ವಿಜಯಪುರ ನಗರವನ್ನು ಲಾಕಡೌನ್ ಮುಕ್ತ ಮಾಡಿ ಎಂದು ಜಿಲ್ಲಾಧಿಕಾರಿಗೆ ಪತ್ರ ಬರೆದ ಶಾಸಕ ಯತ್ನಾಳ

ವಿಜಯಪುರ: ವಿಜಯಪುರ ನಗರವನ್ನು ಲಾಕಡೌನ್ ಮುಕ್ತವಾಗಿ ಮಾಡಬೇಕು ಎಂದು ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದಾರೆ. ಬೆ. 10 ರಿಂದ ಸಂ. 5 ಗಂಟೆಯವರೆಗೆ ವಿಜಯಪುರ ನಗರದಲ್ಲಿ ಲಾಕಡೌನ್ ತೆರವುಗೊಳಿಸಬೇಕು ಎಂದು ಯತ್ನಾಳ ಆಗ್ರಹಿಸಿದ್ದು, ಯತ್ನಾಳ ಬರೆದಿರುವ ಪತ್ರದ ಪ್ರತಿ ಬಸವ ನಾಡಿಗೆ ಲಭ್ಯವಾಗಿದೆ. ಈ ಪತ್ರದಲ್ಲಿ ವಿಜಯಪುರ ನಗರವನ್ನು ಯಾಕೆ ಲಾಕಡೌನ್ ಮುಕ್ತ ಮಾಡಬೇಕು ಎಂಬುದನ್ನು ಯತ್ನಾಳ ಜಿಲ್ಲಾಧಿಕಾಪಿ ಪಿ. ಸುನೀಲ ಕುಮಾರ ಅವರಿಗೆ ಮನವರಿಕೆ ಮಾಡಿ ಕೊಡುವ […]

ಕೊರೊನಾ, ಲಾಕಡೌನ್ ಕಲಿಸಿದ ಪಾಠ- ಮನೆಯಂಗಳದಲ್ಲಿಯೇ ಕೈದೋಟ ನಿರ್ಮಿಸಿ ಮಾದರಿಯಾದ ದಂಪತಿ

ವಿಜಯಪುರ: ಕೊರೊನಾ ಎರಡನೇ ಅಲೆ ಬಸವ ನಾಡು ಅಷ್ಟೇ ಅಲ್ಲ, ಇಡೀ ರಾಜ್ಯ ಮತ್ತು ದೇಶವನ್ನು ಹೈರಾಣಾಗಿಸಿದೆ. ಇದರ ನಿಯಂತ್ರಣಕ್ಕೆ ಸರಕಾರ ಜಾರಿ ಮಾಡಿರುವ ಲಾಕಡೌನ್ ಜನರನ್ನು ಮನೆಯಲ್ಲಿಯೇ ಕೂಡುವಂತೆ ಮಾಡಿದ್ದು, ಇದೇ ಸಮಯವನ್ನು ಸದುಪಯೋಗ ಪಡಿಸಿಕೊಂಡಿರುವ ಬಸವ ನಾಡಿನ ದಂಪತಿ ಇತರರಿಗೆ ಮಾದರಿಯಾಗಿದ್ದಾರೆ. ಬರಿ ಮನೆಯಲ್ಲಿ ಇದ್ದು ಏನು ಉಪಯೋಗ? ಈ ಸಮಯವನ್ನು ಸದುಪಯೋಗ ಪಡಿಸಿಕೊಂಡರಾಯಿತು ಎಂದು ಯೋಚಿಸಿದ ವಿಜಯಪುರ ನಗರದ ದಂಪತಿ ಹೊಸ ಯೋಜನೆಯನ್ನು ರೂಪಿಸಿ ಜಾರಿಗೆ ತಂದು ಈಗ ಅದರ ಫಲ ಉಣ್ಣುತ್ತಿದ್ದಾರೆ. […]

ಜಿಲ್ಲಾಸ್ಪತ್ರೆಗೆ ತೆರಳಿ ಕೊರೊನಾ ಸೋಂಕಿತರ ಆರೋಗ್ಯ ವಿಚಾರಿಸಿದ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ

ವಿಜಯಪುರ: ಬಸವ ನಾಡು ವಿಜಯಪುರ ಜಿಲ್ಲೆಯಲ್ಲಿ ಕೊರೊನಾ ಎರಡನೇ ಅಲೆಯನ್ನು ನಿಯಂತ್ರಿಸುವಲ್ಲಿ ಸಾಕಷ್ಟು ಯಶಸ್ಸು ಸಾಧಿಸಿರುವ ವಿಜಯಪುರ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ಈಗ ಮೂರನೇ ಅಲೆ ತಡೆಗಟ್ಟಲು ಕೈಗೊಳ್ಳಬೇಕಿರುವ ಕ್ರಮಗಳ ಬಗ್ಗೆ ಗಮನ ಹರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಜಿ. ಪ. ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಗೋವಿಂದ ರೆಡ್ಡಿ ಜೊತೆ ವಿಜಯಪುರ ಜಿಲ್ಲಾಸ್ಪತ್ರಗೆ ಭೇಟಿ ನೀಡಿದ ಅವರು, ಕೊರೊನಾ ಮೂರನೇ ಅಲೆಯನ್ನು ತಡೆಯಲು ಪೂರ್ವ ಸಿದ್ಧತೆಗಳ ಬಗ್ಗೆ ಸದೀರ್ಘ ಸಭೆ ನಡೆಸಿದರು. ಜಿಲ್ಲಾ ಶಸ್ತ್ರ ಚಿಕಿತ್ಸಕರು, ಜಿಲ್ಲಾ […]

ರೈತರಿಗೆ ಉಚಿತವಾಗಿ ಬಿತ್ತನೆ ಬೀಜ, ಗೊಬ್ಬರ ನೀಡಿ ಸಾಲ ಮನ್ನಾ ಮಾಡಲು ವಿಧಾನ ಪರಿಷತ ಸದಸ್ಯ ಪ್ರಕಾಶ ರಾಠೋಡ ಆಗ್ರಹ

ವಿಜಯಪುರ: ಅನ್ನದಾತರು ಕೊರೊನಾದಿಂದಾಗಿ ಸಂಕಷ್ಟದಲ್ಲಿದ್ದು, ಕೂಡಲೇ ಸರಕಾರ ರೈತರಿಗೆ ಉಚಿತವಾಗಿ ಬಿತ್ತನೆ ಬೀಜ ಮತ್ತು ಗೊಬ್ಬರ ಒದಗಿಸಬೇಕು ಮತ್ತು ಅವರ ಸಾಲವನ್ನು ಮನ್ನಾ ಮಾಡಬೇಕು ಎಂದು ವಿಧಾನ ಪರಿಷತ ಕಾಂಗ್ರೆಸ್ ಸದಸ್ಯ ಪ್ರಕಾಶ ರಾಠೋಡ ಆಗ್ರಹಿಸಿದ್ದಾರೆ. ವಿಜಯಪುರ ಜಿಲ್ಲೆಯ ಆಲಮಟ್ಟಿಯಲ್ಲಿ ಮಾತನಾಡಿದ ಅವರು, ಕೊರೊನಾ ಸಂದರ್ಭದಲ್ಲಿ ರಾಜ್ಯ ಸರಕಾರ ರೈತರಿಗೆ ಯಾವುದೇ ಪ್ಯಾಕೇಜ್ ನ್ನು ಘೋಷಣೆ ಮಾಡಲಿಲ್ಲ. ಅವರ ಸಾಲ ಮನ್ನಾ ಮಾಡಲಿಲ್ಲ. ಮುಖ್ಯಮಂತ್ರಿ ಯಡಿಯೂರಪ್ಪ ರೈತರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿ, ಹಸಿರು ಶಾಲು ಹಾಕಿಕೊಂಡು […]

ಮಹಾರಾಷ್ಟ್ರ, ರಾಜ್ಯದ ಗಡಿ ಭಾಗದಲ್ಲಿ ಮಳೆ ಬಸವ ನಾಡಿನಲ್ಲಿ ತುಂಬಿ ಹರಿಯುತ್ತಿರುವ ಡೋಣಿ ನದಿ

ವಿಜಯಪುರ: ಮಹಾರಾಷ್ಟ್ರ ಮತ್ತು ವಿಜಯಪುರ ಜಿಲ್ಲೆಯಾದ್ಯಂತ ಅಲ್ಲಲ್ಲಿ ನಿನ್ನೆ ರಾತ್ರಿಯಿಂದ ಸುರಿದ ಧ ಅಲ್ಲಲ್ಲಿ ಉತ್ತಮ ಮಳೆಯಿಂದಾಗಿ ಡೋಣಿ ನದಿ ತುಂಬಿ ಹರಿಯುತ್ತಿದೆ. ಡೋಣಿ ನದಿ ಉಕ್ಕಿ ಹರಿಯುತ್ತಿರುವ ಕಾರಣ ಹಲವಾರು ಕಡೆಗಳಲ್ಲಿ ರೈತರ ಹೊಲಗಳಿಗೆ ನೀರು ನುಗಿದೆ. ನಿನ್ನೆ ಸಂಜೆಯಿಂದ ಆರಂಭವಾದ ಮಳೆ ಬೆಳಿಗ್ಗೆವರೆಗೂ ಸುರಿದಿದೆ. ಈ ಮಳೆಯ ನೀರು ಡೋಣಿ ನದಿಯ ಮೂಲಕ ರೈತರ ಹೊಲಗಳಿಗೆ ನುಗ್ಗಿದೆ. ಈ ವರ್ಷದ ಮೊದಲ ಮುಂಗಾರು ಮಳೆಗೆ ಡೋಣಿ ನದಿ ತುಂಬಿ ಹರಿಯುತ್ತಿದೆ. ಬಬಲೇಶ್ವರ ತಾಲೂಕಿನ ಸಾರವಾಡ […]

ಕೊರೊನಾ ರೋಗಿಗಳಿಗಾಗಿ ಶೇ. 50 ರಷ್ಟು ಬೆಡ್ ಗಳನ್ನು ಸರ್ಕಾರಿ ಕೋಟಾದಡಿ ಕಾಯ್ದಿರಿಸಲು ಜಿಲ್ಲಾಧಿಕಾರಿ ಪಿ. ಸುನಿಲ ಕುಮಾರ ಸೂಚನೆ

ವಿಜಯಪುರ: ರಾಜ್ಯ ಸರಕಾರದಿಂದ ಅಭಿವೃದ್ಧಿ ಪಡಿಸಿದ ಬೆಡ್ ಮ್ಯಾನೇಜಮೆಂಟ್ ಸಿಸ್ಟಮ್ ಅಡಿ ಕೊರೊನಾ ಸೋಂಕಿತರ ಚಿಕಿತ್ಸೆಗೆ ಹಂಚಿಕೆ ಮಾಡಲಾದ ಬೆಡ್ ಪೈಕಿ ಶೇ.50ರಷ್ಟು ಹಾಸಿಗೆಗಳನ್ನು ಸರಕಾರಿ ಕೋಟಾದಡಿ ಕಾಯ್ದಿರಿಸುವಂತೆ ವಿಜಯಪುರ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ಖಾಸಗಿ ಆಸ್ಪತ್ರೆಗಳ ವೈದ್ಯರಿಗೆ ಸೂಚಿನೆ ನೀಡಿದ್ದಾರೆ. ವಿಜಯಪುರ ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಖಾಸಗಿ ಆಸ್ಪತ್ರೆ ಮುಖ್ಯಸ್ಥರು, ವೈದ್ಯಾಧಿಕಾರಿಗಳು, ಚಿಕ್ಕ ಮಕ್ಕಳ ತಜ್ಞ ವೈದ್ಯರು, ಇಂಡಿಯನ್ ಅಕ್ಯಾಡೆಮಿ ಆಫ್ ಪಿಡಿಯಾಟ್ರಿಕ್ಸ, ಅಧ್ಯಕ್ಷರು, ಐ ಎಮ್ ಎ ಅಧ್ಯಕ್ಷರೊಂದಿಗೆ ಕೊರೊನಾ ಮೂರನೇ […]

ಜೂ. 5 ರಂದು ಲಾಕಡೌನ್ ವಿಸ್ತರಣೆ ಬಗ್ಗೆ ನಿರ್ಧಾರ- ಮೂರನೇ ಅಲೆ ಎದುರಿಸಲು 24 ಸಾವಿರ ಆಕ್ಸಿಜನ್ ಬೆಡ್ ನಿರ್ಮಾಣ- ಬೊಮ್ಮಾಯಿ

ಹಾವೇರಿ- ರಾಜ್ಯದಲ್ಲಿ ಜಾರಿಯಲ್ಲಿರುವ ಲಾಕಡೌನ್ ವಿಸ್ತರಣೆ ಕುರಿತು ಜೂ. 5 ರಂದು ನಿಗದಿಯಾಗಿರುವ ಮಹತ್ವದ ಸಭೆಯಲ್ಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ಗ್ರಾಮದ ಸರಕಾರಿ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ‌ ನಡೆಸಿದ ಬಳಿಕ ಅವರು ಈ ವಿಷಯ ತಿಳಿಸಿದ್ದಾರೆ. ಜೂ.4 ರಂದು ಮುಖ್ಯಮಂತ್ರಿ ಬಿ ಎಸ್ಯಡಿಯೂರಪ್ಪ ಅವರು ಬೆಳಗಾವಿ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. […]

ವಿಜಯಪುರ ಬಿದರಿ ಆಸ್ಪತ್ರೆಗೆ ಡಿಸಿ ಭೇಟಿ- 3ನೇ ಅಲೆ ತಡೆಯಲು ಸಿದ್ಧತೆಗೆ ಸೂಚನೆ

ವಿಜಯಪುರ: ಕೊರೊನಾ ಮೂರನೇ ಅಲೆಯಲ್ಲಿ ಸೋಂಕಿತ ಮಕ್ಕಳಿಗೆ ತುರ್ತು ಚಿಕಿತ್ಸೆ ಒದಗಿಸಲು ಸಿದ್ಧತೆ ಮಾಡಿಕೊಳ್ಳಿ ಎಂದು ವೈದ್ಯರು ಮತ್ತು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ವಿಜಯಪುರ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ಸೂಚನೆ ನೀಡಿದ್ದಾರೆ. ವಿಜಯಪುರ ನಗರದ ಬಿದರಿ ಆಸ್ಪತ್ರೆಗೆ ಭೇಟಿ ನೀಡಿ, ಅಲ್ಲಿರುವ ಸೌಕರ್ಯಗಳ ಬಗ್ಗೆ ಪರಿಶೀಲನೆ ನಡೆಸಿದ ಅವರು, ವೈದ್ಯರು ಮತ್ತು ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಮೂರನೇ ಅಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳಿಗೆ ಕೊರೊನಾ ಸೋಂಕು ತಗಲುವ ಸಾಧ್ಯತೆ ಇರುವುದರಿಂದ ಈ ಕುರಿತು ಈಗಿನಿಂದಲೇ ಅವಶ್ಯಕ […]

ಬಸವ ನಾಡಿನಲ್ಲಿ ಕಂಡ ಕೌತುಕ- ಸೂರ್ಯನ ಸುತ್ತ ಕಾಣಿಸಿದ ಕಾಮನ ಬಿಲ್ಲನ್ನು ಮೊಬೈಲಿನಲ್ಲಿ ಸೆರೆ ಹಿಡಿದ ಆರಕ್ಷಕ

ವಿಜಯಪುರ: ವಿಜಯಪುರ ಜಿಲ್ಲೆಯಲ್ಲಿ ಮಟಮಟ ಮಧ್ಯಾಹ್ನ ಆಗಸದಲ್ಲಿ ಕೌತುಕವೊಂದು ಕಾಣಿಸಿದೆ. ಸೂರ್ಯನ ಸುತ್ತಲು ಕಾಮನ ಬಿಲ್ಲು ಕಾಣಿಸಿಕೊಂಡಿದೆ. ಸೂರ್ಯನನ್ನು ಈ ಕಾಮನ ಬಿಲ್ಲು ವೃತ್ತಾಕಾರದಲ್ಲಿ ಸುತ್ತುವರೆದಿದ್ದು, ಈ ದೃಶ್ಯವನ್ನು ಕಂಡು ಸ್ವತಃ ಪೊಲೀಸ್ ಪೇದೆ ಅಚ್ಚರಿಗೊಂಡಿದ್ದಾರೆ. ವಿಜಯಪುರ ಜಿಲ್ಲೆಯ ನಿಡಗುಂದಿ ಪೊಲೀಸ್ ಠಾಣೆಯ ಹೊರಗಡೆ ಈ ದೃಶ್ಯ ಕಂಡು ಬಂದಿದ್ದು, ಮುಖ್ಯ ಪೊಲೀಸ್ ಪೇದೆ ವಿಶ್ವನಾಥ ಎಸ್. ಹಿಪ್ಪರಗಿ ಈ ಕೌತುಕವನ್ನು ತಮ್ಮ ಮೊಬೈಲಿನಲ್ಲಿ ಸೆರೆ ಹಿಡಿದಿದ್ದಾರೆ. ಮಟಮಟ ಮಧ್ಯಾಹ್ನ ಹೊರಗಡೆ ಬಂದ ಪೇದೆ ಠಾಣೆಯಿಂದ ಹೊರ […]

ಕೊರೊನಾ ವಾರಿಯರ್ಸ್, ಬಡವರು, ಅಸಹಾಯಕರಿಗೆ ರೋಗ ನೀರೋಧಕ ಔಷಧಿ ನೀಡುವ ಮೂಲಕ ಗಮನ ಸೆಳೆದ ಕನೇರಿ ಮಠ, ಸಂಘದ ಕಾರ್ಯಕರ್ತರು

ವಿಜಯಪುರ: ಕೊರೊನಾ ಎರಡನೇ ಅಲೆ ರಾಜ್ಯದಲ್ಲಿ ಸಾಕಷ್ಟು ತೊಂದರೆ ಉಂಟು ಮಾಡಿದೆ. ಈ ಎರಡನೇ ಅಲೆಯಿಂದಾಗಿ ಜನತೆ ಸಂಕಷ್ಟಕ್ಕೆ ಸಿಲುಕಿದ್ದು, ಸೋಂಕಿತರ ಸಂಖ್ಯೆ ಇತ್ತೀಚೆಗೆ ಕಡಿಮೆಯಾಗುತ್ತಿದ್ದರೂ ಕೊರೊನಾ ಭಯ ಮಾತ್ರ ಮುಂದುವರೆದಿದೆ. ಅದರಲ್ಲೂ ಸರಕಾರ ಕೊರೊನಾ ತಡೆಗಟ್ಟಲು, ಸೋಂಕಿತರಿಗೆ ಚಿಕಿತ್ಸೆ ನೀಡಲು ಹಗಲಿರುಳು ಶ್ರಮಿಸುತ್ತಿದ್ದು, ಇತ್ತ ಮಠಗಳೂ ಕೂಡ ಜನರ ಸಹಾಯಕ್ಕೆ ಧಾವಿಸಿವೆ. ಉಳ್ಳವರು ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಔಷಧಿಯನ್ನು ಹಣ ನೀಡಿ ಖರೀದಿಸಿದರೆ, ಬಡವರಿಗೆ ಆರೋಗ್ಯವರ್ಧಕ ಔಷಧಿಗಳು ಮರಿಚಿಕೆಯಾಗಿದ್ದವು. ಆದರೆ, ಇಂಥ ಬಡವರ ಪಾಲಿಗೆ […]