ಪೆಟ್ರೋಲ್, ಡಿಸೇಲ್ ಬೆಲೆ ಹೆಚ್ಚಳಕ್ಕೆ ವಿರೋಧ- ಬೈಕ್ಗೆ ಹಗ್ಗಕಟ್ಟಿ ಎಳೆದು ಬಿಜೆಪಿ ಕಾರ್ಯಕರ್ತರ ಬೃಹತ್ ಪ್ರತಿಭಟನೆ

ವಿಜಯಪುರ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಹೆಚ್ಚಳ ವಿರೋಧಿಸಿ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ನಗರದಲ್ಲಿ ಬೈಕಿಗೆ ಹಗ್ಗ ಕಟ್ಟಿ ಎಳೆಯುವ ಮೂಲಕ ಪ್ರತಿಭಟನೆ ನಡೆಸಿದರು.  ನಗರದ ಗಾಂಧಿಚೌಕಿನಿಂದ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದ ಕಾರ್ಯಕರ್ತರು, ಡಾ. ಬಿ. ಆರ್. ಅಂಬೇಡ್ಕರ್ ವೃತ್ತದವರೆಗೂ ಬೈಕ್‌ಗೆ ಹಗ್ಗಕಟ್ಟಿ ಎಳೆದುಕೊಂಡು ಬಂದರು. ಈ ಸಂದರ್ಭದಲ್ಲಿ ಮಾತನಾಡಿದ ದೇವರ ಹಿಪ್ಪರಗಿ ಮಾಜಿ ಶಾಸಕ ಸೋಮನಗೌಡ ಪಾಟೀಲ ಸಾಸನೂರ, ರಾಜ್ಯದ ಜನತೆಗೆ ನೆಮ್ಮದಿಯ ಬದುಕು ನೀಡಲು ಸಾಧ್ಯವಿಲ್ಲದಿದ್ದರೆ, ಈ ಸರಕಾರ ಅಧಿಕಾರ ಬಿಟ್ಟು […]

ಸಾಹಿತ್ಯದ ಬಗ್ಗೆ ಅಭಿರುಚಿ ಬೆಳೆಸಿಕೊಳ್ಳಬೇಕು- ಜ್ಞಾನದಿಂದ ಜೀವನದಲ್ಲಿ ಸಾಧನೆ ಸಾಧ್ಯ- ಅಪ್ಪು ಪಟ್ಟಣಶೆಟ್ಟಿ

ವಿಜಯಪುರ: ಸಾಹಿತ್ಯದ ಬಗ್ಗೆ ಎಲ್ಲರೂ ಅಭಿರುಚಿ ಬೆಳೆಸಿಕೊಳ್ಳಬೇಕು.  ಜ್ಞಾನದಿಂದ ಜೀವನದಲ್ಲಿ ಅನೇಕ ಸಾಧನೆ ಮಾಡಬಹುದು ಎಂದು ಮಾಜಿ ಸಚಿವ ಅಪ್ಪು ಪಟ್ಟಣಶೆಟ್ಟಿ ಹೇಳಿದ್ದಾರೆ. ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ನಡೆದ ಸಾಹಿತಿ ಶ್ರೀ ಎನ್. ಆರ್. ಕುಲಕರ್ಣಿ ಅವರ ಬಕುಲ ಪುಷ್ಪ ಅಭಿನಂದನೆ ಗ್ರಂಥ ಬಿಡುಗಡೆ ಮತ್ತು ಗ್ರಂಥ ತುಲಾಭಾರ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು. ಸಂಪತ್ತಿನಿಂದ ಜ್ಞಾನ ಸಂಪಾದಿಸಲು ಸಾಧ್ಯವಿಲ್ಲ.  ಆದರೆ, ಜ್ಞಾನ ಸಂಪಾದಿಸಿದರೆ ಅದರಿಂದ ಜೀವನದಲ್ಲಿ ಯಶಸ್ಸು ಸಾಧಿಸಬಹುದು.  ಎನ್. ಆರ್. ಕುಲಕರ್ಣಿ ಅವರಂತೆ […]

ಗುಮ್ಮಟ ನಗರಿಯಲ್ಲಿ ಬಕ್ರೀದ್ ಆಚರಣೆ- ನಾನಾ ಈದ್ಗಾಗಳಲ್ಲಿ ಮುಸ್ಲಿಂ ಬಾಂಧವರಿಂದ ಸಾಮೂಹಿಕ‌ ಪ್ರಾರ್ಥನೆ

ವಿಜಯಪುರ: ತ್ಯಾಗ ಮತ್ತು ಬಲಿದಾನದ ಪ್ರತೀಕವಾಗಿರು ಬಕ್ರೀದ್ ಹಬ್ಬವನ್ನು ವಿಜಯಪುರ ಜಿಲ್ಲಾದ್ಯಂತ ಆಚರಿಸಲಾಗುತ್ತಿದೆ. ಗುಮ್ಮಟ ನಗರಿ ವಿಜಯಪುರದಲ್ಲಿ‌ರು ಈದ್ಗಾಗಳಲ್ಲಿ ಮುಸ್ಲಿಂ ಬಾಂಧವರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಅಲ್ಲಾಹ ನಾಡಿನಾದ್ಯಂತ ಸುಖ, ಶಾಂತಿ, ಸಮೃದ್ಧಿ‌ ಕರುಣಿಸಲಿ ಎಂದು ಪ್ರಾರ್ಥಿಸಿದರು.  ಬಳಿಕ ಪರಸ್ಪರ ಶುಭಾಷಯ ಕೋರಿದರು. ದಖನಿ‌ ಶಾಹಿ‌ ಈದ್ಗಾದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಸ್ಲಿಂ‌ ಧರ್ಮಗುರು ಸಯ್ಯದ್ ಮೊಹಮ್ಮದ್ ತನ್ವಿರಪೀರಾ ಹಾಶ್ಮಿ ಸಾಮೂಹಿಕ ಪ್ರಾರ್ಥನೆಯ ನೇತೃತ್ವ ವಹಿಸಿ ಪವಿತ್ರ ಸಂದೇಶ ನೀಡಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಅಬ್ದುಲ್ ಹಮೀದ್ […]

ಪೆಟ್ರೋಲ್ ಡೀಸೆಲ್ ದರ ಏರಿಕೆಗೂ ಚುನಾವಣೆ ಫಲಿತಾಂಶಕ್ಕೂ ಸಂಬಂಧವಿಲ್ಲ- ಮುಖ್ಯಮಂತ್ರಿ ಎಸ್. ಸಿದ್ದರಾಮಯ್ಯ

ವಿಜಯಪುರ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಗೂ ಚುನಾವಣೆ ಫಲಿತಾಂಶಕ್ಕೂ ಯಾವುದೇ ಸಂಬಂಧವಿಲ್ಲ.   ಪ್ರಜಾಪ್ರಭುತ್ವದಲ್ಲಿ ಸೋಲು ಗೆಲುವು ಇದ್ದದ್ದೇ ಎಂದು ಮುಖ್ಯಮಂತ್ರಿ  ಸಿದ್ದರಾಮಯ್ಯ ಹೇಳಿದ್ದಾರೆ.  ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಇಂಚಗೇರಿ ಗ್ರಾಮದಲ್ಲಿ ಹೆಲಿಪ್ಯಾಡ್ ನಲ್ಲಿ ಮಾಧ್ಮಯ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪ್ರತಿಪಕ್ಷದ ನಾಯಕ ಆರ್. ಅಶೋಕ ಅವರು ಸೇಡಿಗಾಗಿ ತೈಲಬೆಲೆ ಏರಿಕೆ ಮಾಡಲಾಗಿದೆ ಎಂಬ  ಹೇಳಿಕೆಗೆ ಸಿಎಂ ಪ್ರತಿಕ್ರಿಯ ನೀಡಿದರು. ವಿಜಯಪುರದಲ್ಲಿ ನಾವು ಸೋತಿದ್ದೇವೆ.  ಕರ್ನಾಟಕದಲ್ಲಿ […]

ಮುಂಗಾರು ಹಂಗಾಮಿನಲ್ಲಿ ಬೀಜ-ರಸಗೊಬ್ಬರ ಕೊರತೆಯಾಗದಂತೆ ಸಮರ್ಪಕ ವಿತರಣೆ ಕ್ರಮ ಕೈಗೊಳ್ಳಿ- ಸಚಿವ ಎಂ. ಬಿ .ಪಾಟೀಲ

ವಿಜಯಪುರ: ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ 711370 ಹೆಕ್ಟೇರ್ ಗುರಿಗೆ 19567 ಹೆಕ್ಟೇರ್ ಬಿತ್ತನೆಯಾಗಿದೆ. ಮಳೆ ಬಿಡುವಿನ ನಂತರ ಬಿತ್ತನೆ ಪ್ರಗತಿಯಾಗಲಿದ್ದು, ಮುಂಗಾರು ಹಂಗಾಮಿನಲ್ಲಿ ಯಾವುದೇ ಬೀಜ, ರಸಗೊಬ್ಬರದ ಕೊರತೆಯಾದಂತೆ ಸಮರ್ಪಕವಾಗಿ ಪೂರೈಸುವಂತೆ ಅಧಿಕಾರಿಗಳಿಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಸೂಚನೆ ನೀಡಿದ್ದಾರೆ.    ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ನಾನಾ ಇಲಾಖೆಗಳ ಜಿಲ್ಲಾ ಮಟ್ಟದ ತ್ರೆöÊಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿದ್ದ […]

ಬಾಲವಿಕಾಸ ಅಕಾಡೆಮಿ ಅಧ್ಯಕ್ಷರಾಗಿ ಸಂಗಮೇಶ ಬಬಲೇಶ್ವರ ನೇಮಕ

ವಿಜಯಪುರ: ಕಳೆದ ಒಂದು ವರ್ಷದಿಂದ ಖಾಲಿ ಇದ್ದ ಕರ್ನಾಟಕ ಬಾಲ‌ವಿಕಾಸ ಅಕಾಡೆಮಿಗೆ ಸತಕಾರ ಕೊನೆಗೂ ಅಧ್ಯಕ್ಷರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಕರ್ನಾಟಕ ಬಾಲ ವಿಕಾಸ ಅಕಾಡೆಮಿಯ ನೂತನ ಅಧ್ಯಕ್ಷ ವಿಜಯಪುರದ ಸಂಗಮೇಶ ಅಪ್ಪಾಸಿ ಬಬಲೇಶ್ವರ ಅವರನ್ನು ನೇಮಕ ಮಾಡಲಾಗಿದೆ.  ಅಮ್ಮ ಚಾರಿಟೆಬಲ್ ಸಂಸ್ಥೆಯ ಸಙಸ್ಥಾಪಕ ಅಧ್ಯಕ್ಷರಾಗಿ, ಕೆಪಿಸಿಸಿ ಪ್ರಚಾರ ಸಮಿತಿ ವಕ್ತಾರರಾಗಿ ಅವರು ಸೇವೆ ಸಲ್ಲಿಸುತ್ತಿದ್ದಾರೆ. ಸಂಗಮೇಶ.ಅಪ್ಪಾಸಿ ಬಬಲೇಶ್ವರ ಅವರು ಧಾರವಾಡ ನಗರದ ಯಾಲಕ್ಕಿಶೆಟ್ಟರ್ ಕಾಲನಿಯಲ್ಲಿರುವ ಅಕಾಡೆಮಿ ಕಚೇರಿಯಲ್ಲಿ ಅಧಿಕಾರವಹಿಸಿಕೊಳ್ಳಲಿದ್ದಾರೆ.

ನೀಟ್ ಪ್ರವೇಶ ಪರಿಕ್ಷೇಯಲ್ಲಿ ಅವ್ಯವಹಾರ ಆರೋಪ- ನ್ಯಾಯಾಂಗ ತನಿಕೆಗೆ ಆಗ್ರಹಿಸಿ ದಲಿತ ವಿದ್ಯಾರ್ಥಿ ಪರಿಷತ್ ನಿಂದ ಮನವಿ ಪತ್ರ ಸಲ್ಲಿಕೆ

ವಿಜಯಪುರ: ನೀಟ್ ಪ್ರವೇಶ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರವನ್ನು ನ್ಯಾಯಾಂಗ ತನಿಖೆಗೆ ವಹಿಸುವಂತೆ ಆಗ್ರಹಿಸಿ ದಲಿತ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು. ನಗರದ ಗಾಂಧಿಚೌಕಿನಿಂದ ಅಂಬೇಡ್ಕರ್ ಚೌಕ್ ವರೆಗೆ ಜಾಥಾ ನಡೆಸಿದ ಕಾರ್ಯಕರ್ತರು, ಅಪರ ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಅವರಿಗೆ ಮನವಿ ಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ದಲಿತ ವಿದ್ಯಾರ್ಥಿ ಪರಿಷತ್ ಮುಖಂಡ ಅಕ್ಷಯಕುಮಾರ, ದೇಶದಲ್ಲಿರುವ ಶೋಷಿತ ಸಮಾಜದ ಜನರು ತಮ್ಮ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಜೀವನವನ್ನೇ ತೆಯ್ದು ಶಿಕ್ಷಣದ ವ್ಯಾಪಾರೀಕರಣದ ವ್ಯವಸ್ಥೆಯ […]

ಹಿಂದುಳಿದ ಕ್ಷೇತ್ರಗಳ ಅಭಿವೃದ್ಧಿ ಮಾಡದಿದ್ದರೆ ರಾಜಕೀಯ ತ್ಯಾಗಕ್ಕೂ ಸಿದ್ಧ- ಶಾಸಕ ಸಿ. ಎಸ್. ನಾಡಗೌಡ

ವಿಜಯಪುರ: ರಾಜ್ಯದಲ್ಲಿ ಹಿಂದುಳಿದ ಪ್ರದೇಶಗಳ ಅಭಿವೃದ್ಧಿ ಆಗದಿದ್ದರೆ ನನಗೆ ಮುಂದೆ ರಾಜಕಾರಣ ಮಾಡುವ ಇಚ್ಛೆ ಇಲ್ಲ.  ರಾಜಕೀಯ ತ್ಯಾಗಕ್ಕೂ ಸಿದ್ಧನಿದ್ದೇನೆ ಎಂದು ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಶಾಸಕ ಮತ್ತು ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷ ಸಿ. ಎಸ್. ನಾಡಗೌಡ ಹೇಳಿದ್ದಾರೆ. ವಿಜಯಪುರ ಜಿಲ್ಲೆ ಮುದ್ದೇಬಿಹಾಳ ಪಟ್ಟಣದಲ್ಲಿರುವ ಪ್ರವಾಸಿ ಮಂದಿರದಲ್ಲಿ ಕೆ ಬಿ ಜೆ ಎನ್ ಎಲ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು ನಾನಾ ಯೋಜನೆಗಳು ಮತ್ತು ಅಭಿವೃದ್ಧಿ ಕಾಮಗಾರಿಗಳ ಕುರಿತು ಸಭೆ ನಡೆಸಿದರು.  ಇದಾದ […]

ವಿಜಯಪುರ ಜ್ಞಾನಯೋಗಾಶ್ರಮದಲ್ಲಿ ಜೂ. 15 ಸಿರಿಗೆರೆ ತರಳಬಾಳು ಕಲಾ ಸಂಘದ ವತಿಯಿಂದ ಶರಣ ಸಂಕಲ್ಪ ನೃತ್ಯರೂಪಕ

ವಿಜಯಪುರ: ಸಿರಿಗೆರೆ ತರಳಬಾಳು ಕಲಾ ಸಂಘದ ವತಿಯಿಂದ ತರಳಬಾಳು ಜಗದ್ಗುರು ಡಾ. ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಜಿಯವರ ನೇತೃತ್ವದಲ್ಲಿ ಶರಣ ಸಂಕುಲ ನೃತ್ಯರೂಪಕ ಕಾರ್ಯಕ್ರಮ ದಿ.15 ಶನಿವಾರ ಸಂ. 6.30ಕ್ಕೆ ಟೆಗೆ ವಿಜಯಪುರದ ಜ್ಞಾನಯೋಗಾಶ್ರಮದಲ್ಲಿ ನಡೆಯಲಿದೆ.  ಕಳೆದ 25 ವರ್ಷಗಳಿಂದ ದೇಶಾದ್ಯಂತ 12ನೇ ಶತಮಾನದ ಶಿವಶರಣರ ತತ್ವಗಳನ್ನು ಜನಸಾಮಾನ್ಯರಿಗೂ ಅರ್ಥವಾಗುವಂತೆ ನೃತ್ಯ, ಸಂಗೀತ ಮತ್ತು ಅಭಿನಯಗಳ ಮೂಲಕ ಪ್ರದರ್ಶಿಸುವ ಶರಣಸಂಕುಲ ಕಾರ್ಯಕ್ರಮ ಇದೀಗ ರಜತ ಮಹೋತ್ಸವ ಆಚರಿಸುತ್ತಿದೆ. ವಿಜಯಪುರದ ಜ್ಞಾನಯೋಗಾಶ್ರಮದಲ್ಲಿ ಅನುಭವ ಮಂಟಪದ ಬಸವಣ್ಣ, ಅಲ್ಲಮಪ್ರಭು, ಅಕ್ಕಮಹಾದೇವಿ, ಅಕ್ಕಮಹಾದೇವಿಗೆ […]

ಖಾಸಗಿ ಆಸ್ಪತ್ರೆಗಳಿಗೆ ಕೆಪಿಎಂಇ ನೋಂದಣಿ ಫಲಕ ಕಡ್ಡಾಯ- ಡಿಸಿ ಟಿ. ಭೂಬಾಲನ್

ವಿಜಯಪುರ: ಜಿಲ್ಲೆಯ ಖಾಸಗಿ ಆಸ್ಪತ್ರೆ ಮತ್ತು ಕ್ಲಿನಿಕ್ ಗಳು ಕಡ್ಡಾಯವಾಗಿ ಕೆಪಿಎಂಇ (ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ) ಕಾಯ್ದೆ -2018 ರ ಅಡಿಯಲ್ಲಿ ನೋಂದಣಿ ಮಾಡಿಸಬೇಕು ಎಂದು ಜಿಲ್ಲಾಧಿಕಾರಿ ಟಿ. ಭೂಬಾಲನ್ ಸೂಚನೆ ನೀಡಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕೆಪಿಎಂಇ ಜಿಲ್ಲಾ ನೋಂದಣಿ ಮತ್ತು ಕುಂದುಕೊರತೆ ನಿವಾರಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಖಾಸಗಿ ಆಸ್ಪತ್ರೆ, ಕ್ಲಿನಿಕ್ ಗಳು, ಪ್ರಯೋಗಾಲಯ, ನರ್ಸಿಂಗ್ ಹೋಮ್ ಗಳು ಕೆಪಿಎಂಇ ಕಾಯ್ದೆ ಅಡಿಯಲ್ಲಿ ನೋಂದಣಿ ಮಾಡಿಸಬೇಕು. ನಕಲಿ ವೈದ್ಯರ […]