇಖ್ ನಗರದ ಶ್ರೀ ವೀರಾಂಜನೇಯ ದೇವಾಲಯದಲ್ಲಿ ಕೊರೊನಾ ಲಸಿಕೆ ಅಭಿಯಾನ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಬಡಾವಣೆಯ ಮುಖಂಡ ರಾಜು ಹಿರೇಮಠ, ಸರಕಾರ ನೀಡುತ್ತಿರುವ ಕೊರೊನಾ ಉಚಿತ ಲಸಿಕೆಯನ್ನು ಎಲ್ಲರೂ ಸರಿಯಾಗಿ ಸದುಪಯೋಗ ಪಡಿಸಿಕೊಳ್ಳಬೇಕು . ಕೊರೊನಾ ಲಸಿಕೆ ಪಡೆಯುವುದರಿಂದ ಮನಸ್ಸಿಗೆ ಧೈರ್ಯ ಬರುತ್ತದೆ. ಹಿಂದಿನ ದಿನಗಳಲ್ಲಿ ನಮ್ಮ ದೇಶದಲ್ಲಿ ಹಲವಾರು ರೋಗಗಳು ಬಂದಿದ್ದವು. ಅವುಗಳನ್ನು ನಾಶಮಾಡುವ ಶಕ್ತಿಯು […]

ಆಸ್ತಿ ತೆರಿಗೆ ಪಾವತಿಸಲು ರಿಯಾಯಿತಿ ಅವಧಿ ಜೂನ್ 30 ರವರೆಗೆ ವಿಸ್ತರಣೆ- ವಿಜಯಪುರ ಮಹಾನಗರ ಪಾಲಿಕೆ ಆಯುಕ್ತ ಹರ್ಷಾ ಶೆಟ್ಟಿ

ವಿಜಯಪುರ: ಪ್ರಸಕ್ತ ವರ್ಷದ ಆಸ್ತಿ ತೆರಿಗೆಯನ್ನು ಏಪ್ರಿಲ್ ತಿಂಗಳಿನಲ್ಲಿ ಪಾವತಿಸಿದರೆ ಮೂಲ ಆಸ್ತಿ ತೆರಿಗೆಯ ಮೇಲೆ ಶೇ. 5 ರಿಯಾಯಿತಿಯನ್ನು ನೀಡಲಾಗಿತ್ತು. ಲಾಕಡೌನ್ ಹಿನ್ನೆಲೆಯಲ್ಲಿ ಈ ರಿಯಾಯಿತಿ ಅವಧಿಯನ್ನು ಜೂ. 30 ರವರೆಗೆ ವಿಸ್ತರಿಸಲಾಗಿದೆ ಎಂದು ವಿಜಯಪುರ ಮಹಾನಗರ ಪಾಲಿಕೆ ಆಯುಕ್ತ ಹರ್ಷಾ ಶೆಟ್ಟಿ ತಿಳಿಸಿದ್ದಾರೆ. ಈ ವರ್ಷ ಕೊರೊನಾ ರೋಗ ತಡೆಗಟ್ಟುವ ನಿಟ್ಟಿನಲ್ಲಿ ಸರಕಾರ ಜಾರಿ ಮಾಡಿದ ಲಾಕಡೌನ ಕಾರಣದಿಂದ ಶೇ. 5ರ ರಿಯಾಯತಿ ಅವಧಿಯನ್ನು ಜೂ. 30ರ ವರೆಗೆ ವಿಸ್ತರಿಸಲಾಗಿದೆ. ನಾಗರಿಕರು ಜೂ. 30ರ […]

ವೀಕೆಂಡ್ ಕರ್ಫ್ಯೂ ಆರಂಭ- ವಿಜಯಪುರ ಜಿಲ್ಲೆಯಲ್ಲಿ ಯಾವುದಕ್ಕೆಲ್ಲ ಅವಕಾಶವಿದೆ- ಜಿಲ್ಲಾಧಿಕಾರಿ ಮಾಹಿತಿ

ವಿಜಯಪುರ: ಕೊರೊನಾ ಎರಡನೇ ಅಲೆ ನಿಯಂತ್ರಣಕ್ಕಾಗಿ ರಾಜ್ಯ ಸರಕಾರ ಜಾರಿ ಮಾಡಿರುವ ವೀಕೆಂಡ್ ಕರ್ಫ್ಯೂ ವಿಜಯಪುರ ಜಿಲ್ಲೆಯಲ್ಲಿಯೂ ಆರಂಭವಾಗಿದೆ. ಶುಕ್ರವಾರ ಸಂ. 7 ರಿಂದ ಸೋಮವಾರ ಬೆ. 5 ರವರೆಗೆ ಈ ವೀಕೆಂಡ್ ಕರ್ಫ್ಯೂ ಜಾರಿಯಲ್ಲಿದ್ದು, ಈ ಸಮಯದಲ್ಲಿ ಸಾರ್ವಜನಿಕರು ಪಾಲಿಸಬೇಕಾದ ಮಾರ್ಗಸೂಚಿಗಳ ಬಗ್ಗೆ ವಿಜಯಪುರ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ಮಾಹಿತಿ ನೀಡಿದ್ದಾರೆ. ಮಾರ್ಗಸೂಚಿಗಳು ಇಂತಿವೆ. ತುರ್ತು, ಅಗತ್ಯ ಸೇವೆಗಳು ಮತ್ತು ಕೋವಿಡ್- 19 ಕಂಟೈನ್‌ಮೆಂಟ್ ಮತ್ತು ಮ್ಯಾನೇಜ್‌ಮೆಂಟ್ಕರ್ತವ್ಯಗಳನ್ನು ನಿರ್ವಹಿಸುತ್ತಿರುವ ಎಲ್ಲಾ ರಾಜ್ಯ ಮತ್ತು ಕೇಂದ್ರ […]

ಆರೋಗ್ಯ ಕ್ಷೇತ್ರದಲ್ಲಿ ಕ್ರಾಂತಿಕಾರಕ ಬದಲಾವಣೆಯಾಗಿದೆ: ಗೃಹ ಸಚಿವ ಬಸವರಾಜ ಬೊಮ್ಮಾಯಿ

ಬೆಂಗಳೂರು: ಕೊರೊನಾ ಮೊದಲ ಮತ್ತು ಎರಡನೇ ಅಲೆಗಳ ಅಂತರದಲ್ಲಿ ರಾಜ್ಯ ಸರಕಾರ ಆರೋಗ್ಯ ಕ್ಷೇತ್ರದಲ್ಲಿ ಕ್ರಾಂತಿಕಾರಿ ಹೆಜ್ಜೆಗಳನ್ನು ಇಟ್ಟು ಕೋವಿಡ್ ಸವಾಲನ್ನು ಯಶಸ್ವಿಯಾಗಿ ಎದುರಿಸಿದೆ ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದಲ್ಲಿ ವಸತಿ ಸಚಿವ ವಿ ಸೋಮಣ್ಣ ಅವರು ಏರ್ಪಡಿಸಿದ್ದ ಉಚಿತ ದಿನಸಿ ಕಿಟ್ ವಿತರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಕೊರೊನಾ ಎರಡನೇ ಅಲೆ ರಾಜ್ಯದಲ್ಲಿ ದೊಡ್ಡ ಸಾವು ನೋವು ಉಂಟು […]

ಇಂದು ಝಾನ್ಸಿರಾಣಿ ಲಕ್ಷ್ಮಿಬಾಯಿ ಹುತಾತ್ಮರಾದ ದಿನ- ಅಸಾಮಾನ್ಯ ಪರಾಕ್ರಮದಿಂದ ಸತತ ಸ್ಪೂರ್ತಿ ನೀಡುವ ಝಾನ್ಸಿರಾಣಿ ಲಕ್ಷ್ಮೀಬಾಯಿ ಕುರಿತ ಲೇಖನ

ನೀಲಕಂಠ ಬಡಚಿ ವಿಜಯಪುರ: ದೇಶದಲ್ಲಿ 1857 ರ ಸಮಯದಲ್ಲಿ ನಡೆದ ಸ್ವಾತಂತ್ರ ಸಂಗ್ರಾಮ ರಾಷ್ಟ್ರದ ಅನೇಕ ಪರಾಕ್ರಮಿಗಳು ಪ್ರಜ್ವಲಿಸಲು ಸಾಕ್ಷಿಯಾಗಿದೆ. ಅಂಥ ಪರಾಕ್ರಮಿಗಳಲ್ಲಿ ರಣರಾಗಿಣಿಯಾದ ಝಾನ್ಸಿರಾಣಿ ಲಕ್ಷ್ಮೀಬಾಯಿ ಎಲ್ಲರಿಗೂ ಆದರ್ಶಪ್ರಾಯಳಾಗಿದ್ದಾಳೆ. ಒಬ್ಬ ಮಹಿಳೆಯಾಗಿ ಅತೀ ಚಿಕ್ಕ ವಯಸ್ಸಿನಲ್ಲಿಯೇ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ವೀರಮಹಿಳೆ. ಅವಳ ಪರಾಕ್ರಮದ ವೀರಗಾಥೆಯನ್ನು ಅವಳ ಬಲಿದಾನದಿನದಂದು ತಿಳಿದುಕೊಂಡು ನಮ್ಮಲ್ಲಿನ ರಾಷ್ಟ್ರಭಕ್ತಿ ಮತ್ತು ಧರ್ಮಪ್ರೇಮವನ್ನು ಜಾಗೃತಗೊಳಿಸುವುದು ಇಂದು ಅಗತ್ಯವಾಗಿದೆ. ಎರಡನೇ ಬಾಜೀರಾವ್ ಪೇಶ್ವೆಯವರ ಸಂಬಂಧಿ ಚಿಮಾಜೀ ಅಪ್ಪಾ ಅವರ ವ್ಯವಸ್ಥಾಪಕರಾಗಿದ್ದ ಮೋರೋಪಂಥ ತಾಂಬೆ ಮತ್ತು ಭಗೀರಥಿ […]

ಮಾಧ್ಯಮ ಮಿತ್ರರೇ ನಾನು ಶ್ರೀ ಅರುಣ್ ಸಿಂಗ್ ಅವರ ಭೇಟಿಗೆ ಅವಕಾಶ ಕೇಳಿಲ್ಲ ಸುಳ್ಳು ಸುದ್ದಿ ಬಿತ್ತರಿಸಬೇಡಿ- ಫೇಸ್ ಬುಕ್ ನಲ್ಲಿ ಯತ್ನಾಳ ಸ್ಪಷ್ಟನೆ

ವಿಜಯಪುರ: ಮಾಧ್ಯಮ ಮಿತ್ರರೇ ನಾನು ಶ್ರೀ ಅರುಣ್ ಸಿಂಗ್ ಅವರ ಭೇಟಿಗೆ ಅವಕಾಶ ಕೇಳಿಲ್ಲ ಸುಳ್ಳು ಸುದ್ದಿ ಬಿತ್ತರಿಸಬೇಡಿ. ಹೀಗಂತ ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ತಮ್ಮ ಫೇಸ್ ಬುಕ್ ಅಕೌಂಟ್ ಮೂಲಕ ಸ್ಪಷ್ಟನೆ ನೀಡಿದ್ದಾರೆ. https://m.facebook.com/story.php?story_fbid=2427192324091872&id=100004033850943 ರಾಜ್ಯ ಬಿಜೆಪಿಯಲ್ಲಿನ ಘಟನಾವಳಿಗಳ ಅಧ್ಯಯನ ಮತ್ತು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರ ವಿರುದ್ಧ ಸ್ವಪಕ್ಷೀಯರಿಂದಲೇ ಅಸಮಾಧಾನ ವ್ಯಕ್ತವಾದ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ ಸಿಂಗ್ ಬೆಂಗಳೂರಿಗೆ ಆಗಮಿಸಿದ್ದಾರೆ. ಈ ಸಂದರ್ಭದಲ್ಲಿ ಯಡಿಯೂರಪ್ಪ […]

ಕೊರೊನಾ 3ನೇ ಅಲೆಯಿಂದ ತಮ್ಮ ಮಕ್ಕಳನ್ನು ರಕ್ಷಿಸಲು ಪಿಲೇಕಮ್ಮನ ಮೊರೆ ಹೋದ ಮಹಿಳೆಯರು

ವಿಜಯಪುರ: ಕೊರೊನಾ ಎರಡನೇ ಅಲೆಯಿಂದ ಜನ ಈಗಾಗಲೇ ಸಂಕಷ್ಟದಲ್ಲಿದ್ದು, ಮೂರನೇ ಅಲೆಯ ಬಗ್ಗೆಯೂ ಆತಂಕದಲ್ಲಿದ್ದಾರೆ. ಅದರಲ್ಲೂ ಕೊರೊನಾ 3ನೇ ಅಲೆ ಮಕ್ಕಳನ್ನು ಕಾಡಲಿದೆ ಎಂಬ ಮಾತುಗಳು ಕೇಳಿ ಬರುತ್ತಿರುವುದು ಪೋಷಕರು ಅದರಲ್ಲೂ ತಾಯಂದಿರು ಮತ್ತು ಮಹಿಳೆಯರನ್ನು ಹೆಚ್ಚು ಚಿಂತಾಕ್ರಾಂತರನ್ನಾಗಿ ಮಾಡಿದೆ. ಕೊರೊನಾ ಎರಡನೇ ಅಲೆಯ ಪ್ರಭಾವ ಕಡಿಮೆಯಾಗುತ್ತಿದ್ದರೂ ಸಂಭವನೀಯ ಮೂರನೇ ಅಲೆಯ ಭೀತಿ ಜನರನ್ನು ಕಾಡುತ್ತಿರುವುದರಿಂದ 3ನೇ ಅಲೆ ಪ್ರಭಾವ ಮಕ್ಕಳ ಮೇಲೆ. ಬೀರಬಾರದು ಎಂಬ ಸದುದ್ದೇಶದಿಂದ ಗ್ರಾಮಸ್ಥರು ಪಿಲೇಕಮ್ಮ ದೇವಿಯ ಮೊರೆ ಹೋಗಿದ್ದಾರೆ. ವಿಜಯಪುರ ಜಿಲ್ಲೆಯ […]

ಡ್ರಗ್ಸ್ ಬಗ್ಗೆ ಮಾತಾಡಲ್ಲ: ಕಾಸ್ಟಿಂಗ್ ಕೌಚ್ ಸ್ಟುಪಿಡ್ ವರ್ಡ್ ಎಂದ ತುಪ್ಪದ ಬೆಡಗಿ ರಾಗಿಣಿ ದ್ವಿವೇದಿ ಮತ್ತೇನಂದ್ರು ಗೊತ್ತಾ?

ವಿಜಯಪುರ: ಡ್ರಗ್ಸ್ ಕೇಸ್ ಬಗ್ಗೆ ಹೆಚ್ಚಿಗೆ ಮಾತನಾಡುವುದಿಲ್ಲ ಎಂದು ಚಿತ್ರನಟಿ ರಾಗಿಣಿ ದ್ವಿವೇದಿ ಹೇಳಿದ್ದಾರೆ. ವಿಜಯಪುರದಲ್ಲಿ ಮಾತನಾಡಿದ ಅವರು, ಆ ವಿಚಾರದ ಬಗ್ಗೆ ಹೆಚ್ಚಿಗೆ ಮಾತನಾಡುವುದಿಲ್ಲ. ನನ್ನ ಮೇಲೆ ಜನರ ಪ್ರೀತಿ, ವಿಶ್ವಾಸವಿದೆ. ನಾನು ತಪ್ಪು ಮಾಡಿಲ್ಲ. ಅಂದ್ರೆ ನಾವು ಟೆನ್ಷನ್ ಮಾಡಿಕೊಳ್ಳಬಾರದು ಡ್ರಗ್ಸ್ ವಿಚಾರದಲ್ಲಿ 100% ಟಾರ್ಗೆಟ್ ಮಾಡಲಾಗಿದೆ. ಬರಿ ಒಂದು ಕೇಸ್ ವಿಚಾರವಾಗಿ ಮಾತ್ರವಲ್ಲ. ಹೆಣ್ಣು ಮಕ್ಕಳು ಎಂದರೆ ಸಾಕು. ಪ್ರತಿಯೊಂದು ವಿಚಾರದಲ್ಲೂ ಸಮಾಜದಲ್ಲಿ ಟಾರ್ಗೆಟ್ ಮಾಡಲಾಗುತ್ತದೆ. ಹೆಣ್ಮಕ್ಕಳನ್ನು ತುಂಬಾ ಈಜಿಯಾಗಿ ರಾರ್ಗೆಟ್ ಮಾಡುವುದು […]

ಕೊರೊನಾದಿಂದ ಮೃತರಾದ ಬಿ ಎಲ್ ಡಿ ಇ ಸಂಸ್ಥೆಯ ಸಿಬ್ಬಂದಿಗಳ ಕುಟುಂಬಕ್ಕೆ ತಲಾ ರೂ. 1 ಲಕ್ಷ ಆರ್ಥಿಕ ನೆರವು ನೀಡಿ ಮಾದರಿಯಾದ ಶಾಸಕ ಎಂ. ಬಿ. ಪಾಟೀಲ

ವಿಜಯಪುರ: ಆಧುನಿಕ ಭಗೀರಥ ಎಂದೇ ಹೆಸರಾಗಿರುವ ಮಾಜಿ ಸಚಿವ, ವಿಜಯಪುರ ಜಿಲ್ಲೆಯ ಬಬಲೇಶ್ವರ ಕಾಂಗ್ರೆಸ್ ಶಾಸಕ ಎಂ. ಬಿ. ಪಾಟೀಲ ಎಂದರೆ ಅವರೇ ಬೇರೆ, ಅವರ ಶೈಲಿಯೇ ಬೇರೆ. ಅವರ ಮಾನವೀಯತೆ ಮತ್ತು ಹೃದಯ ವೈಶಾಲ್ಯತೆಗೆ ಮತ್ತೋಂದು ತಾಜಾ ಉದಾಹರಣೆ ಇಲ್ಲಿದೆ. ಕೊರೊನಾ ಸಂಕಷ್ಟ ಕಾಲದಲ್ಲಿ ತಮ್ಮ ಬಿ ಎಲ್ ಡಿ ಇ ಆಸ್ಪತ್ರೆಯಲ್ಲಿ ಸರಕಾರ ನಿಗದಿ ಪಡಿಸಿದ ದರಕ್ಕಿಂತಲೂ ಶೇ. 70 ರಷ್ಟು ಕಡಿಮೆ ದರದಲ್ಲಿ ರೋಗಿಗಳಿಗೆ ಚಿಕಿತ್ಸೆ ನೀಡುವ ಮೂಲಕ ನೆರವಾಗಿದ್ದರು. ಈಗ ತಮ್ಮ […]

ಪ್ರಿಪೇರ್ ಎಜುಟೆಕ್: ಇಂಗ್ಲಿಷ್‌ ಕಷ್ಟ ಎನ್ನುವವರಿಗೆ ಕನ್ನಡದಲ್ಲಿಯೇ ಕಲಿಸುವ ತಾಣ

ಕರ್ನಾಟಕದ ಅದರಲ್ಲಿಯೂ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಇಂಗ್ಲಿಷ್ ಪಠ್ಯಪುಸ್ತಕ, ಇಂಗ್ಲಿಷ್ ಟೀಚಿಂಗ್ ಒಮ್ಮೊಮ್ಮೆ ಕಷ್ಟವೆಂದೆನಿಸುತ್ತದೆ. ಅಯ್ಯೋ ಕ್ಲಾಸ್ನಲ್ಲಿ ಏನು ಹೇಳ್ತರಪ್ಪ. ಒಂದು ಪದನೂ ಅರ್ಥ ಆಗೋದಿಲ್ಲ ಎನ್ನುವುದು ಬಹುತೇಕ ಕನ್ನಡ ಮಾಧ್ಯಮ ವಿದ್ಯಾರ್ಥಿಗಳ ಗೋಳು. ಅದರಲ್ಲಿಯೂ ನರ್ಸಿಂಗ್, ಪ್ಯಾರಾಮೆಡಿಕಲ್ ಮತ್ತು ಆರೋಗ್ಯಸೇವೆಯ ಇತರೆ ಕೋರ್ಸ್‌ಗಳನ್ನು ಕಲಿಯಲು ಎಸ್ಎಸ್ಎಲ್ಸಿ, ಪಿಯುಸಿ ಬಳಿಕ ಸೇರಿದ ವಿದ್ಯಾರ್ಥಿಗಳಿಗೆ ಟೀಚಿಂಗ್ ಅರ್ಥವಾಗದೆ ಕಷ್ಟಪಡುವುದುಂಟು. ಈ ಲೆಕ್ಚರರ್ ಕನ್ನಡದಲ್ಲಿ ಒಂದೂ ವರ್ಡ್ ಹೇಳೋದಿಲ್ಲ ಎನ್ನುವುದು ವಿದ್ಯಾರ್ಥಿಗಳ ದೂರು. ಕನ್ನಡ ವಿದ್ಯಾರ್ಥಿಗಳೇ ಭಯಬೇಡ ಆರಂಭಿಕ ಶಿಕ್ಷಣದಲ್ಲಿ […]