ರಾಜ್ಯದ ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ- ಹೊರ ರಾಜ್ಯಗಳಿಂದ ಬರುವವರಿಗೆ ಕೊರೊನಾ ನೆಗೆಟಿವ್ ವರದಿ ಕಡ್ಡಾಯ- ಗೃಹ ಸಚಿವ ಬಸವರಾಜ ಬೊಮ್ಮಾಯಿ

ಶಿಗ್ಗಾವಿ: ಹೊರ ರಾಜ್ಯಗಳಿಂದ ರಾಜ್ಯಕ್ಕೆ ಬರುವ ಜನರು ಇನ್ನು ಮುಂದೆ ಕೊರೊನಾ ನೆಗೆಟಿವ್ ವರದಿ ಹೊಂದಿರುವುದು ಕಡ್ಡಾಯ ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಬಾಡ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರಕಾರದ ಸೂಚನೆಯ ಹಿನ್ನೆಲೆಯಲ್ಲಿ ಈ ನಿಯಮವನ್ನು ಪಾಲಿಸಲಾಗುತ್ತಿದೆ ಎಂದು ತಿಳಿಸಿದರು. ರಾಜ್ಯದಲ್ಲಿ ಲಾಕಡೌನ್ ಅನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಹಲವಾರು ನಿರ್ಬಂಧ ವಿಧಿಸಲಾಗಿದೆ. ಎಲ್ಲ ಕಡೆ ಪೊಲೀಸ್ ನಾಕಾ ಬಂದಿ ಹಾಕಲಾಗಿದೆ. […]

ರಸ್ತೆ ಸಾರಿಗೆ ಸಂಸ್ಥೆ ಸಿಬ್ಬಂದಿಗೆ ಕೊರೊನಾ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಡಿಸಿಎಂ ಗೋವಿಂದ ಕಾರಜೋಳ ಚಾಲನೆ

ವಿಜಯಪುರ: ಬಸವ ನಾಡು ಈಶಾನ್ಯ ಸಾರಿಗೆ ಸಂಸ್ಥೆಯ ವಿಜಯಪುರ ಘಟಕದ 18 ರಿಂದ 44 ವರ್ಷದ ಸಿಬ್ಬಂದಿಗೆ ಕೊರೊನಾ ಲಸಿಕೆ ಹಾಕುವ ಕಾರ್ಯಕ್ರಮಕ್ಕೆ ಡಿಸಿಎಂ ಗೋವಿಂದ ಕಾರಜೋಳ ಚಾಲನೆ ನೀಡಿದರು. ವಿಜಯಪುರ ನಗರದ ಸೆಟಲೈಟ್ ಬಸ್ ನಿಲ್ದಾಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಚಾಲಕರು, ನಿರ್ವಾಹಕುರ ಮತ್ತು ಇತರ ಸಿಬ್ಬಂದಿಗೆ ಕೊರೊನಾ ಲಸಿಕೆ ಹಾಕಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ವಿಜಯಪುರ ವಿಭಾಗೀಯ ನಿಯಂತ್ರಣಾಧಿಕಾರಿ ನಾರಾಯಣನಪ್ಪ ಕುರುಬರ, ಈಶಾನ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ವಿಜಯಪೂರ ವಿಭಾಗದ 100 ಸಿಬ್ಬಂದಿಗಳಿಗೆ ಲಸಿಕೆ ಹಾಕುವ […]

ಕೊರೊನಾ ಭಯ, ಚಿಂತೆಯನ್ನು ದೂರ ಮಾಡಲು ಮನಸ್ಸಿಗೆ ಸ್ವಯಂ ಸೂಚನೆ’ಗಳನ್ನು ನೀಡಿ ನಿಶ್ಚಿಂತೆಯಿಂದಿರಿ- ಸಂದೀಪ ಅಳಸಿ

ಸಂದೀಪ ಅಳಸಿ ವಿಜಯಪುರ: ಇಂದು ಇಡೀ ದೇಶ ಕೊರೊನಾ ಎರಡನೇ ಅಲೆಯಿಂದ ತತ್ತರಿಸಿ ಹೋಗಿದೆ. ಮಾಧ್ಯಮಗಳು, ಸಾಮಾಜಿಕ ಜಾಲತಾಣಗಳುಲ್ಲಿ ಕೊರೊನಾ ಬಗ್ಗೆ ಓದಿ, ವಿಡಿಯೋಗಳನ್ನು ನೋಡಿ ಜನರು ಗುಣಮುರಾಗುವವರಿಗಿಂತ ಸಮಸ್ಯೆ ಎದುರಿಸುತ್ತಿರುವ ಸೋಂಕಿತರ ಬಗ್ಗೆಯೇ ಹೆಚ್ಚಿನ ಘಟನಾವಳಿಗಳತ್ತ ಗಮನ ಹರಿಸುತ್ತಿದ್ದಾರೆ. ಇದು ಜನಸಾಮಾನ್ಯರ ಮನಸ್ಸಿನ ಮೇಲೆ ಗಾಢವಾದ ಪರಿಣಾಮ ಉಂಟಾಗಿದ್ದು, ಆಕ್ಸಿಜನ್ ಕೊರತೆ, ಬೆಡ್ ಕೊರತೆಯಂಥ ವಿಚಾರಗಳು ಜನಸಾಮಾನ್ಯರಲ್ಲಿ ಭಯ, ಚಿಂತೆ, ನಿರಾಶೆ ಹೆಚ್ಚಾಗಲು ಕಾರಣವಾಗಿದೆ. ಇದರಿಂದಾಗಿ ಕೊರೊನಾ ಸೋಂಕಿಗಿಂತಲೂ ಅದರ ಭಯದಿಂದ ಜೀವ ಕಳೆದುಕೊಳ್ಳುವವರ ಸಂಖ್ಯೆಯೇ […]

ಲಾಕಡೌನ್ ಕಟ್ಟುನಿಟ್ಟಾಗಿ ಜಾರಿಗೆ ಪೊಲೀಸರಿಗೆ ಗೃಹ ಸಚಿವ ಬೊಮ್ಮಾಯಿ ಖಡಕ್ ಸೂಚನೆ

ಹುಬ್ಬಳ್ಳಿ: ರಾಜ್ಯಾದ್ಯ ಲಾಕಡೌನ್ ನ್ನು ಕಟ್ಟುನಿಟ್ಟಾಗಿ ಜಾರಿಗೆ ತರುವಂತೆ ಪೊಲೀಸರಿಗೆ ಸೂಚನೆ ನೀಡಲಾಗಿದೆ ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ರಾಜ್ಯಾದ್ಯಂತ ಕೊರೊನಾ ಎರಡನೇ ಅಲೆಯನ್ನು ನಿಯಂತ್ರಿಸಲು ಸಿಎಂ ಬಿ. ಎಸ್. ಯಡಿಯೂರಪ್ಪ ಅವರು ಲಾಕಡೌನ್ ನ್ನು ಮತ್ತೆ 14 ದಿನ ವಿಸ್ತರಿಸಿರುವ ಹಿನ್ನೆಲೆಯಲ್ಲಿ ಲಾಕಡೌನ್ ನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡುವಂತೆ ಪೊಲೀಸರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿರುವುದಾಗಿ ತಿಳಿಸಿದರು. ಹುಬ್ಬಳ್ಳಿಯಲ್ಲಿ ಸುದ್ದಿಗಾರರಿಗೆ ಈ ವಿಷಯ ತಿಳಿಸಿದ […]

ವಿಜಯಪುರದ ಬಿ ಎಲ್ ಡಿ ಇ ಆಸ್ಪತ್ರೆಗೆ ಬಂತು ಮತ್ತೋಂದು ಆಕ್ಸಿಜನ್ ಘಟಕ ಒಂದೆರಡು ದಿನಗಳಲ್ಲಿ ಕಾರ್ಯಾರಂಭ

ವಿಜಯಪುರ: ಬಸವ ನಾಡು ವಿಜಯಪುರ ನಗರದ ಬಿ ಎಲ್ ಡಿ ಇ ಆಸ್ಪತ್ರೆಯಲ್ಲಿ ಕೊರೊನಾ ರೋಗಿಗಳಿಗೆ ಆಕ್ಸಿಜನ್ ಪೂರೈಸ ಮತ್ತೋಂದು ಘಟಕ ನಿರ್ಮಾಣ ಕಾರ್ಯ ಭರದಿಂದ ಸಾಗಿದ್ದು ಮುಂದಿನ 2-3 ದಿನಗಳಲ್ಲಿ ಈ ಘಟಕ ಕಾರ್ಯಾರಂಭ ಮಾಡಲಿದೆ ಎಂದು ಬಿ. ಎಂ. ಪಾಟೀಲ ವೈದ್ಯಕೀಯ ಕಾಲೇಜಿನ ಪ್ರಾಚಾರ್ಯ ಡಾ. ಅರವಿಂದ ಪಾಟೀಲ ತಿಳಿಸಿದ್ದಾರೆ. ಈ ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಬಿ ಎಲ್ ಡಿ ಈ ಆಸ್ಪತ್ರೆಯಲ್ಲಿ ಈಗಾಗಲೇ 13 ಕೆ ಎಲ್ ಡಿ ಆಕ್ಸಿಜನ್ ಘಟಕದ […]

ಗ್ರಾಮೀಣ ಪ್ರದೇಶದ ಕೊರೊನಾ ರೋಗಿಗಳಿಗೆ ಕೂಡಲೇ ಚಿಕಿತ್ಸೆ ನೀಡಲು ಡಿಸಿಎಂ ಗೋವಿಂದ ಕಾರಜೋಳ ಸೂಚನೆ

ವಿಜಯಪುರ: ಗ್ರಾಮೀಣ ಪ್ರದೇಶಗಳಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗಿ ಕಂಡು ಬರುತ್ತಿರುವುದರಿಂದ ಕೊರೊನಾ ಲಕ್ಷಣ ಕಂಡು ಬಂದವರನ್ನು ತಕ್ಷಣ ಚಿಕಿತ್ಸೆಗೆ ಒಳಪಡಿಸಬೇಕು ಎಂದು ಡಿಸಿಎಂ ಗೋವಿಂದ ಕಾರಜೋಳ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ವಿಜಯಪುರದಲ್ಲಿ ನೂತನ ಪ್ರವಾಸಿ ಮಂದಿರದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಕೊರೊನಾ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಸಭೆ ನಡೆಸಿದ ಅವರು, ಗ್ರಾಮೀಣ ಪ್ರದೇಶಗಳಲ್ಲಿ ಸಣ್ಣಪುಟ್ಟ ಮನೆಗಳಲ್ಲಿ ಗ್ರಾಮಸ್ಥರು ವಾಸಿಸುತ್ತಿರುವುದರಿಂದ ಕುಟುಂಬದ ಸದಸ್ಯರಲ್ಲಿ ಸೋಂಕು ವೇಗವಾಗಿ ಹರಡಲು ಕಾರಣವಾಗುತ್ತಿದೆ. ಆದ್ದರಿಂದ ಕೊರೊನಾ ಲಕ್ಷಣಗಲು ಕಂಡು ಬಂದ ತಕ್ಷಣ ನಿಗದಿತ […]

ರಾಜೀವ ಗಾಂಧಿ ಪುಣ್ಯತಿಥಿ ಅಂಗವಾಗಿ ಕಾಂಗ್ರೆಸ್ ಮುಖಂಡ ಅಬ್ದುಲ್ ಹಮೀದ ಮುಶ್ರೀಫ್ ಅವರಿಂದ ಬಡವರಿಗೆ ದಿನಸಿ, ಔಷಧಿ ಕಿಟ್, ಪೊಲೀಸರಿಗೆ ಮಾಸ್ಕ್, ಸ್ನಾನಿಟೈಸರ್, ಗ್ಲೌಸ್ ವಿತರಣೆ

ವಿಜಯಪುರ: ಕಾಂಗ್ರೆಸ್ ಮುಖಂಡ ಅಬ್ದುಲ್ ಹಮೀದ ಮುಶ್ರಿಫ್ ಅವರು ಕೊರೊನಾ ಸಂಕಷ್ಟದಲ್ಲಿರುವ ಬಡವರ ನೆರವಿಗೆ ಧಾವಿಸಿದ್ದಾರೆ. ರಾಜೀವ ಗಾಂಧಿ ಅವರ ಪುಣ್ಯತಿಥಿಯ ಅಂಗವಾಗಿ ವಿಜಯಪುರ ನಗರದ ವಾರ್ಡ್ ಸಂಖ್ಯೆ 2 ಮತ್ತು ಖಾಜಾ ಅಮೀನ ದರ್ಗಾ, ಭಾಟ ಕಾಲನಿ ಮತ್ತು ಕಲ್ಲಿನ ಖಣಿ ಪ್ರದೇಶಗಳಿಗೆ ತೆರಳಿ ಲಾಕಡೌನ್ ನಿಂದ ಸಂಕಷ್ಟದಲ್ಲಿರುವ ಜನರಿಗೆ ದಿನಸಿ ಕಿಟ್ ವಿತರಿಸಿದರು. ಅಲ್ಲದೇ, ಕೊರೊನಾ ನಿಯಂತ್ರಣಕ್ಕೆ ಅಗತ್ಯವಾಗಿರುವ ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಔಷಧಿಯ ಕಿಟ್ ಗಳನ್ನೂ ಕೂಡ ವಿತರಿಸಿದರು. ಕೊರೊನಾದಿಂದಾಗಿ ದಿನಗೂಲಿ […]

ಕೋವಿಡ್ ಜೊತೆ ಈಗ ನೆರೆಯ ಜಿಲ್ಲೆಗಳಿಗಷ್ಟೇ ಅಲ್ಲ ಮಹಾರಾಷ್ಟ್ರದ ಬ್ಲ್ಯಾಕ್ ಫಂಗಸ್ ರೋಗಿಗಳಿಗೂ ವರದಾನವಾದ ಬಸವ ನಾಡಿನ ಬಿ ಎಲ್ ಡಿ ಇ ಆಸ್ಪತ್ರೆ

ವಿಜಯಪುರ: ಕೆಲವೇ ದಿನಗಳ ಹಿಂದೆ ಕೊರೊನಾ ಈಗ ಬ್ಲ್ಯಾಕ್ ಫಂಗಸ್ ನಿಂದ ರೋಗಿಗಳಿಗೆ ಚಿಕಿತ್ಸಾ ತಾಣವಾಗಿದೆ ವಿಜಯಪುರದ ಪ್ರತಿಷ್ಠಿತ ಬಿ ಎಲ್ ಡಿ ಇ ಆಸ್ಪತ್ರೆ. ಸರಕಾರ ನಿಗದಿ ಮಾಡಿದ ದರಕ್ಕಿಂತಲೂ ಶೇ. 70 ರಷ್ಟು ಕಡಿಮೆ ದರದಲ್ಲಿ ಮತ್ತು ಬೆಡ್ ಗಳ ಸಂಖ್ಯೆಯನ್ನು ಹೆಚ್ಚಿಸುವ ಮೂಲಕ ಕೊರೊನಾ ರೋಗಿಗಳಿಗೆ ವರದಾನವಾಗಿದ್ದ ಬಿ ಎಲ್ ಡಿ ಇ ಆಸ್ಪತ್ರೆ ಈಗ ಬ್ಲ್ಯಾಕ್ ಫಂಗಸ್ ರೋಗಿಗಳ ಪಾಲಿಗೂ ಚಿಕಿತ್ಸಾ ತಾಣವಾಗಿ ಮಾರ್ಪಟ್ಟಿದೆ. ವಿಜಯಪುರ ನಗರದಲ್ಲಿರುವ ಮತ್ತು ಮಾಜಿ ಸಚಿವ […]

ಲಂಚಬಾಕ ಪೊಲೀಸರ ಮಾನ ಹರಾಜು ಮಾಡಿದ ಲಾರಿ ಚಾಲಕರು- ಹೈವೆ ಪೆಟ್ರೋಲಿಂಗ್ ನ ಇಬ್ಬರು ಪೊಲೀಸ್ ಅಧಿಕಾರಿಗಳು ಅಮಾನತು

ವಿಜಯಪುರ: ಕೊರೊನಾ 2ನೇ ಅಲೆ ತಡೆಗಟ್ಟಲು ವಿಜಯಪುರ ಪೊಲೀಸರು ತಮ್ಮ ಜೀವ ಪಣಕ್ಕಿಟ್ಟು ಹಗಲಿರುಳು ಶ್ರಮಿಸುವ ಮೂಲಕ ಉತ್ತಮ ಕಾರ್ಯ ಮಾಡುತ್ತಿದ್ದಾರೆ. ಆದರೆ, ಮತ್ತೋಂದೆಡೆ ಹೈವೆ ಪೆಟ್ರೋಲಿಂಗ್ ಪೊಲೀಸರು ವಿಜಯಪುರ ಪೊಲೀಸರ ಮಾನವನ್ನು ರಾಷ್ಟ್ರಾದ್ಯಂತ ಹರಾಜು ಹಾಕುವ ಮೂಲಕ ತಮ್ಮ ವೃತ್ತಿಗೆ ಮಸಿ ಬಳಿಯುವ ಕೆಲಸ ಮಾಡಿದ್ದಾರೆ. ಈವರೆಗೆ ಸಾರ್ವಜನಿಕರು ಸಿಟ್ಟಾಗಿಯೇ ಗೊಣಗುತ್ತಿದ್ದ ವಿಜಯಪುರ ಜಿಲ್ಲೆಯ ಹೈವೆ ಪೆಟ್ರೋಲಿಂಗ್ ಪೊಲೀಸರ ಮಾನವನ್ನು ಉತ್ತರ ಭಾರತ ಲಾರಿ ಚಾಲಕರು ದೇಶಾದ್ಯಂತ ಹರಾಜು ಹಾಕುವ ಮೂಲಕ ಅವರ ಬಂಡವಾಳ ಬಯಲಿಗೆ […]

ಖಾಸಗಿ, ಅನುದಾನಿತ, ಸರಕಾರಿ ಶಾಲೆ, ಕಾಲೇಜುಗಳ ಸಿಬ್ಬಂದಿಗೆ ಪರಿಹಾರ ಘೋಷಿಸಿ- ಸಿಎಂ, ಶಿಕ್ಷಣ ಸಚಿವರಿಗೆ ಪರಿಷತ ಸದಸ್ಯ ಅರುಣ ಶಹಾಪುರ ಪ್ರತ್ಯೇಕ ಪತ್ರ

ವಿಜಯಪುರ: ಖಾಸಗಿ, ಅನುದಾನಿತ ಹಾಗೂ ಸರಕಾರಿ ಶಾಲೆ, ಕಾಲೇಜುಗಳ ಸಿಬ್ಬಂದಿಗಳ ಪರ ವಿಧಾನ ಪರಿಷತ ಬಿಜೆಪಿ ಸದಸ್ಯ ಅರುಣ ಶಹಾಪುರ ಸಿಎಂ ಮತ್ತು ಶಿಕ್ಷಣ ಸಚಿವರಿಗೆ ಪ್ರತ್ಯೇಕ ಪತ್ರ ಬರೆದಿದ್ದಾರೆ. ಈ ಪತ್ರದ ಪ್ರತಿಗಳು ಬಸವ ನಾಡಿಗೆ ಲಭ್ಯವಾಗಿವೆ. ಸಿಎಂ ಗೆ ಪತ್ರ ಬರೆದಿರುವ ಪತ್ರದಲ್ಲಿ ಅರುಣ ಶಹಾಪುರ ಅವರು, ಖಾಸಗಿ, ಅನುದಾನಿತ ಮತ್ತು ಸಹಕಾರಿ ಶಾಲೆ ಹಾಗೂ ಕಾಲೇಜುಗಳ ಸಿಬ್ಬಂದಿಗೆ ಪರಿಹಾರ ಘೋಷಿಸಬೇಕು ಎಂದು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದಾರೆ. ಕೋವಿಡ್ […]