ಜಿಲ್ಲಾವಾರು ಕೊರೊನಾ ಕೋವಿಡ್ ವಸ್ತುಸ್ಥಿತಿ ಆಧರಿಸಿ ಲಾಕಡೌನ್ ಸಡಿಲಿಕೆ ಬಗ್ಗೆ ಸಿಎಂ ನಿರ್ಧರಿಸುತ್ತಾರೆ- ಸಚಿವ ಬಸವರಾಜ ಬೊಮ್ಮಾಯಿ

ಹಾವೇರಿ: ಜಿಲ್ಲಾ ಮಟ್ಟದಲ್ಲಿ ಕೊರೊನಾ ಸೋಂಕಿನ ವಸ್ತುಸ್ಥಿತಿಯನ್ನು ಆದರಿಸಿ ಜೂ. 14ರ ನಂತರ ಯಾವ ರೀತಿ ಲಾಕಡೌನ್ ಸಡಿಲಿಕೆ ಮಾಡಬೇಕು ಎಂಬುದರ ಕುರಿತು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರ ನೇತೃತ್ವದಲ್ಲಿ ನಡೆಯಲಿರುವ ಹಿರಿಯ ಸಚಿವರು ಹಾಗೂ ಹಿರಿಯ ಅಧಿಕಾರಿಗಳ ಮಹತ್ವದ ಸಭೆಯಲ್ಲಿ ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಹಾವೇರಿಯಲ್ಲಿ ಮಾತನಾಡಿದ ಅವರು, ಲಾಕಡೌನ್ ಸಡಿಲಿಕೆಗೆ ಸಂಬಂಧಿಸಿದಂತೆ ಈಗಾಗಲೇ ಹಲವು ಸಲಹೆ-ಸೂಚನೆಗಳು ಬರುತ್ತಿವೆ ಎಂದು […]

ಸಂಭವನೀಯ ಅತಿವೃಷ್ಟಿ, ಪ್ರವಾಹ ಪರಿಸ್ಥಿತಿ ನಿಭಾಯಿಸಲು ಸಿದ್ಧತೆ ಕೈಗೊಳ್ಳಲು ವಿಜಯಪುರ ಜಿಲ್ಲಾಧಿಕಾರಿ ಸೂಚನೆ

ವಿಜಯಪುರ: ಅತಿವೃಷ್ಟಿ ಮತ್ತು ಪ್ರವಾಹ ಪರಿಸ್ಥಿತಿಯನ್ನು ನಿಭಾಯಿಸಲು ಸಕಲ ಸಿದ್ಧತೆ ಕೈಗೊಳ್ಳಬೇಕು ಎಂದು ವಿಜಯಪುರ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪ್ರಸಕ್ತ ವರ್ಷದ ಅತಿವೃಷ್ಟಿ ಮತ್ತು ಪ್ರವಾಹ ಪರಿಸ್ಥಿತಿಯನ್ನು ನಿರ್ವಹಿಸುವ ಕುರಿತಂತೆ ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ ನಡೆಸಿದ ಅವರು, ಮುಂದಿನ ದಿನಗಳಲ್ಲಿ ಅತಿವೃಷ್ಟಿ ಮತ್ತು ಪ್ರವಾಹ ಪರಿಸ್ಥಿತಿಗಳನ್ನು ನಿರ್ವಹಿಸಲು ಈಗಿನಿಂದಲೇ ಯೋಜನೆ ರೂಪಿಸಿಕೊಳ್ಳಬೇಕು. ಕೃಷ್ಣ ಮತ್ತು ಭೀಮಾ ಹಾಗೂ ದೋಣಿ ನದಿಗಳ ವ್ಯಾಪ್ತಿಯಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ಈಗಿನಿಂದಲೇ ಕೈಗೊಳ್ಳುವಂತೆ […]

ವಿಜಯಪುರ ವಿಮಾನ ನಿಲ್ದಾಣ ಕಾಮಗಾರಿ ಪರಿಶೀಲಿಸಿದ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ

ವಿಜಯಪುರ:: ವಿಜಯಪುರ ಜಿಲ್ಲೆಯ ಮದಬಾವಿ – ಬುರಣಾಪುರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ವಿಮಾನ ನಿಲ್ದಾಣ ಮೊದಲನೇ ಹಂತದ ಕಾಮಗಾರಿಗಳನ್ನು ಜಿಲ್ಲಾಧಿಕಾರಿ ಪಿ. ಸುನಿಲ ಕುಮಾರ ಇಂದು ಪರಿಶೀಲನೆ ನಡೆಸಿದರು. ವಿಜಯಪುರ ನಗರದ ವಿಮಾನ ನಿಲ್ದಾಣದ ಮೊದಲನೇ ಹಂತದಲ್ಲಿ ರೂ. 95 ಕೋ. ಕಾಮಗಾರಿ ಕೈಗೊಳ್ಳಲಾಗಿದ್ದು, ಉತ್ತಮ ದರ್ಜೆಯಲ್ಲಿ ಮತ್ತು ವ್ಯವಸ್ಥಿತವಾಗಿ ಕಾಮಗಾರಿ ಕೈಗೊಳ್ಳಲು ಸೂಚಿಸಿದರು. ವಿಮಾನ ನಿಲ್ದಾಣದ ರನ್ ವೇ ಒಟ್ಟು 2650 ಮೀಟರ ಉದ್ದವಿದ್ದು, 280 ಮೀಟರ ಅಗಲವಿರುತ್ತದೆ. ಅದರಲ್ಲಿ 1800 ಮೀ. ಉದ್ದ 280 ಮೀ. […]

1800 ಜನ ಕೊರೊನಾ ವಾರಿಯರ್ಸ್ ಗಳಿಗೆ ಆಹಾರ ಕಿಟ್ ನೀಡಿ ಕಡು ಬಡುವರು, ನಿರ್ಗತಿಕರಿಗೂ ನೆರವಾಗುತ್ತಿರುವ ಶಾಸಕ

ವಿಜಯಪುರ: ಕೊರೊನಾ ಎರಡನೇ ಅಲೆ ಮತ್ತು ಲಾಕಡೌನ್ ನಿಂದಾಗಿ ರಾಜ್ಯವಷ್ಟೇ ಅಲ್ಲ ದೇಶಾದ್ಯಂತ ಜನ ಸಂಕಷ್ಟ ಎದುರಿಸುತ್ತಿದ್ದಾರೆ. ಅದರಲ್ಲೂ, ಈ ಸೋಂಕು ತಡೆಯಲು ಕೊರೊನಾ ವಾರಿಯರ್ಸ್ ಗಳು ಹಗಲಿರುಳೂ ತಮ್ಮ ಜೀವ ಪಣಕ್ಕಿಟ್ಟು ಜನಸೇವೆ ಮಾಡುತ್ತಿದ್ದಾರೆ. ಇನ್ನು ಲಾಕಡೌನ್ ನಿಂದಾಗಿ ಕಡು ಬಡುವರು ಮತ್ತು ನಿರ್ಗತಿಕರು ದಿನದೂಟಕ್ಕೂ ಪರದಾಡುವ ಪರಿಸ್ಥಿತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ವಿಜಯಪುರ ಜಿಲ್ಲೆಯ ನಾಗಠಾಣ(ಮೀ) ಜೆಡಿಎಸ್ ಶಾಸಕ ಡಾ. ದೇವಾನಂದ ಚವ್ಹಾಣ ಮತಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಎಲ್ಲ 1800ಕ್ಕೂ ಹೆಚ್ಚು ಕೊರೊನಾ ವಾರಿಯರ್ಸ್ […]

ಗಣೇಶ ಮೂರ್ತಿ ವಿಸರ್ಜನೆ ಜಾಗದಲ್ಲಿ ಕುಡಿಯುವ ನೀರಿನ ಘಟಕಕ್ಕೆ ವಿರೋಧ-ಅಗೆಯಲಾದ ತಗ್ಗು ಮುಚ್ಚಿಸಿದ ಗಜಾನನ ಮಂಡಳಿಗಳು

ವಿಜಯಪುರ: ವಿಜಯಪುರ ನಗರದ ಐತಿಹಾಸಿಕ ತಾಜಬಾವಡಿ ಆವರಣದಲ್ಲಿ ಶುದ್ಧ ನೀರಿನ ಬೃಹತ್ ಘಟಕ ನಿರ್ಮಾಣಕ್ಕೆ ವಿಜಯಪುರ ಮಹಾನಗರ ಪಾಲಿಕೆ ಮುಂದಾಗಿದೆ. ಈ ಕಾಮಗಾರಿಯನ್ನು 15 ನೇ ಹಣಕಾಸು ನಿಧಿಯಲ್ಲಿ ನಗರ ನೀರು ಸರಬರಾಜು ಮಂಡಳಿಗೆ ಮಂಜೂರಾದ ರೂ. 1 ಕೋ. ವೆಚ್ಚದ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಲಾಗಿತ್ತು. ಜೂ. 2 ಆರಂಭವಾಗಿದ್ದ ಈ ಕಾಮಗಾರಿಗಾಗಿ ಘಟಕ ನಿರ್ಮಾಣಕ್ಕೆ ಗುಂಡಿಯನ್ನು ಅಗೆಯಲಾಗಿತ್ತು. ಈ ವಿಷಯ ತಿಳಿದ ನಾನಾ ಗಜಾನನ ಮಂಡಳಿಗಳ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ತಾಜಬಾವಡಿಗೆ ಗಮನಿಸಿ ಆಕ್ಷೇಪ ವ್ಯಕ್ತಪಡಿಸಿದರು. […]

ಲಾಕಡೌನ್ ಸಂದರ್ಭದಲ್ಲಿ ಆಹಾರ ವಿತರಣೆ- ಪರಿಸರ ದಿನ ನೀರಿನ ಟ್ಯಾಂಕರ್ ಕೊಡುಗೆ- ಗಜಾನನ ಮಹಾಮಂಡಳದ ಸಮಾಜಮುಖಿ ಕಾರ್ಯ

ವಿಜಯಪುರ: ಗಜಾನನ ಮಂಡಳಿಗಳು ಕೇವಲ ಗಣೇಶೋತ್ವಸ ಆಚರಣೆಗೆ ಸೀಮಿತವಾಗುತ್ತವೆ. ಆದರೆ, ಬಸವ ನಾಡಿನ ಈ ಗಜಾನನ ಮಹಾಮಂಡಳ ಮಾತ್ರ ಕೊರೊನಾ ಮತ್ತು ಲಾಕಡೌನ್ ಸಂದರ್ಭದಲ್ಲಿ ಆಹಾರ ವಿತರಣೆ ಮಾಡುವುದಲ್ಲದೇ ಈಗ ವಿಶ್ವ ಪರಿಸರ ದಿನಾಚರಣೆ ದಿನ ಮತ್ತೋಂದು ಮಹತ್ವದ ಕಾರ್ಯ ಮಾಡಿದೆ. ವಿಜಯಪುರ ನಗರದಲ್ಲಿ ಲಾಕ್ ಡೌನ್ ಹಿನ್ನೆಲೆಯಲ್ಲಿ ಕಳೆದ 40 ದಿನಗಳಿಂದ ಹಸಿದ ಸಾವಿರಾರು ಹೊಟ್ಟೆಗಳಿಗೆ ಅನ್ನದಾನ ಮಾಡಿ ಹಸಿವು ನೀಗಿಸುವ ಕಾರ್ಯ ಮುಂದುವರೆದಿರುವ ಮಧ್ಯೆಯೇ ಈಗ ಸಸಿಗಳು ಮತ್ತು ಗಿಡಗಳ ಸಂರಕ್ಷಣೆಗೂ ಮುಂದಾಗಿದೆ. ಪರಿಸರ […]

ವಿಜಯೇಂದ್ರ ಇಡಿ ತನಿಖೆ ಎದುರಿಸಲು ದೆಹಲಿಗೆ ಹೋಗಿದ್ದರು- ಮುಂಬರುವ ಅನಾಹುತಗಳಿಗಿಂತಲೂ ಮುಂಚೆ ಸಿಎಂ ಗೌರವಯುತವಾಗಿ ನಿವೃತ್ತಿಯಾಗಲಿ- ಯತ್ನಾಳ

ವಿಜಯಪುರ: ಸಿಎಂ ಪುತ್ರ ಮತ್ತು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ. ವೈ. ವಿಜಯೇಂದ್ರ ಇತ್ತೀಚೆಗೆ ದೆಹಲಿಗೆ ತೆರಳಿದ್ದು ಯಾಕೆ ಎಂಬುದನ್ನು ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ತಮ್ಮದೇ ಶೈಲಿಯಲ್ಲಿ ಬಿಚ್ಚಿಟ್ಟಿದ್ದಾರೆ. ವಿಜಯಪುರದಲ್ಲಿ ಮಾತನಾಡಿದ ಅವರು, ಬಿ. ವೈ. ವಿಜಯೇಂದ್ರ ಇಡಿ ವಿಚಾರಣೆಗೆ ಹಾಜರಾಗಲು ದೆಹಲಿಗೆ ತೆರಳಿದ್ದರೇ ಹೊರತು ಕೊವಿಡ್ ನಿರ್ವಹಣೆಯ ಶಹಾಬ್ಬಾಷಗಿರಿ ಪಡೆಯಲು ಅಲ್ಲ ಎಂದು ವಾಗ್ದಾಳಿ ನಡೆಸಿದರು. ಬಿಜೆಪಿ ರಾಷ್ಟ್ರೀಯ ನಾಯಕರು ಕೊರೊನಾ ಬಗ್ಗೆ ಮಾತನಾಡುವುದಿದ್ದರೆ ಬಿಜೆಪಿ ರಾಜ್ಯಾಧ್ಯಕ್ಷರು, ಸಿಎಂ ಜೊತೆ […]

ಹೆಸರಿಗೆ ತಕ್ಕ ಕಾರ್ಯ- ಬಡವರಿಗೆ, ಕೊರೊನಾ ವಾರಿಯರ್ಸ್ ಗೆ ಆಹಾರದ ಕಿಟ್ ದಾನ ನೀಡಿದ ದಾನಶ್ರೀ ಸೌಹಾರ್ದ

ವಿಜಯಪುರ: ಕೊರೊನಾ ಎರಡನೇ ಅಲೆಯಿಂದಾಗಿ ಬಡವರು, ದಿನಗೂಲಿ ಕಾರ್ಮಿಕರು, ರಸ್ತೆ ಬದಿ ವ್ಯಾಪಾರಿಗಳು ತೀವ್ರ ಸಂಕಷ್ಟದಲ್ಲಿದ್ದಾರೆ. ಅದರಲ್ಲೂ ಲಾಕಡೌನ್ ಜಾರಿಯಿಂದಾಗಿ ಕೆಲಸವಿಲ್ಲದೆ ಹಲವಾರು ಜನ ಆರ್ಥಿಕವಾಗಿಯೂ ಮಗ್ಗಟ್ಟು ಎದುರಿಸುತ್ತಿದ್ದು, ಸರಕಾರ ಹಲವಾರು ವರ್ಗಗಳಿಗೆ ಪ್ಯಾಕೇಜ್ ನೀಡಿದರೂ ಅದು ಸಾಕಾಗುತ್ತಿಲ್ಲ ಎಂಬ ದೂರುಗಳೂ ಇವೆ. ಈ ಹಿನ್ನೆಲೆಯಲ್ಲಿ ಬಸವ ನಾಡು ವಿಜಯಪುರ ದಲ್ಲಿ ನಾನಾ ಸಂಘ-ಸಂಸ್ಥೆಗಳು ಸಹಾಯ ನಿರೀಕ್ಷಿಸುತ್ತಿರುವವ ನೆರವಿಗೆ ಧಾವಿಸಿವೆ. ಅದರಲ್ಲಿ ಹೆಸರಿಗೆ ತಕ್ಕಂತೆ ದಾನಶ್ರೀ ಸೌಹಾದ್ರದ ಕ್ರೆಡಿಟ್ ಸಹಕಾರಿ ಕೂಡ ಜನಮೆಚ್ಚುವ ಕಾರ್ಯ ಮಾಡಿದೆ. ಕೈಯಲ್ಲಿ […]

ಕೊರೊನಾ ಹಿನ್ನೆಲೆ ಜನದಟ್ಟಣೆ ಕಡಿಮೆ ಮಾಡಲು ಬಬಲೇಶ್ವರ ಮತಕ್ಷೇತ್ರದ ಐದು ಕಡೆ ಬೀಜ, ಗೊಬ್ಬರ ವಿತರಣೆಗೆ ಹೊಸ ಕೇಂದ್ರ ಆರಂಭ- ಶಾಸಕ ಎಂ. ಬಿ. ಪಾಟೀಲ

ವಿಜಯಪುರ: ಮುಂಗಾರು ಆರಂಭವಾಗಿರುವ ಹಿನ್ನೆಲೆಯಲ್ಲಿ ರೈತರು ಕೃಷಿ ಚಟುವಟಿಕೆಗಳಿಗೆ ಸಿದ್ಧತೆಗಳನ್ನು ನಡೆಸಿದ್ದು, ಅವರಿಗೆ ಬೀಜ ಹಾಗೂ ಗೊಬ್ಬರ ಸರಬರಾಜು ಮಾಡಲು ಬಬಲೇಶ್ವರ ವಿಧಾನಸಭಾ ಕ್ಷೇತ್ರದ ಐದು ಕಡೆಗಳಲ್ಲಿ ಹೆಚ್ಚುವರಿ ವಿತರಣಾ ಕೇಂದ್ರಗಳು ಆರಂಭವಾಗಲಿವೆ ಎಂದು ಬಬಲೇಶ್ವರ ಕಾಂಗ್ರೆಸ್ ಶಾಸಕ ಎಂ. ಬಿ. ಪಾಟೀಲ ತಿಳಿಸಿದ್ದಾರೆ. ವಿಜಯಪುರ ಜಿಲ್ಲೆಯ ಬಬಲೇಶ್ವರ ಮತಕ್ಷೇತ್ರ ವ್ಯಾಪ್ತಿಯಲ್ಲಿ ಟಕ್ಕಳಕಿ, ಹೊನವಾಡ, ಕಾಖಂಡಕಿ, ನಿಡೋಣಿ ಮತ್ತು ಕೃಷ್ಣಾ ನಗರಗಳಲ್ಲಿ ತಾತ್ಕಾಲಿಕವಾಗಿ ಹೆಚ್ಚುವರಿ ವಿತರಣಾ ಕೇಂದ್ರಗಳನ್ನು ಸ್ಥಾಪಿಸಲಾಗುತ್ತಿದ್ದು, ಶನಿವಾರದಿಂದ ಈ ಸ್ಥಳಗಳಲ್ಲಿ ವಿತರಣೆ ಆರಂಭವಾಗಲಿದೆ ಎಂದು […]

ವಿಜಯಪುರ ಜಿಲ್ಲೆಯಲ್ಲಿ ಅಕ್ರಮ ಮರಳುಗಾರಿಕೆ ನಡೆಯುತ್ತಿದೆ-ಅಧಿಕಾರಿಗಳು ಬಿಜೆಪಿ ಎಜೆಂಟರಂತೆ ವರ್ತಿಸುತ್ತಿದ್ದಾರೆ- ಶಾಸಕ ದೇವಾನಂದ ಚವ್ಹಾಣ

ವಿಜಯಪುರ: ವಿಜಯಪುರ ಜಿಲ್ಲೆಯಲ್ಲಿ ಅಕ್ರಮ ಮರಳುಗಾರಿಕೆ ನಡೆಯುತ್ತಿದೆ. ಅಧಿಕಾರಿಗಳು ಬಿಜೆಪಿ ಏಜೆಂಟರಂತೆ ಕೆಲಸ ಮಾಡುತ್ತಿದ್ದಾರೆ ಎಂದು ವಿಜಯಪುರ ನಾಗಠಾಣ(ಮೀ) ಶಾಸಕ ಡಾ. ದೇವಾನಂದ ಚವ್ಹಾಣ ಮತ್ತೋಮ್ಮೆ ಆರೋಪಿಸಿದ್ದಾರೆ. ವಿಜಯಪುರದಲ್ಲಿ ಮಾತನಾಡಿದ ಅವರು, ನಾಗಠಾಣ ಮತಕ್ಷೇತ್ರದಲ್ಲಿ ಕೊವಿಡ್ ಕೇರ್ ಸೆಂಟರ್ ಗಳು ಖಾಲಿ ಖಾಲಿಯಾಗಿವೆ. ನನ್ನ ಮತಕ್ಷೇತ್ರದಲ್ಲಿ ಎಂಟು ಕೊವಿಡ್ ಕೇರ್ ಸೆಂಟರ್ ಗಳಿವೆ. ಇನ್ನೂ ಹೆಚ್ಚಿನ ಕೊವಿಡ್ ಕೇರ್ ಸೆಂಟರ್ ಪ್ರಾರಂಭಿಸಲು ಮನವಿ ಮಾಡಿದ್ದಿನಿ. ಆದರೆ, ಕೊವಿಡ್ ಕೇರ್ ಸೆಂಟರ್ ಗಳ ಪರಿಸ್ಥಿತಿ ಯಾವ ರೀತಿ ಆಗಿದೆ […]