ಬ್ಲ್ಯಾಕ್‌ ಫಂಗಸ್‌ಗೆ ರಾಜ್ಯದಲ್ಲಿ ಆರು ಕಡೆ ಉಚಿತ ಚಿಕಿತ್ಸೆ- ಒಂದು ಕೋಟಿ ಕೊಲ್ಚಿಸಿನ್ ಮಾತ್ರೆ ಪೂರೈಸಲು ಕೇಂದ್ರ ಒಪ್ಪಿಗೆ- ಆಶ್ವತ್ಥನಾರಾಯಣ

ಬೆಂಗಳೂರು: ಬ್ಲ್ಯಾಕ್‌ ಫಂಗಸ್‌ಗೆ ರಾಜ್ಯದ ಆರು ಕಡೆ ಉಚಿತ ಚಿಕಿತ್ಸೆ ನೀಡಲಾಗುವುದು ಎಂದು ರಾಜ್ಯ ಕೋವಿಡ್‌ ಕಾರ್ಯಪಡೆ ಅಧ್ಯಕ್ಷರೂ ಆಗಿರುವ ಡಿಸಿಎಂ ಡಾ. ಸಿ. ಎನ್. ಅಶ್ವತ್ಥ ನಾರಾಯಣ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಬಂಟರ ಸಂಘವು ಹೋಮ್‌ ಐಸೋಲೇಷನ್‌ ಆಗಿರುವ ಕೊರೊನಾ ಸೋಂಕಿತರಿಗಾಗಿ ವ್ಯವಸ್ಥೆ ಮಾಡಿರುವ 20 ಆಮ್ಲಜನಕ ಸಾಂದ್ರಕಗಳ ವ್ಯವಸ್ಥೆಗೆ ಚಾಲನೆ ಕೊಟ್ಟ ಬಳಿಕ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬ್ಲ್ಯಾಕ್‌ ಫಂಗಸ್‌ ಕಾಯಿಲೆಗೆ ಬಳಸಲಾಗುವ ಔಷಧಿಗೆ ಕೊರತೆ ಇಲ್ಲ. ಈಗಾಗಲೇ ಕೇಂದ್ರದಿಂದ 1000 ವೈಲ್ಸ್‌ […]

ರೆಡ್ ಕ್ರಾಸ್ ಸೊಸಾಯಿಟಿಯಿಂದ ವಿಜಯಪುರ ಜಿಲ್ಲಾಡಳಿತಕ್ಕೆ ವೆಂಟಿಲೇಟರ್, ಆಕ್ಸಿಜನ್ ಕಾನ್ಸಂಟ್ರೆಟರ್ ಹಸ್ತಾಂತರ

ವಿಜಯಪುರ: ಭಾರತೀಯ ರೆಡ್ ಕ್ರಾಸ್ ಸೊಸೈಟಿ ಕರ್ನಾಟಕ ರಾಜ್ಯ ಶಾಖೆಯಿಂದ ಒಂದು ವೆಂಟಿಲೇಟರ್ ಮತ್ತು 2 ಆಕ್ಸಿಜನ್ ಕಾನ್ಸಂಟ್ರೆಟರ್ ಗಳನ್ನು ನೀಡಲಾಯಿತು. ರಾಜ್ಯ ಘಟಕದಿಂದ ಬಂದ ಈ ಸಲಕರಣೆಗಳನ್ನು ವಿಜಯಪುರ ರೆಡ್ ಕ್ರಾಸ್ ಸೊಸಾಯಿಟಿ ಜಿಲ್ಲಾ ಶಾಖೆ ವತಿಯಿಂದ ಜಿಲ್ಲಾಡಳಿತಕ್ಕೆ ಹಸ್ತಾಂತರಿಸಲಾಯಿತು. ಕೊರೊನಾ ಪೀಡಿತ ರೋಗಿಗಳ ಚಿಕಿತ್ಸೆಗಾಗಿ ವೆಂಟಿಲೇಟರ್ ಮತ್ತು ಆಕ್ಸಿಜನ ಕಾನ್ಸಂಟ್ರೆಟರ್ ಗಳು ಪ್ರಮುಖ ಪಾತ್ರ ವಹಿಸುವುದರಿಂದ ಭಾರತೀಯ ರೆಡ್ ಕ್ರಾಸ್ ಸೊಸಾಯಿಟಿ ಈ ಸಲಕರಣೆಗಳನ್ನು ವಿಜಯಪುರ ಜಿಲ್ಲಾಡಳಿತಕ್ಕೆ ಕೊರೊನಾ ಸೋಂಕಿತರ ಉಪಚಾರಕ್ಕೆ ನೀಡಿದೆ. ಸಲಕರಣೆಗಳನ್ನು […]

ಕೊರೊನಾ ಸಂದರ್ಭದಲ್ಲಿ ಟೀಕೆ ಮಾಡುವುದನ್ನು ಬಿಟ್ಟರೆ ಕಾಂಗ್ರೆಸ್ ಕೊಡುಗೆ ಏನು? ಆರ್. ಎಸ್. ಪಾಟೀಲ ಕೂಚಬಾಳ ಪ್ರಶ್ನೆ

ವಿಜಯಪುರ: ಕೊರೊನಾ ಎರಡನೇಯನ್ನು ಕೇಂದ್ರ ಮತ್ತು ರಾಜ್ಯ ಸರಕಾರಗಳು ಸಮರ್ಥವಾಗಿ ಎದುರಿಸುತ್ತಿವೆ. ಈ ಕಾರ್ಯದಲ್ಲಿ ಕಾಂಗ್ರೆಸ್ ಕೊಡುಗೆ ಏನು? ಎಂದು ವಿಜಯಪುರ ಬಿಜೆಪಿ ಜಿಲ್ಲಾಧ್ಯಕ್ಷ ಆರ್. ಎಸ್. ಪಾಟೀಲ ಕೂಚಬಾಳ ಪ್ರಶ್ನಿಸಿದ್ದಾರೆ. ವಿಜಯಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊರೊನಾ ಎರಡನೇ ಅಲೆಯನ್ನು ಸಮರ್ಪಕವಾಗಿ ನಿಭಾಯಿಸಲು ದೇಶದಲ್ಲಿ ಈ ಮುಂಚೆ ಇದ್ದ 26 ಸಾವಿರ ವೆಂಟಿಲೇಟರ್ ಬೆಡ್ ಗಳನ್ನು 80 ಸಾವಿರಕ್ಕೆ ಹೆಚ್ಚಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು ಕೊರೊನಾ ನಿಯಂತ್ರಣಕ್ಕೆ […]

ಮನೆಯಲ್ಲಿ ಕೂಡುವ ಬದಲು ಕ್ರಿಯಾಶೀಲರಾಗಿ ಕೆಲಸ ಮಾಡಿ ಇಲ್ಲವೆ ಕುರ್ಚಿ ಖಾಲಿ ಮಾಡಿ- ಸಿಎಂ ವಿರುದ್ಧ ಮತ್ತೆ ಯತ್ನಾಳ ಗುಡುಗು

ವಿಜಯಪುರ: ಮನೆಯಲ್ಲಿ ಸುಮ್ಮನೆ ಕೂಡುವ ಬದಲು ಕ್ರಿಯಾಶೀಲರಾಗಿ ಕೆಲಸ ಮಾಡಿ. ಇಲ್ಲವೇ, ಕುರ್ಚಿ ಖಾಲಿ ಮಾಡಿ ಎಂದು ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಸಿಎಂ ವಿರುದ್ಧ ಮತ್ತೆ ಗುಡುಗಿದ್ದಾರೆ. ವಿಜಯಪುರದಲ್ಲಿ ಮಾತನಾಡಿದ ಅವರು, ಸಿಎಂ ಬಿ. ಎಸ್. ಯಡಿಯೂರಪ್ಪ ವಿರುದ್ಧ ಮತ್ತೆ ಹರಿಹಾಯ್ದಿದ್ದಾರೆ. ಸಿಎಂ ಕೇವಲ ಜಿಂದಾಲ್ ಗೆ ಜಮೀನು ನೀಡಲು ಕುರ್ಚಿಯ ಮೇಲೆ ಕುಳಿತಕೊಳ್ಳಬೇಡಿ. ಕೆಲಸವಾಗದಿದ್ದರೆ ನಿವೃತ್ತಿಯಾಗಿ. ಮೂರನೇ ಅಲೆಯ ಬಗ್ಗೆ ಏನೂ ತಯಾರಿ ಮಾಡಿಲ್ಲ. ಎರಡನೇ ಅಲೆಯೇ ಈಗ ಹೈರಾಣಾಗಿಸಿದೆ […]

ಕೊರೊನಾ ನಿಯಂತ್ರಣದಲ್ಲಿ ವಿಜಯಪುರಕ್ಕೆ ಮತ್ತೋಂದು ಗರಿ- ಗುಣಮುಖರಾಗುವವರ ಸಂಖ್ಯೆಯಲ್ಲಿ ರಾಜ್ಯದಲ್ಲೇಯ 2ನೇ ಸ್ಥಾನ

ವಿಜಯಪುರ: ಬಸವ ನಾಡು ವಿಜಯಪುರ ಜಿಲ್ಲೆ ಈಗ ಕೊರೊನಾ ನಿಯಂತ್ರಣದಲ್ಲಿ ಮತ್ತೋಂದು ಯಶಸ್ಸು ಸಾಧಿಸಿದೆ. ಕೊರೊನಾ ಸೋಂಕಿತರು ಗುಣಮುಖರಾಗುತ್ತಿರುವ ಜಿಲ್ಲೆಗಳಲ್ಲಿ ವಿಜಯಪುರ ಜಿಲ್ಲೆ ರಾಜ್ಯದಲ್ಲಿಯೇ ಎರಡನೇ ಸ್ಥಾನದಲ್ಲಿದೆ. ವಿಜಯಪುರ ಜಿಲ್ಲೆಯಲ್ಲಿ ಈ ವರೆಗೆ ಕೊರೊನಾ ಸೋಂಕಿತರಲ್ಲಿ ಶೇ. 88.01 ರಷ್ಟು ಜನ ಗುಣಮುಖರಾಗಿದ್ದು, ಕರ್ನಾಟಕದಲ್ಲಿ ಬಸವ ನಾಡು ಎರಡನೇ ಸ್ಥಾನದಲ್ಲಿದೆ. ಬೀದರ ಜಿಲ್ಲೆಯಲ್ಲಿ ಗುಣಮುಖರಾಗುವವರ ಸಂಖ್ಯೆ ಹೆಚ್ಚಾಗಿದ್ದು, ಶೇ. 89.19 ರಷ್ಟು ಕೊರೊನಾ ಸೋಂಕಿತರು ಗುಣಮುಖರಾಗಿದ್ದು, ಬೀದರ ಜಿಲ್ಲೆ ಮೊದಲ ಸ್ಥಾನದಲ್ಲಿದೆ. ಹಾವೇರಿ ಜಿಲ್ಲೆಯಲ್ಲಿ ಶೇ. 87.71 […]

ಬೆಂಗಳೂರಿನ ಎಎಸ್‌ಸಿ ಕೇಂದ್ರದಲ್ಲಿ ಕೋವಿಡ್‌ ಕೇರ್ ಸೆಂಟರ್ ಸ್ಥಾಪನೆ ಕುರಿತು ಸೇನಾಧಿಕಾರಿಗಳ ಜೊತೆ ಡಿಸಿಎಂ ಅಶ್ವತ್ಥನಾರಾಯಣ ಚರ್ಚೆ

ಬೆಂಗಳೂರು: ಬೆಂಗಳೂರಿನ ಹಳೆ ವಿಮಾನ ನಿಲ್ದಾಣ ರಸ್ತೆಯ ಕಮಾಂಡ್‌ ಆಸ್ಪತ್ರೆ ಬಳಿ ಇರುವ ಆರ್ಮಿಗೆ ಸೇರಿರುವ ಎಎಸ್‌ಸಿ ಕೇಂದ್ರ ಮತ್ತು ಕಾಲೇಜಿನಲ್ಲಿ ಕೋವಿಡ್‌ ಕೇರ್‌ ಸೆಂಟರ್‌ ಸ್ಥಾಪನೆ ಕುರಿತು ಸೇನೆ ಅಧಿಕಾರಿಗಳ ಜೊತೆ ರಾಜ್ಯ ಕೋವಿಡ್‌ ಕಾರ್ಯಪಡೆ ಅಧ್ಯಕ್ಷ ಮತ್ತು ಡಿಸಿಎಂ ಡಾ. ಸಿ. ಎನ್. ‌ಅಶ್ವತ್ಥನಾರಾಯಣ ಮಾತುಕತೆ ನಡೆಸಿದ್ದಾರೆ. ಎಎಸ್‌ಸಿ ಕಮಾಂಡರ್‌ ಲೆಫ್ಟಿನೆಂಟ್‌ ಬಿ. ಕೆ. ರೆಸಪಾಸ್‌ ವಾಲ್‌ ಅವರೊಂದಿಗೆ ಮಾತುಕತೆ ನಡೆಸಿದ ಅವರು, ಎಎಸ್‌ಸಿ ಸೆಂಟರ್‌ನಲ್ಲಿ ಕನಿಷ್ಠ 500 ಬೆಡ್‌ಗಳ ಕೋವಿಡ್‌ ಕೇರ್ ಕೇಂದ್ರ […]

ವಿಜಯಪುರ ಜಿಲ್ಲೆಯ ಎಲ್ಲ ಸರಕಾರಿ ಅನುದಾನಿತ ಶಾಲೆಗಳಿಗೆ 132 ದಿನದವರೆಗೆ ಬೇಕಾಗುವ ಆಹಾರ ಧಾನ್ಯಗಳ ವಿತರಣೆ

ವಿಜಯಪುರ: ವಿಜಯಪುರ ಜಿಲ್ಲೆಯ ಎಲ್ಲ ಸರಕಾರಿ ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಮಕ್ಕಳಿಗೆ ಬೇಕಾದ 132 ದಿನದ ಆಹಾರ ಧಾನ್ಯಗಳಾದ ಅಕ್ಕಿ, ಗೋಧಿ, ಉಪ್ಪು ಮತ್ತು 55 ದಿನಗಳಿಗೆ ಪ್ರತಿ ಮಗುವಿಗೆ 1 ಪಾಕೇಟ್ ಎಣ್ಣೆ (ಸೂರ್ಯಕಾಂತಿ ಎಣ್ಣೆ) ವಿತರಿಸಲಾಗುವುದು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಗೋವಿಂದ ರೆಡ್ಡಿ ಹಾಗೂ ಶಿಕ್ಷಣಾಧಿಕಾರಿ ಎಸ್. ಎಸ್. ಮುಜಾವರ(ಅದಾಯೋ) ತಿಳಿಸಿದ್ದಾರೆ. ವಿಜಯಪುರ ಜಿಲ್ಲೆಯ ಎಲ್ಲಾ ಮುಖ್ಯ ಶಿಕ್ಷಕರು ನಿಯಮಾನುಸಾರವಾಗಿ ಪಾಲಕ-ಪೋಷಕರು ಮತ್ತು ವಿದ್ಯಾರ್ಥಿಗಳಿಗೆ ಈ ಆಹಾರ ಧಾನ್ಯ […]

ಫೀಲ್ಡ್ ಕಮಾಂಡರ್ ರೀತಿ ಕೆಲಸ ಮಾಡುವಂತೆ ಜನಪ್ರತಿನಿಧಿಗಳು, ಅಧಿಕಾರಿಗಳಿಗೆ ಪ್ರಧಾನಿ ಸೂಚನೆ- ಬಸವರಾಜ ಬೊಮ್ಮಾಯಿ

ಬೆಂಗಳೂರು: ಎಲ್ಲ ಜಿಲ್ಲೆಯ ಜನಪ್ರತಿನಿಧಿಗಳು, ಜಿಲ್ಲಾಧಿಕಾರಿಗಳು ಸೇರಿದಂತೆ ಜಿಲ್ಲಾ ಮಟ್ಟದ ಎಲ್ಲಾ ಅಧಿಕಾರಿಗಳು ಕೊರೊನಾ ವಿರುದ್ಧ ಫೀಲ್ಡ್ ಕಮಾಂಡರ್ ರೀತಿಯಲ್ಲಿ ಕೆಲಸ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಜತೆ ನಡೆದ ವಿಡಿಯೋ ಕಾನ್ಫರೆನ್ಸ್ ನಲ್ಲಿ ಭಾಗವಹಿಸಿದ ನಂತರ ಸಚಿವರು ಮಾಧ್ಯಮದವರಿಗೆ ಈ ವಿಷಯ ತಿಳಿಸಿದ್ದಾರೆ. ರಾಜ್ಯ ಸರಕಾರದ ಮುಖ್ಯ […]

ಇಂಡಿ ಉಪವಿಭಾಗಾಧಿಕಾರಿ, ಸಿಂದಗಿ ತಹಸೀಲ್ದಾರ ಧಾಳಿ- ಭೀಮಾ ತೀರದಲ್ಲಿ ಸುಮಾರು ರೂ. 5.31 ಲಕ್ಷ ಮೌಲ್ಯದ ಅಕ್ರಮ ಮರಳು ವಶ

ವಿಜಯಪುರ: ವಿಜಯಪುರ ಜಿಲ್ಲೆಯ ಇಂಡಿ ಉಪವಿಭಾಗಾಧಿ ರಾಹುಲ್ ಸಿಂಧೆ ಅವರ ನೇತೃತ್ವದಲ್ಲಿ ಸಿಂದಗಿ ತಹಸೀಲ್ದಾರ ಮತ್ತು ಪೋಲಿಸ್ ಅಧಿಕಾರಿಗಳು ಹಾಗೂ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿಗಳ ತಂಡ ಭೀಮಾ ತೀರದಲ್ಲಿ ಧಾಳಿ ನಡೆಸಿ ಅಕ್ರಮ ಮರಳನ್ನು ವಶಪಡಿಸಿಕೊಂಡಿದೆ. ಸಿಂದಗಿ ತಾಲೂಕಿನ ದೇವಣಗಾಂವ ಮತ್ತು ಶಂಬೆವಾಡ ಗ್ರಾಮ ವ್ಯಾಪ್ತಿಯಲ್ಲಿ ಭೀಮಾ ನದಿ ಪಾತ್ರದಲ್ಲಿ ಈ ಧಾಳಿ ನಡೆಸಿದ ಅಧಿಕಾರಿಗಳು 629 ಕ್ಯೂಬಿಕ್ ಮೀಟರ್ ಅನಧಿಕೃತ ಮರಳನ್ನು ವಶಕ್ಕೆ ಪಡೆದಿದೆ. ಎರಡು ಪ್ರತ್ಯೇಕ ಕಡೆ ನಡೆದ ಈ ಧಾಳಿಯಲ್ಲಿ […]

ಸದ್ದುಗದ್ದಲವಿಲ್ಲದೆ ಕೊರೊನಾ ಸಂತ್ರಸ್ತರ ಸೇವೆಯಲ್ಲಿ ಅಮ್ಮನ ಮಡಿಲು, ಎಂ. ಬಿ. ಪಾಟೀಲ ಫೌಂಡೇಶನ್- ಪ್ರತಿದಿನ ಬರುತ್ತಿವೆ ಹಲವಾರು ಕರೆಗಳು

ವಿಜಯಪುರ: ಕೊರೊನಾ ಎರಡನೇ ಅಲೆ ಗುಮ್ಮಟ ನಗರಿ ವಿಜಯಪುರ ಜಿಲ್ಲೆಯ ಜನರನ್ನು ಹೈರಾಣಾಗಿಸಿದೆ. ಕೊರೊನಾ ಸೋಂಕಿತರು ಬೆಡ್ ಗಳು ಸಮಸ್ಯೆ, ಔಷಧಿಗಳ ಸಮಸ್ಯೆ ಸೇರಿದಂತೆ ನಾನಾ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಕೊರೊನಾ ಎರಡನೇ ಅಲೆ ಆರಂಭವಾಗುತ್ತಿದ್ದಂತೆ ಸೋಂಕಿತರಿಗೆ ಸ್ಪಂದಿಸಲು ಏ. 20 ರಂದು ವಿಜಯಪುರದ ಅಮ್ಮನ ಚಾರಿಟೆಬಲ್ ಟ್ರಸ್ಟ್ ಮತ್ತು ಎಂ. ಬಿ. ಪಾಟೀಲ ಫೌಂಡೇಶನ್ ಸಹಾಯವಾಣಿ ಆರಂಭಿಸಿದ್ದವು. ಈಗ ಈ ಸಹಾಯವಾಣಿಗೆ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಈವರೆಗೆ ಈ ಸಹಾಯವಾಣಿಗೆ 1200ಕ್ಕೂ ಹೆಚ್ಚು ಕರೆಗಳು ಬಂದಿದ್ದು, […]