ರೋಣಿಹಾಳದಲ್ಲಿ ಹಡಪದ ಅಪ್ಪಣ್ಣ ಜಯಂತಿ ಆಚರಣೆ

ವಿಜಯಪುರ: ಬಸವಣ್ಣನವರ ಕಾಯಕಕ್ಕೆ ಹಡಪದ ಅಪ್ಪಣ್ಣನವರು ಆಧಾರ ಸ್ತಂಭವಾಗಿದ್ದರು, ಆಪ್ತ ಕಾರ್ಯದರ್ಶಿಯಾಗಿ ಅಚ್ಚುಮೆಚ್ಚಿನ ಶರಣರಾಗಿದ್ದರು ಎಂದು ಜಿಲ್ಲಾ ಚುಟುಕು ಸಾಹಿತ್ಯ ಪರಿಷತ ಅಧ್ಯಕ್ಷ ಜಗದೀಶ ಸಾಲಳ್ಳಿ ಹೇಳಿದರು. ವಿಜಯಪುರ ಜಿಲ್ಲೆಯ ಕೊಲ್ಹಾರ ತಾಲೂಕಿನ ರೋಣಿಹಾಳ ಗ್ರಾಮದ ಬಸವ ಪ್ರಿಯ ಹಡಪದ ಅಪ್ಪಣ್ಣ ಸಮಾಜ ಸೇವಾ ಅಭಿವೃದ್ಧಿ ಸಂಘ ಯಲ್ಲಮದೇವಿ ದೇವಸ್ಥಾನ ಸಭಾಂಗಣದಲ್ಲಿ ನಡೆದ ಜಯಂತಿ ಕಾರ್ಯಕ್ರಮದಲ್ಲಿ ಅವರು ವಿಶೇಷ ಉಪನ್ಯಾಸ ನೀಡಿದರು. ಅಪ್ಪಣ್ಣನವರು ಸದಾಕಾಲ ಬಸವಣ್ಣನವರೊಂದಿಗೆ ಇರುತ್ತಿದ್ದರು. ಬಸವಣ್ಣನವರನ್ನು ಭೇಟಿ ಮಾಡಲು ಬರುವವರು ಮೊದಲು ಅಪ್ಪಣ್ಣನವರ ಅನುಮತಿ […]

ಬಸವ ನಾಡಿನಲ್ಲೊಂದು ವಿನೂತನ ಪ್ರಯತ್ನ- ಸ್ವಚ್ಛಂದ ಪರಿಸರದಲ್ಲಿ ಚೆಂಬೆಳಕಿನಲ್ಲಿ ರಾತ್ರಿ ಕಳೆಯಲಿರುವ ಪರಿಸರ ಪ್ರೇಮಿಗಳು

ವಿಜಯಪುರ: ಬಸವ ನಾಡು ವಿಜಯಪುರ ಜಿಲ್ಲೆಯಲ್ಲಿ ಪರಿಸರಕ್ಕೆ ಪೂರಕ ಮತ್ತು ಪರಿಸರದ ಬಗ್ಗೆ ಜನಜಾಗೃತಿ ಮೂಡಿಸುವ ವಿನೂತನ ಪ್ರಯತ್ನಗಳು ನಡೆಯುತ್ತಲೇ ಇವೆ. ಅದರಲ್ಲೂ ಗುರು ಪೂರ್ಣಿಮೆಯಂದು ಪರಿಸರದ ಕಾಳಜಿಯ ಜೊತೆಗೆ ಮಾನವ ನಿರ್ಮಿತ ಕಾಡಿನ ಪರಿಸರದಲ್ಲಿ ರಾತ್ರಿಯಿಡೀ ಕಳೆಯುವ ಮೂಲಕ ಹೊಸದೊಂದು ಪ್ರಯೋಗಕ್ಕೆ ಪರಿಸರ ಪ್ರೇಮಿಗಳು ಮುಂದಾಗಿದ್ದಾರೆ. ನಮ್ಮ ಸುತ್ತಮುತ್ತಲಿನ ಪರಿಸರದಲ್ಲಿರುವ ಜೀವ ವೈವಿದ್ಯತೆ, ಪರಿಸರ ವ್ಯವಸ್ಥೆ ಪುನರ್ ಪ್ರತಿಷ್ಠಾಪಿಸುವ ನಿಟ್ಟಿನಲ್ಲಿ ಡಾ. ಮಹಾಂತೇಶ ಬಿರಾದಾರ ನೇತೃತ್ವದಲ್ಲಿ ಯುವಕರ ತಂಡ ತಮ್ಮಂಥ ತರುಣರನ್ನು ಪರಿಸರದತ್ತ ಹೆಚ್ಚೆಚ್ಚು ಆಕರ್ಷಿಸಲು […]

ಜನರ ಕೈಗೆ ಸಿಗದ ಯತ್ನಾಳ ಪ್ರಚಾರಕ್ಕಾಗಿ ಸುಳ್ಳು ಹೇಳಿಕೆ ನೀಡುತ್ತಿರುತ್ತಾರೆ- ಮಾಜಿ ಸಚಿವ ಅಪ್ಪು ಪಟ್ಟಣಶೆಟ್ಟಿ ಆರೋಪ

ವಿಜಯಪುರ: ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಜನರ ಕೈಗೆ ಸಿಗುವುದಿಲ್ಲ. ಪ್ರಚಾರಕ್ಕಾಗಿ ಸುಳ್ಳು ಹೇಳಿಕೆ ನೀಡುತ್ತಿರುತ್ತಾರೆ ಎಂದು ಸ್ವಪಕ್ಷೀಯ ಮಾಜಿ ಶಾಸಕ ಮತ್ತು ಬಿಜೆಪಿ ಹಿರಿಯ ಮುಖಂಡ ಅಪ್ಪು ಪಟ್ಟಣಶೆಟ್ಟಿ ಆರೋಪಿಸಿದ್ದಾರೆ. ವಿಜಯಪುರದಲ್ಲಿ ಮಾತನಾಡಿದ ಅವರು, ಸ್ಥಳೀಯ ಶಾಸಕ ಯತ್ನಾಳ ಜನರ ಕೈಗೆ ಸಿಗುವುದಿಲ್ಲ. ಕೈಗೆ ಸಿಗುತ್ತಿಲ್ಲ. ಸ್ಟೇಟ್ ಲೆವಲ್ ಮತ್ತು ಸೆಂಟ್ರಲ್ ಲೇವಲ್ ನಲ್ಲಿ ಬೆಳೆದಿದ್ದಾರೆ ಎಂದು ಜನ ಲೇವಡಿ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. ತಾವು ಶಾಸಕ ಮತ್ತು ಸಚಿವರಾಗಿದ್ದಾಗ ಹಾಗೂ […]

ವಿಜಯಪುರ ನೂತನ ಎಸ್ಪಿ ಎಚ್. ಡಿ. ಆನಂದ ಕುಮಾರ ಅಧಿಕಾರ ಸ್ವೀಕಾರ- ಶುಕ್ರವಾರ ರಾತ್ರಿಯೇ ಕರ್ತವ್ಯಕ್ಕೆ ಹಾಜರಾದ ಕನ್ನಡಿಗ ಎಸ್ಪಿ

ವಿಜಯಪುರ: ವಿಜಯಪುರ ನೂತನ ಎಸ್ಪಿಯಾಗಿ ಎಚ್. ಡಿ. ಆನಂದ ಕುಮಾರ ಅಧಿಕಾರ ಸ್ವೀಕಾರ ಮಾಡಿದ್ದಾರೆ. ಈವರೆಗೆ ಆಂತರಿಕ ಭದ್ರತೆ ವಿಭಾಗದ ಎಸ್ಪಿಯಾಗಿದ್ದ ಎಚ್. ಡಿ. ಆನಂದ ಕುಮಾರ ಅವರನ್ನು ಸರಕಾರ ಇತ್ತೀಚೆಗೆ ವಿಜಯಪುರ ಎಸ್ಪಿಯಾಗಿ ವರ್ಗಾವಣೆ ಮಾಡ ವರ್ಗಾವಣೆ ಮಾಡಿತ್ತು. ಆದರೆ, ಮೂವಮೆಂಟ್ ಆರ್ಡರ್ ಬಾರದ ಹಿನ್ನೆಲೆಯಲ್ಲಿ ಈವರೆಗೆ ನೂತನ ಎಸ್ಪಿ ವಿಜಯಪುರಕ್ಕೆ ವರದಿ ಮಾಡಿಕೊಳ್ಳುವುದು ವಿಳಂಬವಾಗಿತ್ತು. ಶುಕ್ರವಾರ ರಾತ್ರಿ ಮೂವಮೆಂಟ್ ಆರ್ಡರ್ ಬಂದ ಹಿನ್ನಲೆಯಲ್ಲಿ ಡಿಜಿ ಆದೇಶದ ಹಿನ್ನೆಲೆಯಲ್ಲಿ ಶನಿವಾರ ಬೆಳಿಗ್ಗೆ ಬೆಂಗಳೂರಿನಲ್ಲಿ ಆಂತರಿಕ ಭದ್ರತೆ […]

ಮಹಾಮಳೆ ಆಲಮಟ್ಟಿ ಜಲಾಷಯದಿಂದ 3.50 ಲಕ್ಷ ಕ್ಯೂಸೆಕ್ ನೀರು ಹೊರಕ್ಕೆ- ರಾತ್ರಿ ವೇಳೆ ವರ್ಣರಂಜಿತ ಗೇಟುಗಳ ದೃಶ್ಯಗಳು ಇಲ್ಲಿವೆ

ವಿಜಯಪುರ: ನೆರೆಯ ಮಹಾರಾಷ್ಟ್ರ ಮತ್ತು ಬೆಳೆಗಾವಿ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಬಸವ ನಾಡು ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಆಲಮಟ್ಟಿ ಜಲಾಷಯಕ್ಕೆ ಭಾರಿ ಪ್ರಮಾಮದಲ್ಲಿ ನೀರು ಹರಿದು ಬರುತ್ತಿದೆ.ಈ ಹಿನ್ನೆಲೆಯಲ್ಲಿ ಆಲಮಟ್ಟಿ ಜಲಾಷಯದ ಎಲ್ಲ ಗೇಟುಗಳನ್ನು ತೆರೆಯಲಾಗಿದ್ದು ಮೂರು ಲಕ್ಷ ಕ್ಯೂಸೆಕ್ ನೀರನ್ನು ಹೊರ ಬಿಡಲಾಗುತ್ತಿದೆ. ಗರಿಷ್ಠ 519.60 ಮೀ. ಎತ್ತರದ ಲಾಲ್ ಬಹಾದ್ದೂರ ಶಾಸ್ತ್ರಿ ಜಲಾಷಯದಲ್ಲಿ ಈಗ 516.76 ಮೀ. ನೀರು ಸಂಗ್ರಹವಾಗಿದೆ. ಗರಿಷ್ಠ 123.080 ಟಿಎಂಸಿ ಜಲಸಂಗ್ರಹ ಸಾಮರ್ಥ್ಯದ ಜಲಾಷಯದಲ್ಲಿ ಈಗ 82.387 […]

ಗುರುಗಳಿಗೆ ಕೃತಜ್ಞತೆ ಅರ್ಪಿಸುವ ದಿನವೇ ಗುರು ಪೂರ್ಣಿಮೆ

ನೀಲಕಂಠ ಬಡಚಿ ವಿಜಯಪುರ: ಆಷಾಢ ಮಾಸದ ಹುಣ್ಣಿಮೆಯನ್ನು ಹಿಂದೂಗಳು ಸಾಂಪ್ರಾದಾಯಿಕವಾಗಿ ಗುರುಪೂರ್ಣಿಮೆ ಎಂದು ಆಚರಿಸುತ್ತಾರೆ. ಈ ದಿನ ಗುರುವಿನ ಅನುಗ್ರಹ, ಉಪದೇಶ ಪಡೆದರೆ ಮನುಷ್ಯನಲ್ಲಿರುವ ಸಂದೇಹಗಳು ಬಗೆ ಹರಿದು ಉತ್ತಮವಾದ ಸಾತ್ವಿಕ ಜೀವನ ನಡೆಸಲು ಸಾಧ್ಯ ಎಂಬುದು ಬಲವಾದ ನಂಬಿಕೆಯಾಗಿದೆ. ಮಾಯೆಯ ಭವಸಾಗರದಿಂದ ಶಿಷ್ಯ ಮತ್ತು ಭಕ್ತರನ್ನು ಹೊರತರುವ ಮತ್ತು ಅವರಿಂದ ಅವಶ್ಯಕವಿರುವ ಸಾಧನೆಯನ್ನು ಮಾಡಿಸಿಕೊಳ್ಳುವ ಹಾಗೂ ಅತ್ಯಂತ ಕಠಿಣ ಸಮಯದಲ್ಲಿ ಅವನಿಗೆ ನಿರಪೇಕ್ಷ ಪ್ರೇಮಗಳಿಂದ ಆಧಾರ ನೀಡಿ ಸಂಕಟಗಳಿಂದ ಮುಕ್ತ ಮಾಡುವವರೇ ಗುರುಗಳು. ಗುರು ಎಂದರೆ […]

ಮಹಾರಾಷ್ಟ್ರದಲ್ಲಿ ಮಧ್ಯರಾತ್ರಿ ಪ್ರವಾಹದಲ್ಲಿ ಸಿಲುಕಿದ್ದ ಇಂಡಿಯ ಬಸ್- 19 ಜನರನ್ನು ರಕ್ಷಿಸಿದ ಎನ್ ಡಿ ಆರ್ ಎಫ್

ವಿಜಯಪುರ: ಮಹಾರಾಷ್ಟ್ರದ ಕೊಲ್ಹಾಪುರ ಬಳಿ ಕೃಷ್ಣಾ ನದಿ ಪ್ರವಾಹದಲ್ಲಿ ಸಿಲುಕಿದ್ದ ವಿಜಯಪುರ ಜಿಲ್ಲೆಯ ಇಂಡಿ ಡಿಪೋದ ಬಸ್ಸಿನಲ್ಲಿದ್ದ 19 ಜನರನ್ನು ಎನ್ ಡಿ ಆರ್ ಎಫ್ ತಂಡ ರಕ್ಷಣೆ ಮಾಡಿದೆ. ವಿಜಯಪುರ ಜಿಲ್ಲೆಯ ಇಂಡಿಯಿಂದ ಮಹಾರಾಷ್ಟ್ರದ ರತ್ನಾಗಿರಿಗೆ KA-28/F-2230 ನಂಬರಿನ ಬಸ್ ನಿನ್ನೆ ತೆರಳಿತ್ತು. ಆದರೆ, ಕೊಲ್ಹಾಪುರದಿಂದ ರತ್ನಾಗಿರಿಗೆ ಹೋಗುವ ಮಾರ್ಗದಲ್ಲಿ 2 ಕಿ. ಮೀ. ಸಂಚರಿಸಿದಾಗ ದೊಡ್ಡ ಹಳ್ಳದ ನೀರಿನಲ್ಲಿ ಕೃಷ್ಣಾ ನದಿಯ ಪ್ರವಾಹ ಏಕಾಏಕಿ ಏರಿಕೆಯಾಗಿ ಬಸ್ಸು ನಡು ನೀರಿನಲ್ಲಿ ನಿಂತು ಬಿಟ್ಟಿದೆ. ಅರ್ಧ […]

ಸಿಎಂ ಬದಲಾವಣೆ ವಿರುದ್ಧ ಬಸವ ನಾಡಿನಲ್ಲಿ 20 ಸ್ವಾಮೀಜಿಗಳಿಂದ ಜಂಟಿ ಸುದ್ದಿಗೋಷ್ಠಿ- ಬೆಂಗಳೂರು, ದೆಹಲಿಯಲ್ಲಿ ಸಭೆಯ ಎಚ್ಚರಿಕೆ

ವಿಜಯಪುರ: ವಿಜಯಪುರದಲ್ಲಿ ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಯ ವೀರಶೈವ ಲಿಂಗಾಯಿತ ಮಠಗಳ 20 ಜನ ಸ್ವಾಮೀಜಿಗಳು ಜಂಟಿ ಸುದ್ದಿಗೋಷ್ಠಿ ನಡೆಸಿ ಸಿಎಂ ಬಿ. ಎಸ್. ಯಡಿಯೂರಪ್ಪ ಪರ ಭರ್ಜರಿ ಬ್ಯಾಟಿಂಗ್ ನಡೆಸಿದ್ದಾರೆ. ಯಡಿಯೂರಪ್ಪ ಅವರನ್ನು ಎರಡು ವರ್ಷಗಳ ಕಾಲ ಸಿಎಂ ಆಗಿ ಮುಂದುವರೆಸಬೇಕು. ಯಾವುದೇ ಕಾರಣಕ್ಕೂ ಬದಲಾವಣೆ ಮಾಡಬಾರದು. ‌ಒಂದು ವೇಳೆ ಬದಲಾವಣೆ ಮಾಡಿದರೆ ಉತ್ತರ ಕರ್ನಾಟಕದವರಿಗೆ ಆ ಸ್ಥಾನ ನೀಡಬೇಕು ಎಂದು ಮಠಾಧೀಶರು ಆಗ್ರಹಿಸಿದ್ದಾರೆ. ಬುರಣಾಪುರ ಸಿದ್ಧಾರೂಢ ಮಠದ ಯೋಗೇಶ್ವರಿ ಮಾತಾಜಿ ಮಾತನಾಡಿ, ಯಡಿಯೂರಪ್ಪ ಧೀಮಂತ […]

ಯತ್ನಾಳ ವಿರುದ್ಧ ಭೀಮಾಶಂಕರ ಹದನೂರ ವಾಗ್ದಾಳಿ- ಬುದ್ಧಿ ಭ್ರಮಣೆಯಾಗಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದಾರೆ ಎಂದು ಆರೋಪ

ವಿಜಯಪುರ: ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರಿಗೆ ಬುದ್ದಿ ಭ್ರಮಣೆಯಾಗಿದೆ. ಹೀಗಾಗಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದಾರೆ ಎಂದು ಬಿಜೆಪಿ ಮುಖಂಡ ಮತ್ತು ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಭೀಮಾಶಂಕರ ಹದನೂರ ಆರೋಪಿಸಿದ್ದಾರೆ. ವಿಜಯಪುರದಲ್ಲಿ ಮಾತನಾಡಿದ ಅವರು, ಕಳೆದ ಐದಾರು ತಿಂಗಳುಗಳಿಂದ ಯತ್ನಾಳ ಅವರು ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ. ಸಚಿವ ಸಂಪುಟ ವಿಸ್ತರಣೆಯಲ್ಲಿ ಸ್ಥಾನ ತಪ್ಪಿದ್ದಕ್ಕಾಗಿ ಈಗ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡುವಂತೆ ನಡೆಯುತ್ತಿರುವ ಹೋರಾಟಕ್ಕೆ ಬೆಂಬಲಿಸಿದ್ದಾರೆ. ಈ ಹಿಂದೆ ಕೂಡಲ ಸಂಗಮ […]

ಬಿ ಎಸ್ ವೈ ಬಿಟ್ಟು ಬೇರಾವ ಲಿಂಗಾಯಿತ ಶಾಸಕರು, ಸಚಿವರಿಗೆ ಬಿಜೆಪಿಯನ್ನು ಅಧಿಕಾರಕ್ಕೆ ತರುವ ಶಕ್ತಿಯಿಲ್ಲ- ಯಡಿಯೂರಪ್ಪ ರಾಜೀನಾಮೆ ನೀಡಿದರೆ ಲಿಂಗಾಯಿತರು ಬಿಜೆಪಿಯಿಂದ ದೂರವಾಗುತ್ತಾರೆ- ಇಂಗಳೇಶ್ವರ ಸ್ವಾಮೀಜಿ ಎಚ್ಚರಿಕೆ

ವಿಜಯಪುರ: ಸಿಎಂ ಬಿ. ಎಸ್. ಯಡಿಯೂರಪ್ಪ ಅವರನ್ನು ಬದಲಾಯಿಸುಲಾಗುತ್ತಿದೆ ಎಂಬ ವಿಚಾರ ಈಗ ರಾಜ್ಯಾದ್ಯಂತ ಜೋರಾಗಿ ಸದ್ದು ಮಾಡುತ್ತಿರುವ ಮಧ್ಯೆಯೇ ಲಿಂಗಾಯಿತ ಸ್ವಾಮೀಜಿಗಳು ಬಿ ಎಸ್ ವೈ ಪರ ಭರ್ಜರಿ ಬ್ಯಾಟಿಂಗ್ ನಡೆಸಿದ್ದಾರೆ. ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಇಂಗಳೇಶ್ವರ ವಚನಶಿಲಾ ಮಂಟಪ ವಿರಕ್ತ ಮಠಾಧೀಶ ಶ್ರೀ ಸಿದ್ದಲಿಂಗ ಮಹಾಸ್ವಾಮೀಜಿ ಯಡಿಯೂರಪ್ಪ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸುವುದರ ವಿರುದ್ಧ ಗಂಭೀರ ಎಚ್ಚರಿಕೆ ನೀಡಿದ್ದಾರೆ. ರಾಜ್ಯ ರಾಜಕಾರಣದ ಪ್ರಸಕ್ತ ವಿದ್ಯಮಾನಗಳು ಲಿಂಗಾಯತ ಸಮುದಾಯಕ್ಕೆ ಅನ್ಯಾಯವಾಗುವ ಲಕ್ಷಣಗಳನ್ನು ತೋರಿಸುತ್ತಿವೆ. […]