7ನೇ ವೇತನ ಆಯೋಗದಿಙದ ಸಿಎಂ ಎಸ್. ಸಿದ್ಧರಾಮಯ್ಯ ಅವರಿಗೆ ವರದಿ ಸಲ್ಲಿಕೆ

ಬೆಂಗಳೂರು: ನಿವೃತ್ತ ಮುಖ್ಯ ಕಾರ್ಯದರ್ಶಿ ಸುಧಾಕರ ರಾವ ಅಧ್ಯಕ್ಷತೆಯ ರಾಜ್ಯದ 7ನೇ ವೇತನ ಆಯೋಗವು ಮುಖ್ಯಮಂತ್ರಿ ಎಸ್. ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ವರದಿ ಸಲ್ಲಿಸಿತು. ಆಯೋಗದ ಸದಸ್ಯರಾದ ಪಿ. ಬಿ. ರಾಮಮೂರ್ತಿ, ಶ್ರೀಕಾಂತ ವನಹಳ್ಳಿ , ಮುಖ್ಯಮಂತ್ರಿಯವರ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್. ಕೆ. ಅತೀಕ್, ಡಾ. ಕೆ. ವಿ. ತ್ರಿಲೋಕಚಂದ್ರ, ಹಣಕಾಸು ಇಲಾಖೆ ಕಾರ್ಯದರ್ಶಿ ಡಾ. ಪಿ. ಸಿ. ಜಾಫರ, ವೇತನ ಆಯೋಗದ ಸದಸ್ಯ ಕಾರ್ಯದರ್ಶಿ ಹೆಫ್ಸಿಬಾರಾಣಿ […]
ಲಿಂಬೆ ಬೆಳೆಗಳ ರಕ್ಷಣೆಗೆ ಕ್ರಮ: ಶಾಸಕ ಯಶವಂತರಾಯಗೌಡ ಪಾಟೀಲ

ವಿಜಯಪುರ: ಜಿಲ್ಲೆಯಲ್ಲಿ ಬರದ ಛಾಯೆ ಆವರಿಸಿದ್ದು ಇಂಡಿ ಭಾಗದಲ್ಲಿ ಅತೀ ಹೆಚ್ಚು ಲಿಂಬೆ ಬೆಳಗಾರರಿದ್ದಾರೆ. ರೈತರ ಲಿಂಬೆ ಗಿಡಗಳನ್ನು ರಕ್ಷಿಸಲು ನಾವು ಮುಂದಾಗಬೇಕು ಎಂದು ಇಂಡಿ ಶಾಸಕರಾದ ಯಶವಂತರಾಯಗೌಡ ಪಾಟೀಲ್ ಹೇಳಿದರು. ನಗರದ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಲಿಂಬೆ ಅಭಿವೃದ್ಧಿ ಮಂಡಳಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಈ ಭಾಗದಲ್ಲಿ ನೀರಿನ ಮಟ್ಟ ಕುಸಿದಿದ್ದು ರೈತರು ನೀರಿನ ಅಭಾವದಿಂದ ಲಿಂಬೆ ಬೆಳೆಗಳನ್ನು ರಕ್ಷಿಸಲು ತುಂಬಾ ತೊಂದರೆ ಅನುಭವಿಸುತ್ತಿದ್ದಾರೆ. ಅಧಿಕಾರಿಗಳು ಈ ಭಾಗದ ರೈತರ ಜಮೀನುಗಳಿಗೆ ಖುದ್ದಾಗಿ ಭೇಟಿ […]
ಇಬ್ಬರು ವೈದ್ಯರು, ಓರ್ವ ಎಂಜಿನಿಯರ್ ಸೇರಿ ಮೂವರಿಗೆ ಕೇಂದ್ರ ಸರಕಾರದ ಪೇಟೆಂಟ್- ಯಾವುದಕ್ಕೆ ಗೊತ್ತಾ?

ವಿಜಯಪುರ: ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಕಾಲೇಜು ಆಸ್ಪತ್ರೆ ಮತ್ತು ಸಂಶೋಧನೆ ಕೇಂದ್ರ ಇಬ್ಬರು ವೈದ್ಯರು ಹಾಗೂ ಓರ್ವ ಎಂಜಿನೀಯರ್ ನಡೆಸಿದ ಸಂಶೋಧನೆಗೆ ಕೇಂದ್ರ ಸರಕಾರದಿಂದ ಪೇಟೆಂಟ್ ದೊರೆತಿದೆ. ಆಸ್ಪತ್ರೆಯ ಜಿಲ್ಲಾ ವಿಕಲಚೇತನ ಮತ್ತು ಪುನರ್ವಸತಿ ಕೇಂದ್ರದ ನೋಡಲ್ ಅಧಿಕಾರಿ ಮತ್ತು ಅಂಗರಚನಾ ಶಾಸ್ತç ವಿಭಾಗದ ಡಾ. ಈಶ್ವರ ಬ. ಬಾಗೋಜಿ, ಎಂಜಿನೀಯರ್ ಕೆ. ಸಿ. ಮೊಹಂತಿ ಹಾಗೂ ಎಲಬು ಮತ್ತು ಕೀಲು ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಗಿರೀಶ ಖೋದ್ನಾಪೂರ […]
ಬಸವ ನಾಡಿನಲ್ಲಿ ತೆನೆ ಇಳಿಸಿ ಕೈ ಹಿಡಿದ ಜೆಡಿಎಸ್ ಕಾರ್ಯಕರ್ತರು- ರಾಜು ಆಲಗೂರ ಸಮ್ಮುಖದಲ್ಲಿ ಕಾಂಗ್ರೆಸ್ಸಿಗೆ ಮರುಸೇರ್ಪಡೆ

ವಿಜಯಪುರ: ನಾಗಠಾಣ ಮತಕ್ಷೇತ್ರದ ಜೆಡಿಎಸ್ ಬ್ಲಾಕ್ ಮಾಜಿ ಅಧ್ಯಕ್ಷ ದೇಸು ಗೇಮು ಚವ್ಹಾಣ ತಮ್ಮ ಬೆಂಗಲಿಗರೊಂದಿಗೆ ಕಾಂಗ್ರೆಸ್ಸಿಗೆ ಮರುಸೇರ್ಪಡೆಯಾಗಿದ್ದಾರೆ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ವಿಜಯಪುರ ಕಾಂಗ್ರೆಸ್ ಅಭ್ಯರ್ಥಿ ಮತ್ತು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಪ್ರೊ. ರಾಜು ಆಲಗೂರ ಅವರ ಸಮ್ಮುಖದಲ್ಲಿ ಕುಮಟಗಿ ಎಲ್.ಟಿ., ಆಹೇರಿ, ಮದಬಾವಿ, ಹಡಗಲಿಯ ಕಾರ್ಯಕರ್ತರೊಂದಿಗೆ ಕಾಂಗ್ರೆಸ್ ಪಕ್ಷಕ್ಕೆ ಮರುಸೇರ್ಪಡೆಯಾಗಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಪ್ರೊ. ರಾಜು ಆಲಗೂರ, ದೇಸು ಗೇಮು ಚವ್ಹಾಣ ತಮ್ಮ ಬೆಂಬಲಿಗರೊಂದಿಗೆ ಕಾಂಗ್ರೆಸ್ ಪಕ್ಷಕ್ಕೆ ಮರುಸೇರ್ಪಡೆಯಾಗಿರುವುದರಿಂದ ನಾಗಠಾಣ ಮತ್ತು ವಿಜಯಪುರ ಲೋಕಸಭೆ […]
ಕನಾನ್ ಮುಶ್ರಿಫ್ ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ನೇಮಕ- ಸಂತಸ ವ್ಯಕ್ತಪಡಿಸಿದ ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ

ವಿಜಯಪುರ: ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕನಾನ್ ಅಬ್ಬುದ್ ಹಮೀದ್ ಮುಶ್ರಿಫ್ ಅವರನ್ನು ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಕಾಂಗ್ರೆಸ್ ಮುಖಂಡ ಅಬ್ದುಲ್ ಹಮೀದ್ ಮುಶ್ರಿಫ್ ಅವರ ಹಿರಿಯ ಪುತ್ರನಾಗಿರುವ ಕನಾನ್ ಪದವೀಧರರಾಗಿದ್ದು, ತಂದೆಯ ಜೊತೆ ಪಕ್ಷ ಸಂಘಟನೆಯಲ್ಲಿ ಸಕ್ರೀಯರಾಗಿದ್ದಾರೆ. ಅಬ್ದುಲ್ ಹಮೀದ್ ಮುಶ್ರಿಫ್ 2018 ಮತ್ತು 2023ರಲ್ಲಿ ವಿಜಯಪುರ ನಗರ ಮತಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಪರಾಜಿತರಾಗಿದ್ದರು. ಈಗ ಅವರ ಪುತ್ರನಿಗೆ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನ […]
ವಿಜಯಪುರ ಜಿಲ್ಲಾ ಕೃಷಿಯೆತರ ಪತ್ತಿನ ಸಹಕಾರಿ ಸಂಘದ ಒಕ್ಕೂಟದ ಆಡಳಿತ ಮಂಡಳಿಗೆ ಅವಿರೋಧವಾಗಿ ಆಯ್ಕೆ

ವಿಜಯಪುರ: ವಿಜಯಪುರ ಜಿಲ್ಲಾ ಕೃಷಿಯೆತರ ಪತ್ತಿನ ಸಹಕಾರಿ ಸಂಘದ ಒಕ್ಕೂಟದ ಚುನಾವಣೆಯಲ್ಲಿ ಎಲ್ಲ ಪದಾಧಿಕಾರಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರ. ವಿಜಯಪುರ ನಗರ ಮತಕ್ಷೇತ್ರದಿಂದ ಪತ್ರಕರ್ತ ದೀಪಕ ಶಿಂತ್ರೆ, ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಆಡಳಿತ ಮಂಡಳಿ ಸದಸ್ಯ ಗುರುಶಾಂತ ನಿಡೋಣಿ, ವಿಜಯಪುರ ಮಹಾನಗರ ಪಾಲಿಕೆ ಸದಸ್ಯ ರಾಜಶೇಖರ ಮಗಿಮಠ, ಪರಶುರಾಮ ಚಿಂಚಲಿ, ಡಾ. ಸದಾಶಿವ ಪವಾರ, ನಬಿಸಾಬ್ ಕರ್ಜಗಿ, ಇಂಡಿ ತಾಲೂಕಾ ಮತಕ್ಷೇತ್ರದಿಂದ ರಾಜ್ಯ ಸಹಕಾರ ರತ್ನ ಪುರಸ್ಕೃತ ಶ್ರೀಮಂತ ಇಂಡಿ, ವಿಜಯಪುರ ಗ್ರಾಮೀಣ ಕ್ಷೇತ್ರದ ಬಸವರಾಜ ಬಂಡಿ, […]
ನರಮಂಡಲ ಪಾರ್ಕಿನ್ಸನ್ ಕಾಯಿಲೆಗೆ ದೇಶದಲ್ಲಿಯೇ ಮೊದಲ ನ್ಯೂರೋಸ್ಮಾರ್ಟ್ ಪೋರ್ಟಬಲ್ ಬಳಸಿ ಶಸ್ತ್ರಚಿಕಿತ್ಸೆ ನಡೆಸಿದ ಫೋರ್ಟಿಸ್ ಆಸ್ಪತ್ರೆ ವೈದ್ಯರು

ಬೆಂಗಳೂರು: ನರಮಂಡಲದ ಸಮಸ್ಯೆಯಿಂದ ಉಂಟಾಗುವ ಮಾರಣಾಂತಿಕ “ಪಾರ್ಕಿನ್ಸನ್” ರೋಗಕ್ಕೆ ಒಳಗಾಗಿದ್ದ 68 ವರ್ಷದ ವ್ಯಕ್ತಿಗೆ ಫೋರ್ಟಿಸ್ ಆಸ್ಪತ್ರೆ ವೈದ್ಯರ ತಂಡವು “ನ್ಯೂರೋಸ್ಮಾರ್ಟ್ ಪೋರ್ಟಬಲ್ ಮೈಕ್ರೋ ಎಲೆಕ್ಟ್ರೋಡ್ ರೆಕಾರ್ಡಿಂಗ್ (MER) ಸಿಸ್ಟಮ್” ಬಳಸಿಕೊಂಡು ಯಶಸ್ವಿಯಾಗಿ ಚಿಕಿತ್ಸೆ ನೀಡಿದ್ದು, ಪಾರ್ಕಿನ್ಸನ್ ರೋಗಕ್ಕೆ ನಿಖರ ಚಿಕಿತ್ಸೆ ನೀಡಬಹುದಾದ ದೇಶದಲ್ಲೇ ಮೊದಲ ಬಾರಿಗೆ ನೂತನ ಅಪ್ಲಿಕೇಷನ್ನನ್ನು ಫೋರ್ಟಿಸ್ ಆಸ್ಪತ್ರೆಯಲ್ಲಿ ಬಳಸಲಾಗಿದೆ. ಫೋರ್ಟಿಸ್ ಆಸ್ಪತ್ರೆಯ ನರಶಸ್ತ್ರಚಿಕಿತ್ಸಾ ವಿಭಾಗದ ಹೆಚ್ಚುವರಿ ನಿರ್ದೇಶಕ ಡಾ. ರಘುರಾಮ್ ಜಿ, ನರವಿಜ್ಞಾನದ ಹೆಚ್ಚುವರಿ ನಿರ್ದೇಶಕ ಡಾ. ಗುರುಪ್ರಸಾದ್ ಹೊಸೂರಕರ್ ಹಾಗೂ […]
Video News: ಟಿಕೆಟ್ ಸಿಕ್ಕಿದ್ದು ಖುಷಿ ತಂದಿದೆ- ನನ್ನನ್ನು ವಿರೋಧಿಸಿದವರಿಗೂ ದೇವರು ಒಳ್ಳೆಯದನ್ನು ಮಾಡಲಿ- ಸಂಸದ ರಮೇಶ ಜಿಗಜಿಣಗಿ

ವಿಜಯಪುರ: ಹೈಕಮಾಂಡ್ ನನಗೆ ಮತ್ತೆ ಬಿಜೆಪಿ ಟಿಕೆಟ್ ನೀಡಿರುವುದು ಖುಷಿ ತಂದಿದೆ. ನನ್ನನ್ನು ವಿರೋಧಿಸಿದವರಿಗೆ ದೇವರು ಒಳ್ಳೆಯದನ್ನು ಮಾಡಲಿ ಎಂದು ಸಂಸದ ರಮೇಶ ಜಿಗಜಿಣಗಿ ಹೇಳಿದ್ದಾರೆ. ವಿಜಯಪುರದಲ್ಲಿ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನನಗೆ ರಾಷ್ಟ್ರೀಯ ನಾಯಕರು ಟಿಕೆಟ್ ಘೋಷಣೆ ಮಾಡಿದ್ದಾರೆ. ಇದೆಲ್ಲದರ ಕ್ರೆಡಿಟ್ ಬಿಜೆಪಿ ಕಾರ್ಯಕರ್ತರಿಗೆ ಸಲ್ಲುತ್ತದೆ. ಇದರಲ್ಲಿ ನನ್ನದೇನೂ ಪಾತ್ರವಿಲ್ಲ. ಪಕ್ಷ ಟಿಕೆಟ್ ನೀಡಿದರೆ ಚುನಾವಣೆಗೆ ಸ್ಪರ್ಧಿಸುತ್ತೇನೆ. ಇಲ್ಲದಿದ್ದರೆ ಪಕ್ಷದ ಪರ ಕೆಲಸ ಮಾಡುತ್ತೇನೆ ಎಂದು ನಾನು ಮುಂಚೆಯಿಂದಲೂ ಎಲ್ಲರಿಗೂ […]
Video News: ಬಿಜೆಪಿ ಉತ್ತಮ ಅಭ್ಯರ್ಥಿಗಳಿಗೆ ಟಿಕೆಟ್ ನೀಡಿದೆ- ಅಭ್ಯರ್ಥಿಗಳನ್ನು ಗೆಲ್ಲಿಸುವುದು ನಮ್ಮ ಗುರಿ- ಶಾಸಕ ಮಹೇಶ ಟೆಂಗಿನಕಾಯಿ

ವಿಜಯಪುರ: ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಒಳ್ಳೆಯ ಅಭ್ಯರ್ಥಿಗಳಿಗೆ ಬಿಜೆಪಿ ಟಿಕೆಟ್ ನೀಡಿದೆ ಎಂದು ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಶಾಸಕ ಮಹೇಶ ಟೆಂಗಿನಕಾಯಿ ತಿಳಿಸಿದ್ದಾರೆ. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಬೆಳಗಾವಿ ವಿಭಾಗದ ವಿಜಯಪುರ ಜಿಲ್ಲಾ ಕೋರ್ ಕಮಿಟಿ ಸಭೆಗೆ ಆಗಮಿಸಿದ್ದ ಅವರು, ಬಿಜೆಪಿ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಮಾಡಿದ ಬಳಿಕ ವಿಜಯಪುರ ನಗರದಲ್ಲಿ ಜಿಲ್ಲಾ ಬಿಜೆಪಿ ಕಚೇರಿಗೆ ಆಗಮಿಸಿದರು. ಅಲ್ಲದೇ, ಈ ಟಿಕೆಟ್ ಪಡೆದ ಸಂಸದ ರಮೇಶ ಜಿಗಜಿಣಗಿ ಅವರಿಗೆ ಶುಭ ಕೋರಿ ಅಭಿನಂದಿಸಿದರು. ಈ ಸಂದರ್ಭದಲ್ಲಿ […]
ಈ ವರ್ಷ ನೇತ್ರಬಾಧೆ ಕಾಡಲಿದೆ- ಕೀಟಕಾಟ ಹೆಚ್ಚಾಗಲಿದೆ- ಜಾತಿಕಲಹ, ಯೋಧರಿಗೆ ನೋವು, ಉತ್ತಮರಿಗೆ ರಾಜಕೀಯ ಲಾಭವಿದೆ- ಹೊಳೆಬಬಲಾದಿ ಕಾರ್ಣಿಕರ ಭವಿಷ್ಯವಾಣಿ

ವಿಜಯಪುರ: ಬಸವನಾಡು ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಹೊಳೆ ಬಬಲಾದಿ ಚಂದ್ರಗಿರಿ ಶ್ರೀ ಸದಾಶಿವ ಮುತ್ಯಾ ಜಾತ್ರೆ ವಿಜೃಂಭಣೆಯಿಂದ ನಡೆಯುತ್ತಿದ್ದು, ದೇವಸ್ಥಾನದ ಕಾರ್ಣಿಕ ಶ್ರೀ ಸಿದ್ಧಾರಮಯ್ಯ ಹೊಳಿಮಠ 2024 ನೇ ವರ್ಷದ ಕಾಲಜ್ಞಾನ ಭವಿಷ್ಯ ನುಡಿದಿದ್ದಾರೆ. ಸದಾಶಿವ ಮುತ್ಯಾರ ಮಠದಲ್ಲಿ ನುಡಿಯಲಾಗುವ ಕಾಲಜ್ಞಾನ ಭವಿಷ್ಯ ನಿಜವಾಗುವುದರಿಂದ ಈ ಕಾರ್ಯಕ್ರಮ ವೀಕ್ಷಿಸಲು ಕರ್ನಾಟಕವಷ್ಟೇ ಅಲ್ಲ, ನೆರೆಯ ರಾಜ್ಯಗಳಿಂದಲೂ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಇಲ್ಲಿಗೆ ಆಗಮಿಸುತ್ತಾರೆ. ಅದರಂತೆ ಈ ವರ್ಷದ ಕಾಲಜ್ಞಾನಕ್ಕೆ ಸಹಸ್ರಾರು ಭಕ್ತರು ಸಾಕ್ಷಿಯಾದರು. ಶ್ರೀಮಠದ ಪೀಠಾಧಿಪತಿಗಳು ಮತ್ತು […]